ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ: ಗುರಿ ಸಾಧಿಸಲು ನಿರಂತರ ಪ್ರಯತ್ನ ಇರಲಿ- ಡಾ.ನಾಗಲಕ್ಷ್ಮೀ ಚೌಧರಿ ಜಯ ಧ್ವಜ ನ್ಯೂಸ್ ,ರಾಯಚೂರು, ಜು. 10- ಉತ್ತಮ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳು ಗುರಿಯನ್ನು ಇಟ್ಟಕೊಳ್ಳಬೇಕು. ಆ ಗುರಿ ಸಾಧಿಸಲು ನಿರಂತರ ಪ್ರಯತ್ನ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ.ನಾಗಲಕ್ಷ್ಮೀ ಚೌಧರಿ ಅವರು ಹೇಳಿದರು. ಅವರಿಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬೆಂಗಳೂರಿನ ಮಹಿಳಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕಾಲೇಜ್ ಶಿಕ್ಷಣ ಇಲಾಖೆ ರಾಯಚೂರು ಇವರ ಸಂಯೋಗದಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯೊಂದಿಗೆ ಸಂವಾದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಕಷ್ಟಪಟ್ಟು ಓದಬೇಕು. ಎಷ್ಟೇ ಅಡ್ಡಿ ಆತಂಕ ಎದುರಾದರೂ ಕಲಿಯೋದು ಬಿಡಬಾರದು. ದಿನನಿತ್ಯದ ಪ್ರಚಲಿತದ ಘಟನೆಗಳನ್ನು ಗಮನಿಸಬೇಕು. ವಿದ್ಯಾರ್ಥಿಗಳು ಪ್ರತಿದಿನವೂ ಪತ್ರಿಕೆಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಜ್ಞಾನವನ್ನು ಪಡೆದವರು ಜಗತ್ತನ್ನು ಆಳ್ವಿಕೆ ಮಾಡಬಹುದು. ಸ್ತ್ರೀ ಶೋಷಣೆ ವಿರುದ್ಧ ಡಾ.ಬಿ.ಆರ್.ಅಂಬೇಡ್ಕರ್, ಬಸವಣ್ಣನವರು ಹೋರಾಟ ಮಾಡಿದ್ದಾರೆ. ಅವರನ್ನು ಪ್ರೇರಣೆಯಾಗಿ ಪಡೆಯಬೇಕು. ಒಳ್ಳೆಯ ಸ್ನೇಹಿತರ ಗುಂಪು ಮಾಡಬೇಕು. ಸಮಾಜದ ಆದರ್ಶ ವ್ಯಕ್ತಿಯಾಗಿ ಬಾಳಬೇಕು. ಮೊಬೈಲ್ ಬಳಕೆ...