ಮಂತ್ರಾಲಯಕ್ಕೆ ಬಿ.ವೈ.ವಿಜಯೇಂದ್ರ ಭೇಟಿ.
ಮಂತ್ರಾಲಯಕ್ಕೆ ಬಿ.ವೈ.ವಿಜಯೇಂದ್ರ ಭೇಟಿ. ರಾಯಚೂರು,ಜ.28- ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗಮಿಸಿ ರಾಘವೇಂದ್ರ ಸ್ವಾಮಿಗಳ ಬೃಂದಾವನ ದರ್ಶನ ಪಡೆದು ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥ ಶ್ರೀ ಪಾದಂಗಳವರಿಂದ ಆಶೀರ್ವಾದ ಪಡೆದರು.
ಪ್ರಾರಂಭದಲ್ಲಿ ಶ್ರೀಮಠದಿಂದ ಸ್ವಾಗತಿಸಲಾಯಿತು. ಮಂಚಾಲಮ್ಮ ದೇವಿಯ ದರ್ಶನ ಪಡೆದ ಅವರು ಮಠದ ಪ್ರಾಂಗಣದಲ್ಲಿ ಪ್ರದಕ್ಷಿಣೆ ಹಾಕಿ ರಾಯರ ಬೃಂದಾವನ ದರ್ಶನ ಪಡೆದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರಿದ್ದರು.
Comments
Post a Comment