Posts

Image
  ಗೋವಿಂದ ಗಾನ ಕಾರ್ಯಕ್ರಮದಲ್ಲಿ ಹರಿಕಥಾಮೃತಸಾರದ ಪ್ರಸ್ತುತಿ- ಮುರಳೀಧರ ಕುಲಕರ್ಣಿ    ಜಯ ಧ್ವಜ ನ್ಯೂಸ್ ರಾಯಚೂರು ,ಸೆ.16 - ನಗರದ ಸ್ಟೇಷನ್ ರಸ್ತೆಯಲ್ಲಿರುವ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ   ಅಕ್ಟೋಬರ್ 3 ಮತ್ತು 4 ರಂದು  ಜರಗುವ ಶ್ರೀ ಅಸ್ಕಿಹಾಳ ಗೋವಿಂದ ದಾಸರ ಸ್ಮರಣೋತ್ಸವದ ಅಂಗವಾಗಿ ಖ್ಯಾತ ಗಾಯಕ ಡಾ. ಶೇಷಗಿರಿದಾಸ್ ಇವರ ನೇತೃತ್ವದಲ್ಲಿ ಜರಗುವ ಗೋವಿಂದ ಗಾನ ಕಾರ್ಯಕ್ರಮದಲ್ಲಿ ಹರಿಕಥಾಮೃತಸಾರ ಅಭಿಯಾನ ತಂಡ ದ ವತಿಯಿಂದ ಹರಿಕಥಾಮೃತಸಾರದ ಸಾಮೂಹಿಕ ಪ್ರಸ್ತುತಿಯನ್ನು ಆಯೋಜಿಸಲಾಗಿದೆ.  ಈ ಸಂಬಂಧ ಇಂದು ಸಂಜೆ ನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠ ಜವಾಹರ್ ನಗರದಲ್ಲಿ ಪೂರ್ವಭಾವಿ ತಯಾರಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.    ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮುರಳಿಧರ ಕುಲಕರ್ಣಿ ಅವರು ಮಾತನಾಡಿ ಗೋವಿಂದ ಗಾನ ಕಾರ್ಯಕ್ರಮವು ರಾಯಚೂರಿನಲ್ಲಿ ಅತ್ಯಂತ ವರ್ಣ ರಂಜಿತವಾಗಿ ನಡೆಯುವ ಭಕ್ತಿ ಪ್ರಧಾನ ಕಾರ್ಯಕ್ರಮವಾಗಿದೆ. ಇದರಲ್ಲಿ ರಾಯಚೂರಿನ ಎಲ್ಲಾ ಜಾತಿಯ ಜನಾಂಗದವರು ಭಾಗವಹಿಸುತ್ತಿರುವುದು ವಿಶೇಷವಾಗಿದೆ.   ನಾಡಿನ ಖ್ಯಾತ ಗಾಯಕರಿಂದ ದಾಸವಾಣಿ ಸಂಗೀತ ಕಾರ್ಯಕ್ರಮಗಳು ಉಪನ್ಯಾಸಗಳು ವಿಶೇಷವಾಗಿ ಏಕಕಾಲದಲ್ಲೇ ಕೋಲಾಟ, ನೃತ್ಯ, ಚಿತ್ರ ಕುಂಜ, ಸಮೂಹಗಾಯನ ಆಕರ್ಷಣೀಯ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಹೇಳಿದರು.   ಈ ಸಂದ...
Image
  ವಿಮೋಚನೆಯಿಂದ ವಿಕಾಸದತ್ತ ಕಲ್ಯಾಣ ಕರ್ನಾಟಕದ  ಸಮೃದ್ಧ ಪಯಣ ಪ್ರತಿ ವರ್ಷ ಸೆಪ್ಟೆಂಬರ್ 17ರಂದು ಆಚರಿಸಲಾಗುವ 'ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ' (ಹೈದರಾಬಾದ್ ಕರ್ನಾಟಕ ವಿಮೋಚನಾ ದಿನ) ಈ ಭಾಗದ ಜನರ ತ್ಯಾಗ, ಬಲಿದಾನ ಮತ್ತು ದೇಶ ಪ್ರೇಮದ ಐತಿಹಾಸಿಕ ಸಂಕೇತವಾಗಿದೆ. 1947ರ ಆಗಸ್ಟ್ 15ರಂದು ಭಾರತಕ್ಕೆ ಸ್ವಾತಂತ್ರ‍್ಯ ಸಿಕ್ಕರೂ, ಹೈದರಾಬಾದ್ ನಿಜಾಮನ ಆಳ್ವಿಕೆಯಲ್ಲಿದ್ದ ಈ ಪ್ರದೇಶವು ಸ್ವಾತಂತ್ರ‍್ಯದ ಬೆಳಕನ್ನು ಕಾಣಲು ಮತ್ತಷ್ಟು ದಿನಗಳ ವರೆಗೆ ಕಾಯಬೇಕಾಯಿತು. ಬ್ರಿಟಿಷರು ಭಾರತದಿಂದ ನಿರ್ಗಮಿಸುವಾಗ ನಮ್ಮ ದೇಶದಲ್ಲಿದ್ದ ವಿವಿಧ ಸಂಸ್ಥಾನಗಳಿಗೆ ಭಾರತ ಒಕ್ಕೂಟವನ್ನು ಸೇರಲು ಅಥವಾ ಸ್ವತಂತ್ರವಾಗಿರಲು ಅವಕಾಶ ನೀಡಿದ್ದರು. ಹೈದರಾಬಾದ್‌ನ ನಿಜಾಮ ಮೀರ್ ಉಸ್ಮಾನ್ ಅಲಿ ಖಾನ್ ತನ್ನ ಸಂಸ್ಥಾನವನ್ನು ಸ್ವತಂತ್ರವಾಗಿಡಲು ನಿರ್ಧರಿಸಿದನು. ನಿಜಾಮನ ಬೆಂಬಲವಿದ್ದ 'ರಜಾಕಾರರು' ಎಂಬ ಸಶಸ್ತç ಪಡೆ ನಾಗರಿಕರ ಮೇಲೆ ಅಪಾರ ದೌರ್ಜನ್ಯ ಎಸಗಿತು. ಇದನ್ನು ವಿರೋಧಿಸಿ ನಮ್ಮ ಭಾಗದ ರಮಾನಂದ ತೀರ್ಥ, ಸರ್ದಾರ್ ಶರಣಗೌಡ ಇನಾಂದಾರ್, ಸ್ವಾಮಿ ರಾಮಾನಂದ ತೀರ್ಥ, ಜಯತೀರ್ಥ ರಾಜಪುರೋಹಿತ್ ಸೇರಿದಂತೆ ಅನೇಕ ಧುರೀಣರು ಮತ್ತು ಸಾವಿರಾರು ಯುವಕರು ಹೋರಾಟಕ್ಕೆ ಧುಮುಕಿದರು. ಪರಿಸ್ಥಿತಿ ಕೈಮೀರುತ್ತಿದ್ದಂತೆ ಭಾರತದ ಅಂದಿನ ಗೃಹ ಸಚಿವರಾಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಆಪರೇಷನ್ ಪೋಲೋ ಹೆಸರಿನ ಪೊಲೀಸ್ ಕಾರ್ಯಾಚರಣೆಗೆ ಆದೇಶಿಸಿದರು. 19...
Image
  ಜಿಲ್ಲಾಡಳಿತದಿಂದ 19ನೇ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ:    ಪ್ರಜಾಪ್ರಭುತ್ವದ ನೈಜ ಶಕ್ತಿ ಭಾರತೀಯ ಪ್ರಜೆಗಳಲ್ಲಿದೆ- ಜಿಲ್ಲಾಧಿಕಾರಿ ಪೂವಿತಾ ಎಸ್. ಜಯ ಧ್ವಜ ನ್ಯೂಸ್  ,ರಾಯಚೂರು ಸೆ.15-  ಪ್ರಜಾಪ್ರಭುತ್ವದ ನೈಜ ಶಕ್ತಿ ಕೇವಲ ಜನಪ್ರತಿನಿಧಿಗಳು ಅಥವಾ ಅಧಿಕಾರಿಗಳ ಕೈಯಲ್ಲಿರದೆ, ದೇಶದ ಪ್ರತಿಯೊಬ್ಬ ಭಾರತೀಯ ಪ್ರಜೆಗಳಲ್ಲಿದೆ ಎಂದು ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರು ಹೇಳಿದರು.  ಅವರಿಂದು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಮತ್ತು ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ ರಾಯಚೂರು ಇವರ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಾಗೂ ತಾಲೂಕು, ಜಿಲ್ಲಾ ಮಟ್ಟದ ಯುವ ಸಂಸತ್ತು ಸಭೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಭಾರತವು 1947ರ ಆಗಸ್ಟ್ 15ರಂದು ಸ್ವತಂತ್ರಗೊಂಡರೆ, 1950ರ ಜನವರಿ 26 ರಂದು ಸಂವಿಧಾನವನ್ನು ಅಳವಡಿಸಿಕೊಳ್ಳುವ ಮೂಲಕ ಅಧಿಕೃತವಾಗಿ ಪ್ರಜಾಸತ್ತಾತ್ಮಕ ಗಣರಾಜ್ಯವಾಯಿತು. ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಅನೇಕ ಮಹನೀಯರ ದೀರ್ಘಾವಧಿಯ ದೂರದೃಷ್ಟಿಯ ಫಲವಾಗಿ ನಮಗೆ ಈ ಶ್ರೇಷ್ಠ ಸಂವಿಧಾನ ದೊರೆತಿದೆ. ಸಂವಿಧಾನ ಜಾರಿಗೆ ಬಂದು 70ಕ್ಕೂ ಹೆಚ್ಚು ವರ್ಷಗಳು ಕಳೆದರೂ, ಅದ...
Image
  ರಾಘವೇಂದ್ರ ಕುಷ್ಟಗಿಗೆ   ಶಂಕರಪ್ಪ ಪ್ರತಿಷ್ಠಾನದಿಂದ  ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರ -   ಜಯ ಧ್ವಜ ನ್ಯೂಸ್ ,ರಾಯಚೂರು,ಸೆ.15- ಚಿತ್ರದುರ್ಗದ ನುಲೇನೂರು ಶಂಕರಪ್ಪ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ಪ್ರತಿಷ್ಠಿತ ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರ ಪ್ರಶಸ್ತಿಗೆ ಈ ಬಾರಿ ಚಿಂತಕ ಹಾಗೂ ಸಾಮಾಜಿಕ ಹೋರಾಟಗಾರ ರಾಘವೇಂದ್ರ ಕುಷ್ಟಗಿ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ೨೫ ಸಾವಿರ ರೂಪಾಯಿ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಅಕ್ಟೋಬರ್ ಮೊದಲವಾರ ರಾಯಚೂರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರತಿಷ್ಠಾನದ ಸದಸ್ಯ ಚಿಕ್ಕಪ್ಪನಹಳ್ಳಿ ಷಣ್ಮುಖ ಮಾಹಿತಿ ತಿಳಿಸಿದ್ದಾರೆ.   ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಘವೇಂದ್ರ ಕುಷ್ಟಗಿ ಅವರು  ಕಲ್ಯಾಣ ಕರ್ನಾಟದ ಆರ್ಟಿಕಲ್ ೩೭೧(ಜೆ) ಗೆ ಹೋರಾಟ ಮಾಡಿ ಯಶ ಕಂಡಿದ್ದಾರೆ. ಅಕ್ರಮ ಗಣಿಗಾರಿಕೆ, ಅನ್ಯಾಯದ ಭೂ ಸ್ವಾಧೀನ, ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆಗಾಗಿ  ಎಸ್.ಆರ್.ಹಿರೇಮಠ ಅವರ ಜೊತೆಗೂಡಿ ಜನ ಸಂಗ್ರಾಮ ಪರಿಷತ್ ಸ್ಥಾಪನೆ ಮಾಡಿದ್ದರು. ಅಕ್ರಮ ಗಣಿಗಾರಿಕೆ ವಿರುದ್ದ ರಾಯಚೂರಿನಿಂದ ಬೆಂಗಳೂರು ವರೆಗೆ ಬೃಹತ್ ಜಾಥಾ ಸಂಘಟಿಸಿದ್ದರು. ಗದಗದ ಕಪ್ಪತಗುಡ್ಡ ರಕ್ಷಣೆಗೆ ಪಶ್ಚಿಮಘಟ್ಟದಿಂದ ಆರಂಭಗೊAಡ ಜಾಥಾದಲ್ಲಿ ಪಾಲ್ಗೊಂಡಿದ್ದರು.   ಚಿಂತಕ ದೇವನೂರು ಮಹಾದೇವ. ರೈತ ಸಂಘದ ಪುಟ್ಟಣ್ಣಯ್ಯ, ಎಸ್...
Image
ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಕೆ.ಶಾಂತಪ್ಪ ಅವರಿಗೆ ಕರ್ನಾಟಕ ಸಂಘದಿಂದ ಸನ್ಮಾನ ಜಯ ಧ್ವಜ ನ್ಯೂಸ್  , ರಾಯಚೂರು ,ಸೆ.14- ಕರ್ನಾಟಕ ಸಂಘದ ಅಧ್ಯಕ್ಷರು, ಇತ್ತೀಚಿಗೆ ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಕೆ.ಶಾಂತಪ್ಪ ಇವರಿಗೆ ಕರ್ನಾಟಕ ಸಂಘದ ಪದಾಧಿಕಾರಿಗಳು ನಿನ್ನೆ ಸಂಜೆ ಅವರ ಮನೆಗೆ ತೆರಳಿ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಿದರು.  ಈ ಸಂದರ್ಭದಲ್ಲಿ ಕರ್ನಾಟಕ ಸಂಘದ ಕಾರ್ಯದರ್ಶಿಗಳಾದ ಮುರಳಿಧರ ಕುಲಕರ್ಣಿ ಅವರು ಮಾತನಾಡಿ " ಕೆ. ಶಾಂತಪ್ಪ ಅವರು ಹೆಸರಿಗೆ ತಕ್ಕಂತೆ ಶಾಂತವಾಗಿ ಎಲ್ಲಾ ಸಮಾಜದ ಬಂಧುಗಳೊಡನೆ ಬೆರೆತು  ಸೌಹಾರ್ದತವಾಗಿ ಸಮಾಜ ಸೇವೆ ಮಾಡುತ್ತಿರುವುದು ವಿಶೇಷವಾಗಿದೆ. ಇವರ ಕಾರ್ಯ ಕ್ಷಮತೆ, ದಕ್ಷತೆ, ಪ್ರಾಮಾಣಿಕತೆ, ಇವುಗಳನ್ನು ಪರಿಗಣಿಸಿ ಅಧಿಕಾರವೇ ಇವರ ಬಳಿ ಬಂದಿದೆ ಇವರು ಅಧಿಕಾರವನ್ನು ಎಂದು ಹುಡುಕಿಕೊಂಡು ಹೋದವರಲ್ಲ ಎಂದು ಹೇಳಿದರು. ಪ್ರಸ್ತುತ ಕರ್ನಾಟಕ ಸಂಘದ ಅಧ್ಯಕ್ಷರಾಗಿ  ಸಂಘದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸಿ ಒಂದು ಹೊಸ ರೂಪವನ್ನು ಕೊಡುತ್ತಿರುವುದು ಇವರ ಕಾರ್ಯ ವೈಖರಿಯನ್ನು ತೋರಿಸುತ್ತದೆ ಎಂದು ಪ್ರಶಂಸಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಸಂಘದ ಪದಾಧಿಕಾರಿಗಳಾದ ಕಾರ್ಯದರ್ಶಿ ಶ್ರೀನಿವಾಸ ಗಟ್ಟು, ಖಜಾಂಚಿ ಹನುಮಂತಪ್ಪ, ಹಿರಿಯ ಸದಸ್ಯರಾದ ಮಲ್ಲನಗೌಡ ಇಂದ ಪುರ್,  ಬಾಬು ಬಂಡಾರಿಗಲ್, ವೀರ ಹನುಮಾನ್ ಹಾಗೂ ಪಲಗುಲನಾಗರಾಜ ಅವರು ಉಪಸ್ಥಿತರಿದ್ದರು.
Image
ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿಮಹೋತ್ಸವ :    ಪದವಿ ವಿದ್ಯಾರ್ಥಿಗಳ ಭಾಷಣ ಸ್ಪರ್ಧೆಗೆ ಬಸವರಾಜ್ ನಾಗಡದಿನ್ನಿ ಚಾಲನೆ ಜಯ ಧ್ವಜ ನ್ಯೂಸ್ ,ರಾಯಚೂರು ಸೆ.12 - ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತನ್ನ ಇಂದಿನ ಯುವ ಪೀಳಿಗೆ ಅರ್ಥ ಮಾಡಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಬಸವರಾಜ್ ನಾಗಡದಿನ್ನಿ ಹೇಳಿದರು. ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವ ಸಂಭ್ರಮಾಚರಣೆ ಹಿನ್ನೆಲೆ ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ "ಸಾಮಾಜಿಕ ಮಾಧ್ಯಮಗಳು ಮತ್ತು ಜೆನ್ ಜಿ: ಜಾಗೃತಿಯೋ ಅಥವಾ ಗೊಂದಲವೋ?" ವಿಷಯ ಕುರಿತು ಪದವಿ ವಿದ್ಯಾರ್ಥಿಗಳ ಭಾಷಣ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜೆನ್ ಜಿ ಎಂಬುದು ಇತ್ತೀಚೆಗೆ ಬಹಳ ಪ್ರಭಾವಿತ ಪದವಾಗಿದೆ. ಶಿಕ್ಷಣವನ್ನು ಸಾರ್ವತ್ರಿಕವಾಗಿ ಮಾಡಿ ಯುವ ಸಮಾಜ ಕಟ್ಟವುದು ಜೆನ್ ಜಿ ಕಲ್ಪನೆಯಾಗಿದ್ದು ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತೆ ನೋಡಬೇಕಿದೆ ಎಂದರು.ರಾಯಚೂರು ರಿಪೋರ್ಟರ್ಸ್ ಗಿಲ್ಡ್ ತಮ್ಮ ಬೆಳ್ಳಿ ಮಹೋತ್ಸವವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸುತ್ತಿದೆ, ಈ ರೀತಿ ಸ್ಪರ್ಧೆಗಳ ಆಯೋಜನೆಗಳು ವಿದ್ಯಾರ್ಥಿಗಳಿಗೆ ಬಹಳಷ್ಟು ಅನುಕೂಲವಾಗಲಿದೆ ಅಂತ ಹೇಳಿದರು. ಮಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶ್ರೀ ವೆಂಕಟೇಶ್ವರ ಶಿಕ್ಷ...
Image
  ರಾಯಚೂರಿನಲ್ಲಿ ‘ವಿಕಸಿತ ಭಾರತ’ ಅಭಿಯಾನ ಯುವಕ ಯುವತಿಯರು ಭಾಗವಹಿಸಲು ಸ್ವಾತಿ ಗುಗುಲೋತ್ ಕರೆ ಜಯ ಧ್ವಜ ನ್ಯೂಸ್ ,ರಾಯಚೂರು ಸೆ. 11- ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ವ್ಯಾಪ್ತಿಯ ಮೇರಾ ಯುವ ಭಾರತ (ಮೈ ಭಾರತ) ರಾಯಚೂರು ಕಚೇರಿ ವತಿಯಿಂದ ‘ವಿಕಸಿತ ಭಾರತ್ ಯಂಗ್ ಲೀಡರ್ಸ್ ಡೈಲಾಗ್ 2027’ ಹಾಗೂ ‘ವಿಕಸಿತ ಭಾರತ್ ರಸಪ್ರಶ್ನೆ’ ಜಿಲ್ಲಾಮಟ್ಟದ ಜಾಗೃತಿ ಮತ್ತು ನೋಂದಣಿ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೇರಾ ಯುವ ಭಾರತ ಕೇಂದ್ರ ರಾಯಚೂರಿನ ಜಿಲ್ಲಾ ಯುವ ಅಧಿಕಾರಿ ಸ್ವಾತಿ ಗುಗುಲೋತ್ ಹೇಳಿದರು. ಅವರಿಂದು ಮೇರಾ ಯುವ ಭಾರತ ಕೇಂದ್ರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಯುವಕರಲ್ಲಿ ನಾಯಕತ್ವ ಗುಣ, ಸೃಜನಶೀಲತೆ, ಸಮಸ್ಯೆ ಪರಿಹರಿಸುವ ಸಾಮರ್ಥ್ಯ ಹಾಗೂ ನಾಗರಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ಈ ರಾಷ್ಟ್ರೀಯ ಉಪಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಭಿಯಾನದ ಮಾಹಿತಿ ಜಿಲ್ಲೆಯ ನಗರ ಪ್ರದೇಶಗಳ ಜೊತೆಗೆ ಗ್ರಾಮೀಣ ಭಾಗಗಳಲ್ಲಿಯೂ ತಲುಪಿಸುವ ಗುರಿ ಹೊಂದಲಾಗಿದೆ. ಸ್ಥಳೀಯ ಶಿಕ್ಷಣ ಸಂಸ್ಥೆಗಳು, ಯುವ ಸಂಘಟನೆಗಳು, ಎನ್‌ಎಸ್‌ಎಸ್ ಹಾಗೂ ಎನ್‌ಸಿಸಿ ಘಟಕಗಳ ಸಹಕಾರದೊಂದಿಗೆ ಯುವಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿ, ಸಕ್ರಿಯವಾಗಿ ಭಾಗವಹಿಸುವಂತೆ ಪ್ರೇರೇಪಿಸಲಾಗುತ್ತಿದೆ. ‘ವಿಕಸಿತ ಭಾರತ ರಸಪ್ರಶ್ನೆ’ಯು ಭಾರತದ ಸಾಧನೆಗಳು, ಸಾಂಸ್ಕೃತಿಕ ಪರಂಪರೆ, ಸಂವಿಧಾನಿಕ ಮೌಲ್ಯಗಳು ಹಾಗೂ ಅಭಿವೃದ್ಧಿ ಕುರಿತ...