Posts

Image
  ವೆಂಕಟೇಶ್ ಬೇವಿನಬೆಂಚಿಗೆ ಪಿತೃವಿಯೋಗ.                                                      ಜಯ ಧ್ವಜ ನ್ಯೂಸ್ ,ರಾಯಚೂರು,ಸೆ.7- ತತ್ವಪದಕಾರರು ಅವಧೂತ ಪರಂಪರೆಯ ಬೇವಿನಬೆಂಚಿ ಗ್ರಾಾಮದ ನಿವಾಸಿ ತಿಪ್ಪಯ್ಯ(88) ಅವರು ಭಾನುವಾರ ಸಂಜೆ ನಿಧನರಾಗಿದ್ದಾರೆ. ಮೃತರು ಪತ್ನಿ ಹಾಗೂ ಆಕಾಶವಾಣಿ ಕಾರ್ಯಕ್ರಮ ಮುಖ್ಯಸ್ಥರಾಗಿರುವ ವೆಂಕಟೇಶ ಬೇವಿನಬೆಂಚಿ ಸೇರಿ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿ ಅಪಾರ ಬಂಧುಗಳ ಅಗಲಿದ್ದಾಾರೆ. ಕೆಲ ದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು.ಮೃತ ತಿಪ್ಪಯ್ಯ ಅವರು ತತ್ವಪದಕಾರರಾಗಿದ್ದರಲ್ಲದೆ, ಆಧ್ಯಾತ್ಮಿಕ ಚಿಂತನೆಯುಳ್ಳವರಾಗಿದ್ದರಿಂದ ಮುಗಳಖೋಡದ ಯಲ್ಲಾಲಿಂಗ ಸ್ವಾಮಿಗಳವರ ಶಿಷ್ಯ ಪರಂಪರೆಯಲ್ಲಿ ಗುರುತಿಸಿಕೊಂಡವರಾಗಿದ್ದರು.  ಮೃತರ ಅಂತ್ಯಕ್ರಿಯೆ ಸೆ.7ರಂದು ಸಂಜೆ 4ರ ಬಳಿಕ ಸ್ವಗ್ರಾಮ ರಾಯಚೂರು ತಾಲೂಕಿನ ಬೇವಿನಬೆಂಚಿ ಗ್ರಾಮದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬ ವರ್ಗ ಪ್ರಕಟಣೆಯಲ್ಲಿ ತಿಳಿಸಿದೆ .
Image
  ವಿಜಯಾನಂದ ಟ್ರಾವೆಲ್ಸ್ ಹೊಸ ದಾಖಲೆ; ಒಂದೇ ಬಾರಿ 150 ವೋಲ್ವೋ ಬಸ್ ಖರೀದಿ: ಪ್ರೀಮಿಯಂ ಬಸ್ ಪ್ರಯಾಣ ಪ್ಯಾನ್-ಇಂಡಿಯಾ ಮಟ್ಟಕ್ಕೆ ಹೆಚ್ಚಿಸುವ ಗುರಿ- ಆನಂದ ಸಂಕೇಶ್ವರ .                                                                ಜಯ ಧ್ವಜ ನ್ಯೂಸ್ ,ರಾಯಚೂರು, ಸೆ.5 - ಸಾರಿಗೆ ಕ್ಷೇತ್ರದಲ್ಲಿ ವಿಜಯಾನಂದ ಟ್ರಾವೆಲ್ಸ್ ಪ್ರೈ.ಲಿ. (ವಿಟಿಪಿಎಲ್) ಹೊಸ ದಾಖಲೆ ಬರೆದಿದೆ. ವೋಲ್ವೋ ಇಂಡಿಯಾ ಸಂಸ್ಥೆ ಮೂಲಕ ಸಿಂಗಲ್ ಆರ್ಡರ್‌ನಲ್ಲಿ 150 ವೋಲ್ವೋ ಬಸ್‌ಗಳನ್ನು ಖರೀದಿಸಿದೆ. ವಿಜಯಾನಂದ ಟ್ರಾವೆಲ್ಸ್ ಪ್ರೈ.ಲಿ.ಗೆ  150 ವೋಲ್ವೋ-9600 ಐಷಾರಾಮಿ ಸ್ಲೀಪರ್ ಕೋಚ್ ಗೋಲ್ಡ್ ಕ್ಲಾಸ್ ಬಸ್‌ಗಳನ್ನು ಹಸ್ತಾಂತರಿಸಿತು. ಈ ಒಪ್ಪಂದವು ಖಾಸಗಿ ಟ್ರಾವೆಲ್ಸ್‌ವೊಂದು ವೋಲ್ವೋ ಬಸ್‌ಗೆ ನೀಡಿದ ಅತಿದೊಡ್ಡ ಆರ್ಡರ್ ಆಗಿದೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಬೆಂಗಳೂರು ನಗರದ ಖಾಸಗಿ ಹೋಟೆಲ್‌ನಲ್ಲಿ ನಡೆದ ಸಮಾರಂಭದಲ್ಲಿ ವೋಲ್ವೋ ಸಂಸ್ಥೆಯ ಎಂಡಿ ಮತ್ತು ಸಿಇಒ ಬಿ. ಶ್ರೀನಿವಾಸ್ ಅವರು ವಿಆರ್‌ಎಲ್ ಮೀಡಿಯಾ ಪ್ರೈ.ಲಿ. ವ್ಯವಸ್ಥಾಪಕ ನಿರ್ದೇಶಕ ಡಾ. ಆನಂದ ಸಂಕೇಶ್ವರ ಹಾಗೂ ವಿಜಯಾನಂದ ಟ್ರಾವೆಲ್ಸ್ ಪ್ರೈ.ಲಿ. ವ್ಯವಸ್ಥಾಪಕ ನಿರ್ದೇಶಕ ಶಿವ...
Image
  ಮಾನ್ವಿಯಲ್ಲಿ ಪ್ರಜಾಸೇವೆ ಆಂದೋಲನ ಕಾರ್ಯಕ್ರಮಕ್ಕೆ ‌ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ:          ಸಾರ್ವಜನಿಕರ ಕುಂದುಕೊರತೆಗಳನ್ನು ಸ್ಥಳದಲ್ಲೇ ಆಲಿಸಿ, ತ್ವರಿತವಾಗಿ ಪರಿಹಾರ- ಸಚಿವ ಡಾ.ಅಜಯ್ ಧರ್ಮಸಿಂಗ್ ಜಯ ಧ್ವಜ ನ್ಯೂಸ್ ,ರಾಯಚೂರು ಸೆ.5-  ಸರ್ಕಾರದ ಮಹತ್ವಾಕಾಂಕ್ಷೆಯ ಪ್ರಜಾಸೇವೆ ಆಂದೋಲನದ ಕಾರ್ಯಕ್ರಮವು ಕೇವಲ ರಾಜಧಾನಿ ಬೆಂಗಳೂರು ನಗರಕ್ಕೆ ಮಾತ್ರ ಸೀಮಿತವಾಗದೆ, ರಾಜ್ಯದ ಪ್ರತಿಯೊಂದು ಜಿಲ್ಲಾ ಹಾಗೂ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಆಡಳಿತ ವ್ಯವಸ್ಥೆಯನ್ನು ಜನರಿಗೆ ಮತ್ತಷ್ಟು ಹತ್ತಿರವಾಗಿಸುವುದಾಗಿದೆ. ಸಾರ್ವಜನಿಕರ ಕುಂದುಕೊರತೆಗಳನ್ನು ಸ್ಥಳದಲ್ಲೇ ಆಲಿಸಿ, ತ್ವರಿತವಾಗಿ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಈ ವಿನೂತನ ಜನಪರ ಕಾರ್ಯಕ್ರಮಕ್ಕೆ ಚಾಲನೆ ಇಂದು ನೀಡಲಾಗಿದೆ  ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲಾ ಉಸ್ತುವಾರಿ ಸಚಿವರಾದ ಡಾ.ಅಜಯ್ ಧರ್ಮಸಿಂಗ್ ಅವರು ಹೇಳಿದರು. ಜಿಲ್ಲೆಯ ಮಾನ್ವಿ ಪಟ್ಣಣದ ಭಾಷುಮಿಯ ಸಾಹುಕಾರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ರಾಯಚೂರು ಇವರ ವತಿಯಿಂದ ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ -2026ರ ಕಾರ್ಯಕ್ರಮಕ್ಕೆ ಚಾಲನೆ ‌ನೀಡಿ ಅವರು ಮಾತನಾಡಿದರು.  ಆಡಳಿತ ವ್ಯವಸ್ಥೆಯು ಜನಸಾಮಾನ್ಯರ ಬಾಗಿಲಿಗೆ ತೆರಳಿ ಅವರ ಕಷ್ಟ-ಸುಖಗಳಲ್ಲಿ ಭಾಗಿದಾರರಾಗಬೇಕು ಮತ್ತು ಜನರ...
Image
ಶಿಕ್ಷಕರು  ಸಾಧನೆಗೆ ಮಾರ್ಗದರ್ಶಕರು -ಸಚಿವ ಡಾ. ಅಜಯ್ ಧರ್ಮಸಿಂಗ್ ಜಯ ಧ್ವಜ ನ್ಯೂಸ್ ,ರಾಯಚೂರು.ಸೆ. 5-  ಜಗತ್ತಿನಲ್ಲಿ ನನ್ನನ್ನು ರಾಷ್ಟ್ರಪತಿಯಾಗಿ ನೆನಪಿಸಿಕೊಳ್ಳುವುದಕ್ಕಿಂತ, ಒಬ್ಬ ಶಿಕ್ಷಕನಾಗಿ ನೆನಪಿಸಿಕೊಳ್ಳುವುದು ಅತ್ಯಂತ ಸೂಕ್ತ” ಎಂದು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರು ಮಹತ್ವದ ಸಂದೇಶವನ್ನು ನೀಡಿದ್ದಾರೆ ಎಂದು ಸಣ್ಣ ನೀರಾವರಿ. ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಅಜಯ್ ಧರ್ಮಸಿಂಗ್ ಹೇಳಿದರು. ಅವರು ಇಂದು ಜಿಲ್ಲಾಡಳಿತ. ಜಿಲ್ಲಾ ಪಂಚಾಯತ. ಮಹಾನಗರ ಪಾಲಿಕೆ ಹಾಗೂ ಶಾಲಾ ಶಿಕ್ಷಣ ಇಲಾಖೆ ರಾಯಚೂರು ಇವರ ಸಹಯೋಗದಲ್ಲಿ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ 139  ನೇ ಜನ್ಮದಿನೋತ್ಸವ ಹಾಗೂ ರಾಯಚೂರು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಶಿಕ್ಷಕರ ಪ್ರಶಸ್ತಿ ಪ್ರಧಾನ ಸಮಾರಂಭ 2026-27 ನೇ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.   ವೈದ್ಯರು ಅನೇಕ ರೋಗಿಗಳಿಗೆ ಚಿಕಿತ್ಸೆ ನೀಡಬಹುದು, ಎಂಜಿನಿಯರ್‌ಗಳು ಹಲವು ಸೇತುವೆ ಮತ್ತು ಕಟ್ಟಡಗಳನ್ನು ನಿರ್ಮಿಸಬಹುದು, ವಕೀಲರು ಅನೇಕ ಸಮಸ್ಯೆಗಳನ್ನು ಬಗೆಹರಿಸಬಹುದು, ವಿಜ್ಞಾನಿಗಳು ಹೊಸ ಆವಿಷ್ಕಾರಗಳನ್ನು ಮಾಡಬಹುದು. ಆದರೆ ಇವರೆಲ್ಲರ ಜೀವನದಲ್ಲೂ ಅವರನ್ನು ಮುನ್ನಡೆಸಿದ ಒಬ್ಬ ಶಿಕ್ಷಕ ಇದ್ದೇ ಇರುತ್ತಾರೆ. ...
Image
  ಹೊಕ್ರಾಣಿ ಗ್ರಾಮಕ್ಕೆ ಭೇಟಿ, ಅಶ್ವಿನಿ ಕುಟುಂಬಕ್ಕೆ ಸಾಂತ್ವನ : ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡಬಾರದು- ಸಚಿವ ಕೆ.ಹೆಚ್.ಮುನಿಯಪ್ಪ ಜಯ ಧ್ವಜ ನ್ಯೂಸ್ ,ರಾಯಚೂರು ಸೆ.4 -  ಸಮಾಜದಲ್ಲಿ ಪ್ರೀತಿ-ವಾತ್ಸಲ್ಯದಿಂದ ಒಟ್ಟಾಗಿ ಬಾಳುವ ಉತ್ತಮ ವಾತಾವರಣವನ್ನು ಗ್ರಾಮೀಣ ಭಾಗದಲ್ಲಿ ನಿರ್ಮಿಸಬೇಕು. ಅಶಾಂತಿ ಹಾಗೂ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವರು  ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ ಅವರು ಅಧಿಕಾರಿಗಳಿಗೆ ಹೇಳಿದರು. ಅವರಿಂದು ‌ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ ಮೃತ ಕು.ಅಶ್ವಿನಿ ಅವರ ಮನೆಗೆ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿ ಮಾತನಾಡಿದರು. ಈ ಹಿಂದುಳಿದ ಪ್ರದೇಶಗಳಲ್ಲಿ ವಿಶೇಷ ಕಾಳಜಿ ವಹಿಸಿ, ಅಲ್ಲಿನ ಪರಿಸ್ಥಿತಿಯನ್ನು ಸುಧಾರಿಸಲು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು. ಸರ್ಕಾರದ ವಿವಿಧ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಲು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ಸಮುದಾಯಗಳ ಮಧ್ಯ ಉತ್ತಮ ವಾತಾವರಣ ನಿರ್ಮಿಸಲು ಎಲ್ಲಾ ಇಲಾಖೆಯ ಅಧಿಕಾರಿಗಳು ಒಟ್ಟಾಗಿ ಶ್ರಮಿಸಬೇಕು. ಮೃತ ಅಶ್ವಿನಿ ಅವರ ಕುಟುಂಬಕ್ಕೆ ಸರ್ಕಾರದಿಂದ ಅಗತ್ಯ ನೆರವು ನೀಡಲಾಗುತ್ತದೆ. ಅಲ್ಲದೆ ಅವರ ಸಹೋದರನಿಗೆ ಸರ್ಕಾರಿ ನೌಕರಿ ನೀಡಲಾಗುತ್ತದೆ. ಹಾಗೂ ಅವರ ಜಮೀನಿಗೆ ನೀರಾವರಿ ವ್ಯವಸ್ಥೆ...
Image
  ಪಾದಯಾತ್ರೆ ಬಗ್ಗೆ ಬಿಜೆಪಿ ಆತ್ಮಾವಲೋಕನ ಮಾಡಿಕೊಳ್ಳಲಿ-ರಝಾಕ ಉಸ್ತಾದ್                                                  ಜಯ ಧ್ವಜ ನ್ಯೂಸ್ ,ರಾಯಚೂರು,ಸೆ.3- ಜಿಲ್ಲೆಯ ಲಿಂಗಸ್ಗೂರು ದಿಂದ ಬಳ್ಳಾರಿಯವರೆಗೆ ಬಿಜೆಪಿ ನಡಸುತ್ತಿರುವ ಪಾದಯಾತ್ರೆ ರಾಜಕೀಯ‌ ಪ್ರೇರಿತವಾಗಿದೆ, ವಾಲ್ಮೀಕಿ ನಿಗಮದ 184 ಕೋಟಿಯಲ್ಲಿ 179 ಕೋಟಿ  ಹಣ ಪ್ರಕರಣ ದಾಖಲಾದ‌ ಸಂದರ್ಭದಲ್ಲಿಯೇ ಸರಕಾರಕ್ಕೆ‌ ವಾಪಸ್ ಬಂದಿದೆ, ಪ್ರಕರಣ ತನಿಖೆಯ‌ ಹಂತದಲ್ಲಿದೆ, ಯಾರು ತಪ್ಪು ಮಾಡಿದ್ದಾರೆ ತನಿಖೆಯ ನಂತರ ಶಿಕ್ಷೆಯಾಗುತ್ತದೆ, ಅದರಲ್ಲಿ ಕೇಂದ್ರ ಸರಕಾರದ ಬ್ಯಾಂಕ್ ಸಹ ಭಾಗಿಯಾಗಿದೆ,  ಸಚಿವರು ಈಗಾಗಲೇ‌ ರಾಜೀನಾಮೆ ನೀಡಿದ್ದಾರೆ, ಯಾವ ಪುರುಷಾರ್ಥಕ್ಕೆ ಪಾದಯಾತ್ರೆ ಎಂದು  ಕೆಪಿಸಿಸಿ‌ ಮಾದ್ಯಮ‌ ವಿಭಾಗ ರಾಜ್ಯ ವಕ್ತಾರ  ಡಾ.ರಝಾಕ ಉಸ್ತಾದ ದೂರಿದ್ದಾರೆ ರಾಜ್ಯದಲ್ಲಿ ಭೀಕರ ಬರಗಾಲ ಇದೆ, ರೈತರು ಸಂಕಷ್ಟದಲ್ಲಿದ್ದಾರೆ, ರೈತರಿಗೆ ಪರಿಹಾರ ನೀಡಲು ಕೇಂದ್ರ ಸರಕಾರ ರಾಷ್ಟ್ರೀಯ ತುರ್ತು ಪರಿಹಾರ ನಿಧಿಯಿಂದ ಅನುದಾನ ಬಿಡುಗಡೆಗೊಳಿಸಲು ಹೋರಾಟ ಮಾಡಲಿ ಮತ್ತು ಬಿಜೆಪಿ ಜನಪರವಾಗಿ ಇದ್ದರೆ ಬರಗಾಲ ಪರಿಹಾರ ವಿತರಣೆಗೆ ಪಾದಯಾತ್ರೆ ಮಾಡಲಿ,  ಅದು ಬಿಟ್ಟು ಜನತೆ ಸಂಕಷ್ಟದಲ್ಲಿ ಇದ್ದಾಗ...
Image
  ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಿ- ಬಿ.ವೈ.ವಿಜಯೇಂದ್ರ ಸವಾಲು ಜಯ ಧ್ವಜ ನ್ಯೂಸ್ , ರಾಯಚೂರು, ಸೆ.2- ದಲಿತರಿಗೆ, ಹಿಂದುಳಿದ ವರ್ಗಗಳಿಗೆ ಈ ಸರ್ಕಾರ ನ್ಯಾಯ ಕೊಡಲು ಸಾಧ್ಯವಾಗದಿದ್ದರೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆ ವಿಸರ್ಜಿಸಿ ಚುನಾವಣೆ ಎದುರಿಸಲಿ ಆಗ ಜನರೇ ತೀರ್ಮಾನ ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಸವಾಲು ಹಾಕಿದರು  ‘ಬಳ್ಳಾರಿ ಚಲೋ’ ಪಾದಯಾತ್ರೆ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಇಂದು ಮಾತನಾಡಿದ ಅವರು, ದಲಿತರ ಹೆಸರು ಹೇಳಿಕೊಂಡು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಕಳೆದ ಮೂರುವರೆ ವರ್ಷದಲ್ಲಿ ಅವರಿಗೆ ಅನ್ಯಾಯ ಮಾಡುತ್ತಲೇ ಬಂದಿದೆ. ವಾಲ್ಮೀಕಿ ನಿಗಮದಲ್ಲಿ ರೂ. 187 ಕೋಟಿ ಹಗರಣ ಮಾಡಿದರು. ಮೀಸಲಾತಿಯನ್ನು ಸರಿಯಾಗಿ ಅನುಷ್ಟಾನ ಮಾಡಲಿಲ್ಲ. ಮೀಸಲಾತಿ ನೆಪ ಹೇಳಿಕೊಂಡು ಯುವಕರಿಗೆ ಉದ್ಯೋಗ ನೀಡಲಿಲ್ಲ. ಕೇವಲ ದಲಿತರು ಮಾತ್ರವಲ್ಲ ಎಲ್ಲಾ ಸಮುದಾಯವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದರು. ಒಟ್ಟಾರೆ ಅಖಂಡ ಕರ್ನಾಟಕವನ್ನು ಕಡೆಗಣಿಸಿದೆ ಎಂದು ಆಪಾದಿಸಿದರು.    ಡಿಕೆಶಿ ಸರ್ಕಾರದ ಇನ್ನೂ ಎರಡು ಮೂರು ವಿಕೆಟ್‍ಗಳು ಬೀಳಲು ತಯಾರು ಆದಂತೆ ಇದೆ. ಈ ಎಲ್ಲರಿಗೂ ಭ್ರಷ್ಟಾಚಾರ ಉರುಳಾಗಲಿದೆ. ಲಜ್ಜೆಗೆಟ್ಟ ಕಾಂಗ್ರೆಸ್‍ನವರಿಗೆ ಮಾನ, ಮರ್ಯಾದೆ ಏನೂ ಇಲ್ಲ. ಆನೆ ನಡೆದಿದ್ದೇ ದಾರಿ ಎಂದುಕೊಂಡಿದ್ದವರ ವಿರುದ್ಧ ಬಿಜೆಪಿ ಬೀದಿಗಿಳಿದು ಹೋರಾಟ ಮಾಡಲಾರಂಭಿಸಿದ...