ಬಾಬು ಜಗಜೀವನರಾಮ್ ಸಮುದಾಯ ಭವನ ನಿರ್ಮಾಣಕ್ಕೆ ಎ.ವಸಂತ್ ಕುಮಾರ್ ಮನವಿ. ರಾಯಚೂರು,ಆ.23- ನಗರದಲ್ಲಿ ಸಮುದಾಯ ಭವನ ನಿರ್ಮಾಣ ಮಾಡುವಂತೆ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹಾದೇವಪ್ಪರವರಿಗೆ ವಿಧಾನ ಪರಿಷತ್ ಸದಸ್ಯ ಎ.ವಸಂತ್ ಕುಮಾರ್ ಮನವಿ ಮಾಡಿದರು. ನಗರದ ಹರಿಜನವಾಡದ ಎನ್.ಜಿ.ಓ ಕಾಲೋನಿಯಲ್ಲಿ ಬಾಬು ಜಗಜೀವನರಾಮ್ ಸಮುದಾಯ ಭವನ ನಿರ್ಮಾಣ ಮಾಡುವಂತೆ ಕೋರಿದರು .
ಎಸ್ಸಿ ಎಸ್ಟಿ ಜನಾಂಗಕ್ಕೆ ಸಭೆ, ಸಮಾರಂಭ ಮಾಡಿಕೊಳ್ಳಲು ಸಮುದಾಯ ಭವನ ಅವಶ್ಯಕತೆಯಿದ್ದು ತಮ್ಮ ಇಲಾಖೆಯಿಂದ 5 ಕೋಟಿ ರೂ. ಮಂಜೂರು ಮಾಡುವಂತೆ ಕೋರಿದರು.
Comments
Post a Comment