ವಾಲ್ಮೀಕಿ ವಿವಿಯಲ್ಲಿ ಸೂಕ್ಷ್ಮ ಜೀವಶಾಸ್ತ್ರ, ಸಸ್ಯಶಾಸ್ತ್ರ ಹಾಗೂ ಪ್ರಾಣಿಶಾಸ್ತ್ರ ವಿಭಾಗಗಳ ವತಿಯಿಂದ ವಿಶೇಷ ಉಪನ್ಯಾಸ: ಸುಸ್ಥಿರ ಭವಿಷ್ಯಕ್ಕಾಗಿ ಜೀವವೈವಿಧ್ಯತೆ ಸಂರಕ್ಷಣೆ ಅತ್ಯಗತ್ಯ : ಮಂಜುನಾಥ ಎಸ್ ನಾಯಕ ಜಯಧ್ವಜ ನ್ಯೂಸ್ ,ರಾಯಚೂರು,ಫೆ.೨೬- ಸುಸ್ಥಿರ ಭವಿಷ್ಯಕ್ಕಾಗಿ ಅರಣ್ಯ ಜೀವವೈವಿಧ್ಯತೆ ಸಂಶೋಧನೆ ಮತ್ತು ಸಂರಕ್ಷಣೆಯು ಪರಿಸರ ಸಮತೋಲನ, ಮತ್ತು ಹವಾಮಾನ ಬದಲಾವಣೆ ತಗ್ಗಿಸುವಿಕೆ ಮತ್ತು ಸ್ಥಳೀಯ ಸಮುದಾಯಗಳ ಸೂಕ್ಷö್ಮಜೀವಿಗಳು, ಕೀಟಗಳು, ಔಷಧೀಯ ಸಸ್ಯಗಳು ಪರಿಸರ ಸಮತೋಲನದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಜೀವವೈವಿಧ್ಯತೆಯ ಸಂಶೋಧನೆಕಾರರಾದ ಮಂಜುನಾಥ ಎಸ್ ನಾಯಕ ಅವರು ಹೇಳಿದರು. ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಸೂಕ್ಷö್ಮಜೀವಶಾಸ್ತç, ಸಸ್ಯಶಾಸ್ತç ಹಾಗೂ ಪ್ರಾಣಿಶಾಸ್ತç ವಿಭಾಗಗಳು ಇಂದು ಆಯೋಜಿಸಿದ್ದ “ಫಾರೆಸ್ಟ್ ಬಯೋಡೈವರ್ಸಿಟಿ : ರಿಸರ್ಚ್ ಆ್ಯಂಡ್ ಕನಜರ್ವೇಷನ್ ಫಾರ್ ಎ ಸಸ್ಟೆನೇಬಲ್ ಫ್ಯುಚರ್” ವಿಷಯ ಕುರಿತು ಮಾತನಾಡಿದ ಅವರು, ಅವರ ಸಂಶೋಧನೆಯ ಪ್ರಮುಖ ಸಾಧನೆ ಮತ್ತು ಸಂಶೋಧನೆಯಲ್ಲಿ ಅನುಭವಿಸಿದ ವಿಚಾರವನ್ನು ವ್ಯಕ್...