ಕ್ಲೈಮ್ಯಾಕ್ಸ್ ಹಂತಕ್ಕೆ ಸಂಪುಟ ವಿಸ್ತರಣೆ ಕಸರತ್ತು: ಜಿಲ್ಲೆಯಿಂದ ಯಾರಿಗೆ ಸಿಗಲಿದೆ ಸಚಿವ ಸ್ಥಾನ. ಜಯ ಧ್ವಜ ನ್ಯೂಸ್, ರಾಯಚೂರು,ಜು.16- ರಾಜ್ಯ ಸರ್ಕಾರದ ಮಂತ್ರಿ ಮಂಡಲ ವಿಸ್ತರಣೆ ಕಸರತ್ತು ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ್ದು ದೆಹಲಿಯಲ್ಲಿ ಸಚಿವರ ಪಟ್ಟಿಗೆ ಹೈಕಮಾಂಡ್ ಅಂತಿಮ ಮುದ್ರೆ ಹಾಕುವ ಪ್ರಕ್ರಿಯೆ ಚುರುಕು ಪಡೆದುಕೊಂಡಿದೆ. ಸಿಎಂ ಡಿಕೆ ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ , ಪಕ್ಷದ ವರಿಷ್ಠರು ಆದ ರಾಹುಲ್ ಗಾಂಧಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಪಕ್ಷದ ಕರ್ನಾಟಕ ಉಸ್ತುವಾರಿ ಸುರ್ಜೆವಾಲಾ, ಕೆಪಿಸಿಸಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಸೇರಿದಂತೆ ಪಕ್ಷದ ವರಿಷ್ಠರು ಚರ್ಚಿಸಿ ಸಚಿವರ ಲಿಸ್ಟ್ ಫೈನಲ್ ಮಾಡಲಿದ್ದಾರೆ. ಬಹುಷಃ ಒಂದು ವಾರದೊಳಗೆ ಸಂಪುಟ ವಿಸ್ತರಣೆಯಾಗುವುದು ಖಚಿತ ಎನ್ನಲಾಗಿದೆ. ಜಿಲ್ಲಾ, ಪ್ರಾದೇಶಿಕ, ಜಾತಿವಾರು, ವರ್ಚಸ...