Posts

Image
  ಹಿರಿಯ ಸಾಹಿತಿ ಬಿ.ಜಿ ಹುಲಿ ಜನ್ಮ ದಿನಾಚರಣೆ,  1 ಲಕ್ಷ 6೦ ಸಾವಿರ ರೂ ದೇಣಿಗೆ ಅರ್ಪಣೆ: ಮಟಮಾರಿಯ ಶಿವಾನಂದ ಮಠದ ಸಾಮಾಜಿಕ ಕಳಕಳಿ ಶ್ಲಾಘನೀಯ -ಡಾ.ಹಂಪಣ್ಣ ಸಜ್ಜನ ಜಯ ಧ್ವಜ ನ್ಯೂಸ್ ,ರಾಯಚೂರು,ಜು.22- ಸಮಾಜದಲ್ಲಿನ ದುರ್ಬಲ ವರ್ಗದ ಮಕ್ಕಳಿಗೆ ಜ್ಞಾನ ಹಾಗೂ ಅನ್ನ ದಾಸೋಹದ ಮೂಲಕ ಮಠ ಮಾನ್ಯಗಳು ವಿಶಿಷ್ಠ ಕೊಡುಗೆ ನೀಡುತ್ತಿವೆ ಎಂದು ರಾಯಚೂರು ಉಪ ವಿಭಾಗದ ಸಹಾಯಕ ಆಯುಕ್ತ ಡಾ.ಹಂಪಣ್ಣ ಸಜ್ಜನ ಹೇಳಿದರು. ರಾಯಚೂರಿನ ದಿ.ಸಾವಿತ್ರಿದೇವಿ.ಬಿ.ಹುಲಿ ಸ್ಮಾರಕ ಸಾಂಸ್ಕೃತಿಕ ಪ್ರತಿಷ್ಠಾನ ಹಮ್ಮಿಕೊಂಡ ಆಪ್ತ ನಿವೃತ್ತ ಸ್ನೇಹಿತರಿಗೆ ಸನ್ಮಾನ ಹಾಗೂ ನಿವೃತ್ತ ಉಪನ್ಯಾಸಕ ಬಿ.ಜಿ.ಹುಲಿ ಅವರ 8೦ನೇ ವರ್ಷದ ಜನ್ಮ ದಿನದ ಹಿನ್ನೆಲೆಯಲ್ಲಿ ತಾಲೂಕಿನ ಮಟಮಾರಿಯ ಶ್ರೀ ಶಿವಾನಂದ ಮಠದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರಾಯಚೂರು ನಗರದ ಬಸವ ಸೇವಾ ಪ್ರತಿಷ್ಠಾನದ ಬಸವ ಪೂರ್ವ ಪ್ರಾಥಮಿಕ ಶಾಲೆ ಹಾಗೂ ಶ್ರೀ ಶಿವಾನಂದ ಮಠಕ್ಕೆ ತಲಾ 80 ಸಾವಿರ ರೂ. ದೇಣಿಗೆ ಅರ್ಪಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಟಮಾರಿಯ ಶ್ರೀ ಶಿವಾನಂದ ಮಠವು 80 ಕ್ಕೂ ಹೆಚ್ಚು ಅನಾಥ ಹಾಗೂ ಬಡ ಮಕ್ಕಳಿಗೆ ಉಚಿತ ವಸತಿ, ಊಟ, ಮತ್ತು ಶಿಕ್ಷಣ ನೀಡುತ್ತಿದೆ. ಇಂತಹ ಮಕ್ಕಳ ಉನ್ನತಿಗಾಗಿ ಶ್ರಮಿಸುತ್ತಿರುವ ಮಠದ ಅಭಿವೃದ್ಧಿಗೆ ಸಹಾಯ ಸಹಕಾರ ಮಾಡುವುದಾಗಿ ತಿಳಿಸಿದ ಅವರು, ಹಿರಿಯ ಸಾಹಿತಿಗಳಾದ ಬಿ.ಜಿ.ಹುಲಿ ಅವರ ಜನ್ಮದಿನವನ್ನು ಸಮಾಜಕ್ಕೆ ಮಾದರಿಯಾಗಿ ಆಚರಿಸಿಕೊಂಡು ಶಿಕ್ಷಣ, ದಾಸೋಹ ಪರ...
Image
ಗಣೇಶ ಚತುರ್ಥಿ ಹಬ್ಬದ ಪೂರ್ವಭಾವಿ ಸಭೆ: ಪರಿಸರ ಸ್ನೇಹಿಯಾಗಿ, ಸೌಹಾರ್ದಯುತವಾಗಿ ಆಚರಿಸಿ- ಜಿಲ್ಲಾಧಿಕಾರಿ ಪೂವಿತಾ ಎಸ್ . ಜಯ ಧ್ವಜ ನ್ಯೂಸ್ ,ರಾಯಚೂರು ಜು 22 - ಜಿಲ್ಲೆಯಲ್ಲಿ ಗಣೇಶ ಚತುರ್ಥಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ, ಸೌಹಾರ್ದಯುತವಾಗಿ ಆಚರಿಸಬೇಕು ಎಂದು ರಾಯಚೂರು ಜಿಲ್ಲಾಧಿಕಾರಿಗಳಾದ ಪೂವಿತಾ ಎಸ್. ಅವರು ಹೇಳಿದರು. ಜುಲೈ 22ರ ಬುಧವಾರ ದಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಗಣೇಶ ಹಬ್ಬದ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರಿಸರ ಸ್ನೇಹಿ ಮಣ್ಣಿನ ಗಣಪತಿಗಳನ್ನು ಪ್ರತಿಷ್ಠಾಪನೆ ಮಾಡುವುದರಿಂದ ಪರಿಸರಕ್ಕೆ ಮಾರಕವಾಗುವುದನ್ನು ತಪ್ಪಿಸಬಹುದು. ಪಿ.ಒ.ಪಿ ಯಿಂದ ನಿರ್ಮಿಸಿರುವ ಹಾಗೂ ಬಣ್ಣಲೇಪಿತ ಗಣೇಶ ಮೂರ್ತಿಗಳನ್ನು ನೀರಿನಲ್ಲಿ ವಿಸರ್ಜಿಸಿದಾಗ ವಿಷಕಾರಿ ರಾಸಾಯನಿಕಗಳು ಜಲಮೂಲಗಳಾದ ಕೆರೆ, ಬಾವಿ, ಹಳ್ಳ ಸೇರಿ ನೀರು ಕಲುಷಿತಗೊಳ್ಳುತ್ತದೆ. ಇದು ಜಲಚರಗಳಿಗೆ ಹಾಗೂ ಮಾನವನಿಗೆ ಅತ್ಯಂತ ಹಾನಿಕರ ಎಂದರು. ಪಿ.ಒ.ಪಿ ಗಣಪತಿ ವಿಗ್ರಹಗಳ ಸಾಗಣೆ, ದಾಸ್ತಾನು ಹಾಗೂ ಮಾರಾಟವನ್ನು ತಡೆಗಟ್ಟಬೇಕು. ವಿಗ್ರಹಗಳ ತಯಾರಿಕಾ ಘಟಕ, ಮಾರಾಟ ಸ್ಥಳಗಳಿಗೆ ಅನಿರೀಕ್ಷಿತ ಭೇಟಿಗಳನ್ನು ನೀಡಿ, ತಪಾಸಣೆ ಮಾಡಬೇಕು ಎಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು. ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿಯ ಆದೇಶದ ಪ್ರಕಾರ ನಮ್ಮ ನೀರಿನ ಮೂಲಗಳನ್ನು ನಾವು ರಕ್ಷಿಸಿಕೊಳ್ಳಬೇಕು...
Image
ರಕ್ತದಾನದಿಂದ ಆರೋಗ್ಯಕ್ಕೆ ಯಾವುದೇ ಹಾನಿಯಿಲ್ಲ- ಡಾ.ನಂದಿತಾ                                                            ಜಯ‌ ಧ್ವಜ ನ್ಯೂಸ್ , ರಾಯಚೂರು, ಜು.22 - ಆರೋಗ್ಯವಂತರಾಗಿರುವ ಪ್ರತಿಯೊಬ್ಬರು ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡುವುದು ಬಹಳಷ್ಟು ಒಳ್ಳೆಯದು ಇದರಿಂದ ನಮ್ಮ ಆರೋಗ್ಯವು ಸರಿಯಾಗಿರುವಂತೆ ಕಾಪಾಡಿಕೊಳ್ಳಲು ಅನುಕೂಲವಾಗುತ್ತದೆ ರಕ್ತದಾನದಿಂದ ಆರೋಗ್ಯಕ್ಕೆ ಯಾವುದೇ ಹಾನಿಯಲ್ಲವೆಂದು   ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳಾದ ಡಾ.ನಂದಿತಾ ಹೇಳಿದರು. ಅವರು ನಗರದ ಜಹಿರಾಬಾದ್ ಬಡಾವಣೆಯಲ್ಲಿ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು. ರಕ್ತದಾನ ಮಹಾದಾನವಾಗಿದ್ದು ತುರ್ತು ಸಂದರ್ಭದಲ್ಲಿ ಮತ್ತೊಬ್ಬರಿಗೆ ಜೀವದಾನ ನೀಡುತ್ತದೆ ಎಂದರು.  ರಿಮ್ಸ್  ವೈದ್ಯಾಧಿಕಾರಿಗಳಾದ  ಅಹಮದ್  ಹುಸೇನ್ ಮಾತನಾಡಿ ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡುವದರಿಂದ ಕ್ಯಾನ್ಸರ್ ರೋಗವನ್ನು ಸಹ ನಾವು ತಡೆಗಟ್ಟಬಹುದಾಗಿದೆ ಎಂದು ತಿಳಿಸಿದರು. ಪ್ರತಿಯೊಬ್ಬರ ದೇಹದಲ್ಲಿ ರಕ್ತವು ಯಾವುದೇ ರೀತಿಯಿಂದ ಕೃತಕವಾಗಿ ತಯಾರಾಗುವುದಿಲ್ಲ ಅದನ್ನು ಒಬ್ಬ ವ್ಯಕ್ತಿಯಿಂದ ಒಬ್ಬ ವ್ಯಕ್ತಿಗೆ ಮಾತ್ರ ಪಡೆದು...
Image
ಬೀದಿ ನಾಯಿಗಳ ದಾಳಿ ತಡೆಗೆ ಜಿಲ್ಲಾಡಳಿತದ ಕಟ್ಟುನಿಟ್ಟಿನ ಕ್ರಮ-ಜಿಲ್ಲಾಧಿಕಾರಿ ಪೂವಿತಾ ಎಸ್. ಜಯ ಧ್ವಜ ನ್ಯೂಸ್ ,ರಾಯಚೂರು. ಜು. 21- ಬೀದಿ ನಾಯಿಗಳಿಂದ ಮಕ್ಕಳು ಹಾಗೂ ಸಾರ್ವಜನಿಕರ ಮೇಲೆ ಜಿಲ್ಲೆಯ ಅಲ್ಲಲ್ಲಿ ನಡೆಯುತ್ತಿರುವ ದಾಳಿ ಪ್ರಕರಣಗಳನ್ನು ತಡೆಗಟ್ಟುವ ಉದ್ದೇಶದಿಂದ ಇಂದು ಸಭೆ ಕರೆಯಲಾಗಿದ್ದು ಈ ಕುರಿತು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಇಂತಹ ಪ್ರಕರಣಗಳು ಜಿಲ್ಲೆಯಲ್ಲಿ ಮರು ಕಳಿಸದಂತೆ ಮುನ್ನೆಚ್ಚರಿಕೆ ವಹಿಸಬೇಕೆಂದು ಜಿಲ್ಲಾಧಿಕಾರಿ ಪೂವಿತಾ ಎಸ್. ಹೇಳಿದರು. ಅವರು ಮಂಗಳವಾರ ಜಿಲ್ಲಾಧಿಕಾರಿ ಕಛೇರಿ ಸಭಾಂಗಣದಲ್ಲಿ ಬೀದಿ ನಾಯಿಗಳ ಹಾವಳಿ ತಡೆಗಟ್ಟುವಲ್ಲಿ ಸಮಿತಿಯ ಕಾರ್ಯ ಚಟುವಟಿಕೆಗಳ ಕುರಿತು ಚರ್ಚಿಸಲು ವಿವಿಧ ಇಲಾಖೆಯ ಅಧಿಕಾರಿಗಳಿಗೆ ಕರೆದ ಸಭೆಯಲ್ಲಿ ಅಧ್ಯಕ್ಷತೆವಹಿಸಿ  ಮಾತನಾಡಿದರು. ಈ ಹಿಂದೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಬೀದಿ ನಾಯಿಗಳ ದಾಳಿಯಿಂದ ಮಕ್ಕಳು ಗಾಯಗೊಂಡಿರುವ ಹಾಗೂ ಕೆಲವು ದುರ್ಘಟನೆಗಳಲ್ಲಿ ಮಕ್ಕಳ ಸಾವು ಸಂಭವಿಸಿರುವ ಹಿನ್ನೆಲೆಯಲ್ಲಿ, ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ  ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಬೀದಿ ನಾಯಿಗಳಿಗೆ ಆಹಾರ ಹಾಕುವವರು ಹಾಗೂ ಮಟನ್ ಅಂಗಡಿಗಳ ತ್ಯಾಜ್ಯವನ್ನು ಸಾರ್ವಜನಿಕ ಸ್ಥಳಗಳಲ್ಲಿ ಅಥವಾ ನಿಯಮ ಬಾಹಿರವಾಗಿ ವಿಲೇವಾರಿ ಮಾಡುವವರ ವಿರುದ್ಧ ದಂಡ ವಿಧಿಸಲು ಕ್ರಮ ಕೈಗೊಳ್ಳಲ...
Image
  ಎಸ್ ಆರ್ ಪಿ ಎಸ್  ಪದವಿ ಪೂರ್ವ ಕಾಲೇಜಿನಲ್ಲಿ ಚೆಸ್ ಪಂದ್ಯಾವಳಿ ವಿಜೇತರಿಗೆ ಬಹುಮಾನ ವಿತರಣೆ  ಜಯ‌ಧ್ವಜ ನ್ಯೂಸ್  ,ರಾಯಚೂರು,ಜು.21- ನಗರದ ತಾರಾನಾಥ್ ಶಿಕ್ಷಣ ಸಂಸ್ಥೆಯ ಎಸ್ ಆರ್ ಪಿ ಎಸ್ ಪದವಿ ಪೂರ್ವ ಕಾಲೇಜಿನಲ್ಲಿ ರಾಯಚೂರು ನಗರದ ವಿವಿಧ ಶಾಲೆಗಳ 12 ವರ್ಷದೊಳಗಿನ, 14 ವರ್ಷದೊಳಗಿನ ಹಾಗೂ 16 ವರ್ಷದೊಳಗಿನ ವಿದ್ಯಾರ್ಥಿಗಳಿಗಾಗಿ ಚೆಸ್ ಪಂದ್ಯಾವಳಿ -2026 ಆಯೋಜಿಸಲಾಗಿತ್ತು. 12ವರ್ಷದೊಳಗಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಸ್ಪರ್ಧೆಯಲ್ಲಿ  ಎಸ್ ಆರ್ ಸುಖಾಣಿ ಸಿಬಿಎಸ್‌ಸಿ ಶಾಲೆಯ ವಿದ್ಯಾರ್ಥಿ ಕು.ರೋನಿತ್ ಪ್ರಥಮ ಸ್ಥಾನವನ್ನು ಪಡೆದರೆ, ಐಡಿಪಿಎಸ್ ಶಾಲೆಯ ವಿದ್ಯಾರ್ಥಿ ಕು. ಸಮ್ಯಕ್ ಜೈನ ದ್ವೀತಿಯ ಸ್ಥಾನ ಪಡೆದರೆ, ರೆಸ್ ಕಾನ್ಸೆಪ್ಟ್ ಶಾಲೆಯ ವಿದ್ಯಾರ್ಥಿ ಕು.ಅನಂತ ಜವಾರ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. 14 ವರ್ಷದೊಳಗಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಸ್ಪರ್ಧೆಯಲ್ಲಿ  ಐಡಿಪಿಎಸ್ ಶಾಲೆಯ ವಿದ್ಯಾರ್ಥಿ ಕು.ಹರ್ಷಿತ ಪ್ರಥಮ ಸ್ಥಾನವನ್ನು ಪಡೆದರೆ,  ರೆಸ್ ಚಾಣಾಕ್ಶ ಜಿಯೋ ನೆಕ್ಷ್ಟ  ಶಾಲೆಯ ವಿದ್ಯಾರ್ಥಿ ಕು. ಸಂಜಯ ಮೇಟಿ ದ್ವೀತಿಯ ಸ್ಥಾನ ಪಡೆದರೆ, ವಿದ್ಯಾಭಾರತಿ ಸಿಬಿಎಸ್‌ಸಿ  ಶಾಲೆಯ ವಿದ್ಯಾರ್ಥಿ ಕು.ಅಖಿಲೇಶ ತೃತೀಯ ಸ್ಥಾನವನ್ನು ಪಡೆದಿರುತ್ತಾರೆ. 16 ವರ್ಷದೊಳಗಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ಸ್ಪರ್ಧೆಯಲ್ಲಿ ಶಾರದಾ ವಿದ್ಯಾನಿಕೇತನ ಶಾಲೆಯ ವಿದ್ಯಾರ್ಥಿ ಕು.ಮ...
Image
ಕೆ ಎಸ್ ಸಿ ಎ: ಕಲಬುರ್ಗಿಯಲ್ಲಿ ಜು.23ರಂದು ಕ್ರಿಕೆಟ್ ಆಟಗಾರರ ಆಯ್ಕೆ ಪರೀಕ್ಷೆ  .                                                                ಜಯ ಧ್ವಜ ನ್ಯೂಸ್  , ರಾಯಚೂರು , ಜು.21-  ಕೆ ಎಸ್ ಸಿ ಎ ೨೩ ವರ್ಷದೊಳಗಿನ ಬಾಲಕರ ಮುಕ್ತ ಆಯ್ಕೆ ಪರೀಕ್ಷೆಗಳು ೨೦೨೬–೨೭ನೇ ಸಾಲಿನ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ  ರಾಯಚೂರು ವಲಯದ ೨೩ ವರ್ಷದೊಳಗಿನ ಬಾಲಕರ ಮುಕ್ತ ಆಯ್ಕೆ ಪರೀಕ್ಷೆಗಳು ಕೆಳಕಂಡ ವೇಳಾಪಟ್ಟಿಯಂತೆ ಕಲಬುರಗಿಯ ಕೆಬಿಎನ್ ಮೈದಾನದಲ್ಲಿ ನಡೆಯಲಿವೆ.  ದಿನಾಂಕ: ೨೩-೦೭-೨೦೨೬, ವರದಿ ಸಮಯ: ಬೆಳಿಗ್ಗೆ ೮:೦೦ ಗಂಟೆ ಅರ್ಹತೆ ಹಾಗೂ ಷರತ್ತುಗಳು  ೧. ಆಯ್ಕೆ ಪರೀಕ್ಷೆಗಳು ಅರ್ಹ ೨೩ ವರ್ಷದೊಳಗಿನ ಎಲ್ಲಾ ಆಟಗಾರರಿಗೆ ಮುಕ್ತವಾಗಿವೆ.  ೨. ೦೧-೦೯-೨೦೦೭ ಅಥವಾ ನಂತರ ಜನಿಸಿದ ಪಟುಗಳ ಆಯ್ಕೆ ಪರೀಕ್ಷೆಯಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ ಬೆಂಗಳೂರು ನೀಡಿರುವ ನಿರ್ದೇಶನದಂತೆ ೨೩ ಇಂಟರ್ ಝೋನಲ್ ಟೂರ್ನಮೆಂಟ್‌ಗಳು ಒಂದೇ ಸಮಯದಲ್ಲಿ ಬೆಂಗಳೂರಿನಲ್ಲಿ ನಡೆಯಲಿವೆ.  ೩. ೦೧-೦೯-೨೦೦೩ ಅಥವಾ ನಂತರ ಜನಿಸಿದ ಆಟಗಾರರು ಮಾತ್ರ ಆಯ್ಕೆಗೆ ಅರ್ಹರು.  ೪. ವರದಿ ಮಾಡುವ ಸಮಯದಲ್ಲಿ ...
Image
  ಕರ್ನಾಟಕಕ್ಕೆ ಅಮೃತ ಭಾರತ ಎಕ್ಸ್ ಪ್ರೆಸ್ ಟ್ರೈನ್ ಅಗತ್ಯತೆ ಇದೆ- ಡಾ. ಬಾಬುರಾವ್  ಜಯ ಧ್ವಜ ನ್ಯೂಸ್ ,ರಾಯಚೂರು,ಜು.21- ಕರ್ನಾಟಕ ರಾಜ್ಯಕ್ಕೆ ಅಮೃತ ಭಾರತ ಎಕ್ಸ ಪ್ರೆಸ್ ಟ್ರೈನ್ ಅಗತ್ಯತೆ ಇದ್ದು ರೈಲ್ವೆ ಸಚಿವ ಅಶ್ವಿನ್ ವೈಷ್ಣವಿ ಹಾಗೂ ರಾಜ್ಯ ಖಾತೆ ರೈಲ್ವೆ ಸಚಿವ ವಿ. ಸೋಮಣ್ಣ ಅವರುಗಳು ಈ ಬೇಡಿಕೆಯನ್ನು ಪರಿಗಣಿಸಬೇಕೆಂದು ಕರ್ನಾಟಕದ ಜನತೆಯ ಪರವಾಗಿ  ರೈಲ್ವೆ ಸಲಹಾ ಸಮಿತಿ ಮಾಜಿ ಸದಸ್ಯ ಡಾ. ಬಾಬುರಾವ್ ಮನವಿ ಮಾಡಿದ್ದಾರೆ. ರಾಜ್ಯದ ದಕ್ಷಿಣ ತುದಿ  ಚಾಮರಾಜನಗರದಿಂದ ಉತ್ತರದ ತುತ್ತತುದಿ ಬೀದರ್ ವರೆಗೆ ಈ ಅಮೃತ ಭಾರತ ಎಕ್ಸ್ ಪ್ರೆಸ್ ಟ್ರೈನ್ ಸಂಚರಿಸುವಂತೆ ಮಾರ್ಗಸೂಚಿ ಅನುಸರಿಸಬೇಕು. ಹೀಗಾದಲ್ಲಿ ಚಾಮರಾಜನಗರ, ಮೈಸೂರು, ಮಂಡ್ಯ,ಬೆಂಗಳೂರು, ಯಲಹಂಕ, ಹಿಂದೂಪುರ, ಧರ್ಮಾವರಂ, ಗುಂತಕಲ್, ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ ಗಳಿಗೆ ಒಂದೇ ಟ್ರೈನ್ ನಿಂದ ಸಂಪರ್ಕ ದೊರೆತಂತಾಗುತ್ತದೆ. ಈ ರೈಲು ಸೌಲಭ್ಯದಿಂದ ವಿದ್ಯಾರ್ಥಿಗಳಿಗೆ, ಕುಟುಂಬಗಳಿಗೆ, ಪ್ರವಾಸಿಗರಿಗೆ ಉದ್ಯೋಗಿಗಳಿಗೆ ನೇರ ಪ್ರಯಾಣದ ಅವಕಾಶ ದೊರೆತಂತಾಗುತ್ತದೆ. ಶಿಕ್ಷಣ, ಉದ್ಯೋಗ, ವ್ಯಾಪಾರ ಹಾಗೂ ಪ್ರವಾಸೋದ್ಯಮಕ್ಕೆ ಉತ್ತೇಜನ ದೊರೆತಂತಾಗುತ್ತದೆ. ಇದಲ್ಲದೆ ಈ ರೈಲು ಸಂಚಾರದಿಂದ ದಕ್ಷಿಣ ಮೈಸೂರು ಭಾಗ ಹಾಗೂ ಕಲ್ಯಾಣ ಕರ್ನಾಟಕದ ಭಾಗಗಳೆರಡಕ್ಕೂ ಅನುಕೂಲವಾದಂತಾಗುತ್ತದೆ. ಹಲವು ರೈಲುಗಳನ್ನು ಬದಲಾಯಿಸಿ ಪ್ರಯಾಣಿಸುವ ಪ್ರಯಾಸಕ್ಕೂ ಬ್ರೇಕ್ ಬೀಳಲಿದ...