Posts

Showing posts from December, 2025
Image
  ನೂತನ ಎಸ್ಪಿಯಾಗಿ ಅರುಣಾಂಗ್ಶುಗಿರಿ ನೇಮಕ.          ಜಯಧ್ವಜ ನ್ಯೂಸ್, ರಾಯಚೂರು ,ಡಿ.31-                  ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾಗಿ ಅರುಣಾಂಗ್ಶು ಗಿರಿ ನೇಮಕಗೊಳಿಸಿ ಸರ್ಕಾರ ಆದೇಶಿಸಿದೆ. ಈ ಮೊದಲು ಇವರು ಸಿಐಡಿ ಬೆಂಗಳೂರಿನಲ್ಲಿ ಎಸ್ಪಿ ಯಾಗಿ ಕಾರ್ಯನಿರ್ವಹಿಸಿದ್ದಾರೆ.               ಈ ಹಿಂದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾಗಿದ್ದ ಎಂ.ಪುಟ್ಟಮಾದಯ್ಯರವರನ್ನು ಕಲಬುರ್ಗಿ ಪೊಲೀಸ್ ತರಬೇತಿ ಕೇಂದ್ರದ ಉಪ ಪೊಲೀಸ್ ಮಹಾನಿರೀಕ್ಷಕರನ್ನಾಗಿ  ಬಡ್ತಿ ನೀಡಿ ಆದೇಶಿಸಲಾಗಿದೆ.
Image
  ಶ್ರೀ ಸುವಿದ್ಯೇಂದ್ರತೀರ್ಥ ಶ್ರೀಪಾದಂಗಳವರಿಂದ   ನೂತನ ಕ್ಯಾಲೆಂಡರ್ ಬಿಡುಗಡೆ.                                            ಜಯ ಧ್ವಜ ನ್ಯೂಸ್ , ರಾಯಚೂರು, ಡಿ.31- ನಗರದ ಸಾವಿತ್ರಿ ಕಾಲೋನಿಯ ಜೋಡು ವೀರಾಂಜನೇಯ ದೇವಸ್ಥಾನದಲ್ಲಿ ಇಂದು ಶ್ರೀ ಶ್ರೀ 1008 ಶ್ರೀ ಸುವಿದ್ಯೇಂದ್ರತೀರ್ಥ ಶ್ರೀಪಾದಂಗಳವರು ತಮ್ಮ ಅಮೃತ ಹಸ್ತದಿಂದ ಕಾಡ್ಲೂರು ಸಂಸ್ಥಾನ ಹೊರತಂದ 2026 ಇಸ್ವಿಯ ಅತ್ಯಾಕರ್ಷಕ ದಿನದರ್ಶಿಕೆ (ಕ್ಯಾಲೆಂಡರ್)ನ್ನು ಬಿಡುಗಡೆಗೊಳಿಸಿ ಆಶೀರ್ವದಿಸಿದರು.                           ಈ ಸಂದರ್ಭದಲ್ಲಿ ಕಾಡ್ಲೂರು ಸಂಸ್ಥಾನದ ಜಯಕುಮಾರ್ ದೇಸಾಯಿ ,ಆಲಂಪಲ್ಲಿ ಪ್ರತಿಷ್ಟಾನದ ಪ್ರಸನ್ನ ಆಲಂಪಲ್ಲಿ, ಜೋಡು ವೀರಾಂಜನೇಯ ದೇವಸ್ಥಾನ ಸಮಿತಿಯ ವೇಣುಗೋಪಾಲ್ ಆಚಾರ ಇನಾಂದಾರ್ ಇನ್ನಿತರರು ಇದ್ದರು.
Image
  ಎ.ವಸಂತಕುಮಾರ್ ಅವರಿಂದ ವಿಕಲಚೇತನರಿಗೆ ತ್ರಿಚಕ್ರ ವಾಹನ ವಿತರಣೆ.                                                                                                            ಜಯ ಧ್ವಜ ನ್ಯೂಸ್ ,ರಾಯಚೂರು,ಡಿ.31- ನಗರದಲ್ಲಿ ವಿಧಾನ ಪರಿಷತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಲ್ಲಿ ವಿಕಲಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿಧಾನ ಪರಿಷತ್ ಸದಸ್ಯರು, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಎ.ವಸಂತಕುಮಾರ ಅವರು ವಿತರಿಸಿದರು. ನಂತರ ಮಾತನಾಡಿದ ಅವರು‌ ವಿಕಲಚೇತನರಿಗೆ ಸರಕಾರದಿಂದ ವಿಶೇಷ ಸೌಲಭ್ಯ ಕೊಡುವ ನಿಟ್ಟಿನಲ್ಲಿ ತ್ರಿಚಕ್ರ ವಾಹನಗಳನ್ನು ನೀಡಲಾಗುತ್ತಿದ್ದು, ಇವುಗಳನ್ನು ಸದುಪಯೋಗ ಪಡಿಸಿಕೊಂಡು ತಮ್ಮ‌ ದಿನನಿತ್ಯದ  ಜೀವನದಲ್ಲಿ ಬೇರೆಯವರ‌ ಮೇಲೆ ಅವಲಂಬಿತರಾಗದೇ ಬಳಸಿಕೊಳ್ಳಲು ಸಲಹೆ ನೀಡಿದರು. ಅಲ್ಲದೇ ಸರಕಾರ ವಿವಿಧ ಯೋಜನೆಗಳಡಿಯಲ್ಲಿ ವಿಕಲಚೇತನರಿಗೆ ಗ್ರಾಮ ಪಂಚಾಯತ್ , ಜಿಲ್ಲಾ ಪಂಚಾಯತ, ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಮೂಲಕ ಹಲವು ...
Image
ವೈಕುಂಠ ಏಕಾದಶಿ: ಗಬ್ಬೂರು ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದಲ್ಲಿ ಲಕ್ಷ ಪುಷ್ಪಾರ್ಚನೆ                                        ಜಯ ಧ್ವಜ ನ್ಯೂಸ್, ರಾಯಚೂರು, ಡಿ.30- ವೈಕುಂಠ ಏಕಾದಶಿ ನಿಮಿತ್ಯ ದೇವದುರ್ಗ ತಾಲೂಕಿನ ಗಬ್ಬೂರಿನ ಶ್ರೀ ಲಕ್ಷ್ಮಿ ವೆಂಕಟೇಶ್ವರ ದೇವಸ್ಥಾನದಲ್ಲಿ ಲಕ್ಷ ಪುಷ್ಪಾರ್ಚನೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು.                                ಹೆಚ್ಚಿನ  ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀನಿವಾಸ ದೇವರ ಕೃಪೆಗೆ ಪಾತ್ರರಾದರು.
Image
ಜಿಲ್ಲಾಧಿಕಾರಿಗಳ ನಕಲಿ ಫೇಸ್ಬುಕ್ ಖಾತೆ ಮಾಡಿದ ಆರೋಪಿಯ ಬಂಧನ .                                                                                              ಜಯ ಧ್ವಜ ನ್ಯೂಸ್ ,ರಾಯಚೂರು, ಡಿ.30- ಜಿಲ್ಲಾಧಿಕಾರಿಗಳಾದ  ನಿತೀಶ್‌ ಕೆ ರವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆಯನ್ನು ಸೃಷ್ಟಿಸಿ ಅದರ ಮೂಲಕ ಗೃಹಪಯೋಗಿ ವಸ್ತುಗಳನ್ನು ಕಡಿಮೆ ದರದಲ್ಲಿ ಕೊಡಿಸುವಾಗಿ ವ್ಯಕ್ತಿಯೊಬ್ಬರಿಂದ 80 ಸಾವಿರ ರೂ.  ಮೋಸ ಮಾಡಿದ್ದರ  ಬಗ್ಗೆ  ಸೈಬರ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು  ಸದರಿ ಪ್ರಕರಣವನ್ನು ಪತ್ತೆ ಹಚ್ಚಿ ಆರೋಪಿತನನ್ನು ಬಂಧಿಸುವಲ್ಲಿ ಸೈಬರ್ ಪೊಲೀಸರ ತಂಡ ಯಶಸ್ವಿಯಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಿಳಿಸಿದ್ದಾರೆ .
Image
  ಐತಿಹಾಸಿಕ ಅಂಬಾ ಮಹೋತ್ಸವದಲ್ಲಿ ರಾಜ್ಯದ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಸಚಿವರು, ಗಣ್ಯರು ಭಾಗಿ -ಶಾಸಕ ಹಂಪನಗೌಡ ಬಾದರ್ಲಿ ಜಯ ಧ್ವಜ ನ್ಯೂಸ್ ,ರಾಯಚೂರು, ಡಿ.30-   ಭಕ್ತಿ-ಶಕ್ತಿ ಪರಂಪರೆಯ ದಿವ್ಯ ಸಂಗಮ ಸಿಂಧನೂರ ತಾಲೂಕಿನ ಸೋಮಲಾಪುರದ ಅಂಬಾಮಠದ ಅಂಬಾ ಮಹೋತ್ಸವ -2026ರ ಕಾರ್ಯಕ್ರಮವು ಜ 2 ರಿಂದ ಜ. 6 ರವರೆಗೆ ನಿಗದಿಯಾಗಿದ್ದು, ಜ. 3 ರಂದು ನಡೆಯಲಿರುವ ಅಂಬಾ ದೇವಿ ಮಹಾರಥೋತ್ಸವ ಮತ್ತು ಜಂಬೂ ಸವಾರಿ ಕಾರ್ಯಕ್ರಮದಲ್ಲಿ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಮತ್ತು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಹಾಗೂ ವಿವಿಧ ಇಲಾಖೆಗಳ ಸಚಿವರು, ರಾಯಚೂರು, ಕೊಪ್ಪಳ ಮತ್ತು ಬಳ್ಳಾರಿ ಜಿಲ್ಲೆಗಳ ಸಂಸದರು, ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು ಮತ್ತು ಇನ್ನೀತರ ಗಣ್ಯರು ಭಾಗಿಯಾಗಲಿದ್ದಾರೆ ಎಂದು ಸಿಂಧನೂರ ವಿಧಾನಸಭಾ ಕ್ಷೇತ್ರದ ಶಾಸಕರಾದ ಹಂಪನಗೌಡ ಬಾದರ್ಲಿ ಹೇಳಿದರು. ಅವರಿಂದು ಸಿಂಧನೂರ ನಗರದ ಕಾಕತಿಯ ಕ್ಲಬ್ ಆವರಣದಲ್ಲಿ  ಪತ್ರಿಕಾಗೋಷ್ಠಿ ನಡೆಸಿ  ಮಾತನಾಡಿದರು. ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಜನವರಿ 03ರಂದು ಮಧ್ಯಾಹ್ನ 2 ಗಂಟೆಗೆ ಸಿಂಧನೂರು ನಗರಕ್ಕೆ ಆಗಮಿಸುವರು. ಅಂದು ಸಿಂಧನೂರ ನಗರದಲ್ಲಿ ಮಧ್ಯಾಹ್ನ 2 ರಿಂದ 2:30ರವರೆಗೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು. ಮಧ್ಯಾಹ್ನ ಭೋಜನದ ವಿರಾಮದ ನಂತರ 3:30 ರಿಂದ ಅಂಬಾಮಠಕ್ಕೆ ತೆರಳಿ ಸಂಜೆ 4 ಗಂಟೆಗೆ, ಸಿಂದನೂರ ವಿಧಾನಸಭಾ...
Image
  ಮಂತ್ರಾಲಯ: ವೈಕುಂಠ ಏಕಾದಶಿ ಪ್ರಯುಕ್ತ ಪುರಾತನ ವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠ ದ್ವಾರ ಮೂಲಕ ದರ್ಶನ.                                                                               ಜಯ ಧ್ವಜ ನ್ಯೂಸ್, ರಾಯಚೂರು, ಡಿ.30- ಮಂತ್ರಾಲಯ ಶ್ರೀ ವೆಂಕಟೇಶ್ವರ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ವೈಕುಂಠ ದ್ವಾರ ಮೂಲಕ ಭಕ್ತರು ದೇವರ ದರ್ಶನ ಪಡೆದರು. ರಾಘವೇಂದ್ರ ಸ್ವಾಮಿಗಳು ವೆಂಕಟೇಶ್ ದೇವರನ್ನು ಸ್ಥಾಪಿಸಿದ ಪುರಾತನ ದೇವಸ್ಥಾನದಲ್ಲಿ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥ ಶ್ರೀ ಪಾದಂಗಳವರು ತುಳಸಿ ಮತ್ತು ಪುಷ್ಪ ಅರ್ಚನೆ ಹಾಗೂ ಮಂಗಳಾರತಿ ನೆರವೇರಿಸಿದರು. ವಿಶೇಷವಾಗಿ ನಿರ್ಮಿಸಿದ ವೈಕುಂಠ ದ್ವಾರ ಮೂಲಕ ಅಪಾರ ಸಂಖ್ಯೆಯಲ್ಲಿ ಭಕ್ತರು ದೇವರ ದರ್ಶನ ಪಡೆದು ಕೃತಾರ್ಥರಾದರು.
Image
  ಕಲ್ಯಾಣ ಕರ್ನಾಟಕ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಟ್ರಸ್ಟ್  ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ  ಜಯ ಧ್ವಜ ನ್ಯೂಸ್ ,ರಾಯಚೂರು, ಡಿ.30- ನಗರದ  ರಾಜೇಂದ್ರ ಗಂಜ್  ರೈತ ಭವನದಲ್ಲಿ ಹಮ್ಮಿಕೊಂಡ  ಕಲ್ಯಾಣ ಕರ್ನಾಟಕ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಟ್ರಸ್ಟ್  ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ   ಕಾರ್ಯಕ್ರಮದ ಉದ್ಘಾಟನೆಯನ್ನು ಜ್ಯೋತಿ ಬೆಳಗಿಸುವ ಮೂಲಕ ಎಂ ಬಾಬಣ್ಣ ಮಂದಕಲ್ ಇವರ ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡುತ್ತಾ ಇಂದಿನ ಪ್ರಸ್ತುತ ದಿನಮಾನದಲ್ಲಿ ಇಂತಹ ಸಂಘಟನೆಗಳು ಅವಶ್ಯಕವಾಗಿವೆ ಹಿಂದುಳಿದ ಜಾತಿಗಳ ಶೈಕ್ಷಣಿಕ, ಸಾಮಾಜಿಕ, ಆರ್ಥಿಕವಾಗಿ ಸದೃಢರಾಗಲು ಸಂಘಗಳ ಅವಶ್ಯಕತೆ ವಾಗಿವೆ ಈ ಸಂಘದ ಜೊತೆಗೆ ನಾವು ಯಾವಾಗಲೂ ಬೆನ್ನೆಲುಬಾಗಿ ನಿಲ್ಲುತ್ತೇವೆ  ಒಳ್ಳೆಯ ಕಾರ್ಯಕ್ರಮಗಳಿಗೆ ಕುರುಬ ಸಮಾಜದ ಹಿರಿಯರ ಬೆಂಬಲ ಇದ್ದೇ ಇರುತ್ತದೆ ನೀವುಗಳು ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿ ಸಮಾಜವನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯಲು ಮುಂದಾಗಿ ಎಂದು ಕರೆ ನೀಡಿ ಭರವಸೆಯ ಮಾತುಗಳನ್ನಾಡಿದರು. *ಮುಖ್ಯ ಅತಿಥಿಗಳಾಗಿ ಮಾತನಾಡಿದ* ಶ್ರೀಮತಿ ಶ್ರೀದೇವಿ ಆನಂದ್ ಮುಖ್ಯ ಲೆಕ್ಕ ಅಧಿಕಾರಿಗಳು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮಾತನಾಡಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಟ್ರಸ್ಟ್ನ ಪದಗ್ರಹಣ ಸಮಾರಂಭದಲ್ಲಿ ನಾನು ಪಾಲ್ಗೊಂಡಿರುವುದು ನನ್ನ ಸೌಭಾಗ್ಯ ಎಂದು ಮೆಚ್...
Image
  ಶೃತಿ ಸಾಹಿತ್ಯ ಮೇಳದಿಂದ ಕುವೆಂಪು ಹಾಗು ಸಿ. ಅಶ್ವತ್ ಅವರ ಜನ್ಮದಿನಾಚರಣೆ :                                        ಕುವೆಂಪು ಅವರು ಜಗದ ಕವಿ ಯುಗದ ಕವಿಯಾಗಿದ್ದಾರೆ - ಜಯಲಕ್ಷ್ಮಿ ಮಂಗಳಮೂರ್ತಿ .                          ಜಯ ಧ್ವಜ ನ್ಯೂಸ್ , ರಾಯಚೂರು, ಡಿ.29- ಶೃತಿ ಸಾಹಿತ್ಯ ಮೇಳದಿಂದ ಕುವೆಂಪು ಹಾಗು ಸಿ. ಅಶ್ವತ್ ಅವರ ಜನ್ಮದಿನಾಚರಣೆ ಆಚರಿಸಲಾಯಿತು.  ನಗರದ ಸಾಹಿತ್ಯಾತ್ಮಕ ಮತ್ತು ಸಾಂಸ್ಕೃತಿಕ ಸಂಘಟನೆಯಾದ ಶ್ರುತಿ ಸಾಹಿತ್ಯ ಮೇಳದಿಂದ ರಾಷ್ಟ್ರಕವಿ ಕುವೆಂಪು,  ಹಾಗೂ ಖ್ಯಾತ ಗಾಯಕ ಸಿ ಅಶ್ವತ್ ಅವರ ಜನ್ಮದಿನಾಚರಣೆಯನ್ನು ಅದ್ದೂರಿಯಾಗಿ ಇಂದು ಸೋಮವಾರ ಸಂಜೆ ರಾಯಚೂರು ನಗರದ ಜವಾಹರ ನಗರ ಪ್ರೌಢಶಾಲೆ  ಆವರಣದಲ್ಲಿ ಆಚರಿಸಲಾಯಿತು.      ಡಾ. ಜಯಲಕ್ಷ್ಮಿ ಮಂಗಳಮೂರ್ತಿ ಹಿರಿಯ ಸಾಹಿತಿಗಳು ಹಾಗೂ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಕಾರ್ಯಕ್ರಮವನ್ನು ಉದ್ಘಾಟಿಸಿ "ಕುವೆಂಪು ಅವರು ಜಗದ ಕವಿಯಾಗಿದ್ದಾರೆ, ಯುಗದ ಕವಿಯಾಗಿದ್ದಾರೆ, ಮನುಜ ಮತವನ್ನು ಸಾರಿದ ಜಗತ್ತಿನ ಶ್ರೇಷ್ಠ ತತ್ವಜ್ಞಾನಿ,ಕವಿ, ಸಾಹಿತಿ,  ವಿಮರ್ಶಕರಾಗಿ ಕನ್ನಡ ಸಾಹಿತ್ಯವನ್ನು ಹಿಮಾಲಯದ ಎತ್ತರಕ್ಕ...
Image
  ವಾಲ್ಮೀಕಿ ನಾಯಕ ಸಮುದಾಯದ ಮೂವರು ಶಾಸಕರಿಗೆ ಸಚಿವ ಸ್ಥಾನ ನೀಡಬೇಕು- ರಘುವೀರ್ ನಾಯಕ ಜಯ ಧ್ವಜ ನ್ಯೂಸ್ , ರಾಯಚೂರು, ಡಿ.29-  ಕರ್ನಾಟಕದಲ್ಲಿ ಸುಮಾರು ೭೦ ಲಕ್ಷ ಜನಸಂಖ್ಯೆಯನ್ನು ಹೊಂದಿರುವ ಮತ್ತು ೧೫ ಮೀಸಲು ಕ್ಷೇತ್ರಗಳ ಪೈಕಿ ಸುಮಾರು ೧೪ ಕ್ಷೇತ್ರಗಳಲ್ಲಿ ಕಾಂಗ್ರೇಸ್ ಪಕ್ಷದಿಂದ ಗೆದ್ದಿರುವ ಹಾಗೂ ೩ ಸಾಮಾನ್ಯ ಕ್ಷೇತ್ರಗಳ ಪೈಕಿ ೧ರಲ್ಲಿ ಕಾಂಗ್ರೇಸ್ ಪಕ್ಷದಿಂದ ಗೆದ್ದಿರುವ ವಾಲ್ಮೀಕಿ ನಾಯಕ ಸಮುದಾಯದ ಶಾಸಕರಿಗೆ ಸಚಿವ ಸ್ಥಾನ ನೀಡಬೇಕೆಂದು  ಹೈದ್ರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ವಿಭಾಗೀಯ ಕಾರ್ಯದರ್ಶಿ ರಘುವೀರ್ ನಾಯಕ ಒತ್ತಾಯಿಸಿದರು . ಅವರಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ  ಕಳೆದ ಸುಮಾರು ೨ ವರ್ಷಗಳಿಂದ ಪರಿಶಿಷ್ಠ ವರ್ಗಗಳ ಇಲಾಖೆಗೆ ಸಚಿವ ಸ್ಥಾನವನ್ನು ಯಾವ ಶಾಸಕರಿಗೂ ನೀಡದೇ ಮಾನ್ಯ ಮುಖ್ಯಮಂತ್ರಿಗಳು ತಮ್ಮಲ್ಲಿಯೇ ಇಟ್ಟುಕೊಂಡಿರುವುದರಿಂದ ನಿರಿಕ್ಷೀತ ಪ್ರಮಾಣದಲ್ಲಿ ಪ್ರಗತಿ ಸಾಧಿಸಲು ಸಾಧ್ಯವಾಗಿಲ್ಲವೆಂದರು ನಿಗದಿತ ಸಮಯದಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ತಲುಪುತ್ತಿಲ್ಲ, ಪ್ರೈಸ್ ಮನಿ ನೆನಗುದಿಗೆ ಬಿದ್ದಿದೆ. ಜಿಲ್ಲೆಯಲ್ಲಿ ಅನೇಕ ವಾಲ್ಮೀಕಿ ಭವನಗಳು ಅನುದಾನದ ಕೊರತೆಯಿಂದ ನೆನಗುದಿಗೆ ಬಿದ್ದಿದೆ. ವಸತಿ ನಿಲಯಗಳಿಗೆ ಮೂಲಸೌಕರ್ಯಗಳಿಲ್ಲ. ಬೆಡ್ ಮತ್ತು ಮಂಚಗಳು ನಗರದಲ್ಲಿ ಮೇಟ್ರೀಕ ಪೂರ್ವ ಬಾಲಕರ ವಸತಿನಿಲಯದಲ್ಲಿ ಇಲ್ಲ. ವೃತ್ತಿಪರ ಬಾಲಕಿಯರ ವಸತಿ ನಿಲಯದಲ್ಲಿಯೂ ಸೌಕರ್...
Image
ಬಿಜೆಪಿ ನೂತನ ಪದಾಧಿಕಾರಿಗಳಿಗೆ ನೇಮಕಾತಿ ಪತ್ರ ವಿತರಣೆ                             ಜಯ ಧ್ವಜ ನ್ಯೂಸ್ , ರಾಯಚೂರು, ಡಿ.29-   ಭಾರತೀಯ ಜನತಾ ಪಕ್ಷದ ಕಾರ್ಯಾಲಯದಲ್ಲಿ ನೂತನವಾಗಿ ನೇಮಕವಾಗಿರುವ ಪದಾಧಿಕಾರಿಗಳಿಗೆ ನೇಮಕಾತಿ ಆದೇಶವನ್ನು ಪತ್ರವನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ  ವೀರನಗೌಡ ಲೆಕ್ಕಿಹಾಳ ಹಾಗೂ  ಎನ್ ಶಂಕ್ರಪ್ಪ ಮಾಜಿ ವಿಧಾನ ಪರಿಷತ್ ಸದಸ್ಯರು  ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡ ಪಕ್ಷದ ಸಂಘಟನೆಗೆ ತಮ್ಮ ಹೆಚ್ಚಿನ ಸಮಯವನ್ನು ನೀಡಿ ಪಕ್ಷವನ್ನು ಜಿಲ್ಲೆಯಲ್ಲಿ ಸದೃಢವಾಗಿ ಸಂಘಟಿಸಬೇಕೆಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವೀಂದ್ರ ಜಲ್ದಾರ್ ಸೇರಿದಂತೆ ನೂತನ ಪದಾಧಿಕಾರಿಗಳು ಉಪಸ್ಥಿತರಿದ್ದರು.
Image
ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಸಂಸ್ಥಾಪನಾ ದಿನಾಚರಣೆ :           ದೇಶಕ್ಕಾಗಿ ಬ್ರಿಟೀಷರ ವಿರುದ್ಧ ಹೋರಾಡಿದ್ದು ಕಾಂಗ್ರೆಸ್  ಪಕ್ಷ                                                  ಜಯಧ್ವಜ ನ್ಯೂಸ್ , ರಾಯಚೂರು, ಡಿ.28- ಜಿಲ್ಲಾ ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ 141ನೇ ಸಂಸ್ಥಾಪನಾ ದಿನದ ಅಂಗವಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಎ.ವಸಂತಕುಮಾರ ಅವರು ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯವಾಗಿ ಪಾಲ್ಗೊಂಡು, ಬ್ರಿಟೀಷರ ಕಪಿಮುಷ್ಟಿಯಿಂದ ದಾಸ್ಯ ಮುಕ್ತಗೊಳಿಸಿ, ಭಾರತವನ್ನು ವಿಶ್ವಗುರುವಿನ ಮಟ್ಟಕ್ಕೆ ತಲುಪಲು ಅಡಿಪಾಯ ಹಾಕಿದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಸಂಸ್ಥಾಪನ ದಿನಾಚರಣೆಯ ಶುಭಾಶಯಗಳು ತಿಳಿಸಿದರು. ಕಾಂಗ್ರೆಸ್ ಪಕ್ಷವು ಡಿಸೆಂಬರ್ 28, 1885 ರಲ್ಲಿ ದಾದಾ ಬಾಯಿ ನವರೋಜಿ ಹಾಗೂ ಇನ್ನಿತರ ಮಹಾನ್ ನಾಯಕರಿಂದ ಸ್ಥಾಪಿತವಾದ ಕಾಂಗ್ರೆಸ್ ಪಕ್ಷ ಬರಬರುತ್ತಾ ಈಸ್ಟ್ ಇಂಡಿಯಾ ಕಂಪನಿಯ ದಮನಕಾರಿ ಆಡಳಿತದ ವಿರುದ್ಧ ಸ್ವಾತಂತ್ರ್ಯ ಸಂಗ್ರಾಮ ಎಂಬ ಜನಾಂದೋಲನಕ್ಕೆ ಕರೆಕೊಟ್ಟಿತ್ತು.  ಸ್ವಾತ...
Image
ವಾರ್ಡ್ ನಂ.13ರಲ್ಲಿ      ಕಲಬೆರಿಕೆ ಸೇಂದಿ ನಿರ್ಮೂಲನೆ ಅರಿವು ಕಾರ್ಯಕ್ರಮ:                                                 ಕಲಬೆರಿಕೆ ಸೇಂದಿ ಹಾವಳಿ ತಡೆಗಟ್ಟಲು ಎಲ್ಲರ ಸಹಕಾರ ಅತ್ಯಗತ್ಯ- ಜಲ್ದಾರ್                                                                                                                             ಜಯ ಧ್ವಜ ನ್ಯೂಸ್ ,ರಾಯಚೂರು,ಡಿ.28- ನಗರದ ವಾರ್ಡ್ ನಂ. 13ರಲ್ಲಿ ಇಂದು ಜಿಲ್ಲಾ ಆಡಳಿತ ಪೋಲಿಸ್ ಇಲಾಖೆ, ಅಬಕಾರಿ ಇಲಾಖೆ, ಆರೋಗ್ಯ ಇಲಾಖೆ ಸಿ.ಎಚ್.ಪೌಡರ್ ಹಾಗೂ ಕಲಬೆರಕೆ ಸೇವನೆ ಮತ್ತು ಮಾರಾಟ ಮಾಡುವುದನ್ನು ನಿರ್ಮೂಲನೆ ಅರಿವು ಮಾಡುವ ಅರಿವು ಕಾರ್ಯಕ್ರಮವನ್ನು ಅಶೋಕ ನಗರ ಬಡಾವಣೆಯಲ್ಲಿ ಬಿಜೆಪಿ ರಾಯಚೂರು ಜಿಲ್...
Image
  ರಾಷ್ಟ್ರೀಯ ಪತ್ರಿಕಾ ದಿನಾಚರಣೆ, ಪ್ರಶಸ್ತಿ ಪ್ರದಾನ ಸಮಾರಂಭ :                                                  ಮಾಧ್ಯಮ ಕೈಗೊಂಬೆಯಾಗಿರುವುದು ಕಳವಳಕಾರಿ- ಬೋಸರಾಜು   ಜಯ ಧ್ವಜ ನ್ಯೂಸ್,  ರಾಯಚೂರು, ಡಿ.28- ದೇಶದ ಕೆಲವೇ ಉದ್ಯಮಿಗಳ ಕೈಯಲ್ಲಿ ಮಾಧ್ಯಮ ಕೈಗೊಂಬೆಯಾಗಿದೆ. ಇದರಿಂದ ಇಂದು ಮಾಧ್ಯಮ ಕ್ಷೇತ್ರ ಕವಲುದಾರಿ ಹಿಡಿಯುವಂತಾಗಿದೆ ಎಂದು ರಾಜ್ಯ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ  ಸಚಿವರಾದ ಎನ್ ಎಸ್ ಬೋಸರಾಜು ಅವರು ಕಳವಳ ವ್ಯಕ್ತಪಡಿಸಿದರು . ಅವರಿಂದು ನಗರದ ರಾಯಚೂರು ರಿಪೋರ್ಟರ್ ಗಿಲ್ಡ್ ಸಭಾಂಗಣದಲ್ಲಿ ರಾಯಚೂರು ರಿಪೋರ್ಟರ್ಸ್  ಗಿಲ್ಡ್,ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಸಂಪಾದಕರ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.  ಲಾಭಕ್ಕಾಗಿ ಪತ್ರಿಕೋದ್ಯಮವನ್ನು ನಿರ್ವಹಿಸುವುದು ಅತ್ಯಂತ ಅಪಾಯಕಾರಿ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ. ಕೆಲವೇ ವ್ಯಕ್ತಿಗಳು ಇದನ್ನು ನಿಯಂತ್ರಿಸಿದರೆ, ಮುಕ್ತ ಚರ್ಚೆ ಮತ್ತು ಮಾಹಿತಿಯಿಂದ ಜನ ವಂಚಿತಗೊಳ್ಳುತ್ತಾರೆ ಎಂ...
Image
  ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಲು 16 ನಗರ ಸಾರಿಗೆ ಹೊಸ ಬಸ್‌ಗಳಿಗೆ ಚಾಲನೆ- ಶಾಸಕ ಡಾ.ಶಿವರಾಜ  ಪಾಟೀಲ್ ಜಯ ಧ್ವಜ ನ್ಯೂಸ್ ರಾಯಚೂರು ಡಿ.26 -   ನಗರದ ವಿವಿಧೆಡೆ ನಿತ್ಯ ತೆರಳುವ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ 16 ನಗರ ಹೊಸ ಬಸ್‌ಗಳಿಗೆ ಚಾಲನೆ ನೀಡಲಾಗುತ್ತಿದ್ದು, ಇದರಿಂದ ಸಾರ್ವಜನಿಕರು, ಮಹಿಳೆಯರು ಹಾಗೂ ಮಕ್ಕಳಿಗೆ ಅನುಕೂಲವಾಗಲಿದೆ ಎಂದು ರಾಯಚೂರು ನಗರ ಕ್ಷೇತ್ರದ ಶಾಸಕರಾದ ಡಾ. ಶಿವರಾಜ ಎಸ್. ಪಾಟೀಲ್ ಅವರು ಹೇಳಿದರು. ಅವರಿಂದು ನಗರದ ಕೆ.ಕೆ.ಆರ್.ಟಿ.ಸಿ ಮೂರನೇ ಘಟಕದಲ್ಲಿ ಹಮ್ಮಿಕೊಳ್ಳಲಾಗಿದ್ದ ನೂತನ 16  ನಗರ ಸಾರಿಗೆ ಬಸ್ಸುಗಳಿಗೆ ಪೂಜಾ ಕಾರ್ಯಕ್ರಮಕ್ಕೆ  ನೆರವೇರಿಸಿ ಮಾತನಾಡಿದರು. ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮವು ನಗರ ಸಾರಿಗೆ ವ್ಯವಸ್ಥೆಯನ್ನು ಇನ್ನಷ್ಟು ಉತ್ತಮಗೊಳಿಸಲು  ಟಾಟಾ ಮೋಟಾರ್ಸ ತಯಾರಿಕೆಯ ಹೊಸ ನಗರ ಸಾರಿಗೆ ಬಸ್ಸುಗಳನ್ನು ಸೇರ್ಪಡೆಗೊಳಿಸುತ್ತಿರುವುದು ಸಂತೋಷದ ಸಂಗತಿಯಾಗಿದೆ.   ಈ ಬಸ್‌ಗಳಿಗೆ 187 ಎಚ್.ಪಿ. ಸಾಮರ್ಥ್ಯದ ಬಿಎಸ್-6 ಎಂಜಿನ್‌ಗಳನ್ನು ಅಳವಡಿಸಲಾಗಿದ್ದು, ಈ ಬಸ್‌ಗಳನ್ನು ಆಟೋಮೋಟಿವ್ ಇಂಡಸ್ಟ್ರಿ ಸ್ಟ್ಯಾಂಡರ್ಡ್- ಎಐಎಸ್-052 ಬಸ್ ಕೋಡ್ ನಂತೆ ನಿರ್ಮಿಸಲಾಗಿದೆ. ಈ ಬಸ್ ಗಳು 40 ಪ್ರಯಾಣಿಕ ಆಸನಗಳನ್ನು ಹೊಂದಿದ್ದು, ಎಲ್‌ಇಡಿ ಟ್ಯೂಬ್ ಲೈಟ್ ಅಳವಡಿಸುವುದರೊಂದಿಗೆ ಒಳಾಂಗಣವನ್ನು ಉತ್ತಮವಾಗಿ ವಿನ್ಯಾಸಗೊಳಿಸಲಾಗಿದೆ ಎಂದರು. ಈ ಬಸ್...
Image
  ದ್ವೇಷ ಭಾಷಣ ವಿಧೇಯಕ ವಿರೋಧಿಸಿ ಬಿಜೆಪಿ ಪ್ರತಿಭಟನೆ                                         ಜಯಧ್ವಜ ನ್ಯೂಸ್, ರಾಯಚೂರು,ಡಿ.26- ರಾಜ್ಯ ಸರ್ಕಾರ ಅನುಷ್ಠಾನಕ್ಕೆ ತರಲು ಮುಂದಾಗಿರುವ ದ್ವೇಷ ಭಾಷಣ ವಿಧೇಯಕವನ್ನು ವಿರೋಧಿಸಿ ಬಿಜೆಪಿ ರಾಯಚೂರು ನಗರ ಘಟಕದಿಂದ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಯಿತು. ರಾಜ್ಯ ಸರ್ಕಾರ ಸಂವಿಧಾನದಲ್ಲಿ ಅಡಕವಾಗಿರುವ ಅಭಿವ್ಯಕ್ತಿ ಸ್ವಾತಂತ್ರ್ಯ ಹರಣ ಮಾಡಲು ಹೊರಟಿದೆ ಸರ್ಕಾರದ ಲೋಪ ದೋಷಗಳನ್ನು ಜನರಿಗೆ ತಿಳಿಸುವುದನ್ನು ಈ ವಿಧೇಯಕದ ಮೂಲಕ ಹತ್ತಿಕ್ಕಲು ಹೊರಟಿದೆ ವಿಧೇಯಕದಲ್ಲಿ ಯಾವುದೇ ಸ್ಪಷ್ಟತೆಯಿಲ್ಲ ವೆಂದು ಆರೋಪಿಸಿರುವ ಬಿಜೆಪಿ ಕೂಡಲೆ ವಿಧೇಯಕ ಹಿಂಪಡೆಯಲು ಆಗ್ರಹಿಸಿದರು. ಈ ಸಂದರ್ಭದಲ್ಲಿ  ಬಿಜೆಪಿ ಜಿಲ್ಲಾ ಅಧ್ಯಕ್ಷ ವೀರನಗೌಡ ಪಾಟೀಲ್ ಲೆಕ್ಕಿಹಾಳ್, ನಗರ ಶಾಸಕ ಡಾ. ಶಿವರಾಜ್ ಪಾಟೀಲ್ , ಮಾಜಿ ಎಂಎಲ್ಸಿ ಎನ್. ಶಂಕ್ರಪ್ಪ , ಉಟ್ಕೂರು ರಾಘವೇಂದ್ರ,ಸಂತೋಷ್ ರಾಜಗುರು, ಕಡಗೋಳ ಅಂಜಿನೇಯ್ಯ, ರಾಜಕುಮಾರ, ರವಿ ಜಲ್ದಾರ್  ಕಡಗೋಳ್ ರಾಮಚಂದ್ರ, ವಿಜಯಕುಮಾರ್, ಬಂಡೇಶ್ ,  ಶಶಿರಾಜ್, ಬಂಗಿ ನರಸರೆಡ್ಡಿ, ವಿ ನಾಗರಾಜ್  ಭೀಮಣ್ಣ ಮಂಚಾಲ್ ವಿನಾಯಕ್ ಶಿವಕುಮಾರ್  ಪಾಟೀಲ್ ವಿ. ಪಿ. ರೆಡ್ಡಿ ನಾಗರಾಜ್ ಬಾಲ್ಕಿ ವಿರೇಶ್ ತಲ್ವಾರ್ ಸಿದ್ದನ್...
Image
  ರಾಜಕಾರಣ ನನಗೆ ಇಷ್ಟವಿಲ್ಲ; ಸಿನಿಮಾದಲ್ಲಿಯೇ ಮುಂದುವರೆಯುತ್ತೇನೆ – ನಟ ಝೈದ್ ಖಾನ್ ಜಯ‌ ಧ್ವಜ ನ್ಯೂಸ್ , ರಾಯಚೂರು, ಡಿ.25 - ರಾಜಕಾರಣ ಕೇವಲ ಭಾಷಣಕ್ಕೆ, ಆಶ್ವಾಸನೆಗೆ ಸೀಮಿತ, ನಾನು ರಾಜಕಾರಣಕ್ಕೆ ಬರಲ್ಲ, ಸಿನಿಮಾದಲ್ಲಿಯೇ ಮುಂದುವರೆಯುತ್ತೇನೆ ಎಂದು ಚಿತ್ರನಟ ಝೈದ್ ಖಾನ್ ತಿಳಿಸಿದರು. ಅವರು ಕಲ್ಟ್ ಚಿತ್ರದ ಪ್ರಮೋಷನ್ ವಿಚಾರವಾಗಿ ರಾಯಚೂರಿನ ಖಾಸಗಿ ಹೋಟೆಲ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ನಾನು ಚಿತ್ರರಂಗಕ್ಕೆ ಕಾಲಿಟ್ಟಿದೇನೆ ರಾಜಕೀಯ ಕ್ಷೇತ್ರ ಇಷ್ಟವಿಲ್ಲಣ ನಮ್ಮ ತಂದೆ ಮಾತ್ರ ರಾಜಕೀಯದಲ್ಲಿ ಇದ್ದಾರೆ, ನಮ್ಮ ತಂದೆ ಕುಟುಂಬಕ್ಕೆ ಸಮಯ ಕೊಡದೇ ಕೆಲಸ ಮಾಡುವುದನ್ನು ನೋಡಿ ನಾನು ರಾಜಕಾರಣದಿಂದ‌ ದೂರ ಇರಲು ನಿಶ್ಚಯಿಸಿದ್ದೇನೆ ಎಂದರು. ಪರಭಾಷೆಗೆ ಹೋಲಿಸಿದರೆ ಕನ್ನಡ ಚಿತ್ರರಂಗ ಚಿಕ್ಕದು, ಇಲ್ಲಿ ಸಿನಿಮಾ ಟಾಕೀಸ್‌ ಕಡಿಮೆ ಇವೆ ಪೈಪೋಟಿ ಮಾಡಲು ಕಷ್ಟ, ಅನೇಕರು ಕೇವಲ‌ಹಣ ಮಾಡಬೇಕು, ಲಾಭ‌ಗಳಿಸುವತ್ತ ಗಮನಹರಿಸುತ್ತಿದ್ದಾರೆ ವಿನಃ ಪ್ರಯೋಗಾತ್ಮಕ ಚಿತ್ರ, ಸವಾಲುಗಳನ್ನು ಎದುರಿಸಲು ಸಿದ್ಧರಿಲ್ಲ ಲಾಭ ನಷ್ಟದ ವಿಚಾರದಲ್ಲಿ ನಿರ್ಮಾಪಕರಿಗೆ ಮೋಸ, ನಷ್ಟವಾಗಬಾರದು ಎಂದು ಸಿನಿಮಾ ತಯಾರಾಗುತ್ತಿವೆ‌ ಒಳ್ಳೆಯ ಚಿತ್ರಗಳಿಗೆ ಪ್ರೇಕ್ಷಕರು ಕೈಹಿಡಿಯಬೇಕು‌‌ಕನ್ನಡ ಚಿತ್ರಗಳನ್ನು ವೀಕ್ಷಿಸಿ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು. ಕಲ್ಟ್ ಫಿಲಂ ಮೂಲಕ ಯುವಕರಿಗೆ ಸಂದೇಶ   ಇಂದಿನ ಯುವ ಪೀಳಿಗೆ ಎದುರಿಸುತ್ತಿರುವ ಸವಾಲುಗಳು,...
Image
  ಡಾ. ಜಯಲಕ್ಷ್ಮಿ ಮಂಗಳಮೂರ್ತಿಯವರಿಗೆ ಟಿಟಿಡಿ ಯಿಂದ ಜ.17 ರಂದು  ಪುರಂದರೋತ್ಸವ ಪ್ರಶಸ್ತಿ ಪ್ರದಾನ  ಜಯ ಧ್ವಜ ನ್ಯೂಸ್, ರಾಯಚೂರು,ಡಿ.25-   ತಿರುಮಲ ತಿರುಪತಿ ದೇವಸ್ಥಾನ ದಾಸ ಸಾಹಿತ್ಯ ಪ್ರಾಜೆಕ್ಟ್ ವತಿಯಿಂದ 2025-2026ನೇ ಸಾಲಿನ ಪುರಂದರೋತ್ಸವ  ಪ್ರಶಸ್ತಿಯನ್ನು ಈ ಬಾರಿ ನಾಡಿನ ದಾಸಸಾಹಿತ್ಯ ವಿದ್ವಾಂಸರಾದ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರತರಾದ ಡಾ. ಜಯಲಕ್ಷ್ಮಿ ಮಂಗಳಮೂರ್ತಿಯವರಿಗೆ ನೀಡಿ ಗೌರವಿಸಲಾಗುತ್ತಿದೆ ಎಂದು  ಟಿ.ಟಿ.ಡಿ ದಾಸಸಾಹಿತ್ಯ ಪ್ರಾಜೆಕ್ಟ್ ನ ವಿಶೇಷ ಅಧಿಕಾರಿಗಳಾದ ವೇದಮೂರ್ತಿ ಪಂಡಿತ್ ಆನಂದ ತೀರ್ಥಾಚಾರ ಪಗಡಾಲ ಅವರು ತಿಳಿಸಿದ್ದಾರೆ.     ಇದೇ ಜ.17ರಂದು ತಿರುಮಲದಲ್ಲಿ ನಡೆಯುತ್ತಿರುವ ಪುರಂದರ ದಾಸರ ಆರಾಧನೆಯ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಲಾಗುತ್ತಿದ್ದು   ಡಾ. ಜಯಲಕ್ಷ್ಮಿ ಮಂಗಳಮೂರ್ತಿಯವರು ದಾಸ ಸಾಹಿತ್ಯದಲ್ಲಿ ಅದ್ವಿತೀಯ ಸಾಧನೆಯನ್ನು ಮಾಡಿದ್ದಾರೆ. ಶ್ರೀ ನರಸಿಂಹ ವಿಠಲ  ಅಂಕಿತದಿಂದ 200 ಕ್ಕೂ ಹೆಚ್ಚು ಸಂಕೀರ್ತನೆಗಳನು  ರಚಿಸಿದ್ದಾರೆ. ಹತ್ತಕ್ಕೂ ಹೆಚ್ಚು ಮೌಲ್ಯಯುಕ್ತ ಗ್ರಂಥಗಳನ್ನು ರಚಿಸಿದ್ದಾರೆ. ಉಗಾ- ಬೋಗ, ಸುಳಾದಿಗಳನ್ನು ರಚಿಸಿ ದಾಸ ಸಾಹಿತ್ಯಕ್ಕೆ ಮಹತ್ತರ ಕೊಡುಗೆಯನ್ನು ನೀಡಿದ್ದಾರೆ. ಇವರು ಅತ್ಯುತ್ತಮ ವಾಗ್ಮಿ ಗಳಾಗಿದ್ದು ಹಲವಾರು ಸಂಘ ಸಂಸ್ಥೆಗಳಿಗೆ ಪದಾಧಿಕಾರಿಗಳಾಗಿದ್ದಾರೆ.    ...
Image
  ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಕ್ರಿಕೆಟ್ ಪಂದ್ಯಾವಳಿ: ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಸದೃಡತೆ- ಪುರುರಾಜ ಸಿಂಗ್ ಸೋಲಂಕಿ.          ಜಯ ಧ್ವಜ ನ್ಯೂಸ್ ,ರಾಯಚೂರು,ಡಿ.25 - ಕ್ರೀಡೆಯಿಂದ ಮಾನಸಿಕ ಹಾಗೂ ದೈಹಿಕ ಸದೃಡತೆ ಸಾಧ್ಯವೆಂದು ಪ್ರೋಬೆಷನರಿ ಐಎಎಸ್ ಅಧಿಕಾರಿ ಪುರುರಾಜ ಸಿಂಗ್ ಸೋಲಂಕಿ ಹೇಳಿದರು. ಅವರಿಂದು ನಗರದ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ರಾಯಚೂರು ರಿಪೋರ್ಟ್ಸ್ ಗಿಲ್ಡ್ ಹಾಗು ಜಿಲ್ಲಾ ಮತ್ತು ಪ್ರಾದೇಶಿಕ ದಿನಪತ್ರಿಕೆಗಳ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕರ ಸಂಪರ್ಕ ಇಲಾಖೆ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಆಯೋಜಿಸಿದ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ನೀಡಿ ಮಾತನಾಡಿ ಪ್ರತಿಯೊಬ್ಬರು ತಮ್ಮ ದಿನ ನಿತ್ಯದ ಯಾಂತ್ರಿಕ ಜೀವನದಲ್ಲಿ ಮಾನಸಿಕ ಹಾಗೂ ದೈಹಿಕ  ಸದೃಢತೆ ಸಾಧಿಸಲು ಕ್ರೀಡೆ ಅತ್ಯಂತ ಸಹಕಾರಿಯಾಗಿದ್ದು ನಾವೆಲ್ಲರೂ ನಮ್ಮ ಬಿಡುವಿನ ಸಮಯದಲ್ಲಿ ಕ್ರೀಡೆಗಳಲ್ಲಿ ತೊಡಗಬೇಕೆಂದರು. ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಮಾಹಿತಿ ಆಯೋಗದ ಕಲಬುರ್ಗಿ ಪೀಠದ ಆಯುಕ್ತರಾದ ಬಿ.ವೆಂಕಟಸಿಂಗ್ ಮಾತನಾಡಿ ಕ್ರೀಡೆ ನಮ್ಮ ಜೀವನದಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ ಪತ್ರಕರ್ತರು ತಮ್ಮ ದಿನ ನಿತ್ಯದ ಸುದ್ದಿ ಸಂಗ್ರಹ ಜಂಜಾಟದಲ್ಲಿ ತೊಡಗಿರುತ್ತಾರೆ ಅವರು ಒತ್ತಡ ಜೀವನದಿಂದ ಹೊರಬರಲು ಕ್ರೀಡೆ ಅತಿಮುಖ್ಯವೆಂದು ಅಭಿಪ್ರಾಯಪಟ್ಟ ಅವರು ನಾನು ಸ...