ಕಾಡ್ಲೂರು: ರೈತರ 25ಕ್ಕೂ ಹೆಚ್ಚು ಪಂಪ್ ಸೆಟ್ ಗಳ ಕೇಬಲ್ ಕಳುವು.                    ರಾಯಚೂರು,ಸೆ.14- ತಾಲೂಕಿನ ಕಾಡ್ಲೂರು ಗ್ರಾಮದ ನದಿ ದಡದಲ್ಲಿ ಅಳವಡಿಸಲಾದ ಪಂಪ್ ಸೆಟ್ ಗಳ ಕೇಬಲ್ ಕಳುವು ಮಾಡಿರುವ ಘಟನೆ ನಡೆದಿದೆ.                                        ನಿನ್ನೆ ರಾತ್ರಿ ಈ ಘಟನೆ ನಡೆದಿದೆ ಎನ್ನಲಾಗಿದ್ದು ರೈತರು ಇಂದು ಬೆಳಿಗ್ಗೆ ಜಮೀನುಗಳಿಗೆ ನೀರು ಹರಿಸಲು ಪಂಪ್ ಸೆಟ್ ಹಚ್ಚಲು ಹೋದ ವೇಳೆ ಕಳುವಾದ ಬಗ್ಗೆ ಗಮನಕ್ಕೆ ಬಂದಿದ್ದು ಸುಮಾರು 25 ಕ್ಕೂ ಹೆಚ್ಚು ಪಂಪ್ ಸೆಟ್ ಗಳ ಕೇಬಲ್ ಕಳುವು ಮಾಡಲಾಗಿದ್ದು ಅಂದಾಜು 80 ಸಾವಿರ ಬೆಲೆ ಬಾಳುವ ಕೇಬಲ್ ಗಳನ್ನು ಕಳ್ಳರು ಕದ್ದಿದ್ದಾರೆ ಎಂದು ಗ್ರಾಮದ ವಿಜಯ ಕುಮಾರ್ ಜೋಷಿ ತಿಳಿಸಿದ್ದು ಪೊಲೀಸರು ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್