ಅಂಜಲಿ ಅಂಬಿಗೇರ ಕೊಲೆ ಆರೋಪಿಗೆ ಕಠಿಣ ಶಿಕ್ಷೆಗೆ ಕಡಗೋಲು ರಾಮಚಂದ್ರ ಒತ್ತಾಯ

 


ಅಂಜಲಿ ಅಂಬಿಗೇರ ಕೊಲೆ  ಆರೋಪಿಗೆ ಕಠಿಣ ಶಿಕ್ಷೆಗೆ  ಕಡಗೋಲು ರಾಮಚಂದ್ರ ಒತ್ತಾಯ 

 ರಾಯಚೂರು,ಮೇ.16-ಹುಬ್ಬಳ್ಳಿಯ ವೀರಾಪೂರ ಓಣಿಯ ಅಂಜಲಿ ಅಂಬಿಗೇರ ಎನ್ನುವ ಯುವತಿಯನ್ನು ಕೊಲೆ ಮಾಡಿ ಹೋಗಿರುವ ಆರೋಪಿಯನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಗಂಗಾಮತ ಸಮಾಜದ  ಜಿಲ್ಲಾ ಯುವ ಅಧ್ಯಕ್ಷರಾದ ಕಡಗೋಲು ರಾಮಚಂದ್ರ  ಒತ್ತಾಯಿಸಿದ್ದಾರೆ. 

ನೇಹಾ ಹತ್ಯೆ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಪ್ರೀತಿ ನಿರಾಕರಿಸಿದಕ್ಕೆ ಮತ್ತೊಮ್ಮೆ ಗಂಗಾಮತ ಸಮಾಜದ ಯುವತಿ ಕೊಲೆ ನಡೆದಿದೆ. ಹುಬ್ಬಳ್ಳಿ ನಗರದ ವೀರಾಪುರ ಓಣಿ ಗುಡಿಓಣಿ ನಿವಾಸಿಯಾದ ಅಂಜಲಿ ಅಂಬಿಗೇರ (20) ಎಂಬಾಕೆಯೇ ಸಾವಿಗೀಡಾದ ಯುವತಿಯಾಗಿದ್ದಾಳೆ. ಈಕೆಗೆ ಅದೇ ಏರಿಯಾದ  ಗಿರೀಶ್ ಸಾವಂತ (21) ಎಂಬ ಯುವಕ ಚಾಕುವಿನಿಂದ ಚುಚ್ಚಿ ಕೊಲೆಮಾಡಿದ್ದಾನೆ. ಗಿರೀಶ್ ಸಾವಂತ ಎಂಬಾತ ಕಳೆದ ಹಲವಾರು ದಿನಗಳಿಂದ ಅಂಜಲಿಗೆ ಪ್ರೀತಿಸು ಎಂದು ಪೀಡಿಸುತ್ತಿದ್ದನಂತೆ, ಆದರೆ ಅಂಜಲಿ ಪ್ರೀತಿ ನಿರಾಕರಿಸಿದಕ್ಕೆ ಬುಧವಾರ ಬೆಳಂಬೆಳ್ಳಿಗ್ಗೆ ಗುಡಿ ಓಣಿಯಲ್ಲಿನ ಅಂಜಲಿ ನಿವಾಸಕ್ಕೆ ನುಗ್ಗಿದ್ದಾನೆ. ಮನೆಯ ಬಾಗಿಲು ಬಡಿದು ಏಕಾಏಕಿ ಅಂಜಲಿ ಹೊಟ್ಟೆಗೆ ಚಾಕು ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾನೆ. ಈ ಕೃತ್ಯದಿಂದ ಸಮಾಜವೇ ತಲೆ ಬಾಗಿಸುವಂತೆ ಆಗಿದೆ. ಅಷ್ಟೆ ಅಲ್ಲದೆ ತಂದೆ, ತಾಯಿಯನ್ನು ಕಳೆದುಕೊಂಡಿದ್ದ ಅಂಜಲಿ ಅಜ್ಜಿಯ ಮನೆಯಲ್ಲಿ ಆಶ್ರಯ ಪಡೆದುಕೊಂಡಿದ್ದಳು. ಅಂಜಲಿಗೆ ಇಬ್ಬರು ಸಹೋದರಿಯರು ಇದ್ದಿದ್ದು, ಅಂಜಲಿಯೇ ಕುಟುಂಬ ನಡೆಸುತ್ತಿದ್ದಳು. ಅವಳ ಹತ್ಯೆಯಿಂದ ಕುಟುಂಬ ಬೀದಿಗೆ ಬರಬೇಕಾದ ಪರಿಸ್ಥಿತಿ ನಿಮಾ೯ಣವಾಗಿದೆ. ಕೂಡಲೇ ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರಕಾರ ಎಚ್ಚೆತ್ತುಕೊಂಡು ಆರೋಪಿಯನ್ನು ಬಂಧನ ಮಾಡಿ, ಕಠಿಣ ಶಿಕ್ಷೆಗೆ ಒಳ ಪಡಿಸಬೇಕು. ಅಷ್ಟೇ ಅಲ್ಲದೆ ಹತ್ಯೆಯಾಗಿರುವ ಯುವತಿಯ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ನೀಡಬೇಕು ಎಂದು ಜಿಲ್ಲಾ ಯುವ ಅಧ್ಯಕ್ಷರಾದ ಕಡಗೋಲು ರಾಮಚಂದ್ರ ಒತ್ತಾಯಿಸಿದ್ದಾರೆ.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್