Posts

Image
ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿಮಹೋತ್ಸವ :    ಪದವಿ ವಿದ್ಯಾರ್ಥಿಗಳ ಭಾಷಣ ಸ್ಪರ್ಧೆಗೆ ಬಸವರಾಜ್ ನಾಗಡದಿನ್ನಿ ಚಾಲನೆ ಜಯ ಧ್ವಜ ನ್ಯೂಸ್ ,ರಾಯಚೂರು ಸೆ.12 - ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತನ್ನ ಇಂದಿನ ಯುವ ಪೀಳಿಗೆ ಅರ್ಥ ಮಾಡಿಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಬಸವರಾಜ್ ನಾಗಡದಿನ್ನಿ ಹೇಳಿದರು. ರಾಯಚೂರು ರಿಪೋರ್ಟರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವ ಸಂಭ್ರಮಾಚರಣೆ ಹಿನ್ನೆಲೆ ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ "ಸಾಮಾಜಿಕ ಮಾಧ್ಯಮಗಳು ಮತ್ತು ಜೆನ್ ಜಿ: ಜಾಗೃತಿಯೋ ಅಥವಾ ಗೊಂದಲವೋ?" ವಿಷಯ ಕುರಿತು ಪದವಿ ವಿದ್ಯಾರ್ಥಿಗಳ ಭಾಷಣ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಜೆನ್ ಜಿ ಎಂಬುದು ಇತ್ತೀಚೆಗೆ ಬಹಳ ಪ್ರಭಾವಿತ ಪದವಾಗಿದೆ. ಶಿಕ್ಷಣವನ್ನು ಸಾರ್ವತ್ರಿಕವಾಗಿ ಮಾಡಿ ಯುವ ಸಮಾಜ ಕಟ್ಟವುದು ಜೆನ್ ಜಿ ಕಲ್ಪನೆಯಾಗಿದ್ದು ಎಷ್ಟರ ಮಟ್ಟಿಗೆ ಯಶಸ್ವಿಯಾಗುತ್ತೆ ನೋಡಬೇಕಿದೆ ಎಂದರು.ರಾಯಚೂರು ರಿಪೋರ್ಟರ್ಸ್ ಗಿಲ್ಡ್ ತಮ್ಮ ಬೆಳ್ಳಿ ಮಹೋತ್ಸವವನ್ನು ಬಹಳ ಅರ್ಥಪೂರ್ಣವಾಗಿ ಆಚರಿಸುತ್ತಿದೆ, ಈ ರೀತಿ ಸ್ಪರ್ಧೆಗಳ ಆಯೋಜನೆಗಳು ವಿದ್ಯಾರ್ಥಿಗಳಿಗೆ ಬಹಳಷ್ಟು ಅನುಕೂಲವಾಗಲಿದೆ ಅಂತ ಹೇಳಿದರು. ಮಖ್ಯ ಅತಿಥಿಗಳಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಶ್ರೀ ವೆಂಕಟೇಶ್ವರ ಶಿಕ್ಷ...
Image
  ರಾಯಚೂರಿನಲ್ಲಿ ‘ವಿಕಸಿತ ಭಾರತ’ ಅಭಿಯಾನ ಯುವಕ ಯುವತಿಯರು ಭಾಗವಹಿಸಲು ಸ್ವಾತಿ ಗುಗುಲೋತ್ ಕರೆ ಜಯ ಧ್ವಜ ನ್ಯೂಸ್ ,ರಾಯಚೂರು ಸೆ. 11- ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ವ್ಯಾಪ್ತಿಯ ಮೇರಾ ಯುವ ಭಾರತ (ಮೈ ಭಾರತ) ರಾಯಚೂರು ಕಚೇರಿ ವತಿಯಿಂದ ‘ವಿಕಸಿತ ಭಾರತ್ ಯಂಗ್ ಲೀಡರ್ಸ್ ಡೈಲಾಗ್ 2027’ ಹಾಗೂ ‘ವಿಕಸಿತ ಭಾರತ್ ರಸಪ್ರಶ್ನೆ’ ಜಿಲ್ಲಾಮಟ್ಟದ ಜಾಗೃತಿ ಮತ್ತು ನೋಂದಣಿ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ಮೇರಾ ಯುವ ಭಾರತ ಕೇಂದ್ರ ರಾಯಚೂರಿನ ಜಿಲ್ಲಾ ಯುವ ಅಧಿಕಾರಿ ಸ್ವಾತಿ ಗುಗುಲೋತ್ ಹೇಳಿದರು. ಅವರಿಂದು ಮೇರಾ ಯುವ ಭಾರತ ಕೇಂದ್ರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಯುವಕರಲ್ಲಿ ನಾಯಕತ್ವ ಗುಣ, ಸೃಜನಶೀಲತೆ, ಸಮಸ್ಯೆ ಪರಿಹರಿಸುವ ಸಾಮರ್ಥ್ಯ ಹಾಗೂ ನಾಗರಿಕ ಜವಾಬ್ದಾರಿಯನ್ನು ಬೆಳೆಸುವ ಉದ್ದೇಶದಿಂದ ಈ ರಾಷ್ಟ್ರೀಯ ಉಪಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಭಿಯಾನದ ಮಾಹಿತಿ ಜಿಲ್ಲೆಯ ನಗರ ಪ್ರದೇಶಗಳ ಜೊತೆಗೆ ಗ್ರಾಮೀಣ ಭಾಗಗಳಲ್ಲಿಯೂ ತಲುಪಿಸುವ ಗುರಿ ಹೊಂದಲಾಗಿದೆ. ಸ್ಥಳೀಯ ಶಿಕ್ಷಣ ಸಂಸ್ಥೆಗಳು, ಯುವ ಸಂಘಟನೆಗಳು, ಎನ್‌ಎಸ್‌ಎಸ್ ಹಾಗೂ ಎನ್‌ಸಿಸಿ ಘಟಕಗಳ ಸಹಕಾರದೊಂದಿಗೆ ಯುವಕರನ್ನು ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸಿ, ಸಕ್ರಿಯವಾಗಿ ಭಾಗವಹಿಸುವಂತೆ ಪ್ರೇರೇಪಿಸಲಾಗುತ್ತಿದೆ. ‘ವಿಕಸಿತ ಭಾರತ ರಸಪ್ರಶ್ನೆ’ಯು ಭಾರತದ ಸಾಧನೆಗಳು, ಸಾಂಸ್ಕೃತಿಕ ಪರಂಪರೆ, ಸಂವಿಧಾನಿಕ ಮೌಲ್ಯಗಳು ಹಾಗೂ ಅಭಿವೃದ್ಧಿ ಕುರಿತ...
Image
  ರಾಯಚೂರು   ರಿಪೋರ್ಟ್ ರ್ಸ್  ಗಿಲ್ಡ್   ಪ್ರಬಂಧ ಸ್ಪರ್ಧೆ ಉದ್ಘಾಟನೆ  ಜಯ ಧ್ವಜ ನ್ಯೂಸ್ ,ರಾಯಚೂರು,ಸೆ.11- ರಾಯಚೂರು ರಿಪೋರ್ಟ್ ರ್ಸ್ ಗಿಲ್ಡ್ ಬೆಳ್ಳಿ ಮಹೋತ್ಸವದ ಅಂಗವಾಗಿ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಮಾಧ್ಯಮಗಳು ಮತ್ತು ಪ್ರಜಾಪ್ರಭುತ್ವ ಇಂದಿನ ಸವಾಲುಗಳು ಹಾಗೂ ನೈತಿಕತೆ ಕುರಿತು ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿತ್ತು. ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಹಿರಿಯ ಪತ್ರಕರ್ತರಾದ ದತ್ತು ಸರ್ಕಿಲ್ ಅವರು ಉದ್ಘಾಟಿಸಿದರು. ಮುಖ್ಯ ಅತಿಥಿ ಗಳಾಗಿ ಪಾಲ್ಗೊಂಡು ಮಾತನಾಡಿದ‌ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆರ್.ಗುರುನಾಥ್ ಮಾತನಾಡಿ, ಇಂತಹ ಪ್ರಬಂಧ ಸ್ಪರ್ಧೆ ವಿದ್ಯಾರ್ಥಿಗಳ ಭಾಷೆಯ ಕೌಶಲ್ಯ ಬರವಣಿಗೆ ವೃದ್ಧಿಗೆ ಅನುಕೂಲ ಕರ.  ಪ್ರಥಮ ಸ್ಥಾನ ಮುಖ್ಯ ಅಲ್ಲ ಭಾಗವಹಿಸಿ ತಮ್ಮ ಬದುಕಿನಲ್ಲಿ ಪೂರಕವಾಗಲಿವೆ ಎಂದರು. ವಿಷಯ ಪರಿಚಯಿಸುವ ಜೊತೆಗೆ ಅದರ ಆಳ ಅರಿತು ಬರೆಯಲು ಅನುಕೂಲವಾಗಲಿದೆ. ಮಾಧ್ಯಮಗಳ ಬಗ್ಗೆ ವಿದ್ಯಾರ್ಥಿಗಳ ಕುತೂಹಲ ತಿಳಿಯುವ ಉತ್ತಮ ಕಾರ್ಯ ಮಾಡಲಾಗಿದೆ ಎಂದು ಹೇಳಿದರು. ವಿಜಯ ಕರ್ನಾಟಕ ಹಿರಿಯ ವರದಿಗಾರ ಹಾಗೂ ಗಿಲ್ಡ್ ಸದಸ್ಯ ಮಂಜುನಾಥ ಸಾಲಿ ಮಾತನಾಡಿ, ಮಾಧ್ಯಮಗಳನ್ನು ವಿದ್ಯಾರ್ಥಿ ಯುವ ಸಮುದಾಯ ನೋಡುವ ರೀತಿ ಆಪೇಕ್ಷೆ ಭಾವನೆಗಳು ಈ ಪ್ರಬಂಧ ಸ್ಪರ್ಧೆಯಲ್ಲಿ ಲಭ್ಯವಾಗಲಿದೆ. ಈಗಿನ ಯುವಕರಿಗೆ ತಮ್ಮ ಭಾವನೆ ಹಂಚಿಕೊಳ್ಳಲು ಅವಕಾಶಗಳಿದ್ದರೂ...
Image
  ಲೋಕೋಪಯೋಗಿ ಸಚಿವ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ ವಿರೋಧಿಸಿ ಧರಣಿ   ಜಯ ಧ್ವಜ ನ್ಯೂಸ್, ರಾಯಚೂರು, ಸೆ.11-  ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿರುವ ದಾಳಿಯನ್ನು ಖಂಡಿಸಿ ಶುಕ್ರವಾರ ವಾಲ್ಮೀಕಿ ನಾಯಕ ಸಮಾಜ ಮತ್ತು ಅಹಿಂದ ಸಮಾಜದ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು. ನಗರದ ವಾಲ್ಮೀಕಿ ಪ್ರತಿಮೆ ಮುಂಭಾಗ ವಾಲ್ಮೀಕಿ ನಾಯಕ ಸಮಾಜದವರು ಜಮಾಯಿಸಿ  ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಹಿರಿಯ ನಾಯಕ ಅಹಿಂದ ನಾಯಕ ಪ್ರಗತಿಪರ ಚಿಂತಕ ಸತೀಶ್ ಜಾರಕಿಹೊಳಿ ಅವರನ್ನು ರಾಜಕೀಯ ದುರುದ್ದೇಶದಿಂದ ಗುರಿಯಾಗಿಸಿ ಕೊಂಡು ಇಡಿ ದಾಳಿ ನಡೆಸಲಾಗಿದೆ ಎಂದು ಆರೋಪಿಸಿದರು. ಸತೀಶ್ ಜಾರಕಿಹೊಳಿ ಅವರು ಸುಮಾರು 40 ವರ್ಷಗಳ ರಾಜಕೀಯ ಜೀವನದಲ್ಲಿ ಯಾವುದೇ ಭ್ರಷ್ಟಾ ಚಾರದ ಕಪ್ಪುಚುಕ್ಕೆ ಇಲ್ಲದೆ, ಕಾನೂನು ಚೌಕಟ್ಟಿನಲ್ಲಿ ಉದ್ಯಮ ನಡೆಸಿಕೊಂಡು ಬಂದಿರುವ ಶುದ್ಧಹಸ್ತದ ರಾಜಕಾರಣಿ. ಇಂತಹ ನಾಯಕನ ಮನೆಗಳ ಮೇಲೆ ಇ.ಡಿ. ದಾಳಿ ನಡೆಸಿರುವುದು ರಾಜಕೀಯ ದ್ವೇಷದ ಕ್ರಮವಾಗಿದೆ ಎಂದು ದೂರಿದರು.  ಮುಂದಿನ ದಿನಗಳಲ್ಲಿ ರಾಜ್ಯದ ಮುಖ್ಯಮಂತ್ರಿಯಾಗುವ ಅವಕಾಶಗಳಿರುವ ಹಿನ್ನೆಲೆಯಲ್ಲಿ ಅವರನ್ನು ಮಾನಸಿಕವಾಗಿ ಕುಗ್ಗಿಸುವ ಉದ್ದೇಶದಿಂದ  ಈ ಹುನ್ನಾರ ನಡೆಸಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.ರಾಯಚೂರು ನಗರದ  ವಾಲ್ಮೀಕಿ ಪ್ರತಿಮೆ ಮುಂಭಾಗ ವಾಲ್ಮೀಕಿ ನಾಯಕ ಸಮಾಜದ ...
Image
  ಹತ್ಯೆ ಮತ್ತು ಅತ್ಯಾಚಾರ ಪ್ರಕರಣದಲ್ಲಿ‌ ನೊಂದ ಕುಟುಂಬಗಳಿಗೆ      ಆದಿಜಾಂಬವ ಅಭಿವೃದ್ಧಿ ನಿಗಮದ    ನೆರವು- ಜಿ.ಎಸ್. ಮಂಜುನಾಥ್ ಜಯ ಧ್ವಜ ನ್ಯೂಸ್ ,ರಾಯಚೂರು. ಸೆ.10-   ಜಿಲ್ಲೆಯಲ್ಲಿ ನಡೆದಿರುವ ಹತ್ಯೆ ಹಾಗೂ ಅತ್ಯಾಚಾರ ಪ್ರಕರಣಗಳಲ್ಲಿ ನೊಂದ ಕುಟುಂಬಗಳಿಗೆ ನೆರವು ನೀಡಲು ನಮ್ಮ ಆದಿಜಾಂಬವ ಅಭಿವೃದ್ಧಿ ನಿಗಮದಿಂದ  ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ  ಜಿ.ಎಸ್. ಮಂಜುನಾಥ್ ಹೇಳಿದರು. ಅವರಿಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ ಮಾತನಾಡಿದರು. ದೇವದುರ್ಗ ತಾಲ್ಲೂಕಿನ ಹದ್ದಿನಾಳ  ಗ್ರಾಮದಲ್ಲಿ ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಮಾದಿಗ ಸಮುದಾಯದ ಸುಮಾರು 37 ವರ್ಷದ ಭೂಮಾನಂದ ಎಂಬ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಪ್ರಕರಣದಲ್ಲಿ ಭೂಮಾನಂದ ಅವರ ಕುಟುಂಬಕ್ಕೆ ನೆರವು ನೀಡುವ ಉದ್ದೇಶದಿಂದ ಅವರ ಧರ್ಮಪತ್ನಿ ಗೌರಮ್ಮ ಅವರಿಗೆ ಎರಡು ಎಕರೆ ಜಮೀನು ಹಾಗೂ ಬೋರ್‌ವೆಲ್ ಒದಗಿಸಲು ನಿಗಮದಿಂದ ತೀರ್ಮಾನಿಸಲಾಗಿದೆ ಎಂದು ಹೇಳಿದರು. ಇವರ ಕುಟುಂಬಕ್ಕೆ  ಕಳೆದ ವಾರ ಸಮಾಜ ಕಲ್ಯಾಣ ಇಲಾಖೆ ಸಚಿವರು ಭೇಟಿ ನೀಡಿರುವ ಕುರಿತು  ತಮ್ಮ ಗಮನಕ್ಕೆ ತಂದಿದ್ದು, ಜಿಲ್ಲಾಧಿಕಾರಿಗಳಿಗೆ ಎರಡು ಎಕರೆ ಜಮೀನು ಮಂಜೂರು ಮಾಡುವ ಪ್ರಕ್ರಿಯ...
Image
  ಗಣೇಶ ಹಬ್ಬದ ಆಚರಣೆ ಪರಿಸರ ಸ್ನೇಹಿಯಾಗಿರಲಿ. ಗ ಣೇಶ ಚತುರ್ಥಿ ಹಿಂದೂ ಧರ್ಮದ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ಈ ಹಬ್ಬವನ್ನು ವಿಘ್ನನಿವಾರಕ, ಬುದ್ಧಿ ಮತ್ತು ವಿದ್ಯೆಯ ಅಧಿಪತಿಯಾದ ಶ್ರೀ ಗಣೇಶನ ಜನ್ಮವನ್ನು ಸ್ಮರಿಸುವುದರ ಜೊತೆಗೆ ಅತ್ಯಂತ ಭಕ್ತಿ. ಭಾವದಿಂದ ಆಚರಿಸಲಾಗುತ್ತದೆ. ಪ್ರತಿವರ್ಷ ಭಾದ್ರಪದ ಮಾಸದ ಶುಕ್ಲ ಪಕ್ಷದ ಚತುರ್ಥಿಯೆಂದು ಗಣೇಶ ಹಬ್ಬವನ್ನು ಆಚರಿಸಲಾಗುತ್ತದೆ. ಭಾರತದಲ್ಲಿ ಸಾರ್ವಜನಿಕ ಗಣೇಶೋತ್ಸವಕ್ಕೆ ವಿಶೇಷ ಮಹತ್ವವಿದೆ. 1892ರಲ್ಲಿ ಮಹಾರಾಷ್ಟ್ರದಲ್ಲಿ ಬಾವ ಸಾಹೇಬ್ ಲಕ್ಷ್ಮಣ ಜವೇಲ್ ಅವರು ಗಣೇಶೋತ್ಸವವನ್ನು ಸಾರ್ವಜನಿಕವಾಗಿ ಆಚರಿಸುವ ಪರಂಪರೆಯನ್ನು ಆರಂಭಿಸಿದರು. ಇದರ ಮೂಲಕ ಜನರಲ್ಲಿ ರಾಷ್ಟ್ರೀಯ ಏಕತೆ ಮತ್ತು ದೇಶಭಕ್ತಿ ಮೂಡಿತು. ಜನರು ತಮ್ಮ ಮನೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಿ ಪೂಜೆ, ಭಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಅನ್ನಸಂತರ್ಪಣೆ ಹಾಗೂ ಧಾರ್ಮಿಕ ಪ್ರವಚನಗಳನ್ನು ಆಯೋಜಿಸುತ್ತಾರೆ. ಗಣೇಶೋತ್ಸವವು ಭಕ್ತಿ, ಐಕ್ಯತೆ, ಸಹೋದರತೆ ಮತ್ತು ಸಾಂಸ್ಕೃತಿಕ ಪರಂಪರೆ ಹಾಗೂ ರಾಷ್ಟ್ರೀಯ ಐಕ್ಯತೆಯನ್ನು ಬೆಳೆಸುವ ಹಬ್ಬವಾಗಿದೆ. ಪರಿಸರ ಸಂರಕ್ಷಣೆಯ ದೃಷ್ಟಿಯಿಂದ ಮಣ್ಣಿನ ಗಣೇಶ ಮೂರ್ತಿಗಳನ್ನು ಬಳಸುವುದು ಮತ್ತು ಪರಿಸರ ಸ್ನೇಹಿಯಾಗಿ ಈ ಹಬ್ಬವನ್ನು ಆಚರಿಸುವುದು ಇಂದು ಅತ್ಯವಶ್ಯಕವಾಗಿದೆ. ಪರಿಸರ ಸ್ನೇಹಿ ಗಣೇಶೋತ್ಸವವನ್ನು ಆಚರಿಸಲು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ...
Image
  ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ‌ ಕೆ.ಶಾಂತಪ್ಪ ನೇಮಕ.                            ಜಯ ಧ್ವಜ ನ್ಯೂಸ್, ರಾಯಚೂರು,ಸೆ.10-   ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷರಾಗಿ ಕೆ.ಶಾಂತಪ್ಪರವರನ್ನು ನೇಮಕಗೊಳಿಸಿ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ  ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ ಆದೇಶಿಸಿದ್ದಾರೆ.    ರಾಜ್ಯ ಎಲ್ಲ ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಈ ಬಾರಿ ಎಐಸಿಸಿ ವೀಕ್ಷಕರು ಪ್ರತಿ‌ ಜಿಲ್ಲೆ, ತಾಲೂಕುಗಳಿಗೆ ಭೇಟಿ ನೀಡಿ ಅರ್ಹ ಆಕಾಂಕ್ಷಿಗಳಿಂದ ಅರ್ಜಿ ಪಡೆದುಕೊಂಡಿದ್ದರು ಅಲ್ಲದೆ ಸ್ಥಳೀಯವಾಗಿ ಅರ್ಹರು ಯಾರು ಎಂಬ ಬಗ್ಗೆ ಮಾಹಿತಿ ಸಹ ಸಂಗ್ರಹಿಸಿ ಎಐಸಿಸಿ ವರಿಷ್ಠರಿಗೆ ಪಟ್ಟಿ ಸಲ್ಲಿಸಿದ್ದರು ಇದೀಗ ಎಐಸಿಸಿ ನೂತನ ಜಿಲ್ಲಾಧ್ಯಕ್ಷರನ್ನು ನೇಮಕಗೊಳಿಸಿದ್ದು ಪಕ್ಷವನ್ನು ಸದೃಡವಾಗಿ ಸಂಘಟನೆ ಮಾಡುವಂತೆ ಸೂಚಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ನಲ್ಲಿ ಬಣ ರಾಜಕೀಯವಿದ್ದು ನೂತನ ಜಿಲ್ಲಾಧ್ಯಕ್ಷರು ಯಾವ ರೀತಿಯಲ್ಲಿ ಸಮನ್ವಯತೆ ಸಾಧಿಸಿ ಉಭಯ ಬಣಗಳ ಮಧ್ಯೆ ಸಾಮರಸ್ಯ ಮೂಡಿಸಿ ಪಕ್ಷವನ್ನು ಸಂಘಟಿಸುತ್ತಾರೆ ಎಂಬುದು ಕಾದು ನೋಡಬೇಕಿದೆ.