ಶ್ರೀಗಿರಿ ಅಭಯ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ 52 ನೇ ಶರಣ ಚಿಂತನ ಶಿವಾನುಭವ ಗೋಷ್ಠಿ ಮತ್ತು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ: ಹೆಣ್ಣು ಸಂಸಾರದ ಕಣ್ಣಾಗಬೇಕು- ಅನಿತಾ ಹಿರೇಮನಿ ಜಯ ಧ್ವಜ ನ್ಯೂಸ್ , ರಾಯಚೂರು, ಮಾ.23- ನಗರದ ಮಾರುತಿ ನಗರ ಬಡಾವಣೆಯಲ್ಲಿ ಶ್ರೀ ಗಿರಿ ಅಭಯ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ 52 ನೇ ಶರಣ ಚಿಂತನ ಶಿವಾನುಭವ ಗೋಷ್ಠಿ ಮತ್ತು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಾರಾಗೃಹದ ಅಧೀಕ್ಷಕರಾದ ಅನಿತಾ ಹಿರೇಮನಿ ರವರು ಸುಂದರ ಪರಿಸರದಲ್ಲಿ ದೇವಸ್ಥಾನ ನಿರ್ಮಿಸಿ 52ನೇ ಶರಣ ಚಿಂತನ ಗೋಷ್ಠಿ ಮತ್ತು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಕಾರ್ಯಕ್ರಮವನ್ನು ಹಮ್ಮಿಕೊಂಡು ಮಹಿಳೆಯರಿಗೆ ಪ್ರೋತ್ಸಾಹಿಸುತ್ತಾ ಬರುತ್ತಿರುವುದು ತುಂಬ ಶ್ಲಾಘನೀಯವಾಗಿದೆ. 12ನೇ ಶತಮಾನದ ಬಸವಣ್ಣ ರಾದಿಯಾಗಿ ಅಕ್ಕಮಹಾದೇವಿ, ಮುಕ್ತಾಯಕ್ಕ, ಆಯ್ದಕ್ಕಿ ಲಕ್ಕಮ್ಮ, ಇನ್ನಿತರ ಶರಣೆಯರು ಗಂಡು ಹೆಣ್ಣು ಬೇದಭಾವವಿಲ್ಲದೆ ಅನೇಕ ವಚನಗಳನ್ನು ರಚಿಸಿದ್ದಾರೆ.ಸಂಸಾರದಲ್ಲಿ ಮಹಿಳೆ ಬೆಳಿಗ್ಗೆಯಿಂದ ರಾತ್ರಿ ವರೆಗೆ ಸಂಸಾರದ ಎಲ್ಲ ಜವಾಬ್ದಾರಿಗಳನ್ನು ಹೊತ್ತುಕೊಂಡು ನಿಸ್ವಾರ್ಥವಾಗಿ ಕುಟುಂಬದ ಏಳ್ಗೆಗಾಗಿ ಹಗಲಿರಲು ದುಡಿಯುತ್ತಿದ್ದಾಳೆ ಅಷ್ಟೇ ಅಲ್ಲ ಇಂದಿನ ವಿದ್ಯಾ...