ಜಿಲ್ಲಾಧಿಕಾರಿಗಳಿಂದ  ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ:
                                                                     ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ನಿರ್ದೇಶನ 

ಜಯ ಧ್ವಜ, ನ್ಯೂಸ್,  ರಾಯಚೂರು ಆ.1 - ಜಿಲ್ಲಾಧಿಕಾರಿಗಳಾದ ನಿತೀಶ್ ಕೆ ಅವರು ಇಂದು  ವಿಮಾನ ನಿಲ್ದಾಣ ನಿರ್ಮಾಣ  ಉದ್ದೇಶಿತ ಸ್ಥಳವಾದ ಯರಮರಸ್ ಹೊರವಲಯದ ಪ್ರದೇಶಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು. 

ಪ್ರಸ್ತುತ ವಿಮಾನ ನಿಲ್ದಾಣದ ಸುತ್ತಲಿನ ಗೋಡೆ  ನಿರ್ಮಾಣ ಕಾಮಗಾರಿ ಹಾಗೂ ಪ್ಯಾಸೆಂಜರ್ ಟರ್ಮಿನಲ್ ಕಟ್ಟಡಕ್ಕೆ ಬುನಾದಿ ಕಾಮಗಾರಿಯ ಪರಿವೀಕ್ಷಣೆ ನಡೆಸಿದರು. 

ವಿಮಾನ ನಿಲ್ದಾಣ ಕಾಮಗಾರಿಯಲ್ಲಿ ಪ್ರಸ್ತಾಪಿಸಿರುವ ರನ್‌ವೇ, ಸಿಆರ್‌ಎಫ್ ಕಟ್ಟಡ, ಎಟಿಸಿ ಕಟ್ಟಡ ಮತ್ತು ಮಾಸ್ಟರ್ ಪ್ಲಾನ್ ನಲ್ಲಿರುವ  ಸ್ಥಳದ ವೀಕ್ಷಣೆ ನಡೆಸಿದರು. 


ಕಾಮಗಾರಿಯ ಪ್ರಗತಿಯ ಬಗ್ಗೆ ಗುತ್ತಿಗೆದಾರರೊಂದಿಗೆ ಚರ್ಚಿಸಿದ ಅವರು  ಕಾಮಗಾರಿಯನ್ನು ತ್ವರಿತಗೊಳಿಸಿ ಬೇಗನೆ ಪೂರ್ಣಗೊಳಿಸಬೇಕೆಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. 

ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಅಭಿಯಂತರರಾದ ರಾಘವೇಂದ್ರ, ಮಹೇಶಕುಮಾರ ಹಾಗೂ ಸಂಬಂಧಿಸಿದ ಗುತ್ತಿಗೆದಾರರು, ಎಂಜಿನಿಯರ್  ಉಪಸ್ಥಿತರಿದ್ದರು.

Comments

Popular posts from this blog