ಮದ್ಯ ಮಾರಾಟವನ್ನು ನೇರವಾಗಿ ಸರ್ಕಾರವೇ ನಡೆಸಲಿ – ಅರುಣ್ ಭೂಪಾಲ್ ಜಯ ಧ್ವಜ ನ್ಯೂಸ್ , ರಾಯಚೂರು ,ಜು. 18: ಕರ್ನಾಟಕದಲ್ಲಿ ಖಾಸಗಿ ಆಧಾರಿತ ಮದ್ಯ ಮಾರಾಟ ವ್ಯವಸ್ಥೆಯನ್ನು ಹಂತ ಹಂತವಾಗಿ ಸ್ಥಗಿತಗೊಳಿಸಿ, ಆಂಧ್ರ ಪ್ರದೇಶ ಮಾದರಿಯಲ್ಲಿ ಸರ್ಕಾರವೇ ನೇರವಾಗಿ ಮದ್ಯ ಮಾರಾಟ ನಡೆಸುವ ವ್ಯವಸ್ಥೆಯನ್ನು ಜಾರಿಗೆ ತರಬೇಕು ಎಂದು ಒತ್ತಾಯಿಸಿ, ವಕೀಲರು ಹಾಗೂ ಪ್ರಶ್ನೆ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷ ಅರುಣ್ ಭೂಪಾಲ್ ರಾಜ್ಯ ಸರ್ಕಾರಕ್ಕೆ ಸಮಗ್ರ ನೀತಿಯ ಮನವಿಪತ್ರ ಸಲ್ಲಿಸಿದ್ದಾರೆ. ಮನವಿಪತ್ರದಲ್ಲಿ ತಿಳಿಸಿದಂತೆ, ಪ್ರಸ್ತುತ ಖಾಸಗಿ ವ್ಯವಸ್ಥೆಯಿಂದ ಸರ್ಕಾರಕ್ಕೆ ಸಿಗಬೇಕಾದ ಆದಾಯದ ದೊಡ್ಡ ಭಾಗ ಖಾಸಗಿ ವಲಯಕ್ಕೆ ಹೋಗುತ್ತಿದೆ ಎಂದು ವಾದಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ನೇರವಾಗಿ ಮದ್ಯ ಮಾರಾಟ ನಡೆಸಿದರೆ ವಾರ್ಷಿಕ ಆದಾಯದಲ್ಲಿ ಗಣನೀಯ ಹೆಚ್ಚಳ ಸಾಧ್ಯವೆಂದು ಅಂದಾಜಿಸಲಾಗಿದೆ. ಪ್ರಸ್ತುತ ಸರ್ಕಾರಕ್ಕೆ ಸುಮಾರು ₹30,000–40,000 ಕೋಟಿ ಆದಾಯ ಲಭಿಸುತ್ತಿದ್ದು, ರಾಜ್ಯದ ಒಟ್ಟು ಮದ್ಯ ಮಾರುಕಟ್ಟೆ ₹70,000–80,000 ಕೋಟಿಗಳಷ್ಟಿದೆ ಎಂದು...