ಗ್ರಾಮೀಣ ಭಾಗದಲ್ಲಿ ವಿದ್ಯಾರ್ಥಿಗಳಿಗೆ ಒಂದು ವಾರದಲ್ಲಿ ಸಮರ್ಪಕ ಬಸ್ ಸೌಲಭ್ಯ ಕಲ್ಪಿಸದಿದ್ದರೆ ಹೆದ್ದಾರಿ ತಡೆ ಪ್ರತಿಭಟನೆ- ನಿಜಾಮುದ್ದೀನ್. ರಾಯಚೂರು,ಸೆ.10- ಗ್ರಾಮೀಣ ಭಾಗದಲ್ಲಿ ಸಮರ್ಪಕ ಬಸ್ ವ್ಯವಸ್ಥೆ ಇಲ್ಲದೆ ಶಾಲಾ ,ಕಾಲೇಜು ವಿದ್ಯಾರ್ಥಿಗಳು ಪರದಾಡುವಂತಾಗಿದ್ದು ಒಂದು ವಾರದಲ್ಲಿ ಬಸ್ ಗಳ ಸೌಲಭ್ಯ ಕಲ್ಪಿಸದಿದ್ದರೆ ರಾಷ್ಟ್ರೀಯ ಹೆದ್ದಾರಿ ಬಂದ್ ಪ್ರತಿಭಟನೆ ಮಾಡಲಾಗುತ್ತದೆ ಎಂದು ಗ್ರಾಮಾಂತರ ಜೆಡಿಎಸ್ ಮಾಜಿ ಅಧ್ಯಕ್ಷ ಮಹ್ಮದ್ ನಿಜಾಮುದ್ದೀನ್ ತಿಳಿಸಿದ್ದಾರೆ.
ಯರಗೇರಾ ಸುತ್ತಮುತ್ತಲಿನ ಮಾರ್ಗದಲ್ಲಿ ಸರಿಯಾದ ಬಸ್ ಸೌಕರ್ಯವಿಲ್ಲದ ಕಾರಣ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಶಾಲಾ ಕಾಲೇಜುಗಳಿಗೆ ತೆರಳಲು ಆಗುತ್ತಿಲ್ಲ ಸಾಯಿಂಕಾಲ ಬಸ್ ಗಳು ಇಲ್ಲದ ಕಾರಣ ವಿದ್ಯಾರ್ಥಿಗಳು ಇನ್ನಿತರ ಖಾಸಗಿ ವಾಹನಗಳನ್ನು ಅವಲಂಬಿಸಬೇಕಾದ ಪರಿಸ್ಥಿತಿಯಿದ್ದು ಈ ಕೂಡಲೆ ಜಿಲ್ಲಾಧಿಕಾರಿಗಳು ಹಾಗೂ ಕೆಕೆಆರ್ ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳು ಈ ಬಗ್ಗೆ ಗಮನ ಹರಿಸಿ ಬಸ್ ಗಳ ವ್ಯವಸ್ಥೆ ಮಾಡುವಂತೆ ತಿಳಿಸಿದ್ದಾರೆ.
Comments
Post a Comment