ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ( ದಿಶಾ) ಸಭೆ: ನಿಮ್ಮ ಪಾಂಡಿತ್ಯ ತೋರಿಸಲು ಬರಬೇಡಿ-ಜಿ.ಕುಮಾರ ನಾಯಕ. ರಾಯಚೂರು,ಅ.25- ಸಭೆಯಲ್ಲಿ ನನಗೆ ನಿಮ್ಮ ಪಾಂಡಿತ್ಯ ತೋರಿಸಬೇಡಿ ಎಂದು ಅಧಿಕಾರಿಗೆ ಸಂಸದ ಜಿ.ಕುಮಾರ ನಾಯಕ ತರಾಟೆ ತೆಗೆದುಕೊಂಡು ನರ್ಸಿಂಗ್ ನಡೆಯಿತು. ಇಂದು ನಗರದ ಜಿ.ಪಂ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ( ದಿಶಾ) ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಸೇತುವೆ ಕಾಮಗಾರಿ ಆಮೆಗತಿಯಲ್ಲಿ ಸಾಗುತ್ತಿರುವ ಬಗ್ಗೆ ಸಭೆಯಲ್ಲಿ ಅಧಿಕಾರಿ ಸಮಜಾಯಿಷಿ ನೀಡಿದಾಗ ಗ್ರಾಂ ಆದ ಸಂಸದರು ನಿಗದಿತ ವೇಳೆ ಪೂರ್ಣವಾಗಿದ್ದರೂ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟುತ್ತಿರುವ ಹೆದ್ದಾರಿ ಸೇತುವೆ ನಿರ್ಮಾಣ ಕಾಮಗಾರಿ ಏಕೆ ನಿಧಾನಗತಿಯಲ್ಲಿ ಸಾಗುತ್ತಿದೆ ಎಂದು ಪ್ರಶ್ನಿಸಿದರು ಆಗ ಅಧಿಕಾರಿ ತಾಂತ್ರಿಕ ಅಡಚಣೆ ಮತ್ತು ಪ್ರವಾಹ ಹಿನ್ನೆಲೆಯಲ್ಲಿ ಕಾಮಗಾರಿ ವಿಳಂಬ ಬಗ್ಗೆ ವಿವಿರಿಸಿದಾಗ ಸಂಸದರು ಅಧಿಕಾರಿಗಳು ಮುಂಚಿತವಾಗಿ ಇದೆಲ್ಲವನ್ನು ನಿರೀಕ್ಷಿಸಿ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಕಾಮಗಾರಿ ಪ್ರಗತಿ ಕುಂಠಿತವಾಗಲು ನಿಮ್ಮಂತಹ ಅಧಿಕಾರಿಗಳಿಗೆ ಕಾರಣವೆಂದು ತರಾಟೆ ತೆಗೆದುಕೊಂಡರು. ಗ್ರಾಮೀಣ ಶಾಸಕ ದದ್ದಲ್ ಬಸನಗೌಡ ಮಾತನಾಡಿ ಹೈದರಾಬಾದ್ ರಸ್ತೆಯಲ್ಲಿ ದಿನ ನಿತ್ಯ ಅಪಘಾತಗಳು ಸಂಭವಿಸಿ ಅಮಾಯಕರು ಸಾವನ್ನಪ್ಪುತ್ತಿದ್ದಾರೆ ಹೆದ್ದಾರಿ ನಿರ್ವಹಣೆಯಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಇನ್ನು ಮುಂದೆ ಅಪಘಾತವಾದಲ್ಲಿ ಅಧಿಕಾರಿಗಳು ಮೇಲೆಯೂ ಪ್ರಕರಣ ದಾಖಲಿಸಿ ಆಗ ಅವರು ಎಚ್ಚೆತ್ತುಕೊಳ್ಳುತ್ತಾರೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮಾತನಾಡಿ ಈಗಾಗಲೆ ಅವರಿಗೆ ಹೆದ್ದಾರಿಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದ್ದೇನೆ ಆದರೂ ಅವರು ಮಾಡಿಲ್ಲವೆಂದು ಸಭೆಯ ಗಮನಕ್ಕೆ ತಂದರು.
ಪಾರ್ವತಮ್ಮ ಪಾಪಾರೆಡ್ಡಿ ನಿಧನ ಹಿನ್ನಲೆ ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬ ಮುಂದೂಡಿಕೆ. ಜಯ ಧ್ವಜ ನ್ಯೂಸ್ ರಾಯಚೂರು,ಜೂ.19- ಮಾಜಿ ಶಾಸಕ ಎ.ಪಾಪಾರೆಡ್ಡಿಯವರ ಧರ್ಮಪತ್ನಿ ಪಾರ್ವತಮ್ಮ ನಿಧನ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಆಯೋಜಿಸಲಾಗಿದ್ದ ಮೂರು ದಿನಗಳ ಮುನ್ನೂರು ಕಾಪು ಮುಂಗಾರು ಸಾಂಸ್ಕೃತಿಕ ರಾಯಚೂರು ಹಬ್ಬ ಮುಂದೂಡಲಾಗಿದೆ ಎಂದು ಮುನ್ನೂರು ಕಾಪು ಸಮಾಜದ ಅಧ್ಯಕ್ಷ ಬೆಲ್ಲಂ ನರಸರೆಡ್ಡಿ ಹೇಳಿದರು. ಅವರಿಂದು ನಗರದ ಗದ್ವಾಲ್ ರಸ್ತೆಯ ವೀರಾಂಜನೇಯ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಪಾರ್ವತಮ್ಮ ಪಾಪಾರೆಡ್ಡಿಯವರ ಶ್ರದ್ಧಾಂಜಲಿ ಕಾರ್ಯಕ್ರಮ ಬಳಿಕ ಮಾತನಾಡಿ ಮುನ್ನೂರು ಕಾಪು ಸಮಾಜದ ಹಿರಿಯರು, ಯುವಕರು ಸಭೆ ನಡೆಸಿ ನಿರ್ಣಯ ಕೈಗೊಂಡಿದ್ದು ಈ ಬಾರಿ ಸಮಾಜದ ಹಿರಿಯ ವ್ಯಕ್ತಿಯೊಬ್ಬರ ನಿಧನ ಹಿನ್ನಲೆ ದುಖದ ವಾತಾವರಣ ಕಾರಣದಿಂದ ಮುಂಗಾರು ಸಾಂಸ್ಕೃತಿಕ ಹಬ್ಬ ಮುಂದೂಡಲು ಸರ್ವಾನುಮತದಿಂದ ನಿರ್ಣಯ ...
Comments
Post a Comment