ಒಂಬತ್ತನೆ ದಿನದ ಗಣೇಶ ವಿಸರ್ಜನೆಗೆ ಅಣಿಯಾಗುತ್ತಿರುವ ನಗರ: ಕಿವಿ ಗಡಚಿಕ್ಕುವ ಸಂಗೀತದಲ್ಲಿ ಯುವಕರ ಕುಣಿತ.                  ರಾಯಚೂರು,ಸೆ.15- ನಗರದೆಲ್ಲೆಡೆ ಒಂಬತ್ತನೆ ದಿನದ ಸಾರ್ವಜನಿಕ ಗಣೇಶೋತ್ಸವ ವಿಸರ್ಜನೆಗೆ ಅಣಿಯಾಗುತ್ತಿದೆ. ನಗರದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆಗೆ ಕ್ಷಣಗಣನೆ ಪ್ರಾರಂಭವಾಗಿದೆ ತೀನ್ ಕಂದೀಲ್, ಮಹಾಬಳೇಶ್ವರ ವೃತ್ತದಲ್ಲಿ ಕೇಂದ್ರೀಯ ಗಜಾನನ ಸಮಿತಿಗಳು ಗಣೇಶ ಸಮಿತಿಗಳ ಪದಾಧಿಕಾರಿಗಳಿಗೆ ಸನ್ಮಾನಿಸಿ ಗಣೇಶನಿಗೆ ಬೀಳ್ಕೊಡುತ್ತಿದ್ದಾರೆ. ಬೃಹತ್ ಹೂವಿನ ಹಾರ ಕ್ರೇನ್ ಮೂಲಕ ಗಣೇಶನಿಗೆ ಸಮರ್ಪಣೆ ಮಾಡಲಾಯಿತು.

ಬಾಣ ಬಿರಿಸು, ಕಿವಿಗಡಚಿಕ್ಕುವ ಸಂಗೀತದಲ್ಲಿ ಯುವಕರು ಕುಣಿತ ಸಂಭ್ರಮ ಸಡಗರಕ್ಕೆ ಸಾಕ್ಷಿಯಾಗಿದೆ. ವಿಸರ್ಜನಾ ಮೆರವಣಿಗೆ ವೀಕ್ಷಿಸಲು ಮಹಿಳೆಯರು, ಮಕ್ಕಳು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ. ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ಸಶಸ್ತ್ರ ಮೀಸಲು ಪಡೆ ತುಕಡಿ ನಿಯೋಜಿಸಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುಟ್ಟ ಮಾದಯ್ಯ ನಗರದೆಲ್ಲಡೆ ಸಂಚರಿಸಿ ಕಾನೂನು ಸುವ್ಯವಸ್ಥೆ ಹದಗೆಡದಂತೆ ನಿಗವಹಿಸಿದ್ದಾರೆ.

Comments

Popular posts from this blog

ಒಪೆಕ್ ಆಸ್ಪತ್ರೆಗೆ ಸತ್ಯ ಸಾಯಿ ಫೌಂಡೇಶನ್ ತಂಡ ಭೇಟಿ: ಉನ್ನತ ವೈದ್ಯಕೀಯ ಸೇವೆಗಾಗಿ ಸರ್ಕಾರದೊಂದಿಗೆ ಚರ್ಚೆ

ಪ್ರಕಾಶ್ ದೇಸಾಯಿ ಚನ್ನಪ್ಪನಹಳ್ಳಿ ನಿಧನ.

ಮಾ.12 ರಂದು ಕಲ್ಬುರ್ಗಿ - ಬೆಂಗಳೂರು ನಡುವೆ ವಂದೇ ಭಾರತ ರೈಲು ಸಂಚಾರ- ಬಾಬುರಾವ್