Posts

Showing posts from October, 2025
Image
ಸಾಹಿತಿ ಬಾಬು ಬಂಡಾರಿಗಲ್, ಪತ್ರಕರ್ತ ಶಿವಮೂರ್ತಿ ಹಿರೇಮಠ ಸೇರಿ 6 ಜನ ಸಾಧಕರಿಗೆ ಹಾಗೂ ಎರಡು  ಸಂಸ್ಥೆಗಳಿಗೆ ರಾಜ್ಯೋತ್ಸವ ವಿಶೇಷ ಸನ್ಮಾನ ಜಯ ಧ್ವಜ ನ್ಯೂಸ್, ರಾಯಚೂರು ಅ.31- ರಾಯಚೂರು ಜಿಲ್ಲೆಯ ಹಿರಿಯ ಸಾಹಿತಿ ಬಾಬು ಬಂಡಾರಿಗಲ್, ಹಿರಿಯ ಪತ್ರಕರ್ತ ಶಿವಮೂರ್ತಿ ಹಿರೇಮಠ ಸೇರಿದಂತೆ 6 ಜನ ಗಣ್ಯರಿಗೆ ಹಾಗೂ ಎರಡು ಸಂಸ್ಥೆಗಳಿಗೆ ಕನ್ನಡ ನಾಡು-ನುಡಿಯ ಸೇವೆಗಾಗಿ  ರಾಯಚೂರು ಜಿಲ್ಲಾಡಳಿತದಿಂದ ರಾಜ್ಯೋತ್ಸವದ ವಿಶೇಷ ಸನ್ಮಾನ ನಡೆಯಲಿದೆ.  ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸಿದ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ್ದಕ್ಕಾಗಿ ಸಾಹಿತ್ಯ ಕ್ಷೇತ್ರದಲ್ಲಿ ಹಿರಿಯ ಸಾಹಿತಿ ಬಾಬು ಭಂಡಾರಿಗಲ್, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಹಿರಿಯ ಪತ್ರಕರ್ತ ಶಿವಮೂರ್ತಿ ಹಿರೇಮಠ, ವೈದ್ಯಕೀಯ ಕ್ಷೇತ್ರದಲ್ಲಿ ರಾಜೀವಗಾಂಧಿ ಸೂಪರ್ ಸ್ಪೆಷಾಲಿಟಿ ಓಪೆಕ್ ಆಸ್ಪತ್ರೆಯ ವಿಶೇಷಾಧಿಕಾರಿ ಡಾ.ರಮೇಶ ಸಿ ಸಾಗರ, ಸಮಾಜ ಸೇವೆ ಕ್ಷೇತ್ರದಲ್ಲಿ ಚಂದ್ರಶೇಖರ ಪಾಟೀಲ್ ಮಿರ್ಜಾಪೂರ, ಕಲಾ ಕ್ಷೇತ್ರದಲ್ಲಿ ಸಿಂಧನೂರು ತಾಲೂಕಿನ ಸುಕಾಲಪೇಟೆ ನಾರಾಯಣಪ್ಪ ಮಾಡಶಿರವಾರ, ಕೃಷಿ ಕ್ಷೇತ್ರದಲ್ಲಿ ರಾಯಚೂರು ತಾಲೂಕಿನ ಪಲ್ಕಂದೊಡ್ಡಿ ಗ್ರಾಮದ ಹನುಮರೆಡ್ಡಿ ತಂದೆ ಬಸವರಾಜಪ್ಪ ಹಾಗೂ ಸೇವಾ ಕ್ಷೇತ್ರದಲ್ಲಿ ಸುರಕ್ಷಾ ಟ್ರಸ್ಟ್ ರಾಯಚೂರು ಹಾಗೂ ಕಲಾ ಸಂಕುಲ ಸಂಸ್ಥೆ ರಾಯಚೂರು ಅವರಿಗೆ ನಗರದ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನವಂಬರ್ 01ರಂದು ನಡೆಯುವ ಕನ್ನಡ ರಾಜ್ಯೋತ್...
Image
  ನಾಳೆ  ನಗರದಲ್ಲಿ ಆರೆಸ್ಸೆಸ್ ಭವ್ಯ ಪಥಸಂಚಲನ:      ಸಹಸ್ರಾರು ಗಣವೇಷಧಾರಿಗಳ ಆಕರ್ಷಕ ಪಥಸಂಚಲನಕ್ಕೆ  ನಗರ ಸಜ್ಜು.                                            ಜಯ ಧ್ವಜ ನ್ಯೂಸ್ ,  ರಾಯಚೂರು, ಅ.31 - ನಗರದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷಾಚರಣೆ ಹಾಗೂ ವಿಜಯದಶಮಿ  ಉತ್ಸವ ಅಂಗವಾಗಿ ನಾಳೆ ನ.1 ಶನಿವಾರದಂದು ಭವ್ಯ ಪಥ ಸಂಚಲನ ನಡೆಯಲಿದೆ. ಸಂಜೆ.4.15ಕ್ಕೆ ನಗರದ ಗದ್ವಾಲ ರಸ್ತೆಯ ವೀರಾಂಜನೇಯ ಮುನ್ನೂರು ಕಾಪು ಕಲ್ಯಾಣ ಮಂಟಪದಿಂದ ಪಥ ಸಂಚಲನ ಆರಂಭಗೊಳ್ಳಲಿದ್ದು ನಂತರ ನಗರದ ಪ್ರಮುಖ ರಸ್ತೆಗಳ ಮೂಲಕ ಸಾವಿರಾರು ಗಣವೇಷಧಾರಿಗಳು, ಘೋಷ್ ವಾದನದೊಂದಿಗೆ ಆಕರ್ಷಕ ಪಥಸಂಚಲನ ನಡೆಯಲಿದ್ದು ಸಂಜೆ.5.45ಕ್ಕೆ ಬಸವೇಶ್ವರ ವೃತ್ತದ ಬಳಿಯಿರುವ ವಾಲ್ಕಟ್ ಮೈದಾನದಲ್ಲಿ ಸಾರ್ವಜನಿಕ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ.ರಾಮಕೃಷ್ಣ ಎಂ.ಆರ್ ಆಗಮಿಸಲಿದ್ದು , ವಕ್ತಾರರಾಗಿ ಆರೆಸ್ಸೆಸ್ ಕರ್ನಾಟಕ ಉತ್ತರ ಪ್ರಾಂತ ಪ್ರಚಾರ ವಿಭಾಗ ಪ್ರಮುಖರಾದ ಕೃಷ್ಣಾ ಜೋಷಿ ಕಲಬುರ್ಗಿ ಆಗಮಿಸಲಿದ್ದಾರೆ.              ನಗರ ಸಜ್ಜು: ನಗರದ ಪ್ರಮುಖ ವೃತ್ತಗಳು ಹಾಗೂ ರಸ್ತೆಗಳ ಇಕ್ಕೆಲಗಳಲ್ಲ...
Image
   ಜಿಲ್ಲೆಯ ಜಾಫರ್ ಮೋಹಿಯುದ್ದೀನ್ ಹಾಗೂ ರತ್ನಮ್ಮ ದೇಸಾಯಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ                                                                                           ಜಯ ಧ್ವಜ ನ್ಯೂಸ್,      ರಾಯಚೂರು,ಅ.30- ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು ಜಿಲ್ಲೆಯ ಇಬ್ಬರಿಗೆ ಪ್ರಶಸ್ತಿ ಒಲಿದಿದೆ.                             ಸಂಕೀರ್ಣ ಕ್ಷೇತ್ರದಲ್ಲಿ ರಾಯಚೂರಿನ ಜಾಫರ್ ಮೋಹಿಯುದ್ದೀನ್ ಹಾಗೂ ರಂಗಭೂಮಿ ಕ್ಷೇತ್ರದಲ್ಲಿ ರತ್ನಮ್ಮ ದೇಸಾಯಿರವರಿಗೆ ಈ ಬಾರಿಯ ಪ್ರತಿಷ್ಟಿತ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ.
Image
  ಜಿಲ್ಲೆಯ ಜಾಫರ್ ಮೋಹಿಯುದ್ದೀನ್ ಹಾಗೂ ರತ್ನಮ್ಮ ದೇಸಾಯಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ                                                                                           ಜಯ ಧ್ವಜ ನ್ಯೂಸ್, ರಾಯಚೂರು,ಅ.30- ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು ಜಿಲ್ಲೆಯ ಇಬ್ಬರಿಗೆ ಪ್ರಶಸ್ತಿ ಒಲಿದಿದೆ.                             ಸಂಕೀರ್ಣ ಕ್ಷೇತ್ರದಲ್ಲಿ ರಾಯಚೂರಿನ ಜಾಫರ್ ಮೋಹಿಯುದ್ದೀನ್ ಹಾಗೂ ರಂಗಭೂಮಿ ಕ್ಷೇತ್ರದಲ್ಲಿ ರತ್ನಮ್ಮ ದೇಸಾಯಿರವರಿಗೆ ಈ ಬಾರಿಯ ಪ್ರತಿಷ್ಟಿತ ರಾಜ್ಯೋತ್ಸವ ಪ್ರಶಸ್ತಿ ದೊರೆತಿದೆ.
Image
  ರಾಯಚೂರು ಮಹಾನಗರ ಪಾಲಿಕೆಗೆ ರಾಜ್ಯಮಟ್ಟದ ಅತ್ಯುತ್ತಮ ಕಾರ್ಯಕ್ಷಮತೆ ಪ್ರಶಸ್ತಿ ಗರಿ   ಜಯ ಧ್ವಜ ನ್ಯೂಸ್ ,ರಾಯಚೂರು ಅ 29 - ರಾಷ್ಟೀಯ ಜೀವನೋಪಾಯ ಅಭಿಯಾನವು ಡೇ-ನಲ್ಮ್ ಅಭಿಯಾನದಡಿ ಪ್ರಕಟಿಸಿದ ಕೌಶಲ ಕರ್ನಾಟಕ ಪ್ರಶಸ್ತಿಗೆ ರಾಯಚೂರು ಮಹಾನಗರ ಪಾಲಿಕೆಯು ಆಯ್ಕೆಯಾಗಿದ್ದು, ಆಯ್ಕೆಯಾದ ಸ್ವಸಹಾಯ ಗುಂಪುಗಳ ಪರವಾಗಿ ರಾಯಚೂರು ಮಹಾನಗರ ಪಾಲಿಕೆಯ ಆಯುಕ್ತರಾದ ಜುಬಿನ್ ಮೊಹಪಾತ್ರ ಅವರಿಗೆ ರಾಷ್ಟೀಯ ಜೀವನೋಪಾಯ ಅಭಿಯಾನದ ನಿರ್ದೇಶಕರು ಅಭಿನಂದನೆ ತಿಳಿಸಿದ್ದಾರೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಅತ್ಯುತ್ತಮ ಸಾಧನೆ ಮಾಡಿದ ಸ್ವ-ಸಹಾಯ ಗುಂಪುಗಳ ಪ್ರಸ್ತಾವನೆ ಪರಿಶೀಲಿಸಲಾಗಿ, ನಿಗದಿತ ಅರ್ಹ ಮಾನದಂಡಗಳನ್ವಯ ಪ್ರಕಟಿಸಿದ ಪಟ್ಟಿಯಲ್ಲಿ ರಾಯಚೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅಕ್ಕಮಹಾದೇವಿ ಸ್ವಸಹಾಯ ಸಂಘಕ್ಕೆ ಇಡೀ ರಾಜ್ಯದಲ್ಲೇ ಮೂರನೇ ಸ್ಥಾನ ಲಭಿಸಿದೆ. ಮೊದಲ ಸ್ಥಾನವನ್ನು ಶಿವಮೋಗ್ಗ ಜಿಲ್ಲೆ ಪಡೆದುಕೊಂಡಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಎರಡನೇ ಸ್ಥಾನ ಲಭಿಸಿದೆ. ಆಯುಕ್ತರು ಹರ್ಷ : ರಾಯಚೂರು ಮಹಾನಗರ ಪಾಲಿಕೆಯು ವೇಗವಾಗಿ ಬೆಳೆಯುತ್ತಿದೆ. ಸ್ವಸಹಾಯ ಸಂಘದ ಕಾರ್ಯಚಟುವಟಿಕೆಗಳಿಗೆ ಪಾಲಿಕೆಯು ಹೆಚ್ಚಿನ ಉತ್ತೇಜನ, ನಿರಂತರ ಮಾರ್ಗದರ್ಶನ ಮತ್ತು ಬೆಂಬಲ ನೀಡಿದೆ ಎಂಬುದಕ್ಕೆ ಈ ಪ್ರಶಸ್ತಿಯೇ ಸಾಕ್ಷಿಯಾಗಿದೆ. ಅಕ್ಕಮಹಾದೇವಿ ಸ್ವಸಹಾಯ ಸಂಘದ ಚಟುವಟಿಕೆಗಳು ಇನ್ನೀತರ ಸ್ವಸಹಾಯ ಸಂಘಗಳಿಗೆ ಸ್ಫೂರ್ತಿಯಾಗಲಿ ಎಂದು ಇದೆ ವೇಳೆ ಆಯುಕ್ತ...
Image
  ಮಹಾನಗರ ಪಾಲಿಕೆಯ ಸಾಮಾನ್ಯ ಮಹಾಸಭೆ :    ರಸ್ತೆ ಗುಂಡಿ ಮುಚ್ಚುವ ವಿಷಯದಲ್ಲಿ ಶಾಸಕ ಶಿವರಾಜ ಪಾಟೀಲ್ ಹಾಗೂ ಆಡಳಿತ ಪಕ್ಷದ ಸದಸ್ಯರ ನಡುವೆ ವಾಗ್ಯುದ್ಧ ಜಯ ಧ್ವಜ ನ್ಯೂಸ್ ರಾಯಚೂರು, ಅ. 28 -                                          ಮಹಾನಗರ ಪಾಲಿಕೆಯ ಸಾಮಾನ್ಯ ಮಹಾಸಭೆ ಇಂದು ಬೆಳಿಗ್ಗೆ ಜಿ.ಪಂ ಸಭಾಂಗಣದಲ್ಲಿ ನಡೆಯಿತು. ಸಭೆ ಪ್ರಾರಂಭದಲ್ಲಿ ಶಾಸಕ ಡಾ.ಶಿವರಾಜ ಪಾಟೀಲ್ ಹಾಗೂ ಆಡಳಿತ ಪಕ್ಷದ ಸದಸ್ಯರು ನಡುವೆ ವಾಗ್ಯುದ್ಧ ನಡೆಯಿತು. ರಸ್ತೆ ಗುಂಡಿ ಮುಚ್ಚುವ ವಿಷಯದಲ್ಲಿ ಶಾಸಕರು ಮತ್ತು ಹಿರಿಯ ಸದಸ್ಯ ಜಯಣ್ಣ ನಡುವೆ ಕೆಲ ಹೊತ್ತು ಗುಂಡಿ ಮುಚ್ಚುವ ವಿಷಯದಲ್ಲಿ ಕಾವೇರಿದ ಚರ್ಚೆ ನಡೆಯಿತು. ವಿಧಾನ ಪರಿಷತ್ ಸದಸ್ಯ ಎ.ವಸಂತ ಕುಮಾರ್ ಮಧ್ಯ ಪ್ರವೇಶಿಸಿ ರಸ್ತೆ ಗುಂಡಿ ಮುಚ್ಚುವ ವಿಷಯದಲ್ಲಿ ಎಲ್ಲರ ಸಹಭಾಗಿತ್ವ ಸಹಕಾರ ಅಗತ್ಯವೆಂದು ಚರ್ಚೆಗೆ ತೆರೆಯಳೆದರು. ಮಹಾನಗರಪಾಲಿಕೆ ಅಧೀನದಲ್ಲಿನ ಎಲ್ಲಾ ಮಳಿಗೆಗಳು ಉತ್ತಮ ನಿರ್ವಹಣೆ ಆಗಬೇಕು. ಬಾಡಿಗೆ ದರ, ಒಪ್ಪಂದ ಸೇರಿದಂತೆ ಯಾವುದೇ ವಿಷಯಗಳ ಬಗ್ಗೆ  ದೂರುಗಳು ಬಾರದ ಹಾಗೆ ಎಚ್ಚರಿಕೆ ವಹಿಸಬೇಕು ಎಂದು ಸಭೆಯಲ್ಲಿ ಸೂಚಿಸಲಾಯಿತು. ಪಾಲಿಕೆಯ ವ್ಯಾಪ್ತಿಯ ಮಳಿಗೆಗಳಿಗೆ ಈ ಹಿಂದೆ ನಿಗದಿಪಡಿಸಿದ ಬಾಡಿಗೆ ದರವನ್ನು ಪರಿಷ್ಕರಿಸಲು ಪರಿಶೀಲಿಸಬಹು...
Image
  ತುಂಗಭದ್ರಾ ಜಲಾಶಯದಿಂದ ಎರಡನೇ ಬೆಳೆಗೂ ನೀರು ಹರಿಸಿ- ಮಾಲೀಪಾಟೀಲ .                                                ಜಯ ಧ್ವಜ ನ್ಯೂಸ್, ರಾಯಚೂರು,ಅ.25- ತುಂಗಭದ್ರಾ ಜಲಾಶಯದಿಂದ ಎರಡನೇ ಬೆಳೆಗೂ ನೀರು ಹರಿಸುವಂತೆ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ ಹೇಳಿದರು. ಅವರಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಇತ್ತೀಚೆಗೆ ಮಂತ್ರಾಲಯಕ್ಕಾಗಮಿಸಿದ ಡಿಸಿಎಂ ಡಿಕೆ ಶಿವಕುಮಾರ್ ರವರನ್ನು ರೈತ ಮುಖಂಡರೊಂದಿಗೆ ಭೇಟಿಯಾಗಿ ಜಿಲ್ಲೆಯ ನೀರಾವರಿ ಸಮಸ್ಯೆ ಬಗ್ಗೆ ಚರ್ಚಿಸಿದ್ದೇವೆ ತುಂಗಭದ್ರಾ ಜಲಾಶಯ ಕ್ರೈಸ್ಟ್ ಗೇಟ್ ಅಳವಡಿಕೆ ನೆಪವೊಡ್ಡಿ ಎರಡನೆ ಬೆಳೆಗೆ ನೀರು ಅಲಭ್ಯತೆ ಆಗದಂತೆ ನೋಡಿಕೊಳ್ಳಲು ಮನವಿ ಮಾಡಿದ್ದೇವೆಂದರು. ಅಧಿಕ ಮಳೆ ಹಿನ್ನೆಲೆಯಲ್ಲಿ ಜಲಾಶಯ ಒಳ ಹರಿವು ಹೆಚ್ಚಳವಾಗಿದೆ ಸುಮಾರು 80 ಟಿಎಂಸಿ ನೀರು ಸಂಗ್ರಹವಾಗಿದೆ  ಮುಂಬರುವ ಬೇಸಿಗೆಯಲ್ಲಿ ಕೃಷಿ ಮತ್ತು ಕುಡಿಯುವ ನೀರಿಗೆ ತೊಂದರೆಯಾಗದಂತೆ ನಿಗಾವಹಿಸಬೇಕೆಂದರು. ಎರಡನೆ ಬೆಳೆ ಇಲ್ಲದಂತಾದರೆ ರೈತರು ಸೇರಿದಂತೆ ವ್ಯಾಪಾರಸ್ಥರು ಸೇರಿದಂತೆ ಅನೇಕ ಕೃಷಿ ಅವಲಂಬಿತರಿಗೆ ನಷ್ಟವಾಗಲಿದೆ ಎಂದರು.ಬೆಸಿಗೆ ಬೆಳೆಗೆ ನೀರು ಸಂಗ್ರಹಿಸಲು ಸಾಧ್ಯ ಗೇಟ್ ಅಳವಡಿಕೆ ನಡುವೆಯೂ ನೀರು ಸಂಗ್ರಹ ಮಾಡಬಹುದೆಂ...
Image
  ಜಿಲ್ಲಾಡಳಿತದಿಂದ ಕಿತ್ತೂರು ರಾಣಿ ಚನ್ನಮ್ಮ ಜಯಂತಿ:      ಕಿತ್ತೂರು ರಾಣಿ ಚನ್ನಮ್ಮ ಅವರ ಧೈರ್ಯ, ಸಾಹಸ ಪ್ರತಿಯೊಬ್ಬ ಮಹಿಳೆಗೂ ಆದರ್ಶ- ಕುಮಾರಸ್ವಾಮಿ ಜಯ ಧ್ವಜ ನ್ಯೂಸ್ ,ರಾಯಚೂರು ಅ.,23-   ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಅವರು ತೋರಿದಂತಹ ಧೈರ್ಯ, ಸಾಹಸ ನಾಡಿನ ಪ್ರತಿಯೊಬ್ಬ ಮಹಿಳೆಗೂ ಆದರ್ಶವಾದದ್ದು, ಪ್ರತಿಯೊಬ್ಬ ಮಹಿಳೆಗೂ ಸ್ಫೂರ್ತಿದಾಯಕವಾಗಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಕುಮಾರಸ್ವಾಮಿ ಅವರು ಹೇಳಿದರು.  ಅವರಿಂದು   ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಯಚೂರು ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ನಡೆದಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ  ಮಾತನಾಡಿದರು. ಬಾಲ್ಯದಿಂದಲೇ ಕುದುರೆ ಸವಾರಿ, ಕತ್ತಿ ಬಳಸುವ  ಬಗ್ಗೆ ತರಬೇತಿ ಪಡೆದಿದ್ದರು. ಚನ್ನಮ್ಮ ಅವರು ತನ್ನ ರಾಜ್ಯದ ರಕ್ಷಣೆಗಾಗಿ ಬ್ರಿಟಿಷರ ವಿರುದ್ಧ ಹೋರಾಡಿದ ಮೊದಲ ಮಹಿಳೆ. ಚನ್ನಮ್ಮ ಅವರ ಜೀವನ ಮತ್ತು ಹೋರಾಟ ನಾಡಿನ ಪ್ರತಿಯೊಬ್ಬ ಮಹಿಳೆಗೂ ಸ್ಫೂರ್ತಿದಾಯಕವಾಗಿದೆ. ಮಹಿಳೆಯರು ಕೂಡ ಸ್ವಾವಲಂಬಿಗಳಾಗಿ ಶೋಷಣೆ ಹಾಗೂ ಅನ್ಯಾಯದ ವಿರುದ್ಧ ಹೋರಾಟ ಮಾಡುವಂತಹ ಮನೋಭಾವನೆಯನ್ನು ಬೆಳೆಸಿಕೊಳ್ಳಬೇಕು ಎಂದರು. ಈ ವೇಳೆ ರಾಯಚೂರು ತಾಲೂಕು...
Image
ಮಂತ್ರಾಲಯ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಭೇಟಿ .                                                                         ಜಯಧ್ವಜ ನ್ಯೂಸ್, ರಾಯಚೂರು,ಅ.22-  ರಾಜ್ಯದ ಉಪಮುಖ್ಯಮಂತ್ರಿಗಳು ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರರವರು  ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿದರು.                      ಕುಟುಂಬ  ಸಮೇತರಾಗಿ ಆಗಮಿಸಿದ ಅವರು ಪ್ರಾರಂಭದಲ್ಲಿ   ಮಂಚಾಲಮ್ಮ ದೇವಿ ದರ್ಶನ ಪಡೆದು  ನಂತರ ರಾಯರ ಬೃಂದಾವನದ ದರ್ಶನ ಪಡೆದು ತದನಂತರ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥರಿಂದ ಫಲ ಮಂತ್ರಾಕ್ಷತೆ, ಸ್ಮರಣಿಕೆ ಪಡೆದುಕೊಂಡರು.
Image
  ಕಲಬುರಗಿ ಪೀಠದ ಮಾಹಿತಿ ಆಯುಕ್ತರಾಗಿ ಬಿ.ವೆಂಕಟ ಸಿಂಗ್ ಅಧಿಕಾರ ಸ್ವೀಕಾರ: ಸಾರ್ವಜನಿಕರಿಗೆ ಮಾಹಿತಿ ಒದಗಿಸುವುದಕ್ಕೆ ಪ್ರಥಮಾದ್ಯತೆ: ಬಿ.ವೆಂಕಟ ಸಿಂಗ್ ಜಯ ಧ್ವಜ ನ್ಯೂಸ್, ರಾಯಚೂರು,ಅ.21-  ಸಾರ್ವಜನಿಕ ಹಿತಾಸಕ್ತಿಯಡಿ ಕೋರುವ ಮಾಹಿತಿಯನ್ನು ಸಾರ್ವಜನಿಕರಿಗೆ ತ್ವರಿತಗತಿಯಲ್ಲಿ ಒದಗಿಸುವುದೇ ತಮ್ಮ ಪ್ರಥಮಾದ್ಯತೆಯಾಗಿರಲಿದೆ ಎಂದು ಕರ್ನಾಟಕ ಮಾಹಿತಿ ಆಯೋಗದ ಕಲಬುರಗಿ ಪೀಠದ ಮಾಹಿತಿ ಆಯುಕ್ತರಾದ ಬಿ. ವೆಂಕಟಸಿಂಗ್ ಅವರು ಹೇಳಿದರು.  ಇಂದು ಕಲಬುರಗಿ ನಗರದ ಕರ್ನಾಟಕ ಮಾಹಿತಿ ಆಯೋಗದ ಕಚೇರಿಯಲ್ಲಿ ಕಲಬುರಗಿ ಪೀಠದ ಮಾಹಿತಿ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಹಿತಿ ಅಧಿಕಾರಿಗಳಿಗೆ ದಂಡ ವಿಧಿಸುವ ಬದಲು ಸಾರ್ವಜನಿಕರಿಗೆ ಮಾಹಿತಿ ನೀಡುವ ಮೂಲಕ ನ್ಯಾಯ ಒದಗಿಸುವ ಕೆಲಸ ಪೀಠ ಮಾಡಲಿದೆ ಎಂದರು. ಉತ್ತರದಾಯಿತ್ವದ ಹಿನ್ನೆಲೆಯಲ್ಲಿ 2005ರಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದ ಮಾಹಿತಿ ಹಕ್ಕು ಕಾಯ್ದೆಯನ್ನು ಅದೇ ವರ್ಷ ರಾಜ್ಯದಲ್ಲಿ ಅನುಷ್ಠಾನ ಮಾಡುವ ಮೂಲಕ ಕಾಯ್ದೆ ಅನುಷ್ಠಾನಕ್ಕೆ ತಂದ ಮೊದಲ ರಾಜ್ಯ ಕರ್ನಾಟಕವಾಗಿದೆ. ಕಲಬುರಗಿ ಪೀಠದಲ್ಲಿ ಸುಮಾರು 7 ಸಾವಿರ ಅರ್ಜಿಗಳು ವಿಚಾರಣೆಗೆ ಬಾಕಿ ಇದ್ದು, ಇದನ್ನು ಹಂತ ಹಂತವಾಗಿ ವಿಲೇವಾರಿ ಮಾಡಲಾಗುವುದು ಎಂದರು. ದೇಶದ ವಿವಿಧ ರಾಜ್ಯಕ್ಕೆ ಹೋಲಿಸಿದಾಗ ಮಹಾರಾಷ್ಟ್ರದಲ್ಲಿ 60 ಸಾವಿರ, ತಮಿಳುನಾಡಿನಲ್ಲಿ 51 ಸಾವಿರ ಅರ್ಜಿ ವಿಚಾರಣೆಗೆ ಬಾಕಿ ಇದ...
Image
  ನ. 30ರಂದು ರಾಷ್ಟ್ರಮಟ್ಟದ ಬೆಳಕು ಸಂಭ್ರಮ-ಮೇಟಿಗೌಡ ಜಯ ಧ್ವಜ, ನ್ಯೂಸ್ , ರಾಯಚೂರು ,ಅ.19- ಸಾಹಿತ್ಯ, ಸಾಂಸ್ಕೃತಿಕ ಹಾಗೂ ಕಾವ್ಯ ಕ್ಷೇತ್ರದಲ್ಲಿ ಅಗ್ರಗಣ್ಯ ಸೇವೆ ಸಲ್ಲಿಸುತ್ತಿರುವ ಬೆಳಕು ಸಂಸ್ಥೆ ತನ್ನ 121ನೇ ಮಹತ್ವದ ಕಾರ್ಯಕ್ರಮವನ್ನು ನವೆಂಬರ್ 30ರಂದು ಬೆಂಗಳೂರು ನಗರದ ಚಾಮರಾಜಪೇಟೆಯ ಅಕ್ಕಮಹಾದೇವಿ ಸಭಾಂಗಣದಲ್ಲಿ ಭವ್ಯವಾಗಿ ಆಯೋಜಿಸಲಾಗಿದೆ ಎಂದು ಬೆಳಕು ಸಂಸ್ಥೆಯ ಸಂಸ್ಥಾಪರಾದ ಅಣ್ಣಪ್ಪ ಮೇಟಿಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಉಚಿತವಾಗಿ ಭಾಗವಹಿಸಬಹುದಾಗಿದ್ದು ರಾಷ್ಟ್ರಮಟ್ಟದ ಸಂಭ್ರಮದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ, ಸಾಹಿತ್ಯ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು, ಕವಿಗೋಷ್ಠಿ, ಗಾಯನ–ನೃತ್ಯ ಪ್ರದರ್ಶನಗಳು ಸೇರಿದಂತೆ ಸಾಧಕರಿಗೆ ರಾಷ್ಟ್ರಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಸಂಸ್ಥೆಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಕವಿಗೋಷ್ಠಿ, ಗಾಯನ, ನೃತ್ಯ ಮತ್ತು ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಸಕ್ತಿ ಹೊಂದಿರುವವರು ತಮ್ಮ ಪರಿಚಯ ವಿವರಗಳನ್ನು ಕೆಳಗಿನ ವಾಟ್ಸಾಪ್ ಸಂಖ್ಯೆಗೆ ಕಳುಹಿಸಿ ನೋಂದಣಿ ಮಾಡಿಕೊಳ್ಳುವಂತೆ ಸಂಸ್ಥೆ ತಿಳಿಸಿದೆ. ಆಯ್ಕೆ ಸಮಿತಿ ತೀರ್ಮಾನವೇ ಅಂತಿಮವಾಗಲಿದದು ಆಸಕ್ತರು ಸಂಪರ್ಕಿಸಲು,ಅಣ್ಣಪ್ಪ ಮೇಟಿಗೌಡ,ಸಂಸ್ಥಾಪಕ ಅಧ್ಯಕ್ಷರು, ಬೆಳಕು ಸಂಸ್ಥೆ ಮೋ.ನಂ. 9035996070ಗೆ ಸಂಪರ್ಕಿಸಲು ತಿಳಿಸಿದ್ದಾರೆ.
Image
  ದೀಪಾವಳಿ ಪಟಾಕಿ ಖರೀದಿ ಜೋರು:                  ಗ್ರಾಹಕರಿಗೆ   ಬೆಲೆ ಹೆಚ್ಚಳ ಬಿಸಿ; ಮಾರಾಟಗಾರರಿಗೆ ಕಠಿಣ ನಿಯಮಾವಳಿ                                                     ಜಯ ಧ್ವಜ ನ್ಯೂಸ್ , ರಾಯಚೂರು , ಅ.19-               ನಗರದ ಬಸವೇಶ್ವರ ವೃತ್ತದ ಬಳಿಯ ವಾಲ್ಕಟ್ ಮೈದಾನದಲ್ಲಿ ದೀಪಾವಳಿ ಪಟಾಕಿ ಮಳಿಗೆಗಳನ್ನು ತೆರೆಯಲಾಗಿದ್ದು ಖರೀದಿ ಜೋರಾಗಿ ನಡೆದಿದೆ. ಅತ್ತ ಪಟಾಕಿ ಬೆಲೆ ಏರಿಕೆಯಿಂದ ಗ್ರಾಹಕರ ಜೇಬು ಸುಡುತ್ತಿದ್ದರೆ ಇತ್ತ  ಕಠಿಣ ನಿಯಮಾವಳಿ ಗಳಿಂದ ಮಾರಾಟಗಾರರು ಬೇಸರ ವ್ಯಕ್ತಪಡಿಸಿದ್ದಾರೆ. ಒಂದು ವಾರ ಪಟಾಕಿ ಮಾರಾಟಕ್ಕೆ ಅವಕಾಶ ನೀಡಲಾಗಿದ್ದು ಅದನ್ನು ಹೆಚ್ಚಳ ಮಾಡಿದ್ದರೆ ವ್ಯಾಪಾರಕ್ಕೆ ಅನುಕೂಲವಾಗುತ್ತಿತ್ತು ಎಂದು ಮಾರಾಟಗಾರರ ಅನಿಸಿಕೆಯಾಗಿದೆ.       ತರಹೇವಾರಿ ಪಟಾಕಿ : ಸುಮಾರು ಮೂವತ್ತಕ್ಕೂ ಅಧಿಕ ಅಂಗಡಿಗಳು ಇದ್ದು ವಿವಿಧ ಬಗೆಯ ಪಟಾಕಿ ಮಾರಾಟಕ್ಕಿವೆ ಬಾನಂಗಳದಲ್ಲಿ ಚಿತ್ತಾರ ಮೂಡಿಸುವ ಪಟಾಕಿ ಜೊತೆಗೆ ಕಿವಿಗಡಚಿಕ್ಕುವ ಆಟಂ ಬಾಂಬ್, ಡಬಲ್ ಸೌಂಡ್, ಮಾರುದ್ದದ ಪಟಾಕಿ ಸರಗಳು, ನವಿಲು ಗರಿ...
Image
ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷರನ್ನು ಭೇಟಿಯಾದ ರಮೇಶ್ ಕುಲಕರ್ಣಿ                                                                                 ಜಯಧ್ವಜ  ನ್ಯೂಸ್ ,  ರಾಯಚೂರು, ಅ.19-   ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ  ಆಸುಗೋಡ ಜಯಸಿಂಹ ರವರನ್ನು ಬೆಂಗಳೂರಿನಲ್ಲಿ ರಾಯಚೂರು   ಜಿಲ್ಲಾ ಪ್ರತಿನಿಧಿ ರಮೇಶ್ ಕುಲಕರ್ಣಿ ಭೇಟಿ ಮಾಡಿದರು. ರಾಯಚೂರು ಜಿಲ್ಲೆಯ ವಿಪ್ರ ಸಮುದಾಯದ ವಿದ್ಯಾರ್ಥಿಗಳಿಗೆ ಹಾಗೂ ಆರ್ಥಿಕವಾಗಿ ಹಿಂದುಳಿದವರಿಗೆ ಮತ್ತು ವಿಪ್ರ ಸಮಾಜದ ಬಡವರಿಗೆ ಅಭಿವೃದ್ಧಿ ಮಂಡಳಿಯಿಂದ ದೊರೆಯುವ ಸೌಲಭ್ಯಗಳನ್ನು ಶೀಘ್ರದಲ್ಲೇ ದೊರೆಯುವಂತೆ ಮಾಡಬೇಕು, ಜೊತೆಯಲ್ಲಿ ಅಕ್ಟೋಬರ್ 31ಕ್ಕೆ ಸಾಲ ಸೌಲಭ್ಯಗಳ ದಿನಾಂಕ ಕೊನೆಗೊಳ್ಳುತ್ತಿದ್ದು ಇನ್ನು ಬಹಳಷ್ಟು ವಿಪ್ರ ಸಮಾಜದ ಬಂಧುಗಳು, ವಿದ್ಯಾರ್ಥಿಗಳು  ಇಡ್ಬ್ಲೂಎಸ್ ಸರ್ಟಿಫಿಕೇಟ್ ಪಡೆದುಕೊಂಡಿರುವುದಿಲ್ಲ, ಹಾಗಾಗಿ ನವಂಬರ್ 30ರವರೆಗೆ ಅರ್ಜಿ ಸಲ್ಲಿಸುವ ಅವಕಾಶ ನೀಡಬೇಕೆಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯ ಜಂಟಿ ಕಾರ್ಯದರ್ಶಿಗಳಾದ...
Image
ಸಚಿವ ದಿನೇಶ್ ಗುಂಡೂರಾವ್  ಭೇಟಿಯಾದ ಜಿಲ್ಲಾ ಪ್ರತಿನಿಧಿ ರಮೇಶ್ ಕುಲಕರ್ಣಿ                                        ಜಯ ಧ್ವಜ ನ್ಯೂಸ್ ರಾಯಚೂರು , ಅ.18-  ಇಂದು ಬೆಂಗಳೂರಿನಲ್ಲಿ ಕರ್ನಾಟಕ ಸರ್ಕಾರದ ಆರೋಗ್ಯ ಸಚಿವರಾದ  ದಿನೇಶ್ ಗುಂಡೂರಾವ್ ರವರನ್ನು ರಾಯಚೂರು ಜಿಲ್ಲೆಯ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಜಿಲ್ಲಾ ಪ್ರತಿನಿಧಿ  ರಮೇಶ್ ಕುಲಕರಣಿ ಹಾಗೂ ರಾಜ್ಯ ಜಂಟಿ ಕಾರ್ಯದರ್ಶಿ ಜಯಕುಮಾರ್ ಗಬ್ಬೂರ್ ಹಾಗೂ ರಾಜ್ಯ ಕಾರ್ಯ ಕಾರಣಿ ಸದಸ್ಯ  ಪ್ರವೀಣ್ ಕುಮಾರ್ ಜಾಗೀರ್ದಾರ್ ರವರು ಭೇಟಿಯಾಗಿ ಚರ್ಚಿಸಿದರು. ರಾಯಚೂರು ಜಿಲ್ಲಾ ಬ್ರಾಹ್ಮಣ ಮಹಾಸಭಾಕ್ಕೆ ಹಾಗೂ ನಗರದ ಗಾಯತ್ರಿ ಭವನ ಕಟ್ಟಡಕ್ಕೆ ಸರ್ಕಾರದಿಂದ ಹೆಚ್ಚಿನ ಅನುದಾನ ಬಿಡುಗಡೆ ಮಾಡಿ ವಿಪ್ರ ಬಾಂಧವರಿಗೆ ಅನುಕೂಲ ಮಾಡಿಕೊಡಬೇಕೆಂದು ವಿನಂತಿಸಿದರು.  ಮುಂದಿನ ದಿನದಲ್ಲಿ ನಡೆಯುವ ರಾಯಚೂರು ಜಿಲ್ಲಾ ವಿಪ್ರ ಸಮಾವೇಶದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.
Image
ಕುರ್ಡಿ ಗ್ರಾಮದಲ್ಲಿ ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಅನುಕೂಲ ಕಲ್ಪಿಸಲು ವಸಂತಕುಮಾರ್ ಗೆ ಫಲಾನುಭವಿಗಳು ಮನವಿ.                     ಜಯ ಧ್ವಜ ನ್ಯೂಸ್ , ರಾಯಚೂರು, ಅ.18 - ಇಂದು ವಿಧಾನ ಪರಿಷತ್ ಸದಸ್ಯ ಎ.ವಸಂತ ಕುಮಾರ ಅವರನ್ನು ಮಾನವಿ ತಾಲ್ಲೂಕಿನ‌ ಕುರ್ಡಿ ಗ್ರಾಮದ ನಿವಾಸಿಗಳು ಭೇಟಿಯಾಗಿ  ಸಾಗುವಳಿ ಜಮೀನಿನ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದರು. ಕುರ್ಡಿ ಗ್ರಾಮದಲ್ಲಿ ಹತ್ತಾರು ವರ್ಷಗಳಿಂದ ಸರಕಾರಿ‌ ಜಮೀನು ಸಾಗುವಳಿ ಮಾಡುತ್ತ ಬಂದಂತಹ ಹತ್ತಾರು ಕುಟುಂಬಗಳನ್ನು ಇತ್ತೀಚಿಗೆ ಕೆಲವು ಪಟ್ಟಭದ್ರ ಹಿತಾಸಕ್ತ‌ ವ್ಯಕ್ತಿಗಳು ತಡೆದಿರುವದರಿಂದ ಬಡ ಗ್ರಾಮಸ್ಥರಿಗೆ ತೊಂದರೆಯಾಗಿರುವ  ಬಗ್ಗೆ ಗ್ರಾಮಸ್ಥರು ಎ.ವಸಂತಕುಮಾರ ಅವರಿಗೆ ಭೇಟಿಯಾಗಿ ಮನವಿ ಮಾಡಿದರು. ಈ ಸಂದರ್ಭದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಮಾತನಾಡಿದ ಎ.ವಸಂತಕುಮಾರ ಅವರು ಗ್ರಾಮಸ್ಥರ ಸಮಕ್ಷಮದಲ್ಲಿ ಪಂಚನಾಮೆ ಮಾಡಿ ನೈಜ ಫಲಾನುಭವಿಗಳಿಗೆ ಸಾಗುವಳಿ ಮಾಡಲು ಅನುಕೂಲ ಮಾಡಿಕೊಡಬೇಕೆಂದು ಸೂಚಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಮಹಿಳೆಯರು, ಕುಟುಂಭಸ್ಥರು, ಫಲಾನುಭವಿಗಳು ಹಾಜರಿದ್ದರು.
Image
     ಎ ಆರ್ ವಿ ಸಿಮೆಂಟ್ ಸೊಸೈಟಿ ಮತ್ತು ವೈಟಿಪಿಎಸ್ ಅಧಿಕಾರಿಗಳು ಹಾರು ಬೂದಿ ಸಾಗಾಟ ಮಾಡುವ ಒಪ್ಪಂದ ಮತ್ತು ಷರತ್ತು ನಿಯಮ ಪಾಲನೆ ವಿಫಲತೆ ವಿರೋಧಿಸಿ  ಅ.27 ರಂದು ರೈತ ಸಂಘ ಪ್ರತಿಭಟನೆ . ಜಯ ಧ್ವಜ ನ್ಯೂಸ್ , ರಾಯಚೂರು ,ಅ.17- ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ವತಿಯಿಂದ ಮನವಿ ಪತ್ರದಲ್ಲಿ ತಿಳಿಯಪಡಿಸುವುದೇನೆಂದರೆ ದಿನಾಂಕ 10.12.2021 ರಂದು ಎ ಆರ್ ವಿ ಸಿಮೆಂಟ್ ಸೊಸೈಟಿ ಇವರು ವೈ ಟಿ ಪಿ ಎಸ್, ಆರ್ ಪಿ ಸಿ ಎಲ್ ಚಿಕ್ಕಸೂಗೂರು ತಾಲೂಕು ಜಿಲ್ಲಾ ರಾಯಚೂರು ಈ ಕಂಪನಿಯಲ್ಲಿ ಹಾರುಭೂದಿಯನ್ನು ತೆಗೆದುಕೊಂಡು ಹೋಗಲು ಕೆಲವು ಶರತ್ತು / ನಿಯಮ ಮಾಡಿಕೊಂಡಿದ್ದು ಇರುತ್ತದೆ ಒಪ್ಪಂದ ಏನೆಂದರೆ ಸದರಿ ಹಾರು ಬೂದಿಯನ್ನು ರೈಲ್ವೆ  ವ್ಯಾಗನ್ ಗಳ ಮುಖಾಂತರ ಸಾಗಾಟ ಮಾಡಬೇಕು ಎಂದು ಇರುತ್ತದೆ, ಆದರೆ ದುರಾದೃಷ್ಟದ ಸಂಗತಿ ಏನಂದರೆ  ಕಾನೂನು ಕಟ್ಟಳೆಗಳನ್ನು ಮುರಿದು ರಸ್ತೆಯ ಮುಖಾಂತರ ಭಾರಿ ಬಲ್ಕರ್ ವಾಹನಗಳಿಂದ ಅಕ್ರಮ ಸಾಗಾಟ ಮುಂದುವರೆದಿದೆ, ಈ ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಎ ಆರ್ ವಿ ಸಿಮೆಂಟ್ ಸೊಸೈಟಿ ಮತ್ತು ವೈ ಟಿ ಪಿ ಎಸ್ ಪ್ರಮುಖ ಅಧಿಕಾರಿಗಳು ಭಾಗಿಯಾಗುವುದು ಮೇಲ್ನೋಟಕ್ಕೆ ಕಂಡುಬರುತ್ತದೆ ಎಂದು ರೈತ ಸಂಘ ಆರೋಪಿಸಿದ್ದುಈ ಕುರಿತಂತೆ ದಿನಾಂಕ 19.07.2025  ರಂದು ಕೆಪಿಸಿಎಲ್ ಮುಖ್ಯ ಕಚೇರಿ ಬೆಂಗಳೂರು ಟೆಕ್ನಿಕಲ್ ಡೈರೆಕ್ಟರ್ ಅವರಿಗೆ ನ...
Image
ಅನಂತಪುರ ಬಳಿ ಖಾಸಗಿ ಬಸ್‌ಗೆ ಬೆಂಕಿ:                ಮಹಿಳೆಯ ಸಮಯಪ್ರಜ್ಞೆಯಿಂದ ತಪ್ಪಿದ ಭಾರಿ ದುರಂತ ಜಯ ಧ್ವಜ ನ್ಯೂಸ್ ರಾಯಚೂರು, ಅ.17- ಬೆಂಗಳೂರನಿಂದ ರಾಯಚೂರಿಗೆ ಬರುತ್ತಿದ್ದ ಖಾಸಗಿ ಬಸ್ ನಡುರಸ್ತೆಯಲ್ಲೇ ಬೆಂಕಿಗೆ ಆಹುತಿಯಾದ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಗರದಿನ್ನೆ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ನಡೆದಿದೆ. ಅದೃಷ್ಟವಶಾತ  ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವೆಂದು ಹೇಳಲಾಗುತ್ತಿದೆ. ಗ್ರೀನ್ ಲೈನ್ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ ಬಸ್‌ನ ಹಿಂಬದಿ ಟಯರ್ ಬ್ಲಾಸ್ಟ್ ಆಗಿ ಕ್ಷಣಾರ್ಧದಲ್ಲಿ ಬೆಂಕಿಯ ಕಿಡಿ ಚಿಮ್ಮಿದ ಪರಿಣಾಮ ಸಂಪೂರ್ಣ ಬಸ್ ಬೆಂಕಿಗೆ ಆಹುತಿಯಾಗಿದೆ. ಆದರೆ, ಬಸ್‌ನಲ್ಲಿದ್ದ 36 ಮಂದಿ ಪ್ರಯಾಣಿಕರು ಸಕಾಲದಲ್ಲಿ ಹೊರಬಂದ ಪರಿಣಾಮ ದೊಡ್ಡ ದುರಂತ ತಪ್ಪಿದೆ.         ಬಸ್‌ನ ಹಿಂಭಾಗದಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ರಾಯಚೂರು ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ನಿರ್ಮಲಾ ಬೆಣ್ಣೆ ಅವರು ತಕ್ಷಣ ಚಾಲಕನಿಗೆ ತಿಳಿಸಿದರೂ, ಚಾಲಕ ಅದನ್ನು ತಕ್ಷಣವಾಗಿ ಗಮನಿಸದೇ ಕೆಲವು ಅಂತರದವರೆಗೆ ಚಾಲನೆ ಮುಂದುವರಿಸಿದ್ದಾನೆ. ಬಳಿಕ ಬೆಂಕಿ ತೀವ್ರಗೊಳ್ಳುತ್ತಿದ್ದಂತೆಯೇ ನಿರ್ಮಲಾ ಬೆಣ್ಣೆ ಅವರ ಒತ್ತಾಯದ ಮೇರೆಗೆ ಬಸ್ ನಿಲ್ಲಿಸಲಾಯಿತು. ಪ್ರಯಾಣಿಕರು ತಕ್ಷಣ ಬಸ್‌ನಿಂದ ಇಳಿದುಕೊಂಡು ಪ್ರಾಣ ಉಳಿಸಿಕೊಂಡಿದ್ದಾರ...
Image
  ಕೃಷಿ ಸಂಸ್ಕರಣ ಘಟಕಗಳ ಬಳಕೆಯಿಂದ ರೈತರ ಉತ್ಪನ್ನಗಳಿಗೆ ಹೆಚ್ಚಿನ ಬೆಲೆ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಸಲಹೆ ಜಯ ಧ್ವಜ ನ್ಯೂಸ್ , ರಾಯಚೂರು , ಅ. 16 - ಕೃಷಿ ಸಂಸ್ಕರಣಾ ಘಟಕಗಳನ್ನು (ಅಗ್ರೋ ಪ್ರೊಸೆಸಿಂಗ್ ಸೆಂಟರ್) ಬಳಸಿಕೊಂಡಲ್ಲಿ ರೈತರ ಕೃಷಿ ಉತ್ಪನ್ನಗಳಿಗೆ ಹೆಚ್ಚಿನ ಬೆಲೆ ಸಿಗಲಿದೆ. ರೈತರಿಗೆ ಮಾರುಕಟ್ಟೆ ಮತ್ತು ಸಂಪರ್ಕ ಸರಳವಾಗಲಿದೆ ಎಂದು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ರೈತರಿಗೆ ಸಲಹೆ ಮಾಡಿದರು. ಸಿಂಧನೂರು ತಾಲೂಕಿನ ಜವಳಗೇರಾ ಗ್ರಾಮದಲ್ಲಿ ಅಕ್ಟೋಬರ್ 16ರಂದು ಭಾರತ ಸರ್ಕಾರ ಮತ್ತು ನಬಾರ್ಡ್ ಇವರ ಸಹಯೋಗದಲ್ಲಿ ನಡೆದ ಕೃಷಿ ಸಂಸ್ಕರಣೆಗಾಗಿ ರೈತರ ತರಬೇತಿ ಮತ್ತು ಸಾಮಾನ್ಯ ಸೌಲಭ್ಯ ಕೇಂದ್ರವನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದರು. ಇಡೀ ರಾಯಚೂರು ಜಿಲ್ಲೆಯಾದ್ಯಂತ ಅಂದಾಜು 40 ಕೃಷಿ ಸಂಸ್ಕರಣ ಘಟಕಗಳ ಸ್ಥಾಪನೆ ಮಾಡಿ ಸಂಸ್ಕರಣೆಗೊಳಪಡಿಸುವಷ್ಟು ರಾಯಚೂರು ಜಿಲ್ಲೆಯೊಂದರಲ್ಲಿಯೇ ಪ್ರತಿ ವರ್ಷ ಅಂದಾಜು ಸಾವಿರಾರು ಮೆಟ್ರಿಕ್ ಟನ್ ರಷ್ಟು ತೊಗರಿ ಉತ್ಪನ್ನ ಬರುತ್ತದೆ ಎನ್ನುವ ಮಾಹಿತಿ ಇದೆ. ತುಂಗಭದ್ರಾ ಮತ್ತು ಕೃಷ್ಣಾ ನದಿಗಳ ಮಧ್ಯೆದ ಈ ಭೂಮಿಯು ಅತ್ಯಂತ ಸಂಪದ್ಭರಿತವಾಗಿದೆ. ಈ ಪ್ರದೇಶದಲ್ಲಿ ಪ್ರತಿ ವರ್ಷ ಅಂದಾಜು 80,000 ಮೆಟ್ರಿಕ್ ಟನ್ ತೊಗರಿ ಉತ್ಪನ್ನ ಹಾಗೂ ಅಂದಾಜು 34,000 ಮೆಟ್ರಿಕ್ ಟನ್ ಕಡಲೆ ಉತ್ಪನ್ನ ಬರುತ್ತಿದ್ದು, ಯಾವುದೇ ಉತ್ಪನ್ನ ಇರಲಿ ರೈ...
Image
  ಕಾರ್ಮಿಕ ಇಲಾಖೆಯಿಂದ ರಾಜ್ಯದಲ್ಲಿ ವಿನೂತನ ಯೋಜನೆಗಳು ಜಾರಿ- ಸಚಿವ ಸಂತೋಷ ಲಾಡ್.   ಜಯ ಧ್ವಜ ನ್ಯೂಸ್ ,ರಾಯಚೂರು ,ಅಕ್ಟೋಬರ್ 15 - ಇ- ಕಾಮರ್ಸ ವಲಯಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉದ್ಯೋಗ ಕೊಡುವ ಖಾಸಗಿ ಉದ್ಯೋಗದಾತರಿಗೆ ಮರುಪಾವತಿಯ ಆಶಾದೀಪ ಹಾಗೂ ಕರ್ನಾಟಕ ಸಿನೆಮಾ ಮತ್ತು ಸಾಂಸ್ಮೃತಿಕ‌ ಚಟುವಟಿಕೆಯಲ್ಲಿ ತೊಡಗಿದ ಕಾರ್ಮಿಕರಿಗೆ ಸಾಮಾಜಿಕ ಭದ್ರತಾ ಸೌಲಭ್ಯ ಒದಗಿಸಲು ಹೊಸದಾಗಿ ಸಿನೇಮಾ ಕಾರ್ಮಿಕರ ಸುಂಕ ಅಧಿನಿಯಮ ಜಾರಿಯಂತಹ ವಿನೂತನ ಯೋಜನೆಗಳನ್ನು ರಾಜ್ಯ ಕಾರ್ಮಿಕ ಇಲಾಖೆಯು ರೂಪಿಸಿ ಇಡೀ ದೇಶವೇ ಕರ್ನಾಟಕ ರಾಜ್ಯದತ್ತ ನೋಡುವಂತಾಗಿದೆ ಎಂದು ರಾಜ್ಯ ಕಾರ್ಮಿಕ ಸಚಿವರಾದ ಸಂತೋಷ ಲಾಡ್ ಅವರು ಹೇಳಿದರು. ನಗರದ ಗಂಜ್ ಕಲ್ಯಾಣ ಮಂಟಪದಲ್ಲಿ ಅ.15ರಂದು ನಡೆದ ಜಿಲ್ಲೆಯ ವಿವಿಧ ವರ್ಗದ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಸಣ್ಣ ಸಣ್ಣ ಕಸುಬು ಮಾಡುವ 101 ವರ್ಗದ ಕಾರ್ಮಿಕರು ದೇಶದ ದುಡಿಯುವ ವರ್ಗದಲ್ಲಿ ಶೇ.83ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇವರು ಅಸಂಘಟಿತ ವಲಯದಲ್ಲಿ ಇರುವುದಾಗಿ ಅಂದಾಜಿಸಿದ್ದು, ಶಾಸನಬದ್ದ ಸೌಲಭ್ಯಗಳಿಂದ ವಂಚಿತರಾಗಿರುವ ಸಂಭವ ಹೆಚ್ಚಾಗಿದೆ. ಇವರ ಜೀವನಮಟ್ಟ ಉತ್ತಮಪಡಿಸಿ ಅಸಂಘಟಿತ ಕಾರ್ಮಿಕರಿಗೆ ಸಾಮಾಜಿಕ ಭ...
Image
  ಶ್ರೀ ಮಹರ್ಷೀ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ವಿಪ್ರ   ವಿದ್ಯಾರ್ಥಿಗಳ ಸಾಧನೆ: ಕೆಕೆಬಿಎಂಎಸ್  ನಿಂದ ಸನ್ಮಾನ                                                                                                                  ಜಯ ಧ್ವಜ ನ್ಯೂಸ್ ರಾಯಚೂರು,ಅ.15- ಶ್ರೀ ಮಹರ್ಷೀ ವಾಲ್ಮೀಕಿ ವಿಶ್ವವಿದ್ಯಾಲಯದಲ್ಲಿ ವಿಪ್ರ  ವಿದ್ಯಾರ್ಥಿಗಳು ಸಾಧನೆ ಮೆರೆದ ಹಿನ್ನಲೆಯಲ್ಲಿ  ಕಲ್ಯಾಣ ಕರ್ನಾಟಕ ಬ್ರಾಹ್ಮಣ ಮಹಾಸಭಾ  ಜಿಲ್ಲಾ ಘಟಕದಿಂದ  ವಿದ್ಯಾರ್ಥಿಗಳಿಗೆ ಸನ್ಮಾನಿಸಲಾಯಿತು.                                                      ವಿಪ್ರ ಸಮಾಜದ ವಿದ್ಯಾರ್ಥಿಗಳಾದ  ಅನುಷಾ ಕೀಲಿ ತಂದೆ ಪ್ರಸನ್ನ ಕೀಲಿ ಅವರು  ವಿಶ್...
Image
  ಜಿಲ್ಲಾ ಕಾಂಗ್ರೆಸ್ ಸಮಿತಿ ಹೆಚ್ಚುವರಿ ಪದಾಧಿಕಾರಿಗಳ ನೇಮಕ:                                                         ಜಯ ಧ್ವಜ ನ್ಯೂಸ್ ರಾಯಚೂರು, ಅ.15 - ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಮನವಿಯ ಮೇರೆಗೆ ರಾಯಚೂರು ಜಿಲ್ಲಾ ಕಾಂಗ್ರೆ ಸ್ ಸಮಿತಿಗೆ ಈ ಕೆಳಕಾಣಿಸಿದಂತೆ ಹೆಚ್ಚುವರಿ ಪದಾಧಿಕಾರಿಗಳ ಪಟ್ಟಿಯನ್ನು  ಕೆಪಿಸಿಸಿ ಅಧ್ಯಕ್ಷರಾದ  ಡಿ.ಕೆ. ಶಿವಕುಮಾರ್ ರವರು ಅನುಮೋದನೆ ನೀಡಿದ್ದಾರೆ.  ಉಪಾಧ್ಯ ಕ್ಷರಾಗಿ ಅಬ್ದುಲ್ ಕರೀಂ, ಜಿ.ಶಿವಮೂರ್ತಿ, ಅಂದಾನಪ್ಪ ಗುಂಡಳ್ಳಿ, ಪ್ರಧಾನ ಕಾರ್ಯದರ್ಶಿಯಾಗಿ ದರೂರು ಬಸವರಾಜ ಪಾಟೀಲ, ರುದ್ರಪ್ಪ ಅಂಗಡಿ, ಈಶಪ್ಪ, ರಾಜಶೇಖರ ರಾಮಸ್ವಾಮಿ, ಶ್ರೀನಿವಾಸ ಶಿಂದೇ, ಕಾರ್ಯದರ್ಶಿಯಾಗಿ ಕೆ.ಇ.ಕುಮಾರ್, ರಾಮಕೃಷ್ಣ ನಾಯಕ್, ಸೈಯದ್ ದಸ್ತಗೀರ್,  ರಿಯಾಜ್ ಆಜಾದ್ ನಗರ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಅಂಜಿನೇಯ್ಯ ಕೊಂಬಿನ್ ನೇಮಕ ವಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Image
  ಆರೆಸ್ಸೆಸ್ ಚಟುವಟಿಕೆ ನಿರ್ಬಂಧಕ್ಕೆ  ಪ್ರಿಯಾಂಕ ಖರ್ಗೆಯವರು ಸಿಎಂಗೆ  ಪತ್ರ ಬರೆದಿರುವುದು ಸಮಯೋಚಿತ, ಸಮಂಜಸ ನಡೆಯಾಗಿದೆ- ವಸಂತ ಕುಮಾರ್    ಜಯಧ್ವಜ ನ್ಯೂಸ್ , ರಾಯಚೂರು, ಅ.14- ಆರೆಸ್ಸೆಸ್ ಚಟುವಟಿಕೆ ನಿರ್ಬಂಧಕ್ಕೆ   ಪ್ರಿಯಾಂಕ ಖರ್ಗೆಯವರು ಸಿಎಂಗೆ  ಪತ್ರ ಬರೆದಿರುವದು ಸಮಯೋಚಿತ, ಸಮಂಜಸ ನಡೆಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಎ. ವಸಂತ ಕುಮಾರ್   ಹೇಳಿದರು. ಅವರಿಂದು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ  ಮಾತನಾಡಿ ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ ಖರ್ಗೆಯವರು ಮಾತನಾಡಿದ್ದು ಸರಿಯಿದೆ ಎಂದ ಅವರು  ಕಾಂಗ್ರೆಸ್ ಪಕ್ಷಕ್ಕೆ ಧಮ್ಮು ತಾಕತ್ತು ಇರುವುದರಿಂದಲೇ ದೇಶದಲ್ಲಿ ಮೂರು ಬಾರಿ ಆರೆಸ್ಸೆಸ್ ನಿಷೇಧಿಸಲಾಗಿತ್ತು. ಮೂರು ಬಾರಿಯೂ ಮುಚ್ಚಳಿಕೆ ಬರದು ಕೊಟ್ಟ ಆರೆಸ್ಸೆಸ್ ನಡೆಯಿಂದಲೇ ನಿಷೇಧ ನಿರ್ಬಂಧ ಸಡಿಸಲಾಗಿತ್ತು. ಬಿಜೆಪಿ ನಾಯಕರು ಸತ್ಯವನ್ನು ಅರಿತು ಮಾತನಾಡಬೇಕೆಂದ ಅವರು  ಹೇಳಿದರು. ಸಮಾಜ ಸ್ವಾಸ್ಥ ಹಾಳು ಮಾಡುತ್ತಿರುವದರಿಂದ ಸರ್ಕಾರ ಶಾಲೆಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆ ನಿರ್ಬಂಧಿಸಬೇಕೆಂದು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಆದರೆ ಬಿಜೆಪಿ ನಾಯಕರುಗಳ ಆರೆಸ್ಸೆಸ್ ಸಮಾಜಿಕ ಸೇವಾ ಸಂಘಟನೆಯೆಂದು ಸಮರ್ಥಿಸಿಕೊಳ್ಳುತ್ತಿದ್ದಾರೆ. ಸ್ವಾತಂತ್ರ್ಯ ಪೂರ್ವದಿಂದಲೂ ಬ್ರಿಟಿಷರ ಪರವಾಗ...
Image
    ನಗರದ ವಾರ್ಡ್ ನಂಬರ್ 17ರ ಗಾಜಗಾರ ಪೇಟೆಯ ಬಾಪನಯ್ಯ ದೊಡ್ಡಿಯಲ್ಲಿ ಅವೈಜ್ಞಾನಿಕವಾಗಿ ನಿರ್ಮಾಣವಾಗುತ್ತಿರುವ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಬ್ರಾಹ್ಮಣ ಸಮಾಜ ತೀರ್ವ ವಿರೋಧ ಜಯ ಧ್ವಜ ನ್ಯೂಸ್ ರಾಯಚೂರು, ಅ.13- ನಗರದ ವಾರ್ಡ್ ನಂಬರ್ 17ರ ಗಾಜಗಾರಪೇಟೆಯ ಬಾಪನಯ್ಯ ದೊಡ್ಡಿ ಎನ್ನುವ ಸ್ಥಳದಲ್ಲಿ ಮುಖ್ಯ ರಸ್ತೆಗೆ ಹೊಂದಿಕೊಂಡು ಮಹಾನಗರ ಪಾಲಿಕೆ ವತಿಯಿಂದ ಸಾರ್ವಜನಿಕ ಶೌಚಾಲಯವನ್ನು ಸ್ವಚ್ಛ ಭಾರತ ಮಿಷನ್ ಅಡಿಯಲ್ಲಿ ನಿರ್ಮಾಣ ಮಾಡಲು ತಯಾರಿ ನಡೆಸಿದ್ದು ಅದನ್ನು ತಡೆಯಬೇಕೆಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಜಿಲ್ಲಾ ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಹಾಗೂ ಮಹಾನಗರ ಪಾಲಿಕೆ ಮಹಾಪೌರರಿಗೆ, ಆಯುಕ್ತರಿಗೆ, ಭೂ ಪಾಪನ ಇಲಾಖೆ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.  ಬೆಳಿಗ್ಗೆ ಬ್ರಾಹ್ಮಣ ಸಮಾಜ ಬಾಂಧವರು ಮನವಿ ಪತ್ರ ಸಲ್ಲಿಸಿ, ಅತ್ಯಂತ ಅವೈಜ್ಞಾನಿಕವಾಗಿ ಶೌಚಾಲಯ ನಿರ್ಮಾಣಕ್ಕೆ ಸಿದ್ಧತೆ ನಡೆದಿದ್ದು ಕೂಡಲೆ ಕಾಮಗಾರಿಗೆ ಒಪ್ಪಿಗೆ ನೀಡದಂತೆ ಆಗ್ರಹಿಸಲಾಯಿತು.  ಸಾರ್ವಜನಿಕರಿಗೆ ತೊಂದರೆ ಆಗುತ್ತದೆ, ಸದರಿ ಶೌಚಾಲಯ ನಿರ್ಮಾಣ ಮಾಡುತ್ತಿರುವ ಸ್ಥಳದ ಸುತ್ತಮುತ್ತಲು ಪುರಾತನವಾದ ದೇವಸ್ಥಾನ ಹಾಗೂ ಉತ್ತರಾದಿ ಮಠ, ಪಂಚ ಯತಿಗಳ ಬೃಂದಾವನ ಹಾಗೂ ಸಾರ್ವಜನಿಕರಿಗೆ ಉಪಯೋಗವಾಗುತ್ತಿರುವಂತಹ ನೀರಿನ ಬಾವಿ ಜೊತೆಗೆ ಶೃಂಗೇರಿ ಶಾರದಾ ದೇವಿ ದೇವಸ್ಥಾನ, ಹಾಗೂ ಆನಂದೇಶ್ವರ ದೇವಸ್ಥಾನ ಪಕ್ಕದಲ್ಲಿ ಬಯಲು ಆಂಜನೇಯ ದೇವರ ದೇ...