ನಾಳೆ ಶ್ರುತಿ ಸಾಹಿತ್ಯ ಮೇಳ ವತಿಯಿಂದ ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆ

 


ನಾಳೆ ಶ್ರುತಿ ಸಾಹಿತ್ಯ ಮೇಳ  ವತಿಯಿಂದ  ರಾಷ್ಟ್ರಕವಿ ಕುವೆಂಪು ಅವರ ಜನ್ಮ ದಿನಾಚರಣೆ

   ರಾಯಚೂರು,ಡಿ.28- ನಗರದ ಸಾಂಸ್ಕೃತಿಕ, ಸಾಹಿತಿಕ ಸಂಘಟನೆಯಾದ ಶ್ರುತಿ ಸಾಹಿತ್ಯ ಮೇಳ ರಾಯಚೂರು  ವತಿಯಿಂದ ನಾಡಿನ ರಾಷ್ಟ್ರಕವಿ, ಯುಗದ ಕವಿ, ಜಗದ ಕವಿ ಕುವೆಂಪು ಅವರ 119 ನೇ ಜನ್ಮದಿನಾಚರಣೆಯನ್ನು ನಾಳೆ ಡಿ.29 ಸಂಜೆ 5:00ಗೆ ಜವಾಹರ ನಗರ ಪ್ರೌಢಶಾಲೆಯಲ್ಲಿ ಆಚರಿಸಲಾಗುತ್ತಿದೆ.

    ಈ ಕಾರ್ಯಕ್ರಮದಲ್ಲಿ ದಾಸ ಸಾಹಿತ್ಯದ ವಿದ್ವಾಂಸರು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಾಗೂ ಶ್ರುತಿ ಸಾಹಿತ್ಯ ಮೇಳದ ಗೌರವಾಧ್ಯಕ್ಷರಾದ ಡಾಕ್ಟರ್ ಜಯಲಕ್ಷ್ಮಿ ಮಂಗಳಮೂರ್ತಿಯವರು ಭಾಗವಹಿಸಲಿದ್ದಾರೆ. ಇದರಲ್ಲಿ ಸಾಹಿತ್ಯಾಸಕ್ತರು ಭಾಗವಹಿಸಬೇಕಾಗಿ  ಶ್ರುತಿ ಸಾಹಿತ್ಯ ಮೇಳದ ಅಧ್ಯಕ್ಷರಾದ ಮುರಳಿಧರ ಕುಲಕರ್ಣಿ ಅವರು ವಿನಂತಿಸಿದ್ದಾರೆ.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್