ನಾಳೆ ಶ್ರೀ ಭಗವದ್ಗೀತಾ ಸಮರ್ಪಣಾ ಕಾರ್ಯಕ್ರಮ

 


ನಾಳೆ ಶ್ರೀ ಭಗವದ್ಗೀತಾ ಸಮರ್ಪಣಾ ಕಾರ್ಯಕ್ರಮ.                        ರಾಯಚೂರು,ಡಿ.24- ನಗರದಲ್ಲಿ ಶ್ರೀ ಭಗವದ್ಗೀತಾ ಸಮರ್ಪಣಾ ಕಾರ್ಯಕ್ರಮ ಡಿ.25 ರಂದು ನಡೆಯಲಿದೆ. ಅಂದು ಸಂಜೆ 4 ಗಂಟೆಗೆ ಗಾಜಗಾರಪೇಟೆಯ ಶ್ರೀ ಶೃಂಗೇರಿ ಶಂಕರಮಠದ ಸಭಾಂಗಣದಲ್ಲಿ ನೂರಾರು ವಿದ್ಯಾರ್ಥಿಗಳಿಂದ ಶ್ರೀ ಭಗವದ್ಗೀತಾ ಸಮರ್ಪಣ ಕಾರ್ಯಕ್ರಮ ನಡೆಯಲಿದೆ.                                     ಕಾರ್ಯಕ್ರಮ ಸಾನಿಧ್ಯವನ್ನು ಸೋಂದಾ ಸ್ವರ್ಣವಲ್ಲಿ ಶ್ರೀಗಳು, ಸೋಮವಾರಪೇಟೆ ಹಿರೇಮಠದ ಶ್ರೀ ಅಭಿನವ ರಾಚೋಟಿ ಶಿವಾಚಾರ್ಯ ಶ್ರೀಗಳು ವಹಿಸಲಿದ್ದಾರೆ.                   ಕಾರ್ಯಕ್ರಮದಲ್ಲಿ ರಾಜಕೀಯ ಮುಖಂಡರು, ಗಣ್ಯರು, ಪಾಲ್ಗೊಳ್ಳಲಿದ್ದು ಹೆಚ್ಚಿನ ಸಂಖ್ಯೆಯಲ್ಲಿ ಆಸಕ್ತರು ಪಾಲ್ಗೊಳ್ಳುವಂತೆ ಕಾರ್ಯಕ್ರಮ ಆಯೋಜಕರಾದ ಡಾ.ಆನಂದತೀರ್ಥ ಫಡ್ನೀಸ್ ಹಾಗೂ ಶ್ರೀ ಭಗವದ್ಗೀತಾ ಸಮರ್ಪಣ ಅಭಿಯಾನ ಜಿಲ್ಲಾ ಸಮಿತಿ ಪದಾಧಿಕಾರಿಗಳು ಕೋರಿದ್ದಾರೆ.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್