ತೇಜಸ್ ಕಾರ್ಯಾಗಾರಕ್ಕೆ ಚಾಲನೆ: ಉದ್ಯಮಿಗಳು ಕೈಗಾರಿಕಾ ಸ್ಥಾಪನೆಗೆ ಮುಂದೆ ಬನ್ನಿ- ಸಚಿವ ಎನ್.ಎಸ್.ಬೋಸರಾಜು ಜಯ ಧ್ವಜ ನ್ಯೂಸ್ ,ರಾಯಚೂರು ಏ.2- ಕೇಂದ್ರ ಹಾಗೂ ರಾಜ್ಯ ಸರ್ಕಾರವು ಕೈಗಾರಿಕೆಗಳ ಸ್ಥಾಪನೆಗೆ ಸಹಕಾರ ನೀಡುತ್ತಿದ್ದು, ಆಸಕ್ತರು ಉದ್ಯಮಿಗಳು ಕೈಗಾರಿಕಾ ಸ್ಥಾಪನೆಗೆ ಮುಂದೆ ಬರಬೇಕೆಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಬೋಸರಾಜು ಅವರು ಹೇಳಿದರು. ಅವರಿಂದು ನಗರದ ಕೃಷಿ ವಿಶ್ವವಿದ್ಯಾಲಯದ ಜಗಜ್ಯೋತಿ ಬಸವೇಶ್ವರ ಪ್ರೇಕ್ಷಾಗೃಹದಲ್ಲಿ ಭಾರತ ಸರ್ಕಾರ ಉದ್ಯಮ ಮತ್ತು ಅಂತರಿಕ ವ್ಯಾಪಾರ ಉತ್ತೇಜನ ಇಲಾಖೆ, ಸ್ಟಾರ್ಟ್ ಅಪ್ ಇಂಡಿಯಾ ಯೋಜನೆ ಹಾಗೂ ಜಿಲ್ಲಾಡಳಿತ ರಾಯಚೂರು ಇವರು ಸಂಯುಕ್ತಾಶ್ರಯದಲ್ಲಿ ತೇಜಸ್ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕೈಗಾರಿಕಾ ಸ್ಥಾಪನೆಗೆ ಒಳ್ಳೆಯ ವಾತಾವರಣ ಇದೆ. ಜಿಲ್ಲೆಯಲ್ಲಿ ಎರಡು ನದಿ, ವಿದ್ಯುತ್ ಉತ್ಪಾದನೆ, ಹತ್ತಿ, ಭತ್ತ ಹೆಚ್ಚಾಗಿ ದೊರೆಯುತ್ತದೆ. ಭಾರತ್ ಮಾಲಾ ರಸ್ತೆಯು ಸಹ ಇದೆ. ಈ ಭಾಗದಲ್ಲಿ ಕೈಗಾರಿಕಾ ಸ್ಥಾಪನೆಗೆ ಯಾರು ಅರ್ಜಿ ಹಾಕುವುದಿಲ್ಲ. ಸ್ಥಳೀಯರು ಕೈಗಾರಿಕೆ ಸ್ಥಾಪಿಸಲು ಮುಂದೆ ಬರಬೇಕೆಂದರು. ದೇಶದಲ್ಲಿ ಮೊದಲ ಬಾರಿಗೆ ರಾಯಚೂರು ಜಿಲ್ಲೆಯಲ್ಲಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ವಿವಿಧ ತಾಲೂಕು ಮಟ್ಟದಲ್ಲಿ ಕಾರ್ಯಾಗಾರವನ್ನು ನಡೆಸಿ, ಸಲಹೆ-ಸೂಚ...