Posts

Image
ವಿಆರ್‌ಎಲ್’ ಸಂಸ್ಥೆಗೆ ಸುವರ್ಣ ‘ಸಂಭ್ರಮ’ ಮೈಸೂರಿನಲ್ಲಿ ವಿಶೇಷ ಸಮಾರಂಭ - ಬೃಹತ್ ಗೋದಾಮು ಉದ್ಘಾಟನೆ ಜಯ ಧ್ವಜ ನ್ಯೂಸ್ ,ರಾಯಚೂರು, ಆ.18- ಕನಸು, ಪರಿಶ್ರಮ, ನಂಬಿಕೆ, ಸವಾಲುಗಳನ್ನು ಮೆಟ್ಟಿ ನಿಂತು ಐದು ದಶಕಗಳ ಯಶಸ್ವಿ ಸೇವೆಯನ್ನು ಪೂರೈಸಿದ ‘ವಿಆರ್‌ಎಲ್ ಲಾಜಿಸ್ಟಿಕ್ಸ್ ಲಿಮಿಟೆಡ್’ನ ಸುವರ್ಣ ಮಹೋತ್ಸವ ಸಮಾರಂಭ ಶನಿವಾರ ಮೈಸೂರಿನಲ್ಲಿ ಸಂಭ್ರಮದಿಂದ ಜರುಗಿತು. ಸಂಸ್ಥೆಗೆ ಸುವರ್ಣ ಮಹೋತ್ಸವದ ಜತೆಗೆ ನಗರದ ಬನ್ನಿಮಂಟಪ ಬಡಾವಣೆಯ ಜೋಡಿ ತೆಂಗಿನಮರ ರಸ್ತೆ ಬಳಿ ನೂತನವಾಗಿ ನಿರ್ಮಾಣವಾಗಿರುವ ವಿಆರ್‌ಎಲ್ ಕಟ್ಟಡ, ಬೃಹತ್ ಗೋದಾಮು ಕಟ್ಟಡ ಲೋಕಾರ್ಪಣೆ ಸಹ ಇದೇ ವೇಳೆ ನೆರವೇರಿಸಲಾಯಿತು. ಸಾವಿರಾರು ಸಂಖ್ಯೆಯಲ್ಲಿ ಜನರು ಸಂಭ್ರಮದ ಕ್ಷಣಕ್ಕೆ ಸಾಕ್ಷಿಯಾದರು. ಮಾತ್ರವಲ್ಲದೆ, ವಿಆರ್‌ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ.ವಿಜಯ ಸಂಕೇಶ್ವರ, ವ್ಯವಸ್ಥಾಪಕ ನಿರ್ದೇಶಕ ಡಾ. ಆನಂದ ಸಂಕೇಶ್ವರ ಹಾಗೂ ವಿಜಯಾನಂದ ಟ್ರಾವೆಲ್ಸ್ ಎಂಡಿ ಶಿವ ಸಂಕೇಶ್ವರ ಅವರನ್ನು ಅಭಿನಂದಿಸಿ, ಸಂಸ್ಥೆಯ ಮುಂದಿನ ಪಯಣವೂ ಇನ್ನಷ್ಟು ಯಶಸ್ಸಿನ ಹಾದಿಯಲ್ಲಿ ಸಾಗಲಿ ಎಂದು ಶುಭ ಹಾರೈಸಿದರು. *ವಿಭಿನ್ನ ಆಲೋಚನೆಯ ಫಲ:*  ವಿಆರ್‌ಎಲ್ ಸಂಸ್ಥೆಯ ಆರಂಭದ ದಿನಗಳನ್ನು ಸ್ಮರಿಸಿದ ಡಾ.ವಿಜಯ ಸಂಕೇಶ್ವರ ಅವರು, ನನ್ನ ತಂದೆ ಪ್ರಿಂಟಿಂಗ್ ಮತ್ತು ಪಬ್ಲಿಷಿಂಗ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದರು. ಕುಟುಂಬದ ಎಲ್ಲರೂ ಒಂದೇ ಕ್ಷೇತ್ರದಲ್ಲಿ ಮುಂದುವರಿಯುವ ಬದಲು, ವಿಭಿನ್ನ ಕ್ಷೇತ್ರದಲ್ಲಿ ಹ...
Image
  ಗುರು ರಾಘವೇಂದ್ರ ಸ್ವಾಮಿಗಳ ದರ್ಶನಕ್ಕೆ ವಿಶೇಷ ರೈಲು - ಡಾ.ಬಾಬುರಾವ್ ಜಯ ಧ್ವಜ ನ್ಯೂಸ್ ,ರಾಯಚೂರು,ಆ.18-  ಕಲಿಯುಗದ ಕಾಮಧೇನು ಎಂದೇ ಜನಜನಿತವಾಗಿರುವ ಗುರು ರಾಘವೇಂದ್ರರಾಯರ ಭಕ್ತರಿಗೆ ನೈರುತ್ಯ ರೈಲ್ವೆ ಸಿಹಿ ಸುದ್ದಿ ನೀಡಿದೆ ಎಂದು ರೈಲು ಸಲಹಾ ಸಮಿತಿ ಮಂಡಳಿ ಮಾಜಿ ಸದಸ್ಯ ಡಾ.ಬಾಬುರಾವ್ ತಿಳಿಸಿದ್ದಾರೆ. ಮೈಸೂರು-ಬೆಂಗಳೂರು- ಮಂತ್ರಾಲಯ ವಿಶೇಷ ಎಕ್ಸ್‌ಪ್ರೆಸ್‌ ರೈಲು ಸೇವೆ  ಆರಂಭಿಸಲಾಗಿದೆ. ಮೈಸೂರಿನಿಂದ ಸಂಜೆ 5.50ಕ್ಕೆ ನಿರ್ಗಮಿಸುವ ರೈಲು ಬೆಂಗಳೂರಿಗೆ 8.25ಕ್ಕೆ ತಲುಪಿ ಮರುದಿನ ಬೆಳಿಗ್ಗೆ 3.30ಕ್ಕೆ ಮಂತ್ರಾಲಯಕ್ಕೆ ಬರಲಿದೆ. ಆನ್ ಲೈನ್ ನಲ್ಲಿ ಮುಂಗಡ ಬುಕ್ಕಿಂಗ್ ಮಾಡಲು ಐಆರ್ ಸಿಟಿಸಿ ಸೌಲಭ್ಯ ಲಭ್ಯ ಇದೆ ಎಂದು ತಿಳಿಸಿದ್ದಾರೆ.
Image
  ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ನೇರ ಸಾಲ ಯೋಜನೆಯಡಿ ಅರ್ಜಿ ಆಹ್ವಾನ ಜಯ ಧ್ವಜ ನ್ಯೂಸ್ ,ರಾಯಚೂರು ಆ. 17 - ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆಯಡಿ 2026-27ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ಕೈಗೊಳ್ಳಲು ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ವತಿಯಿಂದ ನೇರವಾಗಿ ಸಾಲ-ಸಹಾಯಧನ ಮಂಜೂರು ಮಾಡಲು ಉದ್ದೇಶಿಸಿದೆ. ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದ ಹಿಂದುಳಿದ ಬ್ರಾಹ್ಮಣ ಸಮುದಾಯದವರು ಸ್ವಯಂ ಉದ್ಯೋಗ ವೃತ್ತಿಗಳಾದ ಹಸು ಸಾಕಾಣಿಕೆ, ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ (ಕ್ಯಾಟರಿಂಗ್), ಅಂಗಡಿ, ಟೈಲರಿಂಗ್ ಹಾಗೂ ಟ್ಯಾಕ್ಸಿ ಇತ್ಯಾದಿ ಇತರೆ ಯಾವುದೇ ವ್ಯಾಪಾರ ವಹಿವಾಟುಗಳನ್ನು ಕೈಗೊಳ್ಳಲು ವಾರ್ಷಿಕವಾಗಿ ಶೇ.4% ದರದಲ್ಲಿ ಕನಿಷ್ಠ ರೂ.1.00 ಲಕ್ಷ ಹಾಗೂ ಗರಿಷ್ಠ ರೂ.2.00 ಲಕ್ಷಗಳ ಆರ್ಥಿಕ ನೆರವು ಮಂಜೂರು ಮಾಡಲಾಗುವುದು. ಸಾಲ ಸೌಲಭ್ಯವನ್ನು ಪಡೆಯಲುಬೇಕಾದ ಅರ್ಹತೆಗಳು ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದವರಾಗಿರಬೇಕು. ಅರ್ಜಿದಾರರು ಚಾಲ್ತಿಯಲ್ಲಿರುವ ಆರ್ಥಿಕವಾಗಿ ಹಿಂದುಳಿದ ಪ್ರಮಾಣಪತ್ರ (EWS ಪ್ರಮಾಣ ಪತ್ರ) ಹೊಂದಿರಬೇಕು. 8 ಲಕ್ಷ ಆದಾಯ ಮಿತಿ), ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಅರ್ಜಿದಾರರ ವಯಸ್ಸು 18 ...
Image
  ಕೊತ್ತದೊಡ್ಡಿ ಏಕಲವ್ಯ ಮಾದರಿ ವಸತಿ ಶಾಲೆಗೆ  ಜಿಲ್ಲಾಧಿಕಾರಿ ಪೂವಿತಾ ಎಸ್. ದಿಢೀರ್ ಭೇಟಿ, ಪರಿಶೀಲನೆ ಜಯ ಧ್ವಜ ನ್ಯೂಸ್ ,ರಾಯಚೂರು ಆ. 17- ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರು  ರಾಯಚೂರು ಜಿಲ್ಲೆಯ ಅರಕೇರಾ ತಾಲೂಕಿನ ಕೊತ್ತದೊಡ್ಡಿ ಗ್ರಾಮದ ಏಕಲವ್ಯ ಮಾದರಿ ವಸತಿ ಶಾಲೆಗೆ ದಿಢೀರ್ ಭೇಟಿ ನೀಡಿ ವಸತಿ ಶಾಲೆಯ ವ್ಯವಸ್ಥೆಯನ್ನು ಪರಿಶೀಲಿಸಿದರು. ಜಿಲ್ಲಾಧಿಕಾರಿಗಳು  ಶಿಕ್ಷಕರೊಂದಿಗೆ ಸಭೆಯನ್ನು ನಡೆಸಿ, ಶಾಲೆಯಲ್ಲಿನ ಕುಂದು ಕೊರತೆಗಳನ್ನು ಆಲಿಸಿದರು. ನಂತರ ವಸತಿ ಶಾಲೆಯ ವಿದ್ಯಾರ್ಥಿಗಳೊಂದಿಗೆ ಬೆರೆತು, ಶಾಲೆಯಲ್ಲಿ ದೊರೆಯುತ್ತಿರುವ ವಿವಿಧ ಸೌಲಭ್ಯಗಳ ಹಾಗೂ ಸಮಸ್ಯೆಗಳ ಕುರಿತು ಚರ್ಚಿಸಿದರು. ನಂತರ ವಿದ್ಯಾರ್ಥಿಗಳಿಗೆ ಆಸಕ್ತಿದಾಯಕವಾಗಿ ಕಲಿಯುವ ಕುರಿತು ಮತ್ತು ಜೀವನದಲ್ಲಿ ಯಶಸ್ಸನ್ನು ಸಾಧಿಸುವ ಛಲವನ್ನು ಹೊಂದುವಂತೆ  ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ನಂತರ ವಸತಿ ಶಾಲೆಯಲ್ಲಿರುವ ಅಡುಗೆ ಕೊಠಡಿ ಮತ್ತು ಭೋಜನಾಲಯಕ್ಕೆ ಭೇಟಿ ನೀಡಿ ಅಲ್ಲಿರುವ ಸಮಸ್ಯೆಗಳ ಬಗ್ಗೆ ಅಡುಗೆಯವರು, ನಿಲಯ ಪಾಲಕರು ಹಾಗೂ ಪ್ರಾಂಶುಪಾಲರೊಂದಿಗೆ ಚರ್ಚಿಸಿ ಉತ್ತಮ ಗುಣಮಟ್ಟದ ಆಹಾರ ಮತ್ತು ಸ್ವಚ್ಛತೆಯನ್ನು ಕಾಪಾಡಿಕೊಳ್ಳಲು ಸೂಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪರಿಶಿಷ್ಟ ಪಂಗಡಗಳ ಕಲ್ಯಾಣ ಅಧಿಕಾರಿ ಶಿವಮಾನಪ್ಪ, ದೇವದುರ್ಗ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ರಾಜಕುಮಾರ ಸೇರಿದಂತೆ ವಸತಿ ಶಾಲೆಯ ಪ್ರಾಂಶುಪಾಲರ...
Image
  ವೈಟಿಪಿಎಸ್ ಅನರ್ಹ ಕಂಪನಿಗೆ ಗುತ್ತಿಗೆ ಆರೋಪ: ಪಾರದರ್ಶಕ ಕಾಯ್ದೆ ಸ್ಪಷ್ಟ ಉಲಂಘನೆ- ಶಿವಕುಮಾರ್ ಪೊಲೀಸ್ ಪಾಟೀಲ.                                                            ಜಯ ಧ್ವಜ ನ್ಯೂಸ್, ರಾಯಚೂರು,ಆ.17- ಯರಮರಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರದ ನಿರ್ವಹಣಾ ಗುತ್ತಿಗೆಯನ್ನು ಅನರ್ಹ ಕಂಪನಿಗೆ ನೀಡಲಾಗಿದೆ ಎಂದು  ಮುಖಂಡರಾದ ಶಿವಕುಮಾರ್ ಪೊಲೀಸ್ ಪಾಟೀಲ್ ಆರೋಪಿಸಿದರು. ಅವರಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ 1600ಮ್ಯ.ವ್ಯಾ ಉತ್ಪಾದನಾ ಸಾಮರ್ಥ್ಯದ ವೈಟಿಪಿಎಸ್ ಸುಪರ್ ಕ್ರಿಟಿಕಲ್ ಪ್ಲಾಂಟ್  ನಿರ್ವಹಣೆಯನ್ನು ಮೂರು ವರ್ಷದ ಅವಧಿಗೆ ಕೇರಳ ಮೂಲದ ಅನನುಭವಿ ಕಂಪನಿಗೆ ಟೆಂಡರ್ ಬಿಡ್ ನಲ್ಲಿ ಸ್ವೀಕೃತಿ ಗೊಳಿಸಲಾಗಿದೆ ಇದರಲ್ಲಿ ಅಖಿಲ ಭಾರತ  ರಾಷ್ಟ್ರೀಯ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮತ್ತು ರಾಜ್ಯದ  ಇಂಧನ ಸಚಿವರು ಮತ್ತು ಎಂಡಿ ಪ್ರಭಾವವಿದೆ ಎಂಬ ಗಂಭೀರ ಆರೋಪ ಮಾಡಿದರು. ಸುಮಾರು 342ಕೋಟಿ .ರೂ ಮೊತ್ತದಲ್ಲಿ ನಿರ್ವಹಣಾ ಜವಾಬ್ದಾರಿ ನೀಡಲಾಗಿದೆ ಭವಾನಿ ಎಂಬ ಕೇರಳ ಮೂಲದ ಕಂಪನಿಗೆ ನೀಡಲಾಗಿದ್ದು ಕರ್ನಾಟಕ ಪಾರದರ್ಶಕ ಕಾಯ್ದೆ ಉಲ್ಲಂಘಿಸಿ ಟೆಂಡರ್ ಷರತ್ತು ಸಡಿಲಿಸಿ  ಗುತ್...
Image
  ಆ.20 ದೇವರಾಜ ಅರಸು ಜಯಂತಿ ಆಚರಣೆ:    ಸೆಪ್ಟೆಂಬರ್ ನಲ್ಲಿ ಅರಸು ಪುತ್ಥಳಿ ಅನಾವರಣ- ಶಾಂತಪ್ಪ.                                                                       ಜಯ ಧ್ವಜ ನ್ಯೂಸ್, ರಾಯಚೂರು,ಆ.17- ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸುರವರ ಜಯಂತಿಯನ್ನು ಜಿಲ್ಲಾಡಳಿತ ಹಾಗೂ ಹಿಂದುಳಿದ ಜಾತಿ ಒಕ್ಕೂಟದಿಂದ ಆ.20ರಂದು ಆಯೋಜಿಸಲಾಗಿದೆ ಎಂದು ಜಿಲ್ಲಾ ಹಿಂದುಳಿದ ಜಾತಿ ಒಕ್ಕೂಟದ ಅಧ್ಯಕ್ಷ ಕೆ.ಶಾಂತಪ್ಪ ಹೇಳಿದರು. ಅವರಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ದೇವರಾಜು ಅರಸು ರಾಜ್ಯದ ಜನರಿಗೆ ನೀಡಿದ ಕೊಡುಗೆ ಅವಿಸ್ಮರಣೀಯ ಅವರ‌ ಜಯಂತಿಯನ್ನು ಆ.20ರಂದು ಬೆಳಿಗ್ಗೆ ಪಂಡಿತ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಲಾಗಿದೆ ಎಂದರು. ಮೊದಲಿಗೆ ಮಹಿಳಾ ಸಮಾಜದಿಂದ ಭಾವಚಿತ್ರ ಮೆರವಣಿಗೆ ನಂತರ ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದರು. ಜನಪ್ರತಿನಿಧಿಗಳು, ಅಧಿಕಾರಿಗಳು ಸಮಾಜದ ಮುಖಂಡರು ಅನೇಕರು ಭಾಗವಹಿಸಲಿದ್ದು ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುತ್ತಿದೆ ಎಂದರು. ನಗರದಲ್ಲಿ ಮಂತ್ರಾಲಯ ರಸ್ತೆಯಲ್ಲಿ ಅರಸುರವರ...
Image
  ವಂದೇ ಮಾತರಂ ಗೀತೆಗೆ ಅಗೌರವ ಖಂಡಿಸಿ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಜಯ‌ ಧ್ವಜ ನ್ಯೂಸ್ ,ರಾಯಚೂರು,ಆ.16- ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಸಂದರ್ಭದಲ್ಲಿ “ವಂದೇ ಮಾತರಂ” ಗೀತೆಗೆ ಅಗೌರವ ತೋರಿಸಲಾಗಿದೆ ಎಂದು ಆರೋಪಿಸಿ, ಬಿಜೆಪಿ ಯುವ ಮೋರ್ಚಾ ರಾಯಚೂರು ಜಿಲ್ಲಾ ಘಟಕದ ನೇತೃತ್ವದಲ್ಲಿ ಭಾನುವಾರ ಸಂಜೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು.  ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷರಾದ ಎನ್. ವಿನಾಯಕ್ ರಾವ್  ಅವರು ಮಾತನಾಡಿ “ವಂದೇ ಮಾತರಂ ಕೇವಲ ಗೀತೆಯಲ್ಲ. ಅದು ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸ, ದೇಶಭಕ್ತಿ ಹಾಗೂ ರಾಷ್ಟ್ರೀಯ ಭಾವನೆಯೊಂದಿಗೆ ಬೆಸೆದುಕೊಂಡಿರುವ ಮಹತ್ವದ ರಾಷ್ಟ್ರಗೀತೆ. ಇಂತಹ ಗೀತೆಗೆ ಯಾವುದೇ ರೀತಿಯ ಅಗೌರವ ತೋರುವುದು ದೇಶದ ಕೋಟ್ಯಂತರ ಜನರ ಭಾವನೆಗಳಿಗೆ ಧಕ್ಕೆ ಉಂಟುಮಾಡುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು. ಕಾಂಗ್ರೆಸ್ ರಾಷ್ಟ್ರೀಯ ಕಚೇರಿಯಲ್ಲಿ ನಡೆದ ಕಾರ್ಯಕ್ರಮದ ವಿಡಿಯೋ ಹಾಗೂ ಈ ಕುರಿತು ಪ್ರಕಟವಾದ ಪತ್ರಿಕಾ ವರದಿಗಳನ್ನು ಉಲ್ಲೇಖಿಸಿದ ಯುವ ಮೋರ್ಚಾ ಮುಖಂಡರು, ರಾಷ್ಟ್ರೀಯ ಗೀತೆ ಮತ್ತು ರಾಷ್ಟ್ರದ ಗೌರವವನ್ನು ಕಾಪಾಡುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ ಎಂದು ಹೇಳಿದರು. “ವಂದೇ ಮಾತರಂ”ಗೆ ಗೌರವ ನೀಡುವ ವಿಚಾರದಲ್ಲಿ ಯಾವುದೇ ರಾಜಕೀಯ ಭೇದಭಾವ ಇರಬ...