Posts

Image
  ಕೇಂದ್ರ ಸರಕಾರದ ಬಲವಂತದ ಭೂಸ್ವಾಧೀನ ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಕಾರ್ಮಿಕ ಸಂಘಟನೆಗಳ ಜಂಟಿ ನೇತೃತ್ವದಲ್ಲಿ  ‘ಜೈಲ್ ಭರೋ’ ಚಳುವಳಿ ಪ್ರತಿಭಟನೆ ಜಯ ಧ್ವಜ ನ್ಯೂಸ್ , ರಾಯಚೂರು,ಆ.10- ಕೇಂದ್ರ ಸರಕಾರದ ಬಲವಂತದ ಭೂಸ್ವಾಧೀನ ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಸಂಯುಕ್ತ ಕಿಸಾನ್ ಮೋರ್ಚಾ ಹಾಗೂ ಕಾರ್ಮಿಕ ಸಂಘಟನೆಗಳ ಜಂಟಿ ನೇತೃತ್ವದಲ್ಲಿ ದೇಶವ್ಯಾಪಿ ನಡೆಯುತ್ತಿರುವ ‘ಜೈಲ್ ಭರೋ’ ಚಳುವಳಿಯ ಭಾಗವಾಗಿ ನಗರದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ರೈತರು, ಕಾರ್ಮಿಕರು ಹಾಗೂ ಮಹಿಳೆಯರು ಪಾಲ್ಗೊಂಡಿದ್ದರು, ಜೈಲ್ ಗೆ ಬೃಹತ್ ಮೆರವಣೆಗೆ ತೆರಳುತ್ತಿರುವ ವೇಳೆ ಹಲವು ರೈತ ಮುಖಂಡರು ಹಾಗೂ ಮಹಿಳಾ ಹೋರಾಟಗಾರರನ್ನು ಪೊಲೀಸರು ಬಂಧಿಸಿದರು. ಈ ಪ್ರತಿಭಟನೆಯಲ್ಲಿ  ಗಿರಿಯಪ್ಪ ಪೂಜಾರಿ, ನರಸಣ್ಣ ನಾಯಕ, ಶಬ್ಬೀರ, ರಮೇಶ ವೀರಾಪೂರು,ರುದ್ರಪ್ಪ ನಾಯಕ, ವರಲಕ್ಷೀ, ಎಚ್. ಪದ್ಮಾ, ಕೆ.ಜಿ. ವಿರೇಶ, ರಮಾದೇವಿ, ಶರಣಬಸವ, ಸಂಗಯ್ಯ ಸ್ವಾಮಿ, ರಂಗನಾಥ, ಸಾಜೀದ್, ಮಹೇಶ ಚಿಕಲಪರವಿ, ಮಲ್ಲನಗೌಡ, ವೀರೇಶ ಬಿ.ಎನ್. ಬಸಲಿಂಗಪ್ಪ ನಗನೂರು, ಬಸತರಾಯ ಗೌಡ, ಸೇರಿದಂತೆ ಅನೇಕರು ಬಂಧನಕ್ಕೊಳಗಾದರು.
Image
  ಆ.28 ರಂದು ಗಬ್ಬೂರಲ್ಲಿ ಮಹಾತಪಸ್ವಿ ಶ್ರೀ ಕುಮಾರಸ್ವಾಮಿ ಪ್ರಶಸ್ತಿ ಪ್ರದಾನ ಸಮಾರಂಭ:                    ಪ್ರೊ.ಮಲ್ಲೇಪುರಂ.ಜಿ ವೆಂಕಟೇಶ ,ರಘುನಾಥರೆಡ್ಡಿ ಮನ್ಸಲಾಪೂರು ,ಖಾಸೀಮ್ ಮಲ್ಲಿಗೆ ಮಡುವು ರವರಿಗೆ ಲಭಿಸಿದ ಪ್ರಶಸ್ತಿ -ಬಸವರಾಜ ಸಿನ್ನೂರ  ಜಯ ಧ್ವಜ ನ್ಯೂಸ್ ,ರಾಯಚೂರು, ಆ.10- ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ಗ್ರಾಮದ ಮಹಾಶೈವ ಧರ್ಮಪೀಠವು ಕೊಡಮಾಡುವ" ಮಹಾತಪಸ್ವಿ ಶ್ರೀ ಕುಮಾರಸ್ವಾಮಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆ.28ರಂದು ಆಯೋಜಿಸಲಾಗಿದೆ ಎಂದು  ಮಹಾಶೈವ ಧರ್ಮಪೀಠದ ಸಾಂಸ್ಕೃತಿಕ ಸಮಿತಿಯ ಸದಸ್ಯ ಬಸವರಾಜ ಸಿನ್ನೂರ ಹೇಳಿದರು.                          ಅವರಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸಮಾಜಸೇವೆ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿಗಳನ್ನು ಆಯ್ಕೆ ಮಾಡಲಾಗಿದೆ ಎಂದರು.      ಮಹಾಶೈವ ಧರ್ಮಪೀಠದ ಪೀಠಾಧ್ಯಕ್ಷರಾದ ಶ್ರೀ ಮುಕ್ಕಣ್ಣ ಕರಿಗಾರ ಅವರು ಅವರ ಅಧ್ಯಾತ್ಮಿಕ ಗುರುಗಳಾದ ಧಾರವಾಡದ ತಪೋವನದ ಮಹಾತಪಸ್ವಿ ಶ್ರೀ ಕುಮಾರಸ್ವಾಮಿಗಳವರ ಹೆಸರಿನಲ್ಲಿ ಕುಮಾರಸ್ವಾಮಿಗಳವರ ಹುಟ್ಟುಹಬ್ಬವಾದ ನೂಲಹುಣ್ಣಿಮೆಯಂದು ಸಾಹಿತ್ಯ, ಪತ್ರಿಕೋದ್ಯಮ ಮತ್ತು ಸಮಾಜಸೇವಾ ಕ್ಷೇತ್ರದಲ್ಲಿ ಗಣನ...
Image
ವಾರ್ಡ್ ನಂ. 5ರಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ವಸಂತ ಕುಮಾರ್ ಭೂಮಿಪೂಜೆ.                                ಜಯ ಧ್ವಜ ನ್ಯೂಸ್ ,  ರಾಯಚೂರು, ಆ.10- ನಗರದ ವಾರ್ಡ್ ನಂ.5ರ ಡ್ಯಾಡಿ ಕಾಲೋನಿ ಪ್ರದೇಶದ ನೀರಿನ ಟ್ಯಾಂಕ್ ಹತ್ತಿರ ಚರಂಡಿ, ಫೇವರ್ ಬ್ಲಾಕ್ ಮೂಲಸೌಕರ್ಯ ನಿರ್ಮಾಣಕ್ಕೆ ಕಲ್ಯಾಣ‌ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ 35 ಲಕ್ಷ ರೂ ಅನುದಾನದಲ್ಲಿ  ಭೂಮಿ ಪೂಜೆಯನ್ನು ವಿಧಾನ ಪರಿಷತ್ ಸದಸ್ಯರಾದ ಎ.ವಸಂತಕುಮಾರ ಅವರು ನೇರವೇರಿಸಿದರು.           ನಂತರ ಮಾತನಾಡಿದ  ಅವರು ರಾಯಚೂರು ನಗರವು ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಮೂಲಭೂತ ಸೌಕರ್ಯ ಒದಗಿಸುವದು ನಮ್ಮ ಕರ್ತವ್ಯವಾಗಿದ್ದು, ಹಂತ ಹಂತವಾಗಿ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದರು. ಈ ಪ್ರದೇಶದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿ ತೆಗೆದುಕೊಳ್ಳುವದು ಅವಶ್ಯಕತೆ ಇದೆ, ಆ ಹಿನ್ನಲೆಯಲ್ಲಿ ನಾನು ಇನ್ನೂ ಹೆಚ್ಚಿನ ಕಾಮಗಾರಿ ಕೈಗೆತ್ತಿಕೊಳ್ಳಲು ಅನುದಾನ ಒದಗಿಸಲು ಪ್ರಯತ್ನಿಸಲಾಗುವದು ಎಂದು ಹೇಳಿದರು. ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಪಾಟೀಲ್‌ ಯದ್ದಲದಿನ್ನಿ, ಅಬ್ದುಲ್ ಕರೀಂ, ಬಸವರಾಜ ದರೂರು, ರಾಮಕೃಷ್ಣ ನಾಯಕ, ಡಿ.ಕೆ.ಮುರಳಿ ಯಾದವ, ಜೆ.ಸತ್ಯಾನಾಥ, ಕೆ.ಅಸ್ಲಂ ಪಾಶಾ, ಡ...
Image
  ಕೊಲೆ ಪ್ರಕರಣದಲ್ಲಿ ದುರುದ್ದೇಶದಿಂದ ಹಿರಿಯ ಸಂಪಾದಕ ಭೀಮರಾಯ ಹದ್ದಿನಾಳ ಅವರನ್ನು ಸಿಲುಕಿಸುವ ಪ್ರಯತ್ನ, ಕಾಣದ ಶಕ್ತಿಗಳ ಕೈವಾಡ ಆರೋಪ:                        ದೋಷಾರೋಪಣೆ ಪಟ್ಟಿಯಿಂದ ಕೈ ಬಿಡದಿದ್ದರೆ ಉಗ್ರ ಹೋರಾಟ-ರಘುವೀರ ನಾಯಕ.                                  ಜಯ ಧ್ವಜ ನ್ಯೂಸ್ ,ರಾಯಚೂರು,ಆ.10- ದೇವದುರ್ಗ ತಾಲೂಕಿನ ಸುಂಕೇಶ್ವರಹಾಳ ಗ್ರಾಮದಲ್ಲಿ ನಡೆದಿರುವ ಕೊಲೆ ಪ್ರಕರಣದಲ್ಲಿ ನಿರಪರಾಧಿಯಾದ ಹಾಗೂ ಒಬ್ಬ ಹಿರಿಯ ಪ್ರಾಮಾಣಿಕ ಪತ್ರಕರ್ತ ಮತ್ತು ಸಂಪಾದಕ ಭೀಮರಾಯ ಹದ್ದಿನಾಳ ಅವರನ್ನು ಸಿಲುಕಿಸುವ ಪ್ರಯತ್ನ ನಡೆದಿದೆ ಎಂದು ಹೈದ್ರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘ ವಿಭಾಗೀಯ ಕಾರ್ಯದರ್ಶಿ ಎನ್. ರಘುವೀರ್ ನಾಯಕ ದೂರಿದರು. ಅವರಿಂದು  ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಪ್ರಕರಣಕ್ಕೆ ಭೀಮರಾಯ ಸಂಬಂಧವೇ ಇಲ್ಲದಿದ್ದರೂ ಕೊನೆಯ ಮತ್ತು 8 ನೇ ಆರೋಪಿಯನ್ನಾಗಿ ಮಾಡಲಾಗಿದೆ. ಘಟನೆಗೆ ಸಂಬಂಧಿಸಿ ಎರಡು ಬಾರಿ ಎಫ್ ಐ ಆರ್ ತಿದ್ದುಪಡಿ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆಗೆ ಒಂದು ಎಫ್ ಐ ಆರ್ ಮತ್ತು ಸಂಜೆ 6 ಗಂಟೆಗೆ ಒಂದು ಎಫ್ ಐ ಆರ್ ಆಗಿದೆ. 3 ಗಂಟೆಗೆ ಮಾಡಲಾದ ಎಫ್ ಐ ಆರ್ ನಲ್ಲಿ ಅವರ ಹೆಸರು ಇರಲಿಲ್ಲ. ಆದರೆ, ಸಂಜೆ 6 ಗಂಟ...
Image
ಮಂತ್ರಾಲಯದಲ್ಲಿ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ 14ನೇ ಚಾತುರ್ಮಾಸ್ಯ ದೀಕ್ಷೆ ಆರಂಭ ಜಯ ಧ್ವಜ ನ್ಯೂಸ್ , ರಾಯಚೂರು, ಆ.10 - ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಪೀಠಾಧಿಪತಿಗಳಾದ ಪರಮಪೂಜ್ಯ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಮಂತ್ರಾಲಯದಲ್ಲಿ ತಮ್ಮ 14ನೇ ಚಾತುರ್ಮಾಸ್ಯ ದೀಕ್ಷೆಯನ್ನು ಭಕ್ತಿಪೂರ್ವಕವಾಗಿ ಆರಂಭಿಸಿದರು. ಈ ಪವಿತ್ರ ಸಂದರ್ಭದಲ್ಲಿ ಶ್ರೀಪಾದಂಗಳವರು ಸಾಂಪ್ರದಾಯಿಕ ಚಾತುರ್ಮಾಸ್ಯ ದೀಕ್ಷೆಯ ವಿಧಿ-ವಿಧಾನಗಳನ್ನು ನೆರವೇರಿಸಿ, ಶ್ರೀ ರಾಘವೇಂದ್ರ ಸ್ವಾಮಿಗಳವರು, ಶ್ರೀ ವಾದೀಂದ್ರ ತೀರ್ಥರು ಹಾಗೂ ಮಠದಲ್ಲಿರುವ ಎಲ್ಲಾ ಬೃಂದಾವನಗಳಿಗೆ ವಿಶೇಷ ಪೂಜೆ ಸಲ್ಲಿಸಿದರು. ಚಾತುರ್ಮಾಸ್ಯ ಅವಧಿಯಲ್ಲಿ ಮಂತ್ರಾಲಯದ ಶ್ರೀಮಠದಲ್ಲಿ ವಿವಿಧ ಧಾರ್ಮಿಕ, ಆಧ್ಯಾತ್ಮಿಕ, ಸಾಂಸ್ಕೃತಿಕ ಹಾಗೂ ಸಾಮಾಜಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮಗಳು ಭಕ್ತರಲ್ಲಿ ಧಾರ್ಮಿಕ ಭಾವನೆ, ಆಧ್ಯಾತ್ಮಿಕ ಚಿಂತನೆ ಹಾಗೂ ಸೇವಾ ಮನೋಭಾವವನ್ನು ಹೆಚ್ಚಿಸುವುದರ ಜೊತೆಗೆ ಮಂತ್ರಾಲಯದ ಭಕ್ತಿಮಯ ವಾತಾವರಣವನ್ನು ಮತ್ತಷ್ಟು ಶ್ರೀಮಂತಗೊಳಿಸಲಿವೆ. ಈ ಸಂದರ್ಭದಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಭಕ್ತರನ್ನು ಉದ್ದೇಶಿಸಿ ಅನುಗ್ರಹ ಸಂದೇಶ ನೀಡಿದರು. ಭಕ್ತರಿಗೆ ಆಶೀರ್ವಚನ ನೀಡಿ, ಚಾತುರ್ಮಾಸ್ಯದ ಮಹತ್ವ ಹಾಗೂ ಆಧ್ಯಾತ್ಮಿಕ ಆಚರಣೆಗಳ ಕುರಿತು ಸಂದೇಶ ನೀಡಿದರು. ಚಾತುರ್ಮಾಸ್ಯ ದೀಕ್ಷೆಯ ಹಿನ...
Image
ಆ.11ರಂದು ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆ ಜಯ ಧ್ವಜ ನ್ಯೂಸ್ ,ರಾಯಚೂರು, ಆ.8- ತುಂಗಭದ್ರಾ ಯೋಜನೆಯ ಮತ್ತು ವಿಜಯನಗರ ಕಾಲುವೆಗಳ 126ನೇ ನೀರಾವರಿ ಸಲಹಾ ಸಮಿತಿ ಸಭೆಯನ್ನು ಆಗಸ್ಟ್ 11ರ ಮಧ್ಯಾಹ್ನ 3.30ಗಂಟೆಗೆ ಕಾಡಾ ಟಿ.ಬಿ.ಪಿ. ಮುನಿರಾಬಾದ್ ಸಭಾಂಗಣದಲ್ಲಿ ನಿಗಧಿಪಡಿಸಲಾಗಿದೆ. ಸಭೆಯಲ್ಲಿ ಮುಂಗಾರು ಹಂಗಾಮಿಗೆ ಲಭ್ಯವಾಗುವ ನೀರನ್ನು ಒದಗಿಸುವ ಕುರಿತು ನಿರ್ಣಯಿಸಲು ಕರ್ನಾಟಕ ಸರ್ಕಾರದ ಸಚಿವರು ಹಾಗೂ ನೀರಾವರಿ ಸಲಹಾ ಸಮಿತಿಯ ಸಭಾಧ್ಯಕ್ಷರಾದ ಶಿವರಾಜ ಎಸ್. ತಂಗಡಗಿ ಇವರ ಉಪಸ್ಥಿತಿಯಲ್ಲಿ ಸಭೆ ಜರುಗಲಿದ್ದು, ಈ ಭಾಗದ ಸಚಿವರುಗಳು, ಲೋಕಸಭಾ ಸದಸ್ಯರುಗಳು, ವಿಧಾನಸಭಾ ಸದಸ್ಯರುಗಳು, ವಿಧಾನ ಪರಿಷತ್ ಸದಸ್ಯರುಗಳು, ರಾಜ್ಯಸಭಾ ಸದಸ್ಯರುಗಳು ಹಾಗೂ ನೀರಾವರಿ ಸಲಹಾ ಸಮಿತಿಯ ಸದಸ್ಯರುಗಳು ಈ ಸಭೆಗೆ ಆಗಮಿಸಿ ತಮ್ಮ ಸಲಹೆ ಸೂಚನೆಗಳನ್ನು ನೀಡುವಂತೆ ತುಂಗಭದ್ರಾ ಯೋಜನೆ ಮತ್ತು ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಎಸ್.ಬಿ. ಮಲ್ಲಿಗವಾಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Image
  ಜಿಲ್ಲೆಯ ಬರ ಪರಿಸ್ಥಿತಿ ಹಾಗೂ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ಸಚಿವರ ಸಭೆ: ರೈತರ ನೆರವಿಗೆ ಅಧಿಕಾರಿಗಳು ಧಾವಿಸಿ, ಅವರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕು- ಸಚಿವ ಡಾ.ಅಜಯ್ ಧರ್ಮಸಿಂಗ್ ಜಯ ಧ್ವಜ ನ್ಯೂಸ್ ,ರಾಯಚೂರು ಅ.8-  ಜಿಲ್ಲೆಯಲ್ಲಿ ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರ ನೆರವಿಗೆ ಅಧಿಕಾರಿಗಳು ಧಾವಿಸಿ, ಅವರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವ ಮೂಲಕ ಬರ  ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಕರ್ನಾಟಕ ಸರ್ಕಾರದ ನೂತನ ಸಚಿವರಾದಡಾ.ಅಜಯ್ ಧರಂ ಸಿಂಗ್ ಅವರು ಹೇಳಿದರು. ಇಂದು ನಗರದ ನೂತನ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ರಾಯಚೂರು ಜಿಲ್ಲೆಯಲ್ಲಿ ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆಗಳು, ಮುಂಗಾರು ಹಂಗಾಮಿನ ಬಿತ್ತನೆ ಮತ್ತು ರಸಗೊಬ್ಬರ ಬೇಡಿಕೆಗಳು ಹಾಗೂ ಜಾನುವಾರುಗಳಿಗೆ ಮೇವಿನ ಲಭ್ಯತೆ ಕುರಿತು ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಕರೆದ ಸಭೆಯಲ್ಲಿ ಅಧ್ಯಕ್ಷತೆವಹಿಸ ಅವರು ಮಾತನಾಡಿದರು. ಮುಖ್ಯಮಂತ್ರಿಗಳು  ಹಾಗೂ ಉಪ‌ ಮುಖ್ಯಮಂತ್ರಿಗಳ ಸೂಚನೆಯಂತೆ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಸಂಪುಟ ಸಭೆಯ ತೀರ್ಮಾನ ಮತ್ತು ಮುಖ್ಯಮಂತ್ರಿಯವರ ಆದೇಶದಂತೆ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ವರದಿ ಸಿದ್ಧಪಡಿಸಲಾಗುತ್ತ...