Posts

Showing posts from July, 2026
Image
  ರಾಯಚೂರು ಜಿಲ್ಲಾ ಬ್ರಾಹ್ಮಣ ಮಹಾಸಭಾದಿಂದ: ಜು.4 ರಂದು ವಿಪ್ರೋತ್ಸವ ಅಂಗವಾಗಿ ಪ್ರತಿಭಾ ಪುರಸ್ಕಾರ, ವಿಪ್ರಶ್ರೀ ಪ್ರಶಸ್ತಿ ಪ್ರದಾನ- ರಮೇಶ ಕುಲಕರ್ಣಿ ಜಯ ಧ್ವಜ ನ್ಯೂಸ್ ,ರಾಯಚೂರು,ಜು.1-  ನಗರದ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜು. 4ರಂದು ಸಂಜೆ 5ಗಂಟೆಗೆ ಜಿಲ್ಲಾ ಬ್ರಾಹ್ಮಣ ಮಹಾಸಭಾದ ವತಿಯಿಂದ ವಿಪ್ರೋತ್ಸವ-2026 ಅಂಗವಾಗಿ ಪ್ರತಿಭಾ ಪುರಸ್ಕಾರ ಹಾಗೂ ವಿಪಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಬ್ರಾಹ್ಮಣ ಮಹಾಸಭಾ ಜಿಲ್ಲಾ ಚುನಾಯಿತ ಪ್ರತಿನಿಧಿ ರಮೇಶ ಕುಲಕರ್ಣಿ ತಿಳಿಸಿದರು. ಅವರಿಂದು ಪತ್ರಿಕಾಗೋಷ್ಠಿಯಲ್ಲಿ ಮಾಣನಾಡಿ   ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಗಳಲ್ಲಿ ಶೇ.75ಕ್ಕಿಂತ ಹೆಚ್ಚು ಅಂಕ ಪಡೆದ 120 ವಿಪ್ರ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಗುತ್ತಿದೆ ಎಂದರು. ಸಮಾಜ ಸೇವೆಯಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಮಾಜಿಕ ಹೋರಾಟಗಾರ ರಾಘವೇಂದ್ರ ಕುಷ್ಟಗಿ ಮತ್ತು ಮಹಿಳಾ ವಿಭಾಗದಲ್ಲಿ ಸಾಧಕರಾದ ಉಷಾಬಾಯಿ ಶ್ರೀನಿವಾಸರಾವ್ ದೇಸಾಯಿ ಕಡದಿನ್ನಿ ಅವರಿಗೆ ವಿಪ್ರಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದರು. ಎಂಬಿಎ ಪದವಿಯಲ್ಲಿ ನಾಲ್ಕನೇ ರ‍್ಯಾಂಕ್ ಪಡೆದ ಲಕ್ಷ್ಮೀ ಪ್ರಾಣೇಶ ಜೋಶಿ, ಹಿಂದಿ ಭಾಷೆಯಲ್ಲಿ ಪಿಎಚ್‌ಡಿ ಪದವಿ ಪಡೆದ ವಂದನಾ ರಂಗನಾಥ ಕೆ, ಡಾ.ರಮ್ಯ ವಿನಯ ತಂದೆ ಡಾ.ಪ್ರಮೋದಕಟ್ಟಿ ಅವರಿಗೆ ವಿಶೇಷ ಸನ್ಮಾನ ನಡೆಯಲಿದೆ ಎಂದರು. ಕಾ...