ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಜಿಲ್ಲೆಯಿಂದ ಯಾರಿಗೆ ಒಲಿಯಲಿದೆ ಮಂತ್ರಿ ಸ್ಥಾನ? ಜಯ ಧ್ವಜ ನ್ಯೂಸ್, ರಾಯಚೂರು,ಮೇ.29- ಸಿದ್ದರಾಮಯ್ಯ ರಾಜೀನಾಮೆಯಿಂದ ತೆರವಾದ ಮುಖ್ಯಮಂತ್ರಿ ಸ್ಥಾನವನ್ನು ಡಿಕೆ ಶಿವಕುಮಾರ್ ಅಲಂಕರಿಸುವುದು ಬಹುತೇಕ ಖಚಿತ ಎನ್ನಲಾಗಿದ್ದು ನಾಳೆ ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅವರನ್ನು ಶಾಸಕಾಂಗ ಪಕ್ಷದ ನಾಯಕರನ್ನಾಗಿ ಮಾಡಲಾಗುತ್ತದೆ ಎನ್ನಲಾಗಿದೆ .ಅವರ ನೇತೃತ್ವದ ಸರ್ಕಾರದಲ್ಲಿ ಯಾರೆಲ್ಲ ಮಂತ್ರಿ ಮಂಡಲ ಸೇರುತ್ತಾರೆ ಎಂಬುದು ಇನ್ನೂ ನಿಖರವಾಗಿಲ್ಲ ಈಗಾಗಲೆ ಸಚಿವ ಸ್ಥಾನ ಆಕಾಂಕ್ಷಿಗಳು ಹೈಕಮಾಂಡ್ ಗೆ ಮನವರಿಕೆ ಮಾಡುವಲ್ಲಿ ನಿರತರಾಗಿದ್ದಾರೆ . ರಾಯಚೂರು ಜಿಲ್ಲೆಯಿಂದ ಯಾರಿಗೆ ಮಂತ್ರಿ ಸ್ಥಾನ ಸಿಗುತ್ತದೆ ಎಂಬ ಕುತೂಹಲವಿದ್ದು ಹೊಸ ಮುಖಗಳಿಗೆ ಮಣೆ ಹಾಕಲಾಗುತ್ತದೆಯೋ ಅಥವಾ ಹಳಬರನ್ನೇ ಮುಂದುವರಿಸುತ್ತಾರೋ ಎನ್ನುವುದು ಸ್ಪಷ್ಟ ಗೊಂಡಿಲ್ಲ. ಹಿರಿಯ ರಾಜಕಾರಣಿ ಎಐಸಿಸಿ ಮಟ್ಟದಲ್ಲಿ ತಮ್ಮದೆ ವರ್ಚಸ್ಸು ಹೊಂದಿರುವ ಎನ್ ಎಸ್ ಬೋಸರಾಜುರವರು ಸಿದ್ದರಾಮಯ್ಯ ಸಚಿವ ಸಂಪುಟದಲ್ಲಿ ಸಚಿವರಾಗಿದ್ದಾರೆ ಉಳಿದಂತೆ ಜಿಲ್ಲೆಯಿಂದ ನಾಲ್ವರ...