ತ್ವರಿತಗತಿಯಲ್ಲಿ ನಾಲೆ ದುರಸ್ತಿಗೊಳಿಸಲು ಸೂಚನೆ: ಜಿಲ್ಲೆಯ ಜನತೆಗೆ ಕುಡಿಯುವ ನೀರಿನ ತೊಂದರೆ ಆಗದಂತೆ ಅಗತ್ಯ ಕ್ರಮ- ಸಚಿವ ಎನ್ಎಸ್ ಬೋಸರಾಜು ಜಯ ಧ್ವಜ ನ್ಯೂಸ್ ,ರಾಯಚೂರು ಮಾ. 𝟮𝟬- ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್. ಬೋಸರಾಜು ಅವರು ತುಂಗಭದ್ರಾ ಯೋಜನೆಯ ಎಡದಂಡೆ ಕಾಲುವೆಯ ೧೩ನೇ ಮೈಲಿಯಲ್ಲಿ ಕಾಲುವೆ ಒಡೆದ ಸ್ಥಳಕ್ಕೆ ಇಂದು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕಾಲುವೆ ಒಡೆದ ಪರಿಣಾಮವಾಗಿ ಉಂಟಾಗಿರುವ ಸಮಸ್ಯೆಗಳನ್ನು ಹಾಗೂ ಸ್ಥಳದಲ್ಲಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಯನ್ನು ವೀಕ್ಷಿಸಿದ ಸಚಿವರು, ಅಧಿಕಾರಿಗಳಿಂದ ಸಮಗ್ರ ಮಾಹಿತಿ ಪಡೆದುಕೊಂಡರು. ಈಗಾಗಲೇ ದುರಸ್ತಿ ಕಾರ್ಯ ಆರಂಭವಾಗಿದ್ದು, ಕುಡಿಯುವ ನೀರಿನ ಅಭಾವ ಉಂಟಾಗದಂತೆ ತಡೆಯಲು ಸಮರೋಪಾದಿಯಲ್ಲಿ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಿ, ಕಾಲುವೆಗೆ ಕುಡಿಯುವ ನೀರನ್ನು ಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಬೇಸಿಗೆಯ ಸಮಯವಾಗಿರುವುದರಿಂದ ಸಾರ್ವಜನಿಕರಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳುವುದು ಸರ್ಕಾರದ ಮೊದಲ ಆದ್ಯತೆಯಾಗಿದೆ. ಹಗಲಿರುಳು ಕಾರ್ಯಾಚರಣೆ ನಡೆಸಿ, ತ್ವರಿತಗತಿಯಲ್ಲಿ ಕಾಮಗಾರಿಯನ್ನು ಮುಕ್ತಾಯಗೊಳಿಸಲು ಅಗತ್ಯವಿರುವ ಎಲ್ಲಾ ಯಂತ್ರೋಪಕರಣಗಳು ಹಾಗೂ ಕಾರ್ಮಿಕರನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ವಿಳಂಬ ಧೋರಣೆ ಅನು...