Posts

Image
ನಿಗದಿತ ಅವಧಿಯೊಳಗೆ ತೆರಿಗೆ ಪಾವತಿಸಿ, ರಿಯಾಯಿತಿ ಪಡೆಯಿರಿ-  ಆಯುಕ್ತ ಜುಬಿನ್ ಮೊಹಪಾತ್ರ ಜಯ ಧ್ವಜ ನ್ಯೂಸ್ ,ರಾಯಚೂರು, ಮಾರ್ಚ್ 31 - ಮಹಾನಗರ ಪಾಲಿಕೆಯಿಂದ 2026-27ನೇ ಸಾಲಿನ ಕಂದಾಯ ಪಾವತಿಯನ್ನು ಏಪ್ರಿಲ್ 1ರಿಂದ 30ರೊಳಗಾಗಿ ತೆರಿಗೆ ಪಾವತಿ ಮಾಡಿದಲ್ಲಿ ತೆರಿಗೆ ಪಾವತಿಯ ಒಟ್ಟು ಮೊತ್ತಕ್ಕೆ ಶೇ. 5 ರಷ್ಟು ರಿಯಾಯಿತಿಯನ್ನು ಘೋಷಿಸಲಾಗಿದ್ದು,  ನಿಗದಿತ ಅವಧಿಯೊಳಗೆ ಪಾವತಿ ಮಾಡಿ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರು ತಿಳಿಸಿದ್ದಾರೆ.  ಮೇ ಮತ್ತು ಜೂನ್ ಮಾಹೆಯಲ್ಲಿ ಯಾವುದೇ ರೀತಿಯ ರಿಯಾಯಿತಿ ನೀಡಲಾಗುವುದಿಲ್ಲ. ಮತ್ತು ಜುಲೈ 2026 ರಿಂದ ಒಟ್ಟು ಆಸ್ತಿ ತೆರಿಗೆಯ ಮೊತ್ತಕ್ಕೆ ಶೇಕಡ 2ರಷ್ಟು ಬಡ್ಡಿಯನ್ನು ವಿಧಿಸಲಾಗುವುದು. ನಿಗದಿತ ಅವಧಿಯಲ್ಲಿ ಪಾಲಿಕೆಗೆ ಪಾವತಿ ಮಾಡಬೇಕಾದ ಆಸ್ತಿಯ ಕಂದಾಯ ತೆರಿಗೆ, ನೀರಿನ ಶುಲ್ಕಗಳನ್ನು ಪಾವತಿ ಮಾಡುವುದರಿಂದ ನಗರದ ಸರ್ವತೋಮುಖ ಅಭಿವೃದ್ಧಿಯ ಕಾರ್ಯಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ. ಇದಕ್ಕಾಗಿ ಮಹಾನಗರ ಪಾಲಿಕೆಯ ವಲಯ ಕಚೇರಿ-1ರಲ್ಲಿ ಆಸ್ತಿ ತೆರಿಗೆ ಪಾವತಿ ಮಾಡಲು ಎರಡು ಕೌಂಟರ್‌ಗಳು ಮತ್ತು ವಲಯ ಕಚೇರಿ-02 ರಲ್ಲಿ ಒಂದು ಕೌಂಟರ್‌ನ್ನು ತೆರೆಯಲಾಗಿದ್ದು, ಈ ಕೌಂಟರ್‌ಗಳಲ್ಲಿ ತೆರಿಗೆ ಪಾವತಿ ಮಾಡಬಹುದಾಗಿದೆ ಎಂದು ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Image
  71 ದಿನದಲ್ಲಿ 1,079 ಪ್ರಕರಣ ವಿಲೇವಾರಿ, 2 ಲಕ್ಷ 28 ಸಾವಿರ ದಂಡ, 34 ಸಾವಿರ ಪರಿಹಾರ- ಬಿ.ವೆಂಕಟ ಸಿಂಗ್ ಜಯ ಧ್ವಜ ನ್ಯೂಸ್ ,ರಾಯಚೂರು ಮಾರ್ಚ 31- ಕರ್ನಾಟಕ ಮಾಹಿತಿ ಆಯೋಗ ಕಲಬುರಗಿ ಪೀಠದಲ್ಲಿ ಕಳೆದ ಐದು ತಿಂಗಳಲ್ಲಿ 71 ದಿನ ಕಲಾಪ ನಡೆಸಿ 1,079 ಪ್ರಕರಣಗಳು ವಿಲೇವಾರಿ ಮಾಡಿದೆ ಎಂದು ಕರ್ನಾಟಕ ಮಾಹಿ ಆಯೋಗದ ಕಲಬುರಗಿ ಪೀಠದ ರಾಜ್ಯ ಮಾಹಿತಿ ಆಯುಕ್ತರಾದ ಶ್ರೀ ಬಿ.ವೆಂಕಟ ಸಿಂಗ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, 24ನೇಯ ನವಂಬರ್-2025 ರಿಂದ ಮಾರ್ಚ ಅಂತ್ಯಕ್ಕೆ 2,520 ಪ್ರಕರಣಗಳು ವಿಚಾರಣೆಗೆ ಕೈಗೆತ್ತಿಕೊಂಡು 1,079 ಪ್ರಕರಣಗಳು ವಿಲೇವಾರಿ ಮಾಡಿರುವುದಾಗಿ ತಿಳಿಸಿದ್ದಾರೆ. ಅರ್ಜಿದಾರರಿಗೆ ಮಾಹಿತಿ ನೀಡಲು ಕಾಲ ಹರಣ ಮಾಡಿ ಸಮಯ ಮತ್ತು ಆರ್ಥಿಕ ನಷ್ಟ ಉಂಟು ಮಾಡಿದ ಕಾರಣ ನೊಂದ ಅರ್ಜಿದಾರರಿಗೆ 34 ಸಾವಿರ ಪರಿಹಾರ ನೀಡಲು ಆದೇಶ ಮಾಡಲಾಗಿದೆ ಎಂದು ಹೇಳಿದ್ದಾರೆ. ವಿಶೇಷವಾಗಿ 71 ದಿನದಲ್ಲಿ ಕಳೆದ ಒಂದು ದಶಕದಿಂದ ವಿಲೇವಾರಿಗೆ ಬಾಕಿ ಇದ್ದ ಹಳೇ ಪ್ರಕರಣಗಳನ್ನು ಆದ್ಯತೆ ಮೇಲೆ ಎಲೇ ಮಾಡಿರುವುದಾಗಿ ತಿಳಿಸಿರುವ ಅವರು ಬರುವ ದಿನಗಳಲ್ಲಿ ಹೊಸ ಪ್ರಕರಣಗಳು ಕೈಗೆತ್ತಿಕೊಂಡು ವಿಚಾರಣೆ ಶೀಘ್ರವಾಗಿ ಮುಗಿಸಿ ಅರ್ಜಿದಾರರಿಗೆ ಮಾಹಿತಿ ಕೊಡಿಸಲು ಕ್ರಮ ವಹಿಸುವುದಾಗಿ ತಿಳಿಸಿದ್ದಾರೆ.
Image
  ಭಗವಾನ್ ಮಹಾವೀರರ ಶಾಂತಿ, ಸೌಹಾರ್ಧತೆ ಸಂದೇಶಗಳು ಇಂದಿಗೂ ಪ್ರಸ್ತುತ -ಡಾ.ಹಂಪಣ್ಣ ಸಜ್ಜನ್ ಜಯ ಧ್ವಜ ನ್ಯೂಸ್ ,ರಾಯಚೂರು, ಮಾರ್ಚ್ 31- ಭಗವಾನ್ ಮಹಾವೀರರು ತಮ್ಮ ಜೀವಿತಾವಧಿಯಲ್ಲಿ ಪರಿಪಾಲನೆ ಮಾಡಿದ ಮತ್ತು ಇಡೀ ಜಗತ್ತಿಗೆ ತಿಳಿಸಿಕೊಟ್ಟ ಶಾಂತಿ, ಸೌಹಾರ್ಧತೆ ಮತ್ತು ಸಹೋದರತೆ ಸಂದೇಶಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ರಾಯಚೂರು ಸಹಾಯಕ ಆಯುಕ್ತರಾದ ಡಾ.ಹಂಪಣ್ಣ ಸಜ್ಜನ್ ಅವರು ಹೇಳಿದರು.  ಅವರಿಂದು ನಗರದ ಸುಮತಿನಾಥ ಜೈನ ಶ್ವೇತಾಂಬರ ಮೂರ್ತಿ ಪೂಜಕ ಆರಾಧನಾ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನಡೆದ ಭಗವಾನ್ ಶ್ರೀ ಮಹಾವೀರ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಅಹಿಂಸಾ ತತ್ವ ಪ್ರತಿಪಾದಿಸಿದ ಮಹಾವೀರರು ಸೇರಿದಂತೆ ಅನೇಕ ಮಹನೀಯರು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ಮತ್ತು ಜೀವನ ಸಂದೇಶ ನೀಡಿದ್ದಾರೆ. ಅಂತಹ ಮಹನೀಯರ ಜಯಂತಿಗಳು ಕೇವಲ ಆಚರಣೆಗಳಿಗೆ ಮಾತ್ರ ಸೀಮಿತವಾಗದೇ, ಅವರ ತತ್ವಾದರ್ಶಗಳು ಜೀವನದಲ್ಲಿ ಅಳವಡಿಸಿಕೊಂಡಾಗ ಮಹನೀಯರಿಗೆ ಗೌರವ ಸಲ್ಲಿಸಿದಂತಾಗುತ್ತದೆ ಎಂದು ಹೇಳಿದರು.  ಈ ವೇಳೆ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರಸ್ವಾಮಿ ಅವರು ಮಾತನಾಡಿ, ಕರುಣೆ, ಅಹಿಂಸೆ, ಸಮಾನತೆ ಸೇರಿದಂತೆ ಭಗವಾನ್ ಮಹಾವೀರರು ಬೋಧನೆ ಮಾಡಿದ ಅಂಶಗಳನ್ನು ಜೀವನದಲ್ಲಿ ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು. ನಾವು ಬದುಕಬೇಕು,...
Image
  ಕೃಷಿ ವಿ.ವಿ ಆಡಳಿತ ಭವನಕ್ಕೆ ವಾಲ್ಮೀಕಿ ಆಡಳಿತ ಭವನ ಎಂದು ನಾಮಕರಣ ಮಾಡಲು ಮನವಿ ಜಯ ಧ್ವಜ ನ್ಯೂಸ್ ,ರಾಯಚೂರು, ಮಾ.28 - ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ ಆಡಳಿತ ಭವನಕ್ಕೆ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಆಡಳಿತ ಭವನ ಎಂದು ನಾಮಕರಣ ಮಾಡಬೇಕೆಂದು ಹೈದರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘವು ಮನವಿ ಮಾಡಿದೆ. ಹೈದರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ಪದಾಧಿಕಾರಿಗಳು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಎಂ. ಹನುಮಂತಪ್ಪ ಅವರಿಗೆ ಮನವಿ ಸಲ್ಲಿಸಿ, ರಾಯಚೂರು ಕೃಷಿ ವಿಶ್ವವಿದ್ಯಾನಿಲಯದ ಕೇಂದ್ರ ಗ್ರಂಥಾಲಯಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಕೇಂದ್ರ ಗ್ರಂಥಾಲಯ ಎಂದೂ ಮತ್ತು ಪ್ರೇಕ್ಷಾಗೃಹ ಭವನಕ್ಕೆ ಜಗಜ್ಯೋತಿ ಶ್ರೀ ಬಸವಣ್ಣನವರ ಹೆಸರು ನಾಮಕರಣ ಮಾಡುವ ಮೂಲಕ ಮಹಾನ್ ದಾರ್ಶನಿಕರನ್ನು ನೆನೆಯುವ ಕಾರ್ಯ ಮಾಡುತ್ತಿರುವುದು ಅತ್ಯಂತ ಸಂತೋಷದ ವಿಷಯ ಮತ್ತು ಶ್ರೀ ಮಹರ್ಷಿ ವಾಲ್ಮೀಕಿ ನಾಯಕ ಸಮಾಜವು ತಮಗೆ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.  ಈ ಜಗತ್ತಿಗೆ ಮಹಾನ್ ಗ್ರಂಥವಾದ  ರಾಮಾಯಣವನ್ನು ನೀಡುವ ಮೂಲಕ ಒಬ್ಬ ರಾಜನಾದವನು ಯಾವ ರೀತಿ ರಾಜ್ಯಭಾರ ಮಾಡಬೇಕು ಮತ್ತು ತನ್ನ ರಾಜ್ಯದ ಪ್ರಜೆಗಳನ್ನು ಯಾವ ರೀತಿ ಸುರಕ್ಷಿತವಾಗಿ ಇಡಬೇಕು ಮತ್ತು ಅಣ್ಣ-ತಮ್ಮಂದಿರ ಸಂಬಂಧ, ತಂದೆ-ತಾಯಿಯ ಸಂಬಂಧ ಹೆಂಡತಿ-ಮಕ್ಕಳ ಸಂಬಂಧ ಮಹಿಳೆಯರಿಗೆ ಗೌರವ ಮತ್ತು ರಕ್ಷಣೆ ಯಾವ ರ...
Image
  ಕಾಡ್ಲೂರಲ್ಲಿ ಶ್ರೀ ರಾಮೋತ್ಸವ ಆಚರಣೆ:                                            ಶ್ರೀ ರಾಮದೇವರ  ಆದರ್ಶ ನಾವೆಲ್ಲರೂ ಪಾಲಿಸೋಣ-  ಶ್ರೀ ವಿದ್ಯಾಕಣ್ವ ವಿರಾಜತೀರ್ಥ  ಶ್ರೀಪಾದಂಗಳವರು .                                                                         ಜಯ ಧ್ವಜ ನ್ಯೂಸ್ ,ರಾಯಚೂರು,ಮಾ.28-           ಮರ್ಯಾದಾ ಪುರುಷೋತ್ತಮ ಶ್ರೀರಾಮಚಂದ್ರ ದೇವರ ಆದರ್ಶವನ್ನು ನಾವೆಲ್ಲರೂ ಪಾಲಿಸೋಣವೆಂದು ಕಣ್ವಮಠಾಧೀಶರಾದ ಶ್ರೀ ವಿದ್ಯಾಕಣ್ವ ವಿರಾಜ ತೀರ್ಥ ಶ್ರೀಪಾದಂಗಳವರು ನುಡಿದರು. ಅವರು ಶುಕ್ರವಾರ ರಾಮನವಮಿ ಅಂಗವಾಗಿ ತಾಲೂಕಿನ ಕಾಡ್ಲೂರು ಗ್ರಾಮದ ಶ್ರೀ ಕೃಷ್ಣಾ ನದಿ ತೀರದ ಶ್ರೀವನವಾಸಿ ರಾಮದೇವರ ಹಾಗೂ ಶ್ರೀ ಉಪೇಂದ್ರ ತೀರ್ಥ ಕರಾರ್ಚಿತ ಶ್ರೀ ಮುಖ್ಯಪ್ರಾಣದೇವರ ಸನ್ನಿಧಾನದಲ್ಲಿ ಶ್ರೀ ರಾಮೋತ್ಸವದಲ್ಲಿ ಸಾನಿಧ್ಯ ವಹಿಸಿದ್ದರು. ಬೆಳಿಗ್ಗೆ ದೇವಸ್ಥಾನಕ್ಕೆ ಆಗಮಿಸಿದ್ದ ಅವರನ್ನು ಕಾಡ್ಲೂ...
Image
  ಮಾದಿಗ ಸಮಾಜಕ್ಕೆ ಕಾಂಗ್ರೆಸ್ ಸರ್ಕಾರದಿಂದ ಎಂದಿಗೂ ನ್ಯಾಯ ಸಿಗುವುದಿಲ್ಲ- ರವೀಂದ್ರ ಜಲ್ದಾರ್ ಆಕ್ರೋಶ  ಜಯ ಧ್ವಜ ನ್ಯೂಸ್ , ರಾಯಚೂರು, ಮಾ.27- ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ನೇತೃತ್ವದಲ್ಲಿ ಒಳ ಮೀಸಲಾತಿ ಅನುಷ್ಠಾನ ಜಾರಿ ವಿಷಯದಲ್ಲಿ ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳದೆ ಇಂದು ಮಾದಿಗರಿಗೆ ಮತ್ತೊಮ್ಮೆ ಮಹಾ ದ್ರೋಹ ಮಾಡಿದ್ದಾರೆ ಮಾದಿಗರ ಸಹನೆಯನ್ನು ಪರೀಕ್ಷೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಮಾದಿಗರ ಅಕ್ರೋಶದ ಶಾಪ ತಟ್ಟೆ ತಟ್ಟುತ್ತದೆ ಎಂದ ಮಾದಿಗ ಸಮಾಜದ ರಾಜ್ಯ ಹಿರಿಯ ಮುಖಂಡ  ರವೀಂದ್ರ ಜಲ್ದಾರ್ ಅವರು ನಾಳೆ ನಡೆಯಬೇಕಾಗಿದ್ದ ವಿಶೇಷ ಸಚಿವ ಸಂಪುಟ ಸಭೆ ಮುಂದೋಡಿದ್ದು ಹಾಗೂ ಒಳ ಮೀಸಲಾತಿ ಜಾರಿಗಾಗಿ  ಷಡಕ್ಷರಮುನಿ ಸ್ವಾಮೀಜಿಗಳು ಹರಿಹರದಿಂದ ಬೆಂಗಳೂರಿನ ವಿಧಾನಸೌಧದ ವರೆಗೆ ಹಮ್ಮಿಕೊಂಡಿದ್ದ ಪಾದಯಾತ್ರೆಯ ಹೋರಾಟಕ್ಕೆ ಕಾಂಗ್ರೆಸ್ ಸರ್ಕಾರ ಅವರನ್ನು ಬಂಧಿಸಿ ಹೋರಾಟವನ್ನು ದಿಕ್ಕು ತಪ್ಪಿಸಿರುವ ಕಾಂಗ್ರೆಸ್ ಸರ್ಕಾರದ ನಡೆ ಮಾದಿಗ ವಿರೋಧ ನೀತಿಯನ್ನು ಉಗ್ರವಾಗಿ ಖಂಡಿಸುತ್ತಾ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಮಾದಿಗರಿಂದ ತಕ್ಕ ಪಾಠ ಕಲಿಸುವುದರ ಜೊತೆಗೆ ದಾವಣಗೆರೆ ಹಾಗೂ ಬಾಗಲಕೋಟೆ ಉಪಚುನಾವಣೆಗಳಲ್ಲಿ ಮಾದಿಗರ ಶಕ್ತಿ ಪ್ರದರ್ಶನ ಮಾಡಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ನಾವೆಲ್ಲರೂ ಕಂಕಣಬದ್ಧರಾಗಿ ಹೋರಾಡಬೇಕು ಎಂದು ಪತ್ರಿಕಾ ಹೇಳಿಕೆ...
Image
ತೈಲ ಸರಬರಾಜಿನಲ್ಲಿ ಅಭಾವ ವದಂತಿ :   ಪೆಟ್ರೋಲ್ ಪಂಪ್ ಗಳಲ್ಲಿ ಸಾಲುಗಟ್ಟಿದ ವಾಹನಗಳು                                                                                                                                                                                                           ಜಯ ಧ್ವಜ ನ್ಯೂಸ್, ರಾಯಚೂರು,ಮಾ.26-                       ಪಶ್ಚಿಮ‌ ಏಷ್ಯಾದಲ್ಲಿ ಯುದ್ಧ ಹಿನ್ನಲೆಯಲ್ಲಿ  ದೇಶದಲ್ಲಿ ತೈಲ ಅಭಾವ ಆತಂಕ ಶುರುವಾದಂತಾಗಿದೆ.      ...