Posts

Image
ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳ:            ಕಾಡ್ಲೂರು ಶ್ರೀಉಪೇಂದ್ರ ತೀರ್ಥ ಕರಾರ್ಚಿತ ಪ್ರಾಣದೇವರ ದೇವಸ್ಥಾನ ಜಲಾವೃತ.                                                              ಜಯ ಧ್ವಜ ನ್ಯೂಸ್, ರಾಯಚೂರು,ಜು.31- ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳ ಹಿನ್ನೆಲೆ  ತಾಲೂಕಿನ ಕಾಡ್ಲೂರು ಗ್ರಾಮದ ಕೃಷ್ಣಾ ನದಿ ತೀರದ ಶ್ರೀ ಉಪೇಂದ್ರತೀರ್ಥ ಕರಾರ್ಚಿತ ಪ್ರಾಣದೇವರ ದೇವಸ್ಥಾನ ಜಲಾವೃತವಾಗಿದೆ. ಮಹಾರಾಷ್ಟ್ರದ ಕೋಯ್ನಾ ಜಲಾಶಯದಿಂದ ಅಧಿಕ ನೀರು ನದಿಯಲ್ಲಿ ಹರಿಯುತ್ತಿದ್ದು ಅಧಿಕ ಪ್ರಮಾಣದ ಸಮುದ್ರ ಸದೃಶ ಜಲರಾಶಿಯಿಂದ ನದಿ ತುಂಬಿ ಹರಿಯುತ್ತಿದೆ.  ಗ್ರಾಮಸ್ಥರು  ನದಿ ದಡದಲ್ಲಿ ಇರಿಸಿದ್ದ  ಕೃಷಿ ಪಂಪ್ ಸೆಟ್ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುತ್ತಿದ್ದಾರೆ. 
Image
  ವಾರ್ತಾ ಇಲಾಖೆಯಲ್ಲಿ ಪ್ರಕಾಶ್ ಅವರಿಂದ ಉತ್ತಮ ಕೆಲಸ ನಿರ್ವಹಣೆ- ಜಿ.ಸುರೇಶ ಜಯ ಧ್ವಜ ನ್ಯೂಸ್ ,ರಾಯಚೂರು ಜು.31- ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸಿನಿ ಆಪರೇಟರ್ ಹುದ್ದೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿದ ಎ.ಪ್ರಕಾಶ್ ಅವರು ಇಂದು ವಯೋನಿವೃತ್ತಿ ಹೊಂದಿದರು. ಈ ಹಿನ್ನೆಲೆಯಲ್ಲಿ ಇಲಾಖೆಯ ವತಿಯಿಂದ ಆಯೋಜಿಸಲಾದ ಬೀಳ್ಕೊಡುಗೆ ಸಮಾರಂಭದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗ, ಪತ್ರಕರ್ತರು ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಶುಭ ಹಾರೈಸಲಾಯಿತು. ಸಮಾರಂಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರಾದ ಜಿ.ಸುರೇಶ್ ಅವರು ಮಾತನಾಡಿ, ನಿವೃತ್ತರು ತಮ್ಮ ಸೇವಾ ಅವಧಿಯಲ್ಲಿ ಪ್ರಾಮಾಣಿಕತೆ, ಕರ್ತವ್ಯ ನಿಷ್ಠೆ ಮತ್ತು ಶಿಸ್ತುಬದ್ಧ ಕಾರ್ಯನಿರ್ವಹಣೆಯ ಮೂಲಕ ಇಲಾಖೆಯಲ್ಲಿ ಉತ್ತಮ ಕೆಲಸ ನಿರ್ವಹಣೆ ಮಾಡಿದ್ದಾರೆ. ಅವರ ಸೇವೆ ಸಹೋದ್ಯೋಗಿಗಳಿಗೆ ಸದಾ ಮಾದರಿಯಾಗಿದ್ದು, ನಿವೃತ್ತಿಯ ನಂತರವೂ ಉತ್ತಮ ಆರೋಗ್ಯ, ಸುಖ-ಶಾಂತಿ ಹಾಗೂ ನೆಮ್ಮದಿಯ ಜೀವನ ಸಾಗಿಸಲಿ ಎಂದು ಶುಭಕೋರಿದರು. ಈ ವೇಳೆ ವಯೋ ನಿವೃತ್ತರಾದ ಎ.ಪ್ರಕಾಶ್ ಅವರು ಮಾತನಾಡಿ, ಸೇವಾ ಅವಧಿಯಲ್ಲಿ ಸಹಕರಿಸಿದ ಎಲ್ಲಾ ಅಧಿಕಾರಿಗಳು, ಸಹೋದ್ಯೋಗಿಗಳು ಹಾಗೂ ಸಿಬ್ಬಂದಿಗಳಿಗೆ, ಪತ್ರಕರ್ತರಿಗೆ ಕೃತಜ್ಞತೆ ಸಲ್ಲಿಸಿದರು. ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ಅನುಭವವನ್ನು ಸ್ಮರಿಸಿಕೊಂಡ ಅವರು, ತಮ್ಮ ಸೇವಾ ಜೀವನದ ನೆನಪುಗಳನ್ನು ಹಂಚಿಕೊAಡರು. ಈ ಸ...
Image
  ಹೆಚ್ ಎ ಎಲ್ ನಿಂದ ಸಿ ಎಸ್ ಆರ್ ನಿಧಿಯಡಿ 50ಕೋಟಿ ರೂ. ವೆಚ್ಚದಲ್ಲಿ ಜಲಾಶಯ ನಿರ್ಮಾಣ ಭೂಮಿಪೂಜೆ :            ಮಂತ್ರಾಲಯದಲ್ಲಿ ಭಕ್ತರಿಗೆ ಬೇಸಿಗೆಯಲ್ಲಿ ನೀರಿನ ದಾಹ ನೀಗಿಸಲಿರುವ  ವ್ಯಾಸತೀರ್ಥ ಜಲಾಶಯ- ಶ್ರೀ  ಸುಬುಧೇಂದ್ರತೀರ್ಥರು                                                                                                                                ಜಯ ಧ್ವಜ ನ್ಯೂಸ್ , ರಾಯಚೂರು, ಜು.30-  ಮಂತ್ರಾಲಯಕ್ಕೆ ಬರುವ ಭಕ್ತರಿಗೆ ಬೇಸಿಗೆಯಲ್ಲಿ ನೀರಿನ ದಾಹ ನೀಗಿಸಲು ಮುಂದಿನ ಮೂವತ್ತು ವರ್ಷದ ಅವಧಿಗೆ ಶುದ್ಧ ಕುಡಿಯುವ ನೀರಿನ ಸೌಕರ್ಯ ಒದಗಿಸಲು ವ್ಯಾಸ ತೀರ್ಥ ಜಲಾಶಯ ನಿರ್ಮಾಣವಾಗಲಿದೆ ಎಂದು    ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ನುಡಿದರು. ಅವರಿಂದು...
Image
ಎಸ್ ಐ ಆರ್  ನಮೂನೆಗಳನ್ನು ನಿಗದಿತ ಅವಧಿಯೊಳಗೆ ಸಲ್ಲಿಸಲು ಜಿಲ್ಲಾಧಿಕಾರಿ ಪೂವಿತಾ ಸೂಚನೆ ಜಯ ಧ್ವಜ ನ್ಯೂಸ್ ,ರಾಯಚೂರು, ಜು.30-  ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ರಾಯಚೂರು ಜಿಲ್ಲೆಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯವು ವೇಗವಾಗಿ ಸಾಗುತ್ತಿದ್ದು, ಆಗಸ್ಟ್ 8ರವರೆಗೆ ಅಭಿಯಾನ ಮುಂದುವರಿಯಲಿದೆ. ಉಳಿದಿರುವ ಮತದಾರರು ತಮ್ಮ ಎಣಿಕೆ ನಮೂನೆಗಳನ್ನು ಕೂಡಲೇ ಭಾನುವಾರದೊಳಗೆ ಆನ್‌ಲೈನ್ ಅಥವಾ ಖುದ್ದಾಗಿ ಸಲ್ಲಿಸುವ ಮೂಲಕ ಅಭಿಯಾನದ ಯಶಸ್ವಿಗೆ ಸಹಕಾರಿಸಬೇಕೆಂದು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಚುನಾವಣಾಧಿಕಾರಿಗಳಾದ ಪೂವಿತಾ ಎಸ್. ಅವರು ಹೇಳಿದರು. ಜುಲೈ 30ರ ಗುರುವಾರ ದಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ರಾಜ್ಯಾದ್ಯಂತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಠರಣೆ ಕಾರ್ಯಕ್ರಮವು ರಾಯಚೂರು ಜಿಲ್ಲೆಯಲ್ಲಿ ನಿಗದಿತ ವೇಳಾಪಟ್ಟಿಯಂತೆ ಯಶಸ್ವಿಯಾಗಿ ಪ್ರಗತಿಯಲ್ಲಿದೆ. ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡಿ ಮತದಾರರಿಗೆ ಎನ್ನೂಮರೇಷನ್ ಫಾರ್ಮ್ ವಿತರಣೆ ಹಾಗೂ ಸಂಗ್ರಹ ಕಾರ್ಯವನ್ನು ನಿರಂತರವಾಗಿ ಕೈಗೊಳ್ಳುತಿದೆ. ಪ್ರಸ್ತುತ ಜಿಲೆಯಲ್ಲಿ ಒಟ್ಟು ಮತದಾರರು 17,14,559 ಇದ್ದು, ಅದರಲ್ಲಿ 15,84,491 ಡಿಜಿ...
Image
  ಗುರುಪೂರ್ಣಿಮೆ ಮಹೋತ್ಸವದಲ್ಲಿ ಶೈಕ್ಷಣಿಕ ಸೇವೆಗೆ ಚಾಲನೆ: ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ನೆರವು ನೀಡುವ ಯೋಜನೆ ಆರಂಭ- ಸಾಯಿ ಕಿರಣ ಆದೋನಿ ಜಯ ಧ್ವಜ ನ್ಯೂಸ್ ,ರಾಯಚೂರು, ಜು.29-  ಗುರುಪೂರ್ಣಿಮೆಯ ಅಂಗವಾಗಿ ನಗರದ ಓಂ ಸಾಯಿ ಧ್ಯಾನ ಮಂದಿರದಲ್ಲಿ ಬುಧವಾರ ಭಕ್ತಿಭಾವದಿಂದ ಗುರುಪೂರ್ಣಿಮಾ ಮಹೋತ್ಸವ ಆಚರಿಸಲಾಯಿತು. ಬೆಳಗ್ಗೆಯಿಂದಲೇ ಸಾವಿರಾರು ಭಕ್ತರು ಶ್ರೀ ಶಿರಡಿ ಸಾಯಿಬಾಬಾರ ದರ್ಶನ ಪಡೆದು ವಿಶೇಷ ಪೂಜೆಗಳಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಪ್ರತಿಭಾವಂತ ಹಾಗೂ ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವು ನೀಡುವ ಯೋಜನೆಗೂ ಚಾಲನೆ ನೀಡಲಾಯಿತು. ಧ್ಯಾನ ಮಂದಿರದ ಸಂಸ್ಥಾಪಕ ಧರ್ಮಾಧಿಕಾರಿ ಸಾಯಿ ಕಿರಣ ಆದೋನಿ ಮಾತನಾಡಿ, ಗುರುಪೂರ್ಣಿಮೆಯು ಗುರು ಪರಂಪರೆಯನ್ನು ಸ್ಮರಿಸುವ ಪವಿತ್ರ ಹಬ್ಬವಾಗಿದೆ. ಧಾರ್ಮಿಕ ಆಚರಣೆಗಳ ಜೊತೆಗೆ ಸಮಾಜಮುಖಿ ಸೇವೆಗಳನ್ನು ಕೈಗೊಳ್ಳುವುದು ಸಾಯಿಬಾಬರ ಸಂದೇಶವಾಗಿದೆ ಎಂದು ಹೇಳಿದರು. ಈ ಬಾರಿ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿ ಶಿರಡಿಯಿಂದ ತರಲಾಗಿರುವ ಶ್ರೀ ಸಾಯಿಬಾಬಾ ಧರಿಸಿದ್ದ ಪವಿತ್ರ ಕಾಫ್ನಿಯ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಈ ಪವಿತ್ರ ವಸ್ತ್ರದ ಸಮ್ಮುಖದಲ್ಲೇ ಸಮಾಜಕ್ಕೆ ಉಪಯುಕ್ತವಾಗುವ ಶಾಶ್ವತ ಸೇವಾ ಕಾರ್ಯ ಆರಂಭಿಸುವ ಸಂಕಲ್ಪದೊಂದಿಗೆ ಶ್ರೀ ಶಿರಡಿ ಸಾಯಿಬಾಬಾ ಸೇವಾ ಚಾರಿಟೇಬಲ್ ಟ್ರಸ್ಟ್, ಅಮೆರಿಕದ ಸಾಫ್ಟ್‌ವೇರ್ ಇಂಜಿನಿಯರ್ ಅಭಿಲಾಷ್ ಚಕ್ಷಾ, ಸ...
Image
  ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟನೆ:      ಪತ್ರಕರ್ತನ ಬೆನ್ನ ಹಿಂದಿನ ಒಳ್ಳೆ ಮಾತು ಪದ್ಮಶ್ರೀ ಪ್ರಶಸ್ತಿ ದೊರೆತಂತೆ- ಶಿವಾನಂದ ತಗಡೂರು.                                             ಜಯ ಧ್ವಜ ನ್ಯೂಸ್, ರಾಯಚೂರು,ಜು.28- ಒಬ್ಬ ಪತ್ರಕರ್ತನ ಬೆನ್ನ ಹಿಂದೆ ಒಳ್ಳೆ ಮಾತುಗಳನ್ನಾಡಿದಾಗ ಅದು  ಪದ್ಮಶ್ರೀ ಪ್ರಶಸ್ತಿ ಸಿಕ್ಕಂತಾಗುತ್ತದೆ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಭಿಪ್ರಾಯ ಪಟ್ಟರು . ಅವರಿಂದು ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಘಟಕ ಹಾಗೂ ರಾಯಚೂರು ರಿಪೋರ್ಟ್ರರ್ಸ್ ಗಿಲ್ಡ್ ಮತ್ತು ಸಾರ್ವಜನಿಕ ವಾರ್ತಾ ಮತ್ತು ಸಂಪರ್ಕ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾದ ಪತ್ರಿಕಾ ದಿನಾಚರಣೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟನೆ ನೆರವೇರಿಸಿ ಆಶಯ ನುಡಿಗಳನ್ನಾಡಿದರು. ಪತ್ರಿಕಾ ಕ್ಷೇತ್ರಕ್ಕೆ ತನ್ನದೆಯಾದ ಘನತೆ ಗೌರವವಿದೆ ಪತ್ರಕರ್ತರ ಕಷ್ಟ ಸುಖಗಳಿಗೆ ಕೆಯುಡ್ಬ್ಲೂಜೆ ಸ್ಪಂದಿಸುತ್ತಿದೆ ಪತ್ರಕರ್ತರು ಬೇಡಿಕೆ ಅನುಗುಣವಾಗಿ ಸರ್ಕಾರಕ್ಕೆ ಮನವಿ  ಮಾಡಿ ಸೌಲತ್ತ...
Image
  ದುಬೈ ಕನ್ನಡಿಗರು ಹೃದಯವಂತರು-ಶ್ರೀದೇವಿ ನಾಯಕ   ಜಯ ಧ್ವಜ ನ್ಯೂಸ್ , ರಾಯಚೂರು,ಜು .28-   ಹೊರನಾಡಿನಲ್ಲಿ ಜೀವಿಸುತ್ತಿರುವ ಕನ್ನಡಿಗರು ಅದರಲ್ಲೂ ದುಬೈ ಅಂತಹ ಶ್ರೀಮಂತ ರಾಷ್ಟ್ರದಲ್ಲಿ ಇರುವಂತ ಕನ್ನಡಿಗರು ನಿಜಕ್ಕೂ ಹೃದಯವಂತರು . ಇಲ್ಲಿ ಜಾತಿ ಧರ್ಮವಿಲ್ಲ ನಾವೆಲ್ಲರೂ ಕನ್ನಡಿಗರೆಂದು ಬಾಳುತ್ತಿರುವುದು  ಹೆಮ್ಮೆಯ ವಿಷಯ ಎಂದು ವಿಶ್ವಕನ್ನಡ ಸಮ್ಮೇಳನ ದುಬೈದ ಸಮ್ಮೇಳನ ಅಧ್ಯಕ್ಷರಾದ ಶ್ರೀದೇವಿ ಆರ್. ವಿ. ನಾಯಕ ಮಾತನಾಡಿದರು.  ಅವರು ದುಬೈಯಲ್ಲಿ ಕನ್ನಡ ಸಾಂಸ್ಕೃತಿಕ ಸಂಘಟನಾ ಸಂಸ್ಥೆ ಹಾಗೂ ಕಲಾ ಸಂಕುಲ ಸಂಸ್ಥೆಯ ರಾಯಚೂರು ವತಿಯಿಂದ ಹಮ್ಮಿಕೊಂಡಿದ್ದ ವಿಶ್ವ ಕನ್ನಡ ಸಮ್ಮೇಳನದ ಮೊದಲ ಮಹಿಳಾ ಅಧ್ಯಕ್ಷರಾಗಿ ರಾಯಚೂರು ಜಿಲ್ಲೆಯ ಶ್ರೀದೇವಿ ಆರ್ ವಿ ನಾಯಕ್ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿಸಿದರು.  ಅಬುದಾಬಿಯ ಡಾ. ಐಶ್ವರ್ಯ ಅದ್ಭುತವಾಗಿ ಭರತನಾಟ್ಯವನ್ನು ಪ್ರದರ್ಶನ ಮಾಡಿದರು. ಖ್ಯಾತ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಿ ಅಶ್ವತ್ ಗೀತೆಗಳನ್ನು ಅದ್ಭುತವಾಗಿ ಹಾಡಿದರು. ಬೆಂಗಳೂರಿನ ನಾಟಕಕಾರ ತಂಡ ಸಾಕ್ಷಿಕಲ್ಲು ನಾಟಕವನ್ನು ಈ ಸಮ್ಮೇಳನದಲ್ಲಿ ಉತ್ತಮವಾಗಿ ಪ್ರದರ್ಶನ ನೀಡಿದರು. ಕವಿಗೋಷ್ಠಿಯಲ್ಲಿ ಹೊರನಾಡ ಕನ್ನಡಿಗರು ಭಾಗವಹಿಸಿದ್ದರು ಮತ್ತು ಕೊಟ್ರೇಶಿ ಕೂಡ್ಲಿಗಿ ಇವರಿಂದ ಹಾಸ್ಯಸಂಜೆ ತುಂಬಾ ಚೆನ್ನಾಗಿ ನೆರವೇರಿತು.  ಒಂಬತ್ತು ಜನ ಸಾಧಕರಿಗೆ ಅಂತಾರಾಷ್ಟ್ರೀಯ ಪ್ರಶಸ್ತಿ ಪ್ರಧಾನ ಮಾಡಲಾಯಿತು. ...