ನೆನಗುದಿಗೆ ಬಿದ್ದಿರುವ  ಜಿಲ್ಲೆಯ ರೈಲ್ವೆ ಯೋಜನೆಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲಿ- ಡಾ. ಬಾಬುರಾವ್ 

ಜಯ ಧ್ವಜ ನ್ಯೂಸ್,ರಾಯಚೂರು,ಮಾ.11- ಜಿಲ್ಲೆಯ ಪ್ರಮುಖ ರೈಲ್ವೆ ಯೋಜನೆಗಳಾದ ಗಿಣಿಗೇರಾ-ಮೆಹಬೂಬ್ ನಗರ ಮತ್ತು ಗದಗ-ವಾಡಿ ರೈಲ್ವೆ ಮಾರ್ಗವನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣನವರು ಪ್ರಯತ್ನಿಸಬೇಕು ಎಂದು ರೈಲ್ವೆ ಸಲಹಾ ಮಂಡಳಿ ಮಾಜಿ ಸದಸ್ಯ ಹಾಗೂ ಭಾರತೀಯ ಜನತಾ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಡಾ. ಬಾಬುರಾವ್ ಆಗ್ರಹಿಸಿದ್ದಾರೆ.


ಈ ಕುರಿತು ಪತ್ರಿಕಾ ಹೇಳಿಕೆ  ನೀಡಿರುವ ಅವರು, ಈ ಹಿಂದೆ ರೈಲ್ವೆ ಸಚಿವರಾಗಿದ್ದವರು ತಮ್ಮ ರಾಜ್ಯಗಳಿಗೆ ಅನೇಕ ಯೋಜನೆಗಳನ್ನು ಮಂಜೂರು ಮಾಡಿಸಿಕೊಂಡು ಅವುಗಳನ್ನು ಅನುಷ್ಠಾನಗೊಳಿಸಿದ ನಿದರ್ಶನಗಳು ನಮ್ಮ ಕಣ್ಣ ಮುಂದೆ ಇವೆ. ಮಹತ್ವದ ಖಾತೆಯನ್ನು ಹೊಂದಿರುವ ವಿ.ಸೋಮಣ್ಣನವರಿಗೆ ಈ ಒಂದು ಸುವರ್ಣಾವಕಾಶ ಸಿಕ್ಕಿದ್ದು ಅದನ್ನು ಅವರು ಸದುಪಯೋಗಪಡಿಸಿಕೊಂಡು ರಾಜ್ಯದಲ್ಲಿ ನೆನಗುದಿಗೆ ಬಿದ್ದಿರುವ ಯೋಜನೆಗಳನ್ನು ಪೂರ್ಣಗೊಳಿಸಿ ಜನಮನ್ನಣೆ ಗಳಿಸುವ ಸದಾವಕಾಶ ಇದೆ. ಒಳ್ಳೆ ರಾಜಕಾರಣಿ ಹಾಗು ಕ್ರಿಯಾಶೀಲ ಮಂತ್ರಿ ಎಂಬ ಖ್ಯಾತಿ ಗಳಿಸಿದ್ದಾರೆ ಹಾಗಾಗಿ ಸೋಮಣ್ಣನವರು ನಮ್ಮ ಭಾಗದಲ್ಲಿ 25 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಗಿಣಿಗೇರಾ- ಮಹೆಬೂಬ್ ನಗರ ಹಾಗೂ ಗದಗ-ವಾಡಿ ರೈಲು ಮಾರ್ಗಗಳಿಗೆ ವೇಗವನ್ನು ಕಲ್ಪಿಸಿ ತಮ್ಮ ಅಧಿಕಾರಾವಧಿಯಲ್ಲಿ ಪೂರ್ಣಗೊಳಿಸಬೇಕೆಂದು ಅವರು ಆಗ್ರಹಿಸಿದ್ದಾರೆ.

Comments

Popular posts from this blog