ಗಣೇಶ ಚತುರ್ಥಿ ಪ್ರಯುಕ್ತ ಬೆಂಗಳೂರು-ಕಲಬುರಗಿ ನಡುವೆ ವಿಶೇಷ ರೈಲು- ಬಾಬುರಾವ್ 

ರಾಯಚೂರು,ಆ.27- ಗಣೇಶ ಚತುರ್ಥಿ ಹಬ್ಬದ ಅವಧಿಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸಲು ಬೆಂಗಳೂರಿನ ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ (ಎಸ್ಎಂವಿಟಿ) ಮತ್ತು ಕಲಬುರಗಿ ನಡುವೆ ಸೆಪ್ಟೆಂಬರ್ 5, 6 ಮತ್ತು 7ರಂದು ಒನ್ ಟ್ರಿಪ್ (ಒಂದು ಬಾರಿ) ವಿಶೇಷ ರೈಲು ಸಂಚರಿಸಲಿದೆ ಎಂದು ರೈಲ್ವೆ ಬೋರ್ಡ್ ಸಲಹಾ ಸಮಿತಿ ಮಾಜಿ ಸದಸ್ಯ ಡಾ.ಬಾಬುರಾವ್ ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಅವರು, 06589 ಸಂಖ್ಯೆಯ ರೈಲು ಸೆ. 5, 6 ಹಾಗೂ 7ರಂದು ಎಸ್ಎಂವಿಟಿಯಿಂದ ರಾತ್ರಿ  09.15 ಕ್ಕೆ ಹೊರಟು ಸೆ.6, 7 ಮತ್ತು 8ರಂದು ಬೆಳಿಗ್ಗೆ 7.40ಕ್ಕೆ ಕಲಬುರಗಿ ನಿಲ್ದಾಣ ತಲುಪಲಿದೆ. 06590 ಸಂಖ್ಯೆಯ ರೈಲು ಸೆ.6, 7 ಹಾಗೂ 8ರಂದು ಬೆಳಿಗ್ಗೆ 9.35ಕ್ಕೆ ಕಲಬುರಗಿಯಿಂದ ಹೊರಟು ಅದೇ ದಿನಗಳ ರಾತ್ರಿ 8ಕ್ಕೆ ಎಸ್ಎಂವಿಟಿ ನಿಲ್ದಾಣ ತಲುಪಲಿದೆ ಎಂದು ತಿಳಿಸಿದ್ದಾರೆ. ಬೆಂಗಳೂರಿನಿಂದ ಹೊರಡುವ ರೈಲ್ವೆ ರಾಯಚೂರಿಗೆ ಬೆಳಿಗ್ಗೆ 4.03 ನಿಮಿಷಕ್ಕೆ  ಅದೇರೀತಿ ಕಲಬುರಗಿಯಿಂದ ಹೊರಡುವ ರೈಲು 11.53 ಕ್ಕೆ ರಾಯಚೂರು ತಲುಪಲಿದೆ ಎಂದು ತಿಳಿಸಿದ್ದಾರೆ. 

ಈ ವಿಶೇಷ ರೈಲು ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯ ರೋಡ್, ಯಾದಗಿರಿ ಹಾಗೂ ಶಹಾಬಾದ್ನಲ್ಲಿ ನಿಲುಗಡೆಯಾಗಲಿದೆ. ಮುಂಗಡ ಬುಕ್ಕಿಂಗ್ ಮತ್ತು ವೇಳಾಪಟ್ಟಿ ಮಾಹಿತಿಗಾಗಿ www.enquiry.indianrail.gov.in ಜಾಲತಾಣಕ್ಕೆ ಭೇಟಿ ನೀಡಬಹುದು ಅಥವಾ 139ಕ್ಕೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್