ಜಿಲ್ಲಾಡಳಿತದಿಂದ ಶ್ರೀ ಶಂಕರಾಚಾರ್ಯರ ಜಯಂತ್ಯೋತ್ಸವ: ಶಂಕರಾಚಾರ್ಯರ ಕಾರ್ಯ ಇಂದಿಗೂ ಶಾಶ್ವತ- ಶಾಸಕ ಶಿವರಾಜ ಪಾಟೀಲ್ ಜಯ ಧ್ವಜ ನ್ಯೂಸ್ ,ರಾಯಚೂರು, ಏ. 21- ಆದಿ ಶಂಕರಾಚಾರ್ಯರು ಸನಾತನ ಧರ್ಮ ರಕ್ಷಣೆಗಾಗಿ ಅವರು ಮಾಡಿದ ಮಹಾನ್ ಕಾರ್ಯ ಇಂದಿಗೂ ಶಾಶ್ವತವಾಗಿದೆ. ಸಹಸ್ರಾರು ವರ್ಷಗಳ ನಂತರವು ಅವರು ಮಾಡಿದ ಕಾರ್ಯ ಮಹತ್ವದಾಗಿದೆ ಎಂದು ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ.ಶಿವರಾಜ ಎಸ್.ಪಾಟೀಲ್ ಅವರು ಹೇಳಿದರು. ಅವರಿಂದು ಸಂಜೆ ನಗರದ ಗಾಜಗಾರಪೇಟೆಯ ಶೃಂಗೇರಿ ಶಂಕರ ಮಠದ ಆವರಣದಲ್ಲಿ ಜಿಲ್ಲಾಡಳಿ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಶ್ರೀ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ನಾವು ಹಿಂದೂ ಎಂದು ಹೇಳಿಕೊಳ್ಳಲು ಶಂಕರಾಚಾರ್ಯರು ಮೂಲಕಾರಣ ಆಗಿದ್ದಾರೆ. ರಾಯಚೂರಿನ ಶೃಂಗೇರಿ ಶಂಕರ ಮಠಕ್ಕೆ ಬೇಕಾಗುವ ಅಗತ್ಯ ಸೌಕರ್ಯಗಳನ್ನು ಒದಗಿಸಲು ಶ್ರಮಿಸಲಾಗುವುದು. ಈಗಾಗಲೇ ಸಮಾಜದ ಆನೇಕ ಅಭಿವೃದ್ಧಿ ಕೆಲಸ ಕಾರ್ಯವನ್ನು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಅತ್ಯುತ್ತಮ ಕೆಲಸ ಕಾರ್ಯಗಳನ್ನು ಮಾಡಲಾಗುತ್ತದೆ ಎಂದರು. ಉಪನ್ಯಾಸಕರಾಗಿ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರಿನ ಧಾರ್ಮಿಕ ಉಪನ್ಯಾಸಕರು ಹಾಗೂ ಪುರೋಹಿತರಾದ ಸುಪ್ರತೀಕ ಭಟ್ ಅವರು ಮಾತನಾಡಿ, ಭಾರತದ ಶ್ರೇಷ್ಠ ಆಧ್ಯಾತ್ಮಿಕ ನಾಯಕ ತತ್...