ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ ರಾಯಚೂರು,ಮಾ.2- ಒಪೆಕ್ ಆಸ್ಪತ್ರೆ ಬಲವರ್ಧನೆ ಹಾಗೂ ಹೆಚ್ಚಿನ ಚಿಕಿತ್ಸಾ ಸೌಲಭ್ಯಕ್ಕಾಗಿ ಸತ್ಯ ಸಾಯಿ ಫೌಂಡೇಶನ್ ನ ಡಾ. ಸತೀಶ ಬಾಬು ಅವರ ನೇತೃತ್ವದ ತಂಡ ಆಸ್ಪತ್ರೆಯ ಸೌಲಭ್ಯಗಳನ್ನು ಹಾಗೂ ವೈದ್ಯಕೀಯ ಸೇವೆಗಳನ್ನು ಪರಿಶೀಲಿಸಿ ಒಪೆಕ್ ಆಸ್ಪತ್ರೆಯ ಆಡಳಿತ ಮಂಡಳಿಯೊಂದಿಗೆ ಸಭೆ ನಡೆಸಿದರು. ಕಾಂಗ್ರೆಸ್ ರಾಜ್ಯ ಯುವ ಮುಖಂಡರಾದ ರವಿ ಬೋಸರಾಜು ಮನವಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ ಪಾಟೀಲ್ ಆದೇಶದ ಮೇರೆಗೆ, ರಾಯಚೂರಿನ ಒಪೆಕ್ ಆಸ್ಪತ್ರೆಗೆ ಭೇಟಿ ನೀಡಿದ ಸತ್ಯ ಸಾಯಿ ಫೌಂಡೇಶನ್ ತಂಡ, ಸರ್ಕಾರಿ ಒಪೆಕ್ ಆಸ್ಪತ್ರೆಯ ಹೆಚ್ಚಿನ ಸೌಲಭ್ಯಕ್ಕಾಗಿ ಸಾಧ್ಯಸಾಧ್ಯತೆಗಳ ಕುರಿತು ವೀಕ್ಷಿಸಿ ನಮ್ಮ ಸತ್ಯ ಸಾಯಿ ಟ್ರಸ್ಟ್ ಸರ್ಕಾರದ ಸಹಬಾಗಿತ್ವದಲ್ಲಿ ಈ ಭಾಗಕ್ಕೆ ಉನ್ನತ ಮಟ್ಟದ ವೈದ್ಯಕೀಯ ಸೇವೆ ನೀಡುವ ಉದ್ದೇಶ ನಮ್ಮದಾಗಿದೆ ಎಂದರು ಒಪೆಕ್ ಆಸ್ಪತ್ರೆಯನ್ನು ಸರ್ಕಾರಿ ಸಹಬಾಗಿತ್ವದಲ್ಲಿ ನವೀರಕರಣದ ಕುರಿತು ಸರ್ಕಾರದೊಂದಿಗೆ ಚರ್ಚಿಸಲಾಗುವುದು. ಈ ಭೇಟಿಯಿಂದ ಆಸ್ಪತ್ರೆಯ ಪ್ರಾಥಮಿಕ ವರದಿ ಸಿದ್ದಪಡಿಸಿ ಸರ್ಕಾರಕ್ಕೆ ನೀಡಲಾಗುವುದು. ಸರ್ಕಾರದ ಮಾಹಿತಿಯ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಇದಕ್ಕೆ ನಿಮ್ಮೆಲ್ಲರ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು. 1970 ರಲ್ಲಿ ಪ್ರಾರಂಭವಾದ ನಮ್ಮ ಸಂಸ್ಥೆ ಅನೇಕ ಕಡೆಗಳಲ್ಲಿ ಶೈಕ್ಷಣಿ
ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ. ರಾಯಚೂರು, ಅ.19- ಪ್ರಗತಿಪರ ಸಾವಯವ ಕೃಷಿಕರು, ಸಮಾಜ ಸೇವಕರು, ಖಾದಿ ಗ್ರಾಮೋದ್ಯೋಗ ಮಂಡಳಿ ನೌಕರರ ಸಂಘಟನೆ ಮಾಜಿ ಅಧ್ಯಕ್ಷರು, ಬ್ರಾಹ್ಮಣ ಸಮಾಜದ ಮುಖಂಡರು, ಮಹಾಮಾಯಾ ದೇವಸ್ಥಾನದ ಮಾಜಿ ಆಡಳಿತಾಧಿಕಾರಿಗಳಾದ ಪ್ರಕಾಶ್ ಅನಂತರಾವ್ ದೇಸಾಯಿ ಚನ್ನಪನಹಳ್ಳಿ(68) ಅನಾರೋಗ್ಯದಿಂದ ಬುಧುವಾರ ರಾತ್ರಿ ನಿಧನರಾಗಿದ್ದಾರೆ. ಧಾರವಾಡದ ಎಸ್ ಡಿ ಎಂ ಆಸ್ಪತ್ರೆಗೆ ದಾಖಲಾಗಿದ್ದ ಅವರು ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ,ಓರ್ವ ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧು ಬಳಗ ಬಿಟ್ಟು ಅಗಲಿದ್ದಾರೆ. ಮೃತರು ತಮ್ಮ ನೇತ್ರಗಳನ್ನು ದಾನ ಮಾಡುವ ಮೂಲಕ ಅಂಧರ ಬಾಳಿಗೆ ಬೆಳಕಾಗಿ ದ್ದಾರೆ. ಮೃತರ ಅಂತ್ಯಕ್ರಿಯೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಚನ್ನಪನಹಳ್ಳಿಯಲ್ಲಿ ಇಂದು ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲ ತಿಳಿಸಿದೆ.
ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್ ರಾಯಚೂರು, ಮಾ.7- ಪ್ರಧಾನಿ ನರೇಂದ್ರ ಮೋದಿ ಅವರು ಮಾ.12 ರಂದು ಕಲಬುರಗಿ- ಬೆಂಗಳೂರು ನಡುವೆ ವಂದೇ ಭಾರತ್ ರೈಲ್ ಸಂಚಾರಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಲಿದ್ದಾರೆ ಎಂದು ರೈಲ್ವೆ ಸಲಹಾ ಸಮತಿ ಸದಸ್ಯ ಹಾಗೂ ಸಮಾಜ ಸೇವಕ ಡಾ. ಬಾಬುರಾವ ಅವರು ತಿಳಿಸಿದ್ದಾರೆ . ಬಹು ನಿರೀಕ್ಷಿತ ವಂದೇ ಭಾರತ್ ರೈಲು ಸಂಚಾರ ಕಲ್ಯಾಣ ಕರ್ನಾಟಕ ಭಾಗದ ದಶಕಗಳ ಬೇಡಿಕೆ ಈಗ ನನಸಾಗಿದೆ. ಈ ಭಾಗದಲ್ಲಿ ವಂದೇ ಭಾರತ್ ರೈಲು ಸಂಚಾರ ಮಾಡಬೇಕು ಎಂಬುದು ಜನರ ಕೂಗಿನ ಮೇರೆಗೆ ಕೇಂದ್ರ ರೈಲ್ವೆ ಸಚಿವ ಅವರು ಅನುಮೋದನೆ ನೀಡಿ ಜನರ ಬೇಡಿಕೆ ಸ್ಪಂದಿಸಿದ್ದಾರೆ ಎಂದರು. ವಂದೇ ಭಾರತ್ ರೈಲ್ ಸಂಚಾರ ಅವಕಾಶ ಕಲ್ಪಿಸಬೇಕು ಎಂದು ನಾನು ಜನರ ಸಲಹಾ ಸೂಚನೆಯಂತೆ ಅನೇಕ ಭಾರಿ ಕೇಂದ್ರ ಸಚಿವರಿಗೆ ಮತ್ತು ಸಂಸದ ರಾಜ ಅಮರೇಶ ನಾಯಕ ಅವರಿಗೆ ಪತ್ರದ ಮೂಲಕ ಒತ್ತಾಯಿಸಿದ್ದೇನೆ ಎಂದರು. ನನ್ನ ಸುದೀರ್ಘ ಪ್ರಯತ್ನದ ಫಲ ನಿರೀಕ್ಷೆಯಂತೆ ಕೊನೆಗೂ ಈ ಭಾಗದಲ್ಲಿ ವಂದೇ ಭಾರತ್ ರೈಲ್ ಸಂಚಾರ ಗ್ರೀನ್ ಸಿಗ್ನಲ್ ದೊರೆತಿದೆ. ಕಲ್ಯಾಣ ಕರ್ನಾಟಕ ಭಾಗದ ಮತ್ತು ಜಿಲ್ಲೆಯ ಜನರಿಗೆಅನುಕೂಲಕಾರವಾಗಲಿದೆ ಎಂದರು. ಬೇಡಿಕೆಗೆ ಸ್ಪಂದಿಸಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ವಂದೇ ಭಾರತ್ ರೈಲಿಗೆ ಅನುಮೋದನೆ ನೀಡಿದ್ದು, ಪ್ರಧಾನಿಯವರು ಉದ್ಘಾಟಿಸಲಿರುವ ವಿವಿಧ ಕಾರ್ಯಕ್ರಮಗಳ ಪಟ್ಟಿಯಲ್ಲಿ
Comments
Post a Comment