Posts

Image
  ಬಾಗಲಕೋಟೆ ಉಪಚುನಾವಣೆ ಕಾಂಗ್ರೆಸ್ ಗೆಲುವು ವಸಂತಕುಮಾರ ಹರ್ಷ                                                                                                   ಜಯ‌ ಧ್ವಜ ನ್ಯೂಸ್ , ರಾಯಚೂರು , ಮೇ.4-  ಬಾಗಲಕೋಟೆ ವಿಧಾನ ಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ 21800 ಮತಗಳ ಅಂತರದಿಂದ ಗೆಲವು ಸಾಧಿಸಿರುವದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಪಕ್ಷದ ಸರಕಾರಕ್ಕೆ ಜನತೆ ನೀಡಿದ ಬೆಂಬಲವಾಗಿದೆ ಎಂದು ಬಾಗಲಕೋಟ ವಿಧಾನಸಭಾ  ಕ್ಷೇತ್ರದ ಚುನಾವಣಾ ಉಸ್ತುವಾರಿ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಎ.ವಸಂತಕುಮಾರ ಹರ್ಷ ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ 97000 ಮತಗಳನ್ನು ಪಡೆದು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಚುನಾವಣೆಯು ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ಎರಡು ವರ್ಷಗಳ ನಂತರದಲ್ಲಿ ನಡೆಯುವ ರಾಜ್ಯ ವಿಧಾನಸಭಾ ಕ್ಷೇತ್ರದ ಚುನಾವಣೆಗೆ ಮುನ್ನುಡಿಯಾಗಿದೆ, ರಾಜ್ಯದ ಜನತೆ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳಿಗೆ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳಿಗೆ...
Image
ಹರಿಜನವಾಡದಲ್ಲಿ ಕುಡಿಯುವ ನೀರು ಪೋಲು                                               ಜಯ ಧ್ವಜ ನ್ಯೂಸ್ ,ರಾಯಚೂರು, ಮೇ.3- ನಗರದ ಹರಿಜನವಾಡ ಬಡಾವಣೆಯಲ್ಲಿ ಕುಡಿಯುವ ನೀರಿನ ಪೈಪ್ ಹಾಳಾಗಿದ್ದು ನೀರು ಪೋಲಾಗುತ್ತಿದೆ. ಕುಡಿಯುವ ನೀರಿನ ಸರಬರಾಜು ಮಾಡುವ ರೈಸಿಂಗ್ ಲೈನ್ ಅನೇಕ ತಿಂಗಳಿನಿಂದ ಹಾಳಾಗಿದ್ದು ಕಳಪೆ ದುರಸ್ಥಿ  ಮಾಡಲಾಗಿದ್ದರಿಂದ  ನೀರು ಪೋಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು ಸಂಬಂಧಿಸಿದ ಅಧಿಕಾರಿಗಳು ಹಾಗೂ ನಗರಸಭೆ ಮಾಜಿ ಸದಸ್ಯರು, ರಾಜಕೀಯ ನಾಯಕರು ಮೌನವಹಿಸಿದ್ದಾರೆ ಎಂದು  ಹರಿಜನವಾಡ ಬಡಾವಣೆಯ ಟೈಗರ್ ಗ್ರೂಪ್ ಜಿಲ್ಲಾಧ್ಯಕ್ಷ ಸಣ್ಣಬಾಬು ಪ್ರಕಟಣೆಯಲ್ಲಿ ಅಸಮಾಧಾನ  ವ್ಯಕ್ತಪಡಿಸಿದ್ದಾರೆ.
Image
  ಜಿಲ್ಲಾಡಳಿತದಿಂದ ಭಗವಾನ್ ಬುದ್ಧರ 2570 ನೇ ಜಯಂತಿ ಆಚರಣೆ:      ಬುದ್ಧರ ಆದರ್ಶ, ತತ್ವಗಳನ್ನು ಅನುಸರಿಸಿ- ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್ ಜಯ ಧ್ವಜ ನ್ಯೂಸ್ ,ರಾಯಚೂರು ಮೇ.1- ಭಗವಾನ್ ಬುದ್ಧರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದ ಆದರ್ಶ ಹಾಗೂ ತತ್ವಗಳನ್ನು ನಾವು ಅನುಸರಿಸಬೇಕು, ಅವರ ವಿಚಾರಗಳನ್ನು ನಮ್ಮ ದಿನನಿತ್ಯ ಜೀವನದಲ್ಲಿ ಪಾಲಿಸಬೇಕೆಂದು ರಾಯಚೂರು ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ್  ಹೇಳಿದರು. ಅವರು ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ‌‌ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಭಗವಾನ್ ಬುದ್ಧರ 2570ನೇ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ‌ ನೀಡಿ ಅವರು ಮಾತನಾಡಿದರು. ಭಗವಾನ್ ಬುದ್ಧರು ಶಾಂತಿ, ಪ್ರೀತಿ ಹಾಗೂ ಸೌಹಾರ್ದತೆಯ ಸಂದೇಶಗಳನ್ನು ನಮ್ಮ ಯುವ ಪೀಳಿಗೆಯವರು ಪಾಲಿಸುವಂತಾಗಬೇಕು. ಬುದ್ಧನ ಪ್ರಮುಖ ಬೋಧನೆಗಳಲ್ಲಿ ಸಕಲ ಜೀವಿಗಳಿಗೂ ಸಹಾನುಭೂತಿ ತೋರಿಸುವದಾಗಿದೆ.  ಸಾಮಾನ್ಯ ಜನರ ಜೊತೆಗೆ ಅವರು ಜೀವನ ನಡೆಸಿದರು ಎಂದರು. ಭಗವಾನ್ ಬುದ್ಧರು ತಮ್ಮ  ತತ್ವ ಮತ್ತು ಸಿದ್ದಾಂತಗಳ  ಬಗ್ಗೆ ಜಾಗೃತಿ ಮೂಡಿಸಿದ ಮಹಾನ್ ವ್ಯಕ್ತಿಯಾಗಿದ್ದು, ಅವರ ಜ್ಞಾನಮಾರ್ಗ ಅನುಸರಿಸಿ ನಮ್ಮೊಳಗೆ ಜಾಗೃತಿ ಮೂಡಿಸಿಕೊಂಡು ಸಮಾಜವನ್ನು ಸುಧಾರಣೆ ಮಾಡುವಲ್ಲಿ ನಾವೆಲ...
Image
  ವಿಶ್ವಕರ್ಮ ಸಮಾಜದಿಂದ ಪ್ರತಿಭಾ ಪುರಸ್ಕಾರ ಅರ್ಜಿ ಆಹ್ವಾನ.   ಜಯಧ್ವಜ ನ್ಯೂಸ್  ,ರಾಯಚೂರು, ಮೇ 1. ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಯಚೂರು ಹಾಗೂ ಜಿಲ್ಲಾ ವಿಶ್ವಕರ್ಮ ಸಮಾಜ ರಾಯಚೂರು ಇವರ ಸಹಯೋಗದಲ್ಲಿ ರಾಯಚೂರು ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರವನ್ನು ಜೂನ್ ತಿಂಗಳಲ್ಲಿ ಹಮ್ಮಿಕೊಳ್ಳಲಾಗಿದೆ.  ಪ್ರಸಕ್ತ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ದ್ವಿತೀಯ ವರ್ಷದಲ್ಲಿ ಶೇ. 80ಕ್ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರದಲ್ಲಿ ತಮ್ಮ ಅಂಕಪಟ್ಟಿ ಭಾವಚಿತ್ರ ವಿಳಾಸ ಮೊಬೈಲ್ ಸಂಖ್ಯೆಯೊಂದಿಗೆ ಈ ತಿಂಗಳು 15 ರ ಒಳಗಾಗಿ ಜನಾರ್ಧನ ಮುಮ್ಮಡಿ ವಿಶ್ವಕರ್ಮ ಮೊಬೈಲ್ ಸಂಖ್ಯೆ 8197448606 ಇವರಿಗೆ ವಾಟ್ಸಪ್ ಮೂಲಕ ಕಳಿಸಬೇಕು. ಪ್ರತಿಭಾ ಪುರಸ್ಕಾರದಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ಪ್ರಮಾಣ ಪತ್ರ ಸಸಿ ಮೆಡಲ್ ವಿತರಿಸಲಾಗುವುದು. ರಾಯಚೂರು ಜಿಲ್ಲೆಯ  ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಯಚೂರು ಜಿಲ್ಲಾಧ್ಯಕ್ಷರಾದ ಮಾರುತಿ ಬಡಿಗೇರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Image
  ವಿಧಾನಪರಿಷತ್ ಸದಸ್ಯರಾದ  ಎ.ವಸಂತ್ ಕುಮಾರ್ ಅವರಿಂದ ನಗರ ಪ್ರಾಥಮಿಕ ಅರೋಗ್ಯ ಕೇಂದ್ರಗಳಿಗೆ ದಿಡೀರ್ ಭೇಟಿ ಪರಿಶೀಲನೆ  ಜಯ ಧ್ವಜ ನ್ಯೂಸ್ ,ರಾಯಚೂರು,ಏ.28 - ನಗರ ಪ್ರಾಥಮಿಕ ಅರೋಗ್ಯ ಕೇಂದ್ರ ಎಲ್ ಬಿ ಎಸ್ ನಗರದ ಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆಸ್ಪತ್ರೆಯ ಸ್ವಚ್ಛತೆ, ಸಿಬ್ಬಂದಿ ಹಾಜರಾತಿ, ಮತ್ತು ಔಷದಗಳ ಲಭ್ಯತೆ ಬಗ್ಗೆ ವಿಚಾರಿಸಿದರು, ಸಿಬ್ಬಂದಿಗಳ ಹಾಜರಾತಿ ಪರಿಶೀಲಿಸಿ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡು ಕರ್ತವ್ಯದ ಸಮಯದಲ್ಲಿ ಎಲ್ಲರು ಕಡ್ಡಾಯವಾಗಿ ಹಾಜರಾಗಿರಬೇಕೆಂದು ತಿಳಿಸಿದರು.  ತದನಂತರ ಹರಿಜನವಾಡ್ ನಗರ ಪ್ರಾಥಮಿಕ ಅರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಚಿಕಿತ್ಸೆಗೆ ಬಂದಿದ್ದ ಸಾರ್ವಜನಿಕರಲ್ಲಿ ಆಸ್ಪತ್ರೆಯಲ್ಲಿ ಸಿಬ್ಬಂದಿಗಳ ಸ್ಪಂದನೆ, ಚಿಕಿತ್ಸೆ, ಮತ್ತು ಔಷಧಗಳ ಸರಿಯಾದ ರೀತಿಯಲ್ಲಿ ವಿತರಿಸಲಾಗುತ್ತದಯೇ ಎಂದು ವಿಚಾರಿಸಿದರು, ರೋಗಿಗಳ ದಾಖಲಾತಿ ವಿವರ ಪರಿಶೀಲಿಸಿದರು.   ಕೆಲವು ವ್ಯಕ್ತಿಗಳು ಆಸ್ಪತ್ರೆಯ ಸಿಬ್ಬಂದಿಗಳ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸುತ್ತಿರುವ ಬಗ್ಗೆ ವೈದ್ಯರು  ತಿಳಿಸಿದಾಗ ಕೂಡಲೇ ಡಿವೈಎಸ್ಪಿ ಮತ್ತು ಪಿ ಎಸ್ ಐ ಅವರಿಗೆ ಕರೆ ಮಾಡಿ ಸೂಕ್ತ ಭದ್ರತೆ ನೀಡಲು ಸೂಚಿಸಿದರು. ರಾಯಚೂರಿನ ಆಮ್ ತಲಾಬ್ ನ ನಗರ ಪ್ರಸೂತಿ ಕೇಂದ್ರಕ್ಕೆ ಭೇಟಿ ನೀಡಿ ವೈದ್ಯರೊಂದಿಗೆ ಚರ್ಚಿಸಿ, ಸಿಬ್ಬಂದಿಗಳ ಮತ್ತು ಚಿಕಿತ್ಸಾ ಪರಿಕರಗಳ ಕೊರತೆ ಬಗ್ಗೆ ಕೊಡಲೇ ಡಿ ಎಚ್ ಓ ಅವರ ಗಮ...
Image
  ಪತ್ರಿಕಾ ಭವನ ಸಂಪರ್ಕ ರಸ್ತೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ವಸಂತಕುಮಾರ್ ಭೂಮಿ ಪೂಜೆ .                                                          ಜಯ ಧ್ವಜ ನ್ಯೂಸ್ ರಾಯಚೂರು, ಏ.27- ನಗರದ ಪಂಡಿತ್ ಸಿದ್ದರಾಮ ಜಂಬಲದಿನ್ನಿ ರಂಗಮಂದಿರ ಹಿಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನಕ್ಕೆ ಹಾಗೂ ರಿಪೋರ್ಟರ್ಸ್ ಗೀಲ್ಡ್  ಸಂಪರ್ಕಿಸಲು ಸಿಸಿ ರಸ್ತೆ ನಿರ್ಮಾಣಕ್ಕೆ ಕೆಕೆಆರ್ ಡಿಬಿ ಅನುದಾನದಲ್ಲಿ ಭೂಮಿ ಪೂಜೆಯನ್ನು ವಿಧಾನ ಪರಿಷತ್ ಸದಸ್ಯ ಎ.ವಸಂತಕುಮಾರ ಅವರು ನೇರವೇರಿಸಿದರು. ನಂತರ ಮಾತನಾಡಿದ  ಅವರು ನಗರದಲ್ಲಿ ಬೃಹತ್ ಡಾ.ಬಿ.ಆರ್.ಅಂಬೇಡ್ಕರ್  ಸಮುದಾಯ ಭವನ ನಿರ್ಮಾಣ ಮಾಡಲಾಗಿದ್ದು, ಅಲ್ಲಿಗೆ ಹೋಗಲು ಮತ್ತು ರಿಪೋರ್ಟರ್ಸ್ ಗಿಲ್ಡ್ (ಪತ್ರಿಕಾ ಭವನ)ಕ್ಕೆ ಸಂಪರ್ಕ ಕಲ್ಪಿಸಲು ಸಿಸಿ ರಸ್ತೆಯ ಅವಶ್ಯಕತೆ ಇರುವದರಿಂದ 15 ಲಕ್ಷ ರೂ. ಕೆಕೆಆರ್ ಡಿಬಿ ಅನುದಾನದಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ, ಮುಂದಿನ‌ ದಿನಗಳಲ್ಲಿ ಇನ್ನೂ ಅಗತ್ಯ ಮೂಲ‌ ಸೌಲಭ್ಯ ಒದಗಿಸಲಾಗುವದು ಎಂದು ಹೇಳಿದರು. ಈ ಸಂದರ್ಭದಲ್ಲಿ ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಬ್ದುಲ್ ಕರೀಮ, ಜೆ. ಸತ್ಯನಾಥ, ಸೈಯ...
Image
  ದಾಸ ಪರಂಪರೆಯನ್ನು ಬೆಳೆಸಿದ ಮಹನೀಯರು ಶ್ರೀ ಶಾಮ ಸುಂದರ ದಾಸರು- ಮುರಳೀಧರ ಕುಲಕರ್ಣಿ                                                ಜಯ ಧ್ವಜ ನ್ಯೂಸ್ ,ರಾಯಚೂರು,ಏ.26- ನಗರದ ಜವಾಹರ ನಗರದ ಬಯಲು ಆಂಜನೇಯ ದೇವಸ್ಥಾನದಲ್ಲಿ ನಿನ್ನೆ ಸಂಜೆ ವರಕವಿಗಳು ದಾಸ ಶ್ರೇಷ್ಠರಾದ ಶ್ರೀ ಶಾಮಸುಂದರ ದಾಸರ ಆರಾಧನೆಯನ್ನು ದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ವಿಜ್ರಂಭಣೆಯಿಂದ ಆಚರಿಸಲಾಯಿತು.  ಆರಾಧನೆಯ ಕಾರ್ಯಕ್ರಮದಲ್ಲಿ ಉಪನ್ಯಾಸಗಳು ದಾಸವಾಣಿ ಕಾರ್ಯಕ್ರಮಗಳು ಭಜನಾ ಮಂಡಳಿಯಿಂದ ಭಜನೆ ಕಾರ್ಯಕ್ರಮಗಳು ಜರಗಿದವು.                            ಶೃತಿ ಸಾಹಿತ್ಯ ಮೇಳದ ಅಧ್ಯಕ್ಷ ಮುರಳಿಧರ ಕುಲಕರ್ಣಿ ಅವರು ಉಪನ್ಯಾಸವನ್ನು ನೀಡಿ ಶ್ರೀ ಶಾಮ ಸುಂದರ ದಾಸರು ಮಾನವಿಯ ಗುಂಡಾಚಾರ್ಯರೆಂದು ಪ್ರಸಿದ್ಧಿಯಾಗಿದ್ದರು ಇವರು ಜಗನ್ನಾಥದಾಸರಿಂದ ಸ್ವಪ್ನಾಂಕಿತವನ್ನು ಪಡೆದು ಶಾಮ ಸುಂದರ ವಿಠಲ ಎಂಬ ಅಂಕಿತದಿಂದ ನೂರಾರು ಸಂಕೀರ್ತನೆಗಳನ್ನು, ಸುಳಾದಿಗಳನ್ನು, ಬಯಲಾಟಗಳನ್ನು,ಲಾವಣಿ ಪದಗಳನ್ನು, ಗೀಗಿ ಪದಗಳನ್ನು, ಶೋಬಾನಗೀತೆಗಳನ್ನು, ಜೋಗುಳ ಗೀತೆಗಳನ್ನು, ಕೋಲಾಟ ಪದಗಳನ್ನು ರಚಿಸಿ ಹರಿದಾಸ ಶ್ರೇಷ್ಠ ...