ಮಂತ್ರಾಲಯ: ಶ್ರೀ ಜಯತೀರ್ಥರ ಮಹಿಮೋತ್ಸವ ಆಚರಣೆ.                                                                          ರಾಯಚೂರು,ಜೂ.25- ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ಜಯತೀರ್ಥರ ಮಹಿಮೋತ್ಸವ(ಶ್ರೀ ಮನ್ ನ್ಯಾಯ ಸುಧಾ ಸಂಸ್ಮರಣೋತ್ಸವ) ನೆರವೇರಿತು. ಬೆಳಿಗ್ಗೆ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರು ಜಯತೀರ್ಥರ ರಥೋತ್ಸವಕ್ಕೆ ಚಾಲನೆ ನೀಡಿದರು

. ಶ್ರೀ ಜಯತೀರ್ಥರ ಜೀವನ ಮತ್ತು ಅವರ ಕೊಡುಗೆ ಬಗ್ಗೆ ಪಾಠ ಪ್ರವಚನ ನೆರವೇರಿದವು. ಈ ದಿನ ಶ್ರೀ ಮನ್ ನ್ಯಾಯ ಸುಧಾ ಗ್ರಂಥವನ್ನು ಶ್ರೀ ಪದ್ಮನಾಭ ತೀರ್ಥರಿಗೆ ಸಮರ್ಪಣೆ ಮಾಡಿದ ದಿನವಾಗಿ ಆಚರಿಸಲಾಗುತ್ತದೆ ಎಂದು ತಿಳಿಸಲಾಯಿತು.

ಪೀಠಾಧಿಪತಿಗಳು ಅನುಗ್ರಹ ಸಂದೇಶ ನೀಡಿದರು ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು
.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್