Posts

Image
  ಪರಿಸರ ಉಳಿದರೆ ನಾವು ಉಳಿಯುತ್ತೇವೆ -  ವೆಂಕಟೇಶ ಬೇವಿನಬೆಂಚಿ ಜಯ ಧ್ವಜ ನ್ಯೂಸ್ ,ರಾಯಚೂರು, ಜೂ.5- ಪ್ರಕೃತಿಯ ಎಲ್ಲಾ ಜೀವರಾಶಿಗಳ ಅಳಿವು ಉಳಿವು ಪರಿಸರದ ಮೇಲಿದೆ, ಪರಿಸರ ಉಳಿದರೆ ನಾವು ಉಳಿಯುತ್ತೇವೆ ಪರಸರ ನಾಶವಾದರೆ ಎಲ್ಲವೂ ನಾಶವಾಗುತ್ತದೆ ಎಂದು ಆಕಾಶವಾಣಿ ಕಾರ್ಯಕ್ರಮ ಮುಖ್ಯಸ್ಥ ವೆಂಕಟೇಶ ಬೇವಿನಬೆಂಚಿ ಹೇಳಿದರು.  ಅವರು ಇಂದು ಆಕಾಶವಾಣಿ ಆವರಣದಲ್ಲಿ ಪರಿಸರ ದಿನಾಚರಣೆ ಸಂದರ್ಭದಲ್ಲಿ  ಗಿಡಗಳನ್ನು ನೆಡುವುದರ ಮೂಲಕ ಪರಿಸರ ದಿನಾಚರಣೆ ಆಚರಿಸಿ ಮಾತನಾಡಿದರು.  ಪರಿಸರವು ಇಂದು ತುಂಬಾ ಕಲುಷಿತವಾಗುತ್ತಿದೆ. ವಾಯು ಮಾಲಿನ್ಯ ಜಲ ಮಾಲಿನ್ಯ, ಶಬ್ದ ಮಾಲಿನ್ಯ, ಮತ್ತು ಮಣ್ಣು ಮಾಲಿನ್ಯ, ಈಗ ಪ್ಲಾಸ್ಟಿಕ್ ಮಾಲಿನ್ಯದಿಂದ  ಪರಿಸರ ಸಮತೋಲನ ತಪ್ಪುತ್ತಿದೆ. ಪರಿಸರ ಸಮತೋಲನ ಕಾಪಾಡದಿದ್ದರೆ ಮುಂದಿನ ಪೀಳಿಗೆಯನ್ನು ಉಳಿಸಲು ಸಾಧ್ಯವಾಗುವುದಿಲ್ಲ. ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಪರಿಸರವನ್ನು ಹಾಳು ಮಾಡುತ್ತಿರುವ ಈ ವೇಳೆ ಪ್ರಜ್ಞಾವಂತರು ಪರಿಸರವನ್ನು ಉಳಿಸುವ ನಿಟ್ಟಿನಲ್ಲಿ ದೃಢ ಸಂಕಲ್ಪ ಮಾಡಬೇಕಾಗಿದೆ ಎಂದರು.   ತಾಂತ್ರಿಕ ವಿಭಾಗದ ಮುಖ್ಯಸ್ಥರಾದ ಅರವಿಂದಾಕ್ಷಣ  ಮಾತನಾಡಿ ನಮ್ಮ ಆಕಾಶವಾಣಿಯಲ್ಲಿ ಉತ್ತಮ ಪರಿಸರವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ನಾವೆಲ್ಲ ಪ್ರಯತ್ನ ಮಾಡುತ್ತಿದ್ದೇವೆ. ಈ ದಿನ ಪರಿಸರ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗದೆ ಇದು ನಿರಂತರವಾಗಿ ನಡೆಯುವ ಪ್ರಕ್ರಿಯೆ ...
Image
  ಎಸ್‌ಐಆರ್ ಮತದಾರರ ಪಟ್ಟಿಯನ್ನು ಪಾರದರ್ಶಕಗೊಳಿಸುವ ಉದ್ದೇಶ ಹೊಂದಿದೆ- ಜಿಲ್ಲಾಧಿಕಾರಿ ಪೂವಿತಾ ಎಸ್. ಜಯ ಧ್ವಜ ನ್ಯೂಸ್. ರಾಯಚೂರು ಜೂ. 5- ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ವಿಶೇಷ ತೀವ್ರ ಪರಿಷ್ಕರಣೆ-2026 (ಎಸ್‌ಐಆರ್)ರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಮತದಾರರ ಪಟ್ಟಿಯನ್ನು ಇನ್ನಷ್ಟು ನಿಖರ, ದೋಷರಹಿತ ಹಾಗೂ ಪಾರದರ್ಶಕಗೊಳಿಸುವ ಉದ್ದೇಶ ಹೊಂದಿದೆ ಎಂದು ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರು ಹೇಳಿದರು.ಅವರಿಂದು  ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ  ಮಾತನಾಡಿದರು. ಮತದಾರರ ಪಟ್ಟಿಯ ಪರಿಷ್ಕರಣೆ ಪ್ರಕ್ರಿಯೆಯ ಅಂಗವಾಗಿ ಮನೆ ಮನೆ ಸಮೀಕ್ಷೆ ನಡೆಸಲಾಗುವುದು. ಈ ವೇಳೆ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಮನೆಗಳಿಗೆ ಭೇಟಿ ನೀಡಿ ಮತದಾರರ ವಿವರಗಳನ್ನು ಸಂಗ್ರಹಿಸಿ ಪರಿಶೀಲಿಸಲಿದ್ದಾರೆ. ಸಂಗ್ರಹಿಸಲಾದ ಮಾಹಿತಿಯ ಆಧಾರದ ಮೇಲೆ ಮತದಾರರ ಪಟ್ಟಿಯ ಪರಿಷ್ಕರಣೆ, ತಿದ್ದುಪಡಿ ಹಾಗೂ ನವೀಕರಣ ಕಾರ್ಯ ಕೈಗೊಳ್ಳಲಾಗುವುದು ಎಂದು ಹೇಳಿದರು. ಜಿಲ್ಲೆಯಲ್ಲಿ ಈಗಾಗಲೇ ಶೇ.85.90 ರಷ್ಟು ನೈಜ ಮತದಾರರನ್ನು ಗುರುತಿಸಿ, ಕುಟುಂಬಗಳ ಲಿಂಕೇಜ್‌ನೊಂದಿಗೆ ಹೊಂದಾಣಿಕೆ ಮಾಡಲಾಗಿದೆ. ವಿಶೇಷ ಪರಿಷ್ಕರಣೆ ಅಂಗವಾಗಿ ಜೂನ್ 20ರಿಂದ 29ರವರೆಗೆ ಪೂರ್ವಸಿದ್ಧತೆ, ತರಬೇತಿ ಮತ್ತು ಮುದ್ರಣ ಕಾರ್ಯಗಳು ನಡೆಯಲಿವೆ. ಜೂನ್ 30ರಿ...
Image
  ದೇವಸೂಗೂರು ಗ್ರಾ.ಪಂ ಘನ ತ್ಯಾಜ್ಯ ವಿಲೇವಾರಿ ಘಟಕದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ:  ಒಂದು ಗಿಡವನ್ನು ನೆಟ್ಟು ಅದರ ಪೋಷಣೆ ಮಾಡುವ ಮೂಲಕ ಪರಿಸರ ಸಂರಕ್ಷಣೆ ಮಾಡಿ – ಜಿ.ಪಂ ಸಿಇಒ  ಈಶ್ವರ್ ಕುಮಾರ ಕಾಂದೂ   ಜಯ ಧ್ವಜ ನ್ಯೂಸ್  ರಾಯಚೂರು . ಜೂ.5 ರಾಯಚೂರು ತಾಲೂಕಿನ ದೇವಸ್ಗೂರು ಗ್ರಾ.ಪಂ ಘನ ತ್ಯಾಜ್ಯ ವಿಲೇವಾರಿ ಘಟಕದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಶಾಲಾ ಮಕ್ಕಳೊಂದಿಗೆ  ಜಿಲ್ಲಾ ಪಂಚಾಯತಿ ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಈಶ್ವರ್ ಕುಮಾರ ಕಾಂದೂ ಅವರು ಗಿಡ ನೆಟ್ಟು ನೀರೆರೆವ ಮೂಲಕ ಅತ್ಯಂತ ಸಡಗರ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ನಂತರ ಮಾನ್ಯ ಸಿಇಒ ಅವರು ಮಾತನಾಡಿ ಪರಿಸರದ ಸಮತೋಲನ ಕಾಪಾಡಲು ಪ್ರತಿಯೊಬ್ಬರೂ ಕನಿಷ್ಠ ಒಂದು ಗಿಡವನ್ನು ನೆಟ್ಟು ಅದರ ಪೋಷಣೆ ಜೊತೆಗೆ ಪರಿಸರ ಸಂರಕ್ಷಣೆಯು ನಮ್ಮೆಲ್ಲರ ಹೊಣೆಯಾಗಿದ್ದು, ಗಿಡಗಳು ಮನುಕುಲಕ್ಕೆ ಅಮೂಲ್ಯವಾದ ಆಸ್ತಿಯಾಗಿದೆ, ಶುದ್ಧ ಗಾಳಿ, ಮಳೆ ಹಾಗೂ ಜೀವ ವೈವಿಧ್ಯತೆಯ ಸಂರಕ್ಷಣೆಗೆ ಪ್ರಮುಖ ಪಾತ್ರವಹಿಸುತ್ತವೆ ಎಂದು ಅವರು ತಿಳಿಸಿದರು. ಇಂದಿನ ಶಾಲಾ ಮಕ್ಕಳೇ ಮುಂದಿನ ಉತ್ತಮ ನಾಯಕರಾಗಿದ್ದು, ಶಾಲಾ ಆವರಣದಲ್ಲಿ ಸ್ವಚ್ಚತೆಯನ್ನು ಕಾಪಾಡಿಕೊಳ್ಳಬೇಕು, ನೆಟ್ಟ ಗಿಡಗಳ ಸಮರ್ಪಕ ನಿರ್ವಹಣೆ ಮತ್ತು ಸಂರಕ್ಷಣೆಗೆ ಎಲ್ಲರೂ ಬದ್ಧರಾಗಬೇಕು ಎಂದು ಕರೆ ನೀಡಿದರು. ತದನಂತರ ಸ್ವಚ್ಛ ಸಂಕಿರಣ ಘಟಕ ಕ್ಕೆ ಭೇಟಿ ನೀಡಿ ಕಸ...
Image
  ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ವಿಶ್ವ ಪರಿಸರ ದಿನಾಚರಣೆ: ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ - ನ್ಯಾ. ಮಾಲಾ ಎನ್. ಡಿ ಜಯ ಧ್ವಜ ನ್ಯೂಸ್ ,ರಾಯಚೂರು ಜೂ,5- ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಮರ ಗಿಡಗಳನ್ನು ಕಡಿಯುವ ಮೂಲಕ  ನಮ್ಮ ಉತ್ತಮ ಪರಿಸರ ಹಾಳು ಮಾಡುತ್ತಿದ್ದು, ನಾವೆಲ್ಲರೂ ಎಚ್ಚೆತ್ತುಕೊಳ್ಳದಿದ್ದರೆ ಈಗಾಗಲೇ ಅಲ್ಲಲ್ಲಿ ಸಂಭವಿಸುತ್ತಿರವ ಪ್ರಕೃತಿಯ ವಿಕೋಪದ ಜತೆಗೆ ಮತ್ತಷ್ಟು ಘೋರ ವಿಕೋಪಗಳನ್ನು ನಾವು ಎದುರಿಸಬೇಕಾಗುತ್ತದೆ ಎಂದು ರಾಯಚೂರಿನ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೌರವಾನ್ವಿತ  ಮಾಲಾ ಎನ್.ಡಿ. ಅವರು ಹೇಳಿದರು.ಅವರಿಂದು  ನಗರದ ನೂತನ ನ್ಯಾಯಾಲಯ ಕಟ್ಟಡದ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯಾಂಗ ಇಲಾಖೆ, ಜಿಲ್ಲಾಡಳಿತ, ಅರಣ್ಯ ಇಲಾಖೆ ಹಾಗೂ ಜಿಲ್ಲಾ ವಕೀಲರ ಸಂಘ ರಾಯಚೂರು ಇವರುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ  ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಸಸಿಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ  ಮಾತನಾಡಿದರು. ಮುಂದಿನ ಪೀಳಿಗೆಗೆ ಒಳ್ಳೆಯ ಬದುಕು ನೀಡುವ ನಿಟ್ಟಿನಲ್ಲಿ ಉತ್ತಮ ಪರಿಸರವನ್ನು ನೀಡುವ ಗುರುತರ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಗಿಡಗಳನ್ನು ನೆಟ್ಟಾಕ್ಷಣ ನಮ್ಮ ಜವಾಬ್ದಾರಿ ಮುಗಿಯುವುದಿಲ್ಲ. ಅದನ್ನು ಒಂದು ಹಂತದವರೆಗೆ ಅವುಗಳ ಪೋಷಣೆ ಮಾಡಿ ಜನ, ಜಾನುವಾರುಗಳಿಗೆ ಬಲಿಯಾಗದಂತೆ ಕಾಪಾಡ ಬೇಕಿದೆ ಎಂದರು....
Image
  ಜನರಿಗೆ ಸೇವೆ ಸಲ್ಲಿಸುತ್ತಿರುವುದು ತೃಪ್ತಿ ದಾಯಕವಾಗಿದೆ - ಶಾಸಕ ಡಾ. ಶಿವರಾಜ್ ಪಾಟೀಲ್     ಜಯ ಧ್ವಜ ನ್ಯೂಸ್ ರಾಯಚೂರು , ಜೂ.3-  ಜನರಿಗೆ ಸೇವೆ ಸಲ್ಲಿಸುತ್ತಿರುವುದು ತೃಪ್ತಿದಾಯಕವಾಗಿದೆ ಎಂದು ನಗರದ ಶಾಸಕ ಡಾ.ಶಿವರಾಜ ಪಾಟೀಲ್ ಹೇಳಿದರು. ಅವರಿಂದು ನಗರದ ನವೋದಯ ಆಸ್ಪತ್ರೆ ಹತ್ತಿರದ ಸಿದ್ದನಾಥ್ ಕಾಲೋನಿಯಲ್ಲಿನ ಬ್ರಾಹ್ಮಣ ಸಮಾಜದ ಮಹತ್ವಾಕಾಂಕ್ಷೆಯ ಗಾಯತ್ರಿ ಭವನದ ಮೊದಲನೆಯ ಮಹಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ  ನೆರವೇರಿಸಿ ಮಾತನಾಡಿದರು. 25 ಲಕ್ಷ  ರೂಪಾಯಿಗಳ ಕಾಮಗಾರಿಗೆ  ಚಾಲನೆ ನೀಡಲಾಗುತ್ತಿದ್ದು ಬ್ರಾಹ್ಮಣ ಸಮಾಜವು ತಮ್ಮ ಮೇಲೆ ಇಟ್ಟಂತಹ ವಿಶ್ವಾಸ, ಅಭಿಮಾನಕ್ಕೆ ಯಾವತ್ತೂ ಚಿರಋಣಿಯಾಗಿದ್ದು, ಸತತ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಲು ಸಮಾಜದ ಕೊಡುಗೆ ಅಪಾರವಾಗಿದ್ದು ಆ ಒಂದು ಸಮಾಜಕ್ಕೆ ಉಪಯೋಗವಾಗುವಂತಹ ಗಾಯಿತ್ರಿ ಭವನ ನಿರ್ಮಾಣ ತನ್ನ ಹೊಣೆ ಎಂದು ಭರವಸೆ ನೀಡಿದಂತೆ ಇಂದು ಅದರ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿ ಮಾತು ಉಳಿಸಿಕೊಂಡಿದ್ದೇನೆ ಎಂದು ಹೇಳಿದರು. ಮುಂದೆಯೂ ಸಹ ಇದೇ ರೀತಿ ಇನ್ನೂ ಹತ್ತು ಹಲವು ಸೇವೆಗಳನ್ನು ಮಾಡುತ್ತಾ ಈ ಸಮಾಜದೊಂದಿಗೆ ಬೆಂಬಲವಾಗಿ ಇರುತ್ತೇನೆ ಎಂದು ಸಹ ನುಡಿದರು. ಈ ಸಂದರ್ಭದಲ್ಲಿ ಪಂಡಿತರು , ಜಿಲ್ಲಾ ಬ್ರಾಹ್ಮಣ ಮಹಾಸಭಾ ಜಿಲ್ಲಾ ಪ್ರತಿನಿಧಿ, ಸಮಸ್ತ ಪದಾಧಿಕಾರಿಗಳು, ಮಹಾನಗರ ಪಾಲಿಕೆ ಮಾಜಿ ಸದಸ್ಯರು, ಸಮಾಜದ ಗಣ್ಯರು, ಹಿರಿಯರು,  ಯು...
Image
  ಜೂನ್ 4 ರಂದು ಕೇಂದ್ರ ಹಣಕಾಸು  ಸಚಿವೆ ನಿರ್ಮಲಾ ಸೀತಾರಾಮನ್  ರಾಯಚೂರು ಜಿಲ್ಲಾ ಪ್ರವಾಸ ಜಯ ಧ್ವಜ ನ್ಯೂಸ್ ,ರಾಯಚೂರು ಜೂನ್ ,2- ಭಾರತ ಸರ್ಕಾರದ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಜೂ 4 ರಂದು ರಾಯಚೂರು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಅಂದು ಬೆಳಿಗ್ಗೆ 11:15ಕ್ಕೆ ಯಾದಗಿರಿ ಜಿಲ್ಲೆಯ ಗುರುಮಿಠಕಲ್ ತಾಲೂಕಿನ ಬಡೆಪಲ್ಲಿ ಗ್ರಾಮದಿಂದ ನಿರ್ಗಮಿಸಿ, ಮಧ್ಯಾಹ್ನ 12 ಗಂಟೆಗೆ ರಾಯಚೂರಿನ ಶಕ್ತಿನಗರಕ್ಕೆ ಆಗಮಿಸಿ ಶಕ್ತಿ ನಗರದ ಆರ್.ಟಿ.ಪಿ.ಎಸ್. ಅತಿಥಿ ಗೃಹದಲ್ಲಿ ರಾಯಚೂರು ಮತ್ತು ಯಾದಗಿರಿ ಮಹತ್ವಾಕಾಂಕ್ಷೆ ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ನಂತರ ಮಧ್ಯಾಹ್ನ 2:30ಗಂಟೆಗೆ ಶಕ್ತಿನಗರದ ಆರ್.ಟಿ.ಪಿ.ಎಸ್ ಅತಿಥಿ ಗೃಹದಿಂದ ನಿರ್ಗಮಿಸಿ, ರಾಯಚೂರಿನ ನೂತನ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಭಾರತ ವನ ಪ್ಲಾಂಟೇಷನ್ ಕಾರ್ಯಕ್ರಮದಲ್ಲಿ ಭಾಗವಹಿಸುವರು. ನಂತರ ಸಂಜೆ 4 ಗಂಟೆಗೆ ರಾಯಚೂರು ಜಿಲ್ಲಾಧಿಕಾರಿಗಳ ಕಚೇರಿಯಿಂದ ವಿಜಯನಗರ ಜಿಲ್ಲೆಯ ಹೊಸಪೇಟೆ ಕಡೆಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Image
  ಶಾಸಕ ಬಸನಗೌಡ ದದ್ದಲ್ ಗೆ ಸಚಿವ ಸ್ಥಾನ ನೀಡಲು ಒತ್ತಾಯ.                                                                                     ಜಯ ಧ್ವಜ ನ್ಯೂಸ್, ರಾಯಚೂರು, ಜೂ.2- ಗ್ರಾಮೀಣ ಕ್ಷೇತ್ರದ ಶಾಸಕರಾದ ಬಸನಗೌಡ ದದ್ದಲ್ ರವರಿಗೆ ಸಚಿವ ಸ್ಥಾನ ನೀಡಬೇಕೆಂದು ಗಿಲ್ಲೆಸುಗೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಾಗೇಂದ್ರಪ್ಪ ಮಟಮಾರಿ ಹೇಳಿದರು. ಅವರಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಎರೆಡು ಬಾರಿ ಶಾಸಕರಾಗಿ ಆಯ್ಕೆಯಾಗಿ ಜನಪರ ಕಾರ್ಯಗಳನ್ನು ಮಾಡುತ್ತಿರುವ ದದ್ದಲ್ ರವರು ಕ್ಷೇತ್ರದಲ್ಲಿ ಕೆರೆ ತುಂಬುವ ಯೋಜನೆ, ಬ್ರಿಡ್ಜ್ ಕಂ ಬ್ಯಾರೇಜ್, ಏತ ನೀರಾವರಿ, ಸೇತುವೆಗಳು, ರಸ್ತೆಗಳು ಮುಂತಾದ ಮೂಲಭೂತ ಸೌಕರ್ಯ ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ ಅಲ್ಲದೆ ರಾಯಚೂರು ವಿವಿಗೆ ಮಹರ್ಷೀ ವಾಲ್ಮೀಕಿ ವಿವಿ ಯಂದು ನಾಮಕರಣ ಮಾಡಲು ಶ್ರಮಿಸಿದ್ದು ಕ್ಷೇತ್ರದಲ್ಲಿ ಎಲ್ಲಾ ಜನಾಂಗದ ಜನರೊಂದಿಗೆ ಸ್ನೇಹಮಯವಾಗಿದ್ದು ಕಾರ್ಯಕರ್ತರಿಗೂ ಪಕ್ಷ , ಸರ್ಕಾರದಲ್ಲಿ ಸ್ಥಾನಮಾನ ಸಿಗುವಲ್ಲಿ ಶ್ರಮಿಸುತ್ತಿದ್ದು ಅವರನ್ನು ಸಚಿವರನ್ನಾಗಿ ಮಾಡಿದರೆ ಮತ್ತಷ್...