Posts

Image
  ಜಿಲ್ಲಾ ಉಸ್ತುವಾರಿ ಸಚಿವರಿಂದ ಬರ ಪರಿಸ್ಥಿತಿ ಕುರಿತು ಅಧಿಕಾರಿಗಳೊಂದಿಗೆ ಸಭೆ: ಕೊನೆಯ ‌ಭಾಗದ ರೈತರಿಗೆ ಸಮರ್ಪಕವಾಗಿ ನೀರು ಹರಿಸಿ- ಸಚಿವ ಡಾ.ಅಜಯ್ ಧರ್ಮಸಿಂಗ್ ಜಯ ಧ್ವಜ ನ್ಯೂಸ್ ,ರಾಯಚೂರು ಆ. 31- ತುಂಗಭದ್ರಾ ಎಡದಂಡೆ ಕಾಲುವೆಯ ಅಚ್ಚುಕಟ್ಟು ಪ್ರದೇಶದ ಕೊನೆಯ ‌ಭಾಗದ ರೈತರಿಗೆ ಸಮರ್ಪಕವಾಗಿ ನೀರು ನಿರ್ವಹಣೆ ಮಾಡಬೇಕು. ಜಿಲ್ಲೆಯ ಬರಗಾಲ ಪೀಡಿತ ಪ್ರದೇಶಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲಾ ಉಸ್ತುವಾರಿ ಸಚಿವರಾದ ಡಾ.ಅಜಯ್ ಧರ್ಮಸಿಂಗ್ ಅವರು ಹೇಳಿದರು. ಅವರಿಂದು ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ರಾಯಚೂರು ಜಿಲ್ಲೆಯಲ್ಲಿ ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆಗಳು, ಕೃಷಿ ಚಟುವಟಿಕೆಗಳು, ನೀರಾವರಿ ಸಮಸ್ಯೆಗಳು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಐದು‌ ತಾಲೂಕುಗಳನ್ನು ಬರ ಪೀಡಿತ ‌ತಾಲೂಕು ಎಂದು ಘೋಷಣೆ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ತಾಲೂಕುಗಳನ್ನು ಬರ ಪೀಡಿತ ತಾಲೂಕು ಎಂದು ಘೋಷಿಸಲು ಕ್ರಮ ವಹಿಸಲಾಗುತ್ತದೆ ಎಂದರು. ಜಿಲ್ಲೆಯ ವಿವಿಧ ಇಲಾಖೆಗಳ ಅಧಿಕಾರಿಗಳು ಮುಂಜಾಗ್ರತಾ ವಹಿಸಿ, ಸರ್ಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜನರಿಹೆ ತಲುಪಿಸಲು ಶ್ರಮಿಸಬೇಕು. ಮುಖ್ಯಮಂತ್ರಿಯವರು ರಾಯಚೂರು ಜಿಲ್ಲೆಗೆ ವಿಶೇಷ ಆದ್ಯತೆ ನೀಡಿದ್ದು, ಸರ್ಕಾರದ...
Image
ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಲಿದೆ, ಸರ್ಕಾರ ಸದಾ ನಿಮ್ಮೊಂದಿಗಿದೆ- ಸಚಿವ ಡಾ.ಅಜಯ್ ಧರ್ಮಸಿಂಗ್ ಜಯ ಧ್ವಜ ನ್ಯೂಸ್ ,ರಾಯಚೂರು ಆ. 31- ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ  ಭೂಮಾನಂದ ಹದ್ದಿನಾಳ ಅವರನ್ನು ಇತ್ತೀಚೆಗೆ ಸುಂಕೇಶ್ವರಹಾಳ ಗ್ರಾಮದ ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿದ ಹಿನ್ನೆಲೆಯಲ್ಲಿ ಆಗಸ್ಟ್ 31ರ ಸೋಮವಾರ ದಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲಾ ಉಸ್ತುವಾರಿ ಸಚಿವರಾದ ಡಾ.ಅಜಯ್ ಧರ್ಮಸಿಂಗ್ ಹದ್ದಿನಾಳ ಗ್ರಾಮಕ್ಕೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದರು. ಈ ವೇಳೆ ಸಚಿವರು ಮಾತನಾಡಿ, ಜಿಲ್ಲೆಯಲ್ಲಿ ನಡೆದಿರುವ ಈ ಅಹಿತಕರ ಕೃತ್ಯ ಮತ್ತು ಘಟನೆಯನ್ನು ಸರ್ಕಾರ ತೀವ್ರವಾಗಿ ಪರಿಗಣಿಸಿದ್ದು, ಈ ಪ್ರಕರಣದಲ್ಲಿ ಭಾಗಿಯಾದ  ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ಬಿಡುವ ಪ್ರಶ್ನೆಯೇ ಇಲ್ಲ. ಈ ವಿಷಯವನ್ನು ಈಗಾಗಲೇ ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ತಂದು‌ ಸುದೀರ್ಘ ಚರ್ಚೆ ನಡೆಸಿದ್ದೇವೆ. ಈ ಸಭೆಯಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅವರೂ ಕೂಡ ಉಪಸ್ಥಿತರಿದ್ದು, ಘಟನೆಯ ವಿವರಗಳನ್ನು ಕಲೆಹಾಕಲಾಗಿದೆ ಎಂದರು. ಎಂಟು ಜನರ ಬಂಧನ: ಘಟನೆ ನಡೆದ ತಕ್ಷಣವೇ ಸಕ್ರಿಯವಾಗಿರುವ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ...
Image
  ಎಸ್ಸಿ ಎಸ್ಟಿ  ಆಯೋಗದ ಅಧ್ಯಕ್ಷರು ಮತ್ತು ಸದಸ್ಯರಿಂದ   ಜಿಲ್ಲೆಯ ವಿವಿಧ ಸ್ಥಳಗಳಿಗೆ ಭೇಟಿ ಮತ್ತು ಪರಿಶೀಲನೆ: ಪ್ರಕರಣವನ್ನು ನ್ಯಾಯಯುತವಾಗಿ ನಡೆಸಲು ಸೂಚನೆ- ಡಾ.ಮೂರ್ತಿ ಎಲ್. ಜಯ ಧ್ವಜ ನ್ಯೂಸ್ ,ರಾಯಚೂರು ಆ. 30- ಕರ್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ಡಾ.ಮೂರ್ತಿ ಎಲ್. ಮತ್ತು ಸದಸ್ಯರಾದ  ಸುನೀಲ್ ಎಂ.ಉಕ್ಕಲಿ, ಎನ್.ದಿವಾಕರ್, ಗೀತಾ ಥಾಂವಶಿ ಹಾಗೂ ಕಾರ್ಯದರ್ಶಿ ಡಾ.ಹೆಚ್.ಎಸ್.ಶಿವರಾಮು ಅವರು ಜಿಲ್ಲೆಯಲ್ಲಿ ಎರಡು ದಿನಗಳ ಕಾಲ ಪ್ರವಾಸದಲ್ಲಿದ್ದು, ರವಿವಾರ ಮೊದಲ ದಿ‌ನ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ನಡೆದ ಕೊಲೆ ಪ್ರಕರಣ ವಿಚಾರದ ಬಗ್ಗೆ ಸ್ಥಳ ಪರಿಶೀಲನೆ ನಡೆಸಿದರು. ರಾಯಚೂರಿನ ಕೃಷಿ ವಿಶ್ವವಿದ್ಯಾಲಯದ  ವಸತಿ ಗೃಹದಿಂದ ನೇರವಾಗಿ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮಕ್ಕೆ ಭೇಟಿ ನೀಡಿ, ಮೃತ ಕು.ಅಶ್ವಿನಿ ಎಂಬುವವರ ಅತ್ಯಾಚಾರ ಹಾಗೂ ಕೊಲೆ ವಿಚಾರದ ಬಗ್ಗೆ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರಿಂದ ಸ್ಥಳ ಪರಿಶೀಲನೆ ನಡೆಸಿದರು. ಅವರು ಮನೆಗೆ ಭೇಟಿ ನೀಡಿ ಮೃತ ಕು.ಅಶ್ವಿನಿ ಅವರ ಭಾವಚಿತ್ರಕ್ಕೆ ವಿವಿಧ ಗಣ್ಯರಿಂದ ಪುಷ್ಪ ನಮನ ಸಲ್ಲಿಸಿದ  ನಂತರ ಆಯೋಗದ ಅಧ್ಯಕ್ಷರಿಂದ ಕುಟುಂಬದ ಮಾಹಿತಿ ಪಡೆದರು. ಈ ವೇಳೆ ಆಯೋಗದ ಅಧ್ಯಕ್ಷರು ಮಾತನಾಡಿ, ಪ್ರಕರಣದಡಿ ಆರೋಪಿಗಳಿಗೆ ಕಾನೂನು ಪ್ರಕಾರ ಕಠಿಣವಾದ ಶಿಕ್ಷೆಯಾಗಲಿದೆ. ಯಾರು ಭಯ ಪಡುವ ಅವಶ್ಯಕತೆ ಇಲ್ಲ...
Image
  ಜುಬಿನ್ ಮಹೋಪಾತ್ರ ವರ್ಗಾವಣೆ.                                                                 ಜಯ ಧ್ವಜ ನ್ಯೂಸ್, ರಾಯಚೂರು,ಆ.29-                    ಮಹಾನಗರ ಪಾಲಿಕೆ ಆಯುಕ್ತರಾದ ಜುಬಿನ್ ಮಹೋಪಾತ್ರ ವರ್ಗಾವಣೆಗೊಳಿಸಿ ಸರ್ಕಾರ ಆದೇಶಿಸಿದೆ. ಜುಬಿನ್ ಮಹೋಪಾತ್ರರವರನ್ನು ಯಾದಗಿರಿ ಜಿ.ಪಂ ಸಿಇಓ ಆಗಿ ನಿಯುಕ್ತಿಗೊಳಿಸಲಾಗಿದೆ. ಜುಬಿನ್ ಮಹೋಪಾತ್ರ ಮಹಾನಗರ ಪಾಲಿಕೆ ಆಯುಕ್ತರಾಗಿ ಅನೇಕ ಬದಲಾವಣೆ ತಂದಿದ್ದರು.
Image
  ನವೋದಯ 88.4 ಎಫ್.ಎಮ್. ಬಾನುಲಿ ಕೇಂದ್ರ ಉಧ್ಘಾಟನೆ: ಎಸ್.ಆರ್.ರೆಡ್ಡಿ ಕನಸು ಕಂಡದ್ದನ್ನು ನನಸು ಮಾಡುವ ಛಲಗಾರ-ಬೋಸರಾಜು.                                                      ಜಯ ಧ್ವಜ ನ್ಯೂಸ್, ರಾಯಚೂರು,ಆ.29- ಎಸ್.ಆರ್.ರೆಡ್ಡಿ ಕನ‌ಸು ಕಂಡದ್ದನ್ನು ನನಸು ಮಾಡುವ ಛಲಗಾರ ಎಂದು ಮಾಜಿ ಸಚಿವ ಎನ್.ಎಸ್.ಬೋಸರಾಜು ಹೇಳಿದರು. ಅವರಿಂದು ನವೋದಯ ಸಂಸ್ಥೆಯಲ್ಲಿ ನವೋದಯ 88.4 ಬಾನುಲಿ ಕೇಂದ್ರ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಎಸ್ ಆರ್ ರೆಡ್ಡಿ ನವೋದಯ ಸಂಸ್ಥೆ ಮೂಲಕ ಶೈಕ್ಷಣಿಕ ಕ್ರಾಂತಿ ಮಾಡಿದ್ದಾರೆ ನಗರಕ್ಕೆ ವಿದ್ಯಾರ್ಜನೆಗೆ ಆಗಮಿಸಿದ ಅವರು ತಮ್ಮದೇ ಬೃಹತ್ ಶಿಕ್ಷಣ ಸಂಸ್ಥೆ ರೂಪಿಸಿದ್ದು ಅತ್ಯಂತ ಶ್ಲಾಘನೀಯ ಎಂದರು. ಬಾನುಲಿ ಕೇಂದ್ರ ಸ್ಥಾಪಿಸುವ ಮೂಲಕ ಶಿಕ್ಷಣ, ಮನೋರಂಜನೆಗೆ ಹೊಸ ಹೆಜ್ಜೆಯಿರಿಸಿದ್ದು ಬಾನುಲಿ ಕೇಂದ್ರ ಜನರಿಗೆ ಉಪಯುಕ್ತ ಮಾಹಿತಿ ಒದಗಿಸಲಿ ಎಂದರು. ನಗರದಲ್ಲಿ ಮದುವೆ ಸಮಾರಂಭಗಳಿಗೆ ಅನೂಕೂಲವಾಗಲು ನಗರದ ಹೊರ ವಲಯದಲ್ಲಿ ಸುಸಜ್ಜಿತ ಕಲ್ಯಾಣ ಮಂಟಪ ಕಟ್ಟಿಸುವ ಮೂಲಕ ಶುಭ ಕಾರ್ಯಗಳಿಗೆ ಅನುಕೂಲ ಕಲ್ಪಿಸಿದ್ದಾರೆ ಎಂದರು. ಅವರ ಸಂಸ್ಥೆಯಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದ್ದು ಸಂಸ್ಥೆಯಲ್ಲಿ ಪ್ರವೇಶ ಪಡೆಯಲು ಭಾರಿ ಪೈಪೋಟಿಯಿರು...
Image
  ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರ ವಿಶೇಷ ಒತ್ತು:                                                              ರಾಜ್ಯ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ . ಜಯ ಧ್ವಜ ನ್ಯೂಸ್ ,ರಾಯಚೂರು ಆಗಸ್ಟ್ 28 - ರಾಜ್ಯ ಸರ್ಕಾರವು ಅಲೆಮಾರಿ ನಿಗಮಕ್ಕೆ ಎಸ್‌ಸಿಪಿ ಅಡಿಯಲ್ಲಿ 100 ಕೋಟಿ ಹಾಗೂ ಟಿಎಸ್ಪಿ ಅಡಿಯಲ್ಲಿ 48 ಕೋಟಿ ವಿಶೇಷ ಅನುದಾನವನ್ನು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ಕಾಯ್ದಿರಿಸುವ ಮೂಲಕ ಆ ಸಮುದಾಯಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುತ್ತಿದೆ ಎಂದು ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಲ್ಲವಿ ಜಿ. ಅವರು ಹೇಳಿದರು. ಅವರಿಂದು ನಗರದ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ  ಮಾತನಾಡಿದರು.  ಸಿದ್ಧರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮೊದಲು ಅಲೆಮಾರಿ ಕೋಶವನ್ನು ಸ್ಥಾಪಿಸಲಾಯಿತು. ನಂತರ 2022ರಲ್ಲಿ ನಿಗಮವಾಗಿ, 2024ರಲ್ಲಿ ಪ್ರಥಮ ಬಾರಿಗೆ ಅಲೆಮಾರಿ ಸಮುದಾಯದ ಹೆಣ್ಣುಮಗಳಿಗೆ ನಿಗಮದ ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಲಾಗಿದೆ ಎಂದರು. ಕಂದಾಯ ಇಲಾಖೆಯ ಸಹಯೋಗದೊಂದಿಗೆ ಅಲೆಮಾರಿಗಳು...
Image
  ದೇವದುರ್ಗ ಚಿನ್ನ–ತಾಮ್ರದ ಗಣಿಗಾರಿಕೆ ಬ್ಲಾಕ್‌ಗೆ ತೆಲಂಗಾಣ ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಭೇಟಿ ಜಯ‌ ಧ್ವಜ ನ್ಯೂಸ್ ,ರಾಯಚೂರು,ಆ.27- ಕೇಂದ್ರ ಗಣಿ ಸಚಿವಾಲಯದ ಹರಾಜು ಪ್ರಕ್ರಿಯೆ ಮೂಲಕ ಸರ್ಕಾರಿ ಸ್ವಾಮ್ಯದ ಸಿಂಗರೇಣಿ ಕಾಲರೀಸ್ ಕಂಪನಿ ಲಿಮಿಟೆಡ್‌ ನವರು  ಜಿಲ್ಲೆಯ ದೇವದುರ್ಗದಲ್ಲಿ ಚಿನ್ನ ಮತ್ತು ತಾಮ್ರದ ಬ್ಲಾಕ್‌ಗಳ ಪರಿಶೋಧನಾ ಪರವಾನಗಿ ಪಡೆದಿರುವ ಹಿನ್ನೆಲೆಯಲ್ಲಿ, ತೆಲಂಗಾಣದ ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಅವರು ಗುರುವಾರ ದೇವದುರ್ಗಕ್ಕೆ ಭೇಟಿ ನೀಡಿ ಸಿಂಗರೇಣಿ ಬ್ಲಾಕ್‌ನ ಪರಿಶೋಧನಾ ಪ್ರದೇಶವನ್ನು ಪರಿಶೀಲಿಸಿದರು. ಚಿನ್ನ ಮತ್ತು ತಾಮ್ರದ ನಿಕ್ಷೇಪಗಳಿರುವ ಪ್ರದೇಶಕ್ಕೆ ಭೇಟಿ ನೀಡಿದ ಅವರು, ಪರಿಶೋಧನಾ ಕಾರ್ಯದ ಪ್ರಗತಿ ಹಾಗೂ ಮುಂದಿನ ಚಟುವಟಿಕೆಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಉಪಮುಖ್ಯಮಂತ್ರಿ ಮಲ್ಲು ಭಟ್ಟಿ ವಿಕ್ರಮಾರ್ಕ ಅವರೊಂದಿಗೆ ಕಾಂಗ್ರೆಸ್ ರಾಜ್ಯ ಯುವ ಮುಖಂಡರಾದ ರವಿ ಬೋಸರಾಜು ಅವರು ಗಣಿಗಾರಿಕೆ ಪ್ರದೇಶವನ್ನು ಪರಿಶೀಲಿಸಿದರು. ನಿರ್ಣಾಯಕ ಖನಿಜಗಳ ಪರಿಶೋಧನಾ ಕ್ಷೇತ್ರಕ್ಕೆ ಸಿಂಗರೇಣಿ ಕಾಲರೀಸ್ ಕಂಪನಿ ಪ್ರವೇಶಿಸುತ್ತಿರುವುದು ಮಹತ್ವದ ಬೆಳವಣಿಗೆಯಾಗಿದೆ ಎಂದು ತಿಳಿಸಿದರು. ನಂತರ ಕಾಂಗ್ರೆಸ್ ರಾಜ್ಯ ಯುವ ಮುಖಂಡರಾದ ರವಿ ಬೋಸರಾಜು ಮಾತನಾಡಿ, ಚಿನ್ನ ಹಾಗೂ ತಾಮ್ರ ಗಣಿಗಾರಿಕೆ  ಯೋಜನೆಯು ಸಿಂಗರೇಣಿ ಸಂಸ್ಥೆಯನ್ನು ಕಲ್ಲಿದ್ದಲು ಗಣಿಗಾರಿಕೆಯಾಚೆಗೆ ಹೊಸ...