ಕರ್ನಾಟಕ ಟಾಕ್ವಾಂಡೋ ಅಕಾಡೆಮಿ ಅಂತರ ಶಾಲಾ ಸ್ಪರ್ದೆ : ರಘುಮಾನ್ಯ ದೇಸಾಯಿಗೆ ಕಂಚಿನ ಪದಕ. ರಾಯಚೂರು,ಸೆ.15- ಬೆಂಗಳೂರು ನಗರದಲ್ಲಿ ಕರ್ನಾಟಕ ಟಾಕ್ವಾಂಡೋ ಅಕಾಡೆಮಿ ವತಿಯಿಂದ ನಡೆದ ಅಂತರಶಾಲಾ ಟಾಕ್ವಾಂಡೋ ಸ್ಪರ್ಧೆಯಲ್ಲಿ ರಾಜರಾಜೇಶ್ವರಿ ನಗರದ ಶ್ರೀ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯ 3 ನೇ ತರಗತಿ ವಿದ್ಯಾರ್ಥಿ ರಘುಮಾನ್ಯ ರಂಗರಾವ್ ದೇಸಾಯಿ ಕಂಚಿನ ಪದಕ ಪಡೆದು ಶಾಲೆಗೆ ಕೀರ್ತಿ ತಂದಿದ್ದಾರೆ.
ಬೆಂಗಳೂರು ನಗರದ ಅನೇಕ ಶಾಲೆಗಳ ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು ವಿದ್ಯಾರ್ಥಿಗೆ ಕಂಚಿನ ಪದಕ ಲಭಿಸಿದ್ದಕ್ಕಾಗಿ ಶಾಲಾ ಆಡಳಿತ ಮಂಡಳಿ ಹಾಗೂ ಪಾಲಕರು ಸಂತಸ ವ್ಯಕ್ತಪಡಿಸಿದ್ದಾರೆ.
Comments
Post a Comment