ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 431ನೇ ವರ್ಧಂತಿ ಉತ್ಸವ: ಮಹಾಭಿಷೇಕ, ನವರತ್ನ ರಥೋತ್ಸವ, ನಾದಹಾರ ಸಮರ್ಪಣೆ. ಜಯ ಧ್ವಜ ನ್ಯೂಸ್, ರಾಯಚೂರು,ಫೆ.24- ಮಂತ್ರಾಲಯದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ 431ನೇ ವರ್ಧಂತಿ ಉತ್ಸವ ಅಂಗವಾಗಿ ಬೆಳಿಗ್ಗೆ ಪೀಠಾಧಿಪತಿಗಳಾದ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರಿಂದ ರಾಯರ ಮೂಲ ಬೃಂದಾವನಕ್ಕೆ ಮಹಾ ಅಭಿಷೇಕ,
ನಂತರ ನವರತ್ನ ರಥೋತ್ಸವ, ನೂರಾರು ಸಂಗೀತ ಕಲಾವಿದರಿಂದ ನಾದಹಾರ ಸಮರ್ಪಣೆ ಸೇರಿದಂತೆ ವಿವಿಧ ಧಾರ್ಮಿಕ ಹಾಗೂ
ಸಾಂಸ್ಕೃತಿಕ ಕಾರ್ಯಕ್ರಮಗಳು ನೆರವೇರಿದವು.
ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಶ್ರೀಮನ್ಮೂಲ ರಾಮದೇವರ ಹಾಗೂ ರಾಯರ ಅನುಗ್ರಹಕ್ಕೆ ಪಾತ್ರರಾದರು.




Comments
Post a Comment