ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಚುನಾವಣೆ: ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ರಮೇಶ್ ಕುಲಕರ್ಣಿ ನಾಮಪತ್ರ ಸಲ್ಲಿಕೆ. ಜಯ ಧ್ವಜ ನ್ಯೂಸ್, ರಾಯಚೂರು,ಮಾ.24- ಮುಂದಿನ ತಿಂಗಳು ನಡೆಯಲಿರುವ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಚುನಾವಣೆ ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ವೇದಮೂರ್ತಿ ಡಾ.ಭಾನುಪ್ರಕಾಶ ಶರ್ಮಾ ಬಣದ ಜಿಲ್ಲಾ ಪ್ರತಿನಿಧಿ ಅಭ್ಯರ್ಥಿಯಾಗಿ ರಮೇಶ್ ಕುಲಕರ್ಣಿ ಇಂದು ಬೆಂಗಳೂರಿನ ಎಕೆಬಿಎಂಎಸ್ ಕಛೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲೆಯ ಬ್ರಾಹ್ಮಣ ಸಮಾಜದ ಮುಖಂಡರು, ಯುವಕರು ಉಪಸ್ಥಿತರಿದ್ದರು.


Comments
Post a Comment