ದೇವನಪಲ್ಲಿ ಹಾಗೂ ಗಧಾರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ


ದೇವನಪಲ್ಲಿ ಹಾಗೂ  ಗಧಾರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ


 ರಾಯಚೂರು,ಮೇ.14- ತಾಲೂಕಿನ ದೇವನಪಲ್ಲಿ ಗ್ರಾಮದಲ್ಲಿ ಗಂಗಾಸಪ್ತಮಿ ಅಂಗವಾಗಿ ಶ್ರೀ ಮಹರ್ಷಿ ಭಗೀರಥ ಜಯಂತಿಯನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು. ಶ್ರೀ ಮಹರ್ಷಿ ಭಗೀರಥ ಭಾವಚಿತ್ರಕ್ಕೆ ಪೂಜೆ ಮಾಡುವು ಮೂಲಕ ಭಕ್ತಿ ಪೂರ್ವಕ ನಮನಗಳನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮದ ಎಲ್ಲಾ ಸಮಾಜದ ಬಾಂಧವರು ಭಾಗವಹಿಸಿದ್ದರು ಹಾಗೂ ಭಗೀರಥ ಗ್ರಾಮ ಘಟಕದ ಅಧ್ಯಕ್ಷರು, ಉಪಾಧ್ಯಕ್ಷರು ,ಕಾರ್ಯದರ್ಶಿಗಳು ಹಾಗೂ ಸರ್ವಸದಸ್ಯರು ಹಾಗೂ  ಸಮಾಜದ ಹಿರಿಯರು ಭಾಗವಹಿಸಿದ್ದರು.

 


ಗಧಾರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ:

 ತಾಲೂಕಿನ ಗಧಾರ ಗ್ರಾಮದಲ್ಲಿ ಗಂಗಾಸಪ್ತಮಿ ಅಂಗವಾಗಿ ಶ್ರೀ ಮಹರ್ಷಿ ಭಗೀರಥ ಜಯಂತಿಯನ್ನು ಅತ್ಯಂತ ಸರಳವಾಗಿ ಆಚರಿಸಲಾಯಿತು.  ಭಗೀರಥ ಭಾವಚಿತ್ರಕ್ಕೆ ಪೂಜೆ ಮಾಡುವು ಮೂಲಕ ಭಕ್ತಿ ಪೂರ್ವಕ ನಮನಗಳನ್ನು ಸಲ್ಲಿಸಲಾಯಿತು.                      ಈ ಸಂದರ್ಭದಲ್ಲಿ ಗಧಾರ ಗ್ರಾಮದ  ಸಮಾಜದ ಬಾಂಧವರು  ಹಾಗೂ  ಭಗೀರಥ ಸಮಾಜದ ಗ್ರಾಮ ಘಟಕದ ಸದಸ್ಯರು ಊರಿನ ಹಿರಿಯರು ಯುವಕರು ಗ್ರಾಮದ ಎಲ್ಲಾ ಸಮಾಜದ ಪದಾಧಿಕಾರಿಗಳು ಭಾಗವಹಿಸಿದ್ದರು.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್