ಕೆಪಿಸಿಸಿ ಕಾರ್ಯಧ್ಯಕ್ಷರಾಗಿ ಎ.ವಸಂತಕುಮಾರ ನೇಮಕ.

 




ಕೆಪಿಸಿಸಿ ಕಾರ್ಯಧ್ಯಕ್ಷರಾಗಿ ಎ.ವಸಂತಕುಮಾರ ನೇಮಕ.
   
     ರಾಯಚೂರು,ಮಾ.23- ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಧ್ಯಕ್ಷರಾಗಿ ಎ.ವಸಂತಕುಮಾರ ನೇಮಕವಾಗಿದ್ದಾರೆ.ಎಐಸಿಸಿ ಅಧ್ಯಕ್ಷರ ಅಪ್ಪಣೆ ಮೇರೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣಿಗೋಪಾಲ ಈ ಆದೇಶ ಹೊರಡಿಸಿದ್ದಾರೆ. ಅಲ್ಲದೆ ಇವರನ್ನು ಕಲ್ಯಾಣ ಕರ್ನಾಟಕ ಜಿಲ್ಲೆಗಳ ಕೆಪಿಸಿಸಿ ಕಾರ್ಯಕ್ರಮ ಅನುಷ್ಠಾನ ಉಸ್ತುವಾರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ನೇಮಕ ಮಾಡಿದ್ದಾರೆ .   

                     
ಎ.ವಸಂತಕುಮಾರ ಅವರ ಸಂಕ್ಷಿಪ್ತ ಮಾಹಿತಿ: ದಿ.19-05-1963 ರಂದು ರಾಯಚೂರಿನಲ್ಲಿ ಜನಿಸಿದ್ದು, 
ಇವರ ತಂದೆ ಆರ್.ಆಂಜನೇಯಲು ರಾಯಚೂರು ನಗರಸಭೆ ಅಧ್ಯಕ್ಷರಾಗಿ, ರಾಯಚೂರು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುತ್ತಾರೆ.

ಅದರಂತೆ ಎ.ವಸಂತಕುಮಾರ ಅವರು 1986-90ರ ವರೆಗೆ ಎನ್.ಎಸ್.ಯು.ಐ. ಪ್ರಧಾನ ಕಾರ್ಯದರ್ಶಿಯಾಗಿ, ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ 1990-1996 ರ ವರೆಗೆ, ಯುವ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷರಾಗಿ 1996-2001ರ ವರೆಗೆ ಕಾರ್ಯನಿರ್ವಸಿದ್ದಾರೆ.



2001ರಿಂದ 2006ರ ವರೆಗೆ ರಾಯಚೂರು ಗ್ರಾಮೀಣ‌ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ,  2006-17ರ ವರೆಗೆ ರಾಯಚೂರು ಜಿಲ್ಲಾ‌ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ.

2017-2024ರ ವರೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ಅಲ್ಲದೆ, ರಾಯಚೂರು ನಗರಸಭೆ ಸದಸ್ಯರಾಗಿ ಮೂರು ಅವಧಿಗೆ ಕಾರ್ಯನಿರ್ವಹಿಸಿದ್ದಾರೆ. ರಾಯಚೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ, ತುಂಗಭದ್ರಾ ಕಾಡಾ ಅಧ್ಯಕ್ಷರಾಗಿ ಸಹ ಸೇವೆ ಸಲ್ಲಿಸಿದ್ದಾರೆ.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್