ಅಂಜುಮನ್ - ಎ ರಾಯಚೂರು ವತಿಯಿಂದ
ಮೇ 11 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಜಯ ಧ್ವಜ ನ್ಯೂಸ್ ,ರಾಯಚೂರು, ಮೇ. 9- ನಗರದ ಅಂಜುಮನ್-ಎ-ರಾಯಚೂರು ಸಂಸ್ಥೆಯ ವತಿಯಿಂದ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಅತ್ತ್ಯುತ್ತಮ ಸಾಧನೆ ಮಾಡಿದ ನಗರದ ವಿದ್ಯಾರ್ಥಿಗಳನ್ನು ಗೌರವಿಸಲು ‘ಸನ್ಮಾನ ಹಾಗೂ ಪ್ರತಿಭಾ ಪುರಸ್ಕಾರ’ ಸಮಾರಂಭವನ್ನು ಆಯೋಜಿಸಲಾಗಿದೆ .

ಮೇ.11 ರಂದು ಸೋಮವಾರ ಸಂಜೆ 6:00 ಗಂಟೆಗೆ ನಗರದ ಸ್ಟೇಷನ್ ರಸ್ತೆಯಲ್ಲಿರುವ ರಂಗಮಂದಿರದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು , ನಗರದ ಯುವ ಪ್ರತಿಭೆಗಳನ್ನು ಗುರುತಿಸಿ, ಅವರ ಸಾಧನೆಯನ್ನು ಸಂಭ್ರಮಿಸುವುದು ಮತ್ತು ಮುಂದಿನ ಹಂತದ ಶಿಕ್ಷಣಕ್ಕೆ ಸ್ಫೂರ್ತಿ ನೀಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದ್ದು , ಈ ಕಾರ್ಯಕ್ರಮದಲ್ಲಿ ಸಿಂಧನೂರು ಶಾಸಕ  ಹಂಪನಗೌಡ ಬಾದರ್ಲಿ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ  ಎ. ವಸಂತ ಕುಮಾರ್ ಹಾಗೂ ರಾಯಚೂರು ಗ್ರಾಮೀಣ ಶಾಸಕ ಮತ್ತು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಶ್ರೀ ಬಸನಗೌಡ ದದ್ದಲ್ ಪಾಲ್ಗೊಳ್ಳಲಿದ್ದು, 

​ಅಂಜುಮನ್-ಎ-ರಾಯಚೂರು ಸಂಚಾಲಕರಾದ ಜನಾಬ್ ಹಾರಿಸ್ ಸಿದ್ದಿಕಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಗೌರವ ಅತಿಥಿಗಳಾಗಿ ಹಜರತ್ ಸೈಯದ್ ಶಾ ನಬಿ ಮೊಹಿಯುದ್ದೀನ್ ಖಾದ್ರಿ ಚಾಂದ್ ಪೀರ್ ಸಾಹೇಬ್ ಹಾಗೂ ಮೌಲಾನಾ ಹಫೀಜ್ ಸೈಯದ್ ಅಬ್ದುಲ್ ಲತೀಫ್ ಲೌಬಾಲಿ ಸಾಹೇಬ್ ಸೇರಿದಂತೆ ​ಕಾರ್ಯಕ್ರಮದಲ್ಲಿ ಮಾಜಿ ನಗರಸಭೆ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಮುಖಂಡರು ಹಾಗೂ ಶಿಕ್ಷಣ ತಜ್ಞರು ಭಾಗವಹಿಸಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಮತ್ತು ಪಾಲಕರು ಆಗಮಿಸಬೇಕೆಂದು  ಡಾ.ರಝಾಕ್ ಉಸ್ತಾದ್  ಪ್ರಕಟಣೆಯಲ್ಲಿ ಕೋರಿದ್ದಾರೆ.

Comments

Popular posts from this blog