Posts

Showing posts from September, 2026
Image
  ಪಾದಯಾತ್ರೆ ಪ್ರಶ್ನಿಸಿದ್ದ ಮುಖ್ಯಮಂತ್ರಿಗೆ ಸವಾಲೆಸೆದ ಬಿಜೆಪಿ ರಾಜ್ಯಾಧ್ಯಕ್ಷ: ದಲಿತರ ಬಗ್ಗೆ ಕಾಂಗ್ರೆಸ್ ಮೊಸಳೆ ಕಣ್ಣೀರು -ಬಿ.ವೈ. ವಿಜಯೇಂದ್ರ . ಜಯ ಧ್ವಜ ನ್ಯೂಸ್ ,ರಾಯಚೂರು , ಸೆ.1-   ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಭ್ರಷ್ಟರಿಂದ, ಭ್ರಷ್ಟರಿಗಾಗಿ ಮತ್ತು ಭ್ರಷ್ಟರಿಗೋಸ್ಕರ ನಡೆಯುತ್ತಿರುವ ಸರ್ಕಾರ ಈ ಸರ್ಕಾರ ತೊಲಗುವವರೆಗೆ ಬಿಜೆಪಿ ಹೋರಾಟ ನಿಲ್ಲದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗುಡುಗಿದರು . ಅವರಿಂದು ಲಿಂಗಸ್ಗೂರಿನಲ್ಲಿ  ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ನಡೆಸುತ್ತಿರುವ ಬಳ್ಳಾರಿ ಚಲೋ ಪಾದಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ವಾಲ್ಮೀಕಿ ನಿಗಮದ ಹಗರಣದಲ್ಲಿ ಸಚಿವ ಬಿ.ನಾಗೇಂದ್ರ ಅವರ ರಾಜೀನಾಮೆ ನೀಡಿದರೆ ಬಿಜೆಪಿ ಹೋರಾಟ ನಿಲ್ಲಿಸುತ್ತದೆ ಎಂದು ಕಾಂಗ್ರೆಸ್ ನಿರೀಕ್ಷಿಸಿತ್ತು. ಆದರೆ ಬಿಜೆಪಿ ಹೋರಾಟ ನಿಲ್ಲದು. ಈ ಸರ್ಕಾರ ಮನೆಗೆ ಹೋದ ಮೇಲೆಯೇ ಬಿಜೆಪಿ ವಿಶ್ರಮಿಸಲಿದೆ ಎಂದು ಹೇಳಿದರು. ವಾಲ್ಮೀಕಿ ನಿಗಮದಲ್ಲಿ ಭ್ರಷ್ಟಾಚಾರ ಪೂರ್ತಿ ಹಣ ವಾಪಸ್ ನಿಗಮಕ್ಕೆ ಬಂದ ನಂತರ, ಎಸ್‍ಸಿಟಿ/ಟಿಎಸ್‍ಪಿ ಹಣ ವಾಪಸ್ ದಲಿತರ ಕಲ್ಯಾಣಕ್ಕೆ ವಾಪಸ್ ಬಂದ ನಂತರ, ರಾಜ್ಯದಲ್ಲಿ ದಲಿತರ ಮೇಲೆ ನಡೆದ ದೌರ್ಜನ್ಯಕ್ಕೆ ನ್ಯಾಯ ಸಿಗುವವರೆಗೆ, ಅನ್ನದಾತರಿಗೆ ನ್ಯಾಯ ಸಿಗುವವರೆಗೆ ಬಿಜೆಪಿ ನಿರಂತರವಾಗಿ ಹೋರಾಟ ...
Image
  ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳಿಗೆ ಸಾಂದೀಪನಿ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ ಜಯ ಧ್ವಜ ನ್ಯೂಸ್ ,ರಾಯಚೂರು ಸೆ.1- ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆಯಲು ಪ್ರೋತ್ಸಾಹಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ಸಾಂದೀಪನಿ ಶಿಷ್ಯ ವೇತನ ಯೋಜನೆಯಡಿ 2026-27ನೇ ಸಾಲಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಂಡಳಿಯು ಸಾಂದೀಪನಿ ಶಿಷ್ಯವೇತನ ಯೋಜನೆಯನ್ನು ಜಾರಿಗೆ ತರಲಾಗಿದೆ. ಈ ಯೋಜನೆಯನ್ನು ರಾಜ್ಯ ಇ-ಆಡಳಿತ ಇಲಾಖೆಯ ರಾಜ್ಯ ಶಿಷ್ಯವೇತನ ತಂತ್ರಾಂಶದ ಮೂಲಕ ಜಾರಿಗೊಳಿಸಲಾಗಿದೆ. ಸಾಂದೀಪನಿ ಶಿಷ್ಯವೇತನದಲ್ಲಿ ಪ್ರಥಮ, ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಹಾಗೂ ಸಾಮಾನ್ಯ ಪದವಿ ಕೋರ್ಸ್ಗಳನ್ನು ವ್ಯಾಸಂಗ ಮಾಡುತಿರುವ ಪ್ರತಿ ವಿದ್ಯಾರ್ಥಿಗೆ ವಾರ್ಷಿಕ ನಿರ್ವಹಣಾ ವೆಚ್ಚ ರೂ.15,000/- ದಂತೆ ಶಿಷ್ಯವೇತನ ಹಾಗೂ ಸಿಇಟಿ, ನೀಟ್ ಸೇರಿದಂತೆ ಸಾಮಾನ್ಯ ಪ್ರವೇಶ ಪರೀಕ್ಷೆಗಳ ಮೂಲಕ ಪದವಿ ಮತ್ತು ಸ್ನಾತಕೋತ್ತರ ಪದವಿಗಳಿಗೆ ದಾಖಲಾತಿ ಪಡೆದ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಶುಲ್ಕದ 2/3 ಭಾಗದ ಮೊತ್ತವನ್ನು ಮರುಪಾವತಿ ಮಾಡಲಾಗುವುದು. ಶಿಷ್ಯವೇತನವನ್ನು ಪಡೆಯಲು ಬೇಕಾದ ಅರ್ಹತೆಗಳು ವಿದ್ಯಾರ್ಥಿಗಳು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಬ್ರಾಹ್ಮಣ ಸಮುದಾಯದ ಸಾಮಾನ್ಯ ವರ್ಗಕ್ಕೆ ಸೇರಿದೆ ವಿದ್ಯಾರ್ಥಿಗಳು ಚಾಲ್ತಿಯಲ್ಲಿರುವ ಆರ್ಥಿಕವಾಗಿ ವಾಗಿ ಹಿಂದ...
Image
  ಲಿಂಗಸ್ಗೂರಿನಲ್ಲಿ ಬಳ್ಳಾರಿ ಚಲೋ ಪಾದಯಾತ್ರೆ ಉದ್ಘಾಟನೆ   ಕಾಂಗ್ರೆಸ್ ಸರಕಾರ ಕಿತ್ತೊಗೆಯಲು ಹೋರಾಟ- ಯಡಿಯೂರಪ್ಪ   ಜಯ ಧ್ವಜ ನ್ಯೂಸ್ ,ರಾಯಚೂರು,ಸೆ.1- ಪಾದಯಾತ್ರೆಯು 6 ಕೋಟಿ ಕನ್ನಡಿಗರ ಆಶೋತ್ತರದ ಕಹಳೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು  ಅವರಿಂದು ಲಿಂಗಸ್ಗೂರಿನಲ್ಲಿ ಬಿಜೆಪಿ  ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದ ಬಳ್ಳಾರಿ ಚಲೋ ಪಾದಯಾತ್ರೆಯ ಉದ್ಘಾಟನೆಯನ್ನು ಕಹಳೆ ಊದುವ ಮೂಲಕ   ನೆರವೇರಿಸಿದರು . ನಂತರ  ಮಾತನಾಡಿದ ಯಡಿಯೂರಪ್ಪ ಅವರು, ಅಧಿಕಾರದ ಮದದಲ್ಲಿ ಮೆರೆಯುವ ರೈತ ವಿರೋಧಿ, ಜನವಿರೋಧಿ, ಪ್ರಗತಿವಿರೋಧಿ, ಮಹಿಳಾ ವಿರೋಧಿ, ಭ್ರಷ್ಟಾಚಾರದಲ್ಲಿ ತೊಡಗಿದ ಈ ಸರಕಾರವನ್ನು ಕಿತ್ತೊಗೆಯುವ ವರೆಗೆ ನಮ್ಮ ಹೋರಾಟ ಮುಂದುವರೆಯಲಿದೆ ಎಂದರು. ಭ್ರಷ್ಟ ಕಾಂಗ್ರೆಸ್ ಸರಕಾರ ಕಿತ್ತೊಗೆಯುವ ಸಂಕಲ್ಪದೊಂದಿಗೆ ಹೋರಾಟ ಪ್ರಾರಂಭವಾಗಿದೆ ಎಂದರು. ಮುಖ್ಯಮಂತ್ರಿಗಳಿಗೆ ಸ್ವಾತಂತ್ರ್ಯ ಇದೆಯೇ? ಪ್ರತಿಯೊಂದಕ್ಕೂ ದೆಹಲಿಗೆ ಹೋಗಿ ರಾಹುಲ್ ಗಾಂಧಿ ಕಾಲು ಹಿಡಿಯುವ ನೀವು ಮುಖ್ಯಮಂತ್ರಿಯೇ ಎಂದು ಪ್ರಶ್ನಿಸಿದರು. ಇದು ಮುಖ್ಯಮಂತ್ರಿ ಸ್ಥಾನಕ್ಕೆ ಶೋಭೆ ತರುತ್ತದೆಯೇ ಎಂದು ಕೇಳಿದರು. ಪಾದಯಾತ್ರೆಗೆ ಜನರು ಬೆಂಬಲಿಸಲು  ಮನವಿ ಮಾಡಿದರು. ಇದು ಹೋರಾಟದ ಮೊದಲ ಹೆಜ್ಜೆ. ಭ್ರಷ್ಟ ಸರಕಾರಕ್ಕೆ ಲೂಟಿ ವಿರುದ್ಧ ಮನವರಿಕೆ ಮಾಡೋಣ ಎಂದು ತಿಳಿಸಿದರು.  ಬರ ಪ್ರದೇಶ ಘೋ...