ಶೃಂಗೇರಿ ಶಂಕರ ಮಠದಲ್ಲಿ ಬುತ್ತಿಪೂಜೆ.

 


ಶೃಂಗೇರಿ ಶಂಕರ ಮಠದಲ್ಲಿ ಬುತ್ತಿಪೂಜೆ.                     ರಾಯಚೂರು.ನ.22- ನಗರದ ಗಾಜಗಾರಪೇಟೆಯ ಶ್ರೀ ಶೃಂಗೇರಿ ಶಂಕರಮಠದಲ್ಲಿ ಕಾರ್ತಿಕ ಮಾಸದ ಕೊನೆಯ ಸೋಮವಾರ   ನಿಮಿತ್ಯ  ಶ್ರೀ ಆನಂದೀಶ್ವರನಿಗೆ  ರುದ್ರಾಭಿಷೇಕ , ಬುತ್ತಿ ಪೂಜೆ,ಎಲೆ ಪೂಜೆ ಮತ್ತು ದೀಪೋತ್ಸವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಪಲ್ಲಕ್ಕಿ ಸೇವೆ, ಮಹಾಮಂಗಳಾರತಿ ನೆರವೇರಿತು.   ಭಕ್ತರಿಗೆ ತೀರ್ಥ  ಪ್ರಸಾದ ವ್ಯವಸ್ಥೆಯನ್ನು ಮಾಡಲಾಗಿತ್ತು. ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ  ಭಕ್ತರು ಪಾಲ್ಗೊಂಡು ದೇವರ ಕೃಪೆಗೆ ಪಾತ್ರರಾದರು . ಶಂಕರ ಮಠದ ಆಡಳಿತ ಮಂಡಳಿ ಸದಸ್ಯರು, ಅರ್ಚಕರು ಉಪಸ್ಥಿತರಿದ್ದರು.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್