ಹಿರಿಯ ಸಾಹಿತಿ ಬಿ.ಜಿ ಹುಲಿ ಜನ್ಮ ದಿನಾಚರಣೆ, 1 ಲಕ್ಷ 6೦ ಸಾವಿರ ರೂ ದೇಣಿಗೆ ಅರ್ಪಣೆ: ಮಟಮಾರಿಯ ಶಿವಾನಂದ ಮಠದ ಸಾಮಾಜಿಕ ಕಳಕಳಿ ಶ್ಲಾಘನೀಯ -ಡಾ.ಹಂಪಣ್ಣ ಸಜ್ಜನ ಜಯ ಧ್ವಜ ನ್ಯೂಸ್ ,ರಾಯಚೂರು,ಜು.22- ಸಮಾಜದಲ್ಲಿನ ದುರ್ಬಲ ವರ್ಗದ ಮಕ್ಕಳಿಗೆ ಜ್ಞಾನ ಹಾಗೂ ಅನ್ನ ದಾಸೋಹದ ಮೂಲಕ ಮಠ ಮಾನ್ಯಗಳು ವಿಶಿಷ್ಠ ಕೊಡುಗೆ ನೀಡುತ್ತಿವೆ ಎಂದು ರಾಯಚೂರು ಉಪ ವಿಭಾಗದ ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ ಹೇಳಿದರು. ರಾಯಚೂರಿನ ದಿ.ಸಾವಿತ್ರಿದೇವಿ.ಬಿ.ಹುಲಿ ಸ್ಮಾರಕ ಸಾಂಸ್ಕೃತಿಕ ಪ್ರತಿಷ್ಠಾನ ಹಮ್ಮಿಕೊಂಡ ಆಪ್ತ ನಿವೃತ್ತ ಸ್ನೇಹಿತರಿಗೆ ಸನ್ಮಾನ ಹಾಗೂ ನಿವೃತ್ತ ಉಪನ್ಯಾಸಕ ಬಿ.ಜಿ.ಹುಲಿ ಅವರ 8೦ನೇ ವರ್ಷದ ಜನ್ಮ ದಿನದ ಹಿನ್ನೆಲೆಯಲ್ಲಿ ತಾಲೂಕಿನ ಮಟಮಾರಿಯ ಶ್ರೀ ಶಿವಾನಂದ ಮಠದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರಾಯಚೂರು ನಗರದ ಬಸವ ಸೇವಾ ಪ್ರತಿಷ್ಠಾನದ ಬಸವ ಪೂರ್ವ ಪ್ರಾಥಮಿಕ ಶಾಲೆ ಹಾಗೂ ಶ್ರೀ ಶಿವಾನಂದ ಮಠಕ್ಕೆ ತಲಾ 80 ಸಾವಿರ ರೂ. ದೇಣಿಗೆ ಅರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಟಮಾರಿಯ ಶ್ರೀ ಶಿವಾನಂದ ಮಠವು 80 ಕ್ಕೂ ಹೆಚ್ಚು ಅನಾಥ ಹಾಗೂ ಬಡ ಮಕ್ಕಳಿಗೆ ಉಚಿತ ವಸತಿ, ಊಟ, ಮತ್ತು ಶಿಕ್ಷಣ ನೀಡುತ್ತಿದೆ. ಇಂತಹ ಮಕ್ಕಳ ಉನ್ನತಿಗಾಗಿ ಶ್ರಮಿಸುತ್ತಿರುವ ಮಠದ ಅಭಿವೃದ್ಧಿಗೆ ಸಹಾಯ ಸಹಕಾರ ಮಾಡುವುದಾಗಿ ತಿಳಿಸಿದ ಅವರು, ಹಿರಿಯ ಸಾಹಿತಿಗಳಾದ ಬಿ.ಜಿ.ಹುಲಿ ಅವರ ಜನ್ಮದಿನವನ್ನು ಸಮಾಜಕ್ಕೆ ಮಾದರಿಯಾಗಿ ಆಚರಿಸಿಕೊಂಡು ಶಿಕ್ಷಣ, ದಾಸೋಹ ಪರ...