ಸಂಪುಟ ವಿಸ್ತರಣೆ ಬ್ರಾಹ್ಮಣ ಸಮುದಾಯ ಕಡೆಗಣನೆಗೆ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎಸ್.ರಘುನಾಥ ಬೇಸರ. ಜಯ ಧ್ವಜ ನ್ಯೂಸ್, ರಾಯಚೂರು, ಆ.4- ರಾಜ್ಯ ಸರ್ಕಾರದ ಎರಡನೆ ಹಂತದ ಸಂಪುಟ ವಿಸ್ತರಣೆಯಲ್ಲಿ ಬ್ರಾಹ್ಮಣ ಸಮಾಜದ ಶಾಸಕರಿಗೆ ಸಚಿವ ಸ್ಥಾನ ನೀಡದಿರುವುದಕ್ಕೆ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎಸ್.ರಘುನಾಥ್ ಬೇಸರ ವ್ಯಕ್ತಪಡಿಸಿದ್ದಾರೆ. ಸರ್ವೇ ಜನಾ: ಸುಖಿನೋ ಭವಂತು ಎಂಬ ಉದಾತ್ತ ವಿಚಾರವುಳ್ಳ ಬ್ರಾಹ್ಮಣ ಸಮುದಾಯಕ್ಕೆ ಸಂಪುಟದಲ್ಲಿ ಪ್ರಾತಿನಿಧ್ಯ ನೀಡದಿರುವುದು ಸರಿಯಾದ ಕ್ರಮವಲ್ಲವೆಂದಿರುವ ಅವರು ಈ ನಾಡಿಗಾಗಿ ಬ್ರಾಹ್ಮಣ ಸಮಾಜದ ಕೊಡುಗೆ ಅಪಾರವಿದ್ದು ಕಾಂಗ್ರೆಸ್ ಪಕ್ಷದಲ್ಲಿ ಅನೇಕ ನಾಯಕರು ಬ್ರಾಹ್ಮಣರಾಗಿದ್ದರು. ಕರ್ನಾಟಕ ಏಕೀಕರಣಕ್ಕೆ ಆಲೂರು ವೆಂಕಟರಾಯರು ಶ್ರಮಿಸಿದ್ದಾರೆ ಮುಖ್ಯಮಂತ್ರಿಗಳಾಗಿ ಆರ್.ಗುಂ...