Posts

Image
  ಕೆಲ ಅರ್ಹ ಫಲಾನುಭವಿಗಳಿಗೆ ಜಮಾ ಆಗದ ವಿಧವಾವೇತನ , ಅಂಗವಿಕಲ ಮಾಸಾಶನ, ಗೃಹ ಲಕ್ಷ್ಮಿ ಹಣ                                                                    ಜಯ ಧ್ವಜ ನ್ಯೂಸ್, ರಾಯಚೂರು, ಮೇ.25-  ನಗರದ    ಕೆಲ  ಅರ್ಹ ಫಲಾನುಭವಿಗಳಿಗೆ ಸರ್ಕಾರದಿಂದ ದೊರೆಯುವ ಮಾಸಾಶನ, ಗ್ಯಾರಂಟಿ ಹಣ ಜಮಾ ಆಗದಿರುವುದರಿಂದ  ಫಲಾನುಭವಿಗಳು ಆತಂಕಕ್ಕೊಳಗಾಗಿದ್ದಾರೆ.  ಕಳೆದ ಎರೆಡು ತಿಂಗಳಿನಿಂದ ವಿಧವಾ , ಅಂಗವಿಕಲ ಮಾಸಾಶನ, ಗೃಹ ಲಕ್ಷ್ಮಿ ಹಣ, ಬಂದಿಲ್ಲವೆಂದು ದೂರಿರುವ ಫಲಾನುಭವಿಗಳು  ತಮ್ಮ ಅಳಲು ತೋಡಿಕೊಳ್ಳುತ್ತಿದ್ದಾರೆ . ತಮ್ಮ ಖಾತೆಯಿರುವ ಅಂಚೆ ಕಛೇರಿಗೆ ಅಲೆದಾಡಿ ಸುಸ್ತಾಗಿದ್ದಾರೆ.
Image
    ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ಆಗ್ರಹಿಸಿ ಶಿಕ್ಷಕ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿಯಿಂದ ಪ್ರತಿಭಟನೆ ಜಯ ಧ್ವಜ ನ್ಯೂಸ್ ,ರಾಯಚೂರು ,ಮೇ.25- ಪ್ರಾಥಮಿಕ, ಪದವೀಧರ ಮತ್ತು ಪ್ರೌಢಶಾಲಾ ಶಿಕ್ಷಕರು ಹಾಗು ದೈಹಿಕ ಶಿಕ್ಷಣ ಶಿಕ್ಷಕರು, ಚಿತ್ರಕಲ ರಂಗ ಕಲ ಮತ್ತು ಸಂಗೀತ ಶಿಕ್ಷಕರ ನೇಮಕಾತಿಗೆ ಕೂಡಲೇ ಅಧಿಸೂಚನೆ ಹೊರಡಿಸಲು ಆಗ್ರಹಿಸಿ ಇಂದು ಅಂಬೇಡ್ಕರ್ ವೃತ್ತದಲ್ಲಿ ಶಿಕ್ಷಕ ಆಕಾಂಕ್ಷಿ ಅಭ್ಯರ್ಥಿಗಳು ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು. ಹಲವಾರು ವರ್ಷಗಳಿಂದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಶಿಕ್ಷಕರ ನೇಮಕಾತಿಯನ್ನು ಮಾಡಿರುವುದಿಲ್ಲ. ಪ್ರತಿ ವರ್ಷ 15 ರಿಂದ 20 ಸಾವಿರ ಶಿಕ್ಷಕರು ನಿವೃತ್ತಿಯಾಗುತ್ತಿದ್ದಾರೆ. ಆ ಹುದ್ದೆಗಳನ್ನು ಹಾಗೆಯೇ ಖಾಲಿ ಬಿಡಲಾಗಿದೆ.  ಇಡೀ ರಾಜ್ಯದಲ್ಲಿ ಅಂದರೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ 79,694 ಹುದ್ದೆಗಳು ಖಾಲಿ ಇವೆ.  ಕಲ್ಯಾಣ ಕರ್ನಾಟಕ ಭಾಗವು ಇಡೀ ರಾಜ್ಯದಲ್ಲಿಯೇ ಶಿಕ್ಷಕರ ಗಂಭೀರ ಕೊರತೆಯನ್ನು ಎದುರಿಸುತ್ತಿದೆ. ಕಲ್ಯಾಣ ಕರ್ನಾಟಕದ ಶಾಲೆಗಳಲ್ಲಿ ಒಟ್ಟು ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸೇರಿದಂತೆ 22,595 ಹುದ್ದೆಗಳು ಖಾಲಿ ಬಿದ್ದಿವೆ. ಅದರಲ್ಲಿ 18,317 ಪ್ರಾಥಮಿಕ ಶಾಲಾ ಶಿಕ್ಷಕರು, 4278 ಪ್ರೌಢಶಾಲಾ ಶಿಕ್ಷಕರ ಅನುಮೋದಿತ ಹುದ್ದೆಗಳು ಖಾಲಿ ಬಿಡಲಾಗಿದೆ. ಈ ವಿಷಯದಲ್ಲಿ ರಾಯ...
Image
  ಸ್ಟೇಶನ್ ರಸ್ತೆಯಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ರಸ್ತೆ ಅಪಘಾತ.                                                                                            ಜಯ ಧ್ವಜ ನ್ಯೂಸ್, ರಾಯಚೂರು,ಮೇ.24-      ಅಪಘಾತ ವಲಯವೆಂದೆ ಕುಖ್ಯಾತಿ ಪಡೆದ ಸ್ಟೇಶನ್ ರಸ್ತೆಯಲ್ಲಿ ಬೆಳಿಗ್ಗೆ ಕೂದಲೆಳೆ ಅಂತರದಲ್ಲಿ ರಸ್ತೆ ಅಪಘಾತ ವೊಂದು ತಪ್ಪಿದ ಪ್ರಸಂಗ ನಡೆದು ವಾಹನ ಸವಾರರು ನಿಬ್ಬೆರಗಾದರು. ಟ್ರಾಕ್ಟರ್ ಅಡ್ಡಾದಿಡ್ಡಿ ಚಲಿಸಿದ ಪರಿಣಾಮ ರಸ್ತೆಯಲ್ಲಿ ಚಲಿಸುತ್ತಿದ್ದ ವಿಶಿಷ್ಟಚೇತನ ತ್ರಿಚಕ್ರ ವಾಹನಕ್ಕೆ ಟ್ರಾಲಿ ತಾಗಿದ ಪರಿಣಾಮ ತ್ರಿಚಕ್ರ ವಾಹನ ರಸ್ತೆ ವಿಭಜಕಕ್ಕೆ ತಳ್ಳಲ್ಪಟ್ಟಿತು ಕೂದಲೆಳೆ ಅಂತರದಲ್ಲಿ ಭಾರಿ ಅಪಘಾತ ತಪ್ಪಿದಂತಾಯಿತು .
Image
  ಬೆಂಗಳೂರು-ಮುಂಬೈ  ಸ್ಲೀಪರ್ ವಂದೇಭಾರತ ರೈಲು ಸಂಚಾರ ಖಚಿತಪಡಿಸಿದ ರೈಲ್ವೆ ಇಲಾಖೆ- ಡಾ.ಬಾಬುರಾವ್ ಜಯ ಧ್ವಜ ನ್ಯೂಸ್ ,ರಾಯಚೂರು, ಮೇ.23- ಬೆಂಗಳೂರು- ಮುಂಬೈ ಮಧ್ಯ ಹೊಸ ಸ್ಲೀಪರ್ ವಂದೇ ಭಾರತ ರೈಲು ಸಂಚರಿಸುವುದನ್ನು ರೈಲ್ವೆ ಇಲಾಖೆ ಖಚಿತ ಪಡಿಸಿದೆ ಎಂದು ರೈಲ್ವೆ ಸಲಹಾ ಸಮಿತಿ ಮಾಜಿ ಸದಸ್ಯ ಡಾ. ಬಾಬುರಾವ್ ಅವರು ತಿಳಿಸಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು ಈ ರೈಲು ಬೆಂಗಳೂರಿನಿಂದ ಹೊರಟು, ಗುಂತಕಲ್, ರಾಯಚೂರು, ಕಲಬುರಗಿ, ಸೊಲ್ಲಾಪೂರ ಮಾರ್ಗವಾಗಿ ಸಂಚರಿಸಲಿದೆ. ಟಿಕೆಟ್ ದರ ಮೂರನೇ ದರ್ಜೆ ಏಸಿಗೆ ಪ್ರತಿ ಕಿ.ಮೀಗೆ ಜಿಎಸ್ ಟಿ ಸೇರಿ ರೂ . ದ್ವಿತೀಯ ದರ್ಜೆ ಏಸಿಗೆ  3.10 ರೂ. ಪ್ರಥಮ ದರ್ಜೆ ಏಸಿಗೆ 3.80 ರೂ. ನಿಗದಿಪಡಿಸಲಾಗಿದೆ. ರೈಲು ಸಂಚಾರದ ದಿನಾಂಕವನ್ನು ಶೀಘ್ರದಲ್ಲಿ ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಉದ್ಯಾನ ಎಕ್ಸ್ ಪ್ರೆಸ್ ಬಿಟ್ಟರೆ ಬೆಂಗಳೂರಿನಿಂದ ಮುಂಬೈಗೆ ಸಂಚರಿಸಲು 30 ವರ್ಷಗಳಿಂದ ಬೇರೆ ಯಾವುದೇ ರೈಲುಗಳ ಸೌಲಭ್ಯ ಇರಲಿಲ್ಲ.  ಈಗ ಬೆಂಗಳೂರು-ಮುಂಬೈ ನ್ಯೂ ಸ್ಲೀಪರ್ ವಂದೇಭಾರತ ರೈಲು ಸಂಚಾರದಿಂದಾಗಿ ಮತ್ತೊಂದು ರೈಲಿನ ಸೌಲಭ್ಯ ದೊರೆದಂತಾಗಿದೆ. ಈ ರೈಲು ಉದ್ಯಾನ ಗಿಂತ 9 ಕ್ಕಿಂತ ಹೆಚ್ಚು ತಾಸು ಉಳಿತಾಯ ಮಾಡಲಿದೆ. ಜೊತೆಗೆ ಈ ಭಾಗದ 30 ವರ್ಷದ ಕನಸು  ನನಸಾದಂತಾಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹಾಗೂ ರಾ...
Image
  ಪತ್ರಿಕಾ ಭವನದಲ್ಲಿ ರಿಪೋರ್ಟ್ ರ್ಸ್ ಗಿಲ್ಡ್ ನಿಂದ ಪ್ರತಿಭಾ ಪುರಸ್ಕಾರ,  ಐದು ಸಾವಿರ ರೂ. ನಗದು ಬಹುಮಾನ ವಿತರಣೆ  ಜಯ ಧ್ವಜ ನ್ಯೂಸ್ , ರಾಯಚೂರು,ಮೇ.22-   ಪತ್ರಕರ್ತರ ಮಕ್ಕಳಿಗೆ ವಿದ್ಯೆಗೆ ಪ್ರೋತ್ಸಾಹ ನೀಡಲು ಪತ್ರಕರ್ತರ ಸಂಘಗಳು ಸರಕಾರದ ಮೇಲೆ ಒತ್ತಡ ಹಾಕಬೇಕು ಎಂದು ರಾಯಚೂರು ಪ್ರಭಾ ಪತ್ರಿಕೆ ಸಂಪಾದಕರಾದ ಸುಶೀಲೇಂದ್ರ ಸೋದೆಗಾರ ಸಲಹೆ ನೀಡಿದರು. ಅವರಿಂದು ನಗರದ ಪತ್ರಿಕಾ ಭವನದಲ್ಲಿ ಪತ್ರಕರ್ತರ ಮಕ್ಕಳಿಗಾಗಿ  ಎಸ್ ಎಸ್ ಎಲ್ ಸಿ ಪಿಯುಸಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪತ್ರಕರ್ತರ ಮಕ್ಕಳಿಗಾಗಿ ಉತ್ತಮ ಕೆಲಸ ಆಯೋಜಿಸಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಮಧ್ಯಮ ವರ್ಗ ದಿಂದ ಅನೇಕ ಪತ್ರಕರ್ತರು ಬಂದಿದ್ದು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶುಲ್ಕ ಕಟ್ಟುವಷ್ಟು ಆರ್ಥಿಕ ಸಾಮರ್ಥ್ಯ ಇರುವುದಿಲ್ಲ.  ಎಲ್ಲರೂ‌ ಸೇರಿ  ಮಕ್ಕಳಿಗೆ ವಿದ್ಯಾಭ್ಯಾಸಕ್ಕಾಗಿ ಅಗತ್ಯ ನೆರವು ಸಿಗುವಂತೆ ಸಂಘಟನೆಗಳು ಸರ್ಕಾರದ ಮೇಲೆ ಒತ್ತಡ ಹಾಕಬೇಕು.. ಪತ್ರಕರ್ತರ ಮಕ್ಕಳಿಗೆ ನೆರವು ಕೊಡಿಸಲು ಸಲಹೆ ಮಾಡಿದರು. ನಗದು ಬಹುಮಾನ 5ಸಾವಿರ ರೂ ನೀಡುತ್ತಿರುವುದಕ್ಕೆ ಶ್ಲಾಘಿಸಿದರು. ರಿಪೋರ್ಟರ್ಸ ಗಿಲ್ಡ್ ಸದಸ್ಯರಾದ ಕೆ.ಸತ್ಯ ನಾರಾಯಣ ಮಾತನಾಡಿ,  ಸಮಾಜದಲ್ಲಿ ಅಂಕುಡೊಂಕುಗಳಿಗೆ ಪರಿಹಾರ ಹುಡುಕುವ ಜೊತೆಗೆ ಕುಟುಂಬ ನಿರ್ವಹಣೆ ಮಾಡಲು ಎಲ್ಲರೂ ಶ್ರಮ ಪಡುತ್ತಾರೆ ಗಿಲ್ಡ್ ನ ಅನೇಕ ಕಾರ್ಯಕ್ರ...
Image
  ಕಾಡ್ಲೂರಿಗೆ ಶ್ರೀ ಪೇಜಾವರ ಶ್ರೀಗಳ ದಿಗ್ವಿಜಯ .                                                              ಜಯ ಧ್ವಜ ನ್ಯೂಸ್, ರಾಯಚೂರು,ಮೇ.21- ತಾಲೂಕಿನ ಕಾಡ್ಲೂರು ಗ್ರಾಮಕ್ಕೆ ಉಡುಪಿ ಪೇಜಾವರ ಮಠಾಧೀಶರಾದ ಶ್ರೀ ಶ್ರೀ 1008 ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದಂಗಳವರು ಬುಧುವಾರ ದಿಗ್ವಿಜಯಗೈದರು. ಗ್ರಾಮಕ್ಕೆ ಆಗಮಿಸಿದ ಅವರನ್ನು ಗ್ರಾಮಸ್ಥರು, ವಿಪ್ರ ಬಾಂಧವರು ವಾದ್ಯ ವೈಭವ ಬಾಣ ಬಿರುಸುಗಳಿಂದ ಪೂರ್ಣಕುಂಭದಿಂದ ಸ್ವಾಗತಿಸಿದರು. ಅನೇಕ ಭಕ್ತಾದಿಗಳು ತಮ್ಮ ಮನೆಗಳಲ್ಲಿ ಶ್ರೀಗಳ ಪಾದಪೂಜೆ ನೆರವೇರಿಸಿದರು. ನಂತರ ಗ್ರಾಮದ ಪುರಾತನ ಹಾಗೂ ವಿಶಿಷ್ಟ ವಾಸ್ತುಶಿಲ್ಪವುಳ್ಳ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ಸಂಸ್ಥಾನ ಪೂಜೆ ನೆರವೇರಿಸಿದರು. ಬಂದ ಭಕ್ತಾದಿಗಳಿಗೆ ಫಲ ಮಂತ್ರಾಕ್ಷತೆ ವಿತರಿಸಿದರು. ಕಲ್ಯಾಣಿ ವಾಸುದೇವಾಚಾರ್ಯ ಕುಟುಂಬಸ್ಥರು ಭಕ್ತಾದಿಗಳಿಗೆ  ಸಕಲ ವ್ಯವಸ್ಥೆ ಹಾಗೂ ತೀರ್ಥ ಪ್ರಸಾದ ವ್ಯವಸ್ಥೆ ಮಾಡಿದ್ದರು. ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.                    ಕೃಷ್ಣಾನದಿ ತೀರಕ್ಕೆ ಭೇಟಿ : ಸಾಯಿಂಕಾಲ ಗ್ರಾಮದ ಕೃಷ್ಣಾ...
Image
  ಪತ್ರಕರ್ತ ಸೋಮಣ್ಣ ಗುರಿಕಾರ ನಿಧನಕ್ಕೆ ಪತ್ರಿಕಾ ಭವನದಲ್ಲಿ ಶ್ರದ್ಧಾಂಜಲಿ ಜಯ ಧ್ವಜ ನ್ಯೂಸ್ ,ರಾಯಚೂರು, ಮೇ.19 - ಹಿರಿಯ ಪತ್ರಕರ್ತ ಸೋಮಣ್ಣ ಗುರಿಕಾರ ನಿಧನ ಹಿನ್ನೆಲೆಯಲ್ಲಿ ನಗರದ ಪತ್ರಿಕಾ ಭವನದಲ್ಲಿ ಇಂದು ಶ್ರದ್ಧಾಂಜಲಿ ಸಭೆ ನಡೆಸಲಾಯಿತು. ಮೊದಲಿಗೆ ಒಂದು ನಿಮಿಷ ಮೌನಾಚರಣೆ ಸಲ್ಲಿಸಲಾಯಿತು. ಬಳಿಕ ಸೋಮಣ್ಣ ಗುರಿಕಾರ ಅವರ ಭಾವಚಿತ್ರಕ್ಕೆ ಪತ್ರಕರ್ತರು ಪುಷ್ಪನಮನ ಸಲ್ಲಿಸಿ ಗೌರವ ಸೂಚಿಸಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಆರ್.ಗುರುನಾಥ ಮಾತನಾಡಿ, ಸೋಮಣ್ಣ ಅವರು ಹಟ್ಟಿ ಚಿನ್ನದ ಗಣಿ ಪಟ್ಟಣದಲ್ಲಿ ಕಳೆದ 20 ವರ್ಷಗಳಿಂದ ಒಂದೇ ಸಂಸ್ಥೆಯಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸಿದ್ದರು. ಅನೇಕ ಜನಪರ ವರದಿಗಳನ್ನು ಮಾಡಿ ಗಮನ ಸೆಳೆದಿದ್ದರು. ಅವರು ಕಾರ್ಮಿಕರ ಕುಟುಂಬದಿಂದ ಬಂದವರಾಗಿದ್ದು, ಪತ್ರಿಕಾ ವೃತ್ತಿಯಲ್ಲಿ ನಿಷ್ಠೆಯಿಂದ ಕೆಲಸ ಮಾಡಿದ್ದರು ಎಂದು ಸ್ಮರಿಸಿದರು. ಕಳೆದ ಐದು–ಆರು ವರ್ಷಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಈ ವೇಳೆ ಸ್ನೇಹಿತರು ಹಾಗೂ ಸಹೋದ್ಯೋಗಿಗಳು ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುವ ಮೂಲಕ ನೆರವಾಗಿದ್ದರು. ಸಿಎಂ ನಿಧಿ ಸೇರಿದಂತೆ ಹಲವರ ಸಹಾಯದಿಂದ ಚಿಕಿತ್ಸೆಗಾಗಿ ಆರ್ಥಿಕ ನೆರವು ಒದಗಿಸಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿರುವುದು ದುಃಖಕರ ಸಂಗತಿ ಎಂದರು. ಪತ್ರಕರ್ತರ ವೃತ್ತಿಯಲ್ಲಿ ಭದ್ರತೆಯ ಕೊರತೆ ಇದೆ. ಆರೋಗ್ಯ ಸಮಸ್ಯೆಗಳಿದ್ದರೂ ಅನೇಕ...