ನಾಳೆ ಸಮಾಜ-ಮಾಧ್ಯಮ-ಹೋರಾಟ ಕುರಿತ ಒಂದು ಅವಲೋಕನ ಕಾರ್ಯಕ್ರಮ
ನಾಳೆ ಸಮಾಜ-ಮಾಧ್ಯಮ-ಹೋರಾಟ ಕುರಿತ ಒಂದು ಅವಲೋಕನ ಕಾರ್ಯಕ್ರಮ ರಾಯಚೂರು ನ.22-ರಾಯಚೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ರಾಯಚೂರು ರಿಪೋರ್ಟ್ ರ್ಸ್ ಗಿಲ್ಡ್ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಪತ್ರಿಕಾ ದಿನಾಚರಣೆ ಅಂಗವಾಗಿ ಸಮಾಜ-ಮಾಧ್ಯಮ-ಹೋರಾಟ ಕುರಿತು ಒಂದು ಅವಲೋಕನ ಕಾರ್ಯಕ್ರಮ ನಾಳೆ ಬೆಳಿಗ್ಗೆ 11 ಕ್ಕೆ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದೆ. ಉದ್ಘಾಟಕರಾಗಿ ಹಿರಿಯ ಪತ್ರಕರ್ತ ಮೃತ್ಯುಂಜಯ ಕಪಗಲ್ ಆಗಮಿಸಲಿದ್ದು, ಹೋರಾಟಗಾರರಾದ ರಾಘವೇಂದ್ರ ಕುಷ್ಟಗಿ, ಚಾಮರಸ ಮಾಲಿ ಪಾಟೀಲ್, ಆರ್.ಮಾನಸಯ್ಯ, ಪತ್ರಕರ್ತ ಶಿವಮೂರ್ತಿ ಹಿರೇಮಠ ಅತಿಥಿಗಳಾಗಿ ಆಗಮಿಸಲಿದ್ದಾರೆ. ಅಧ್ಯಕ್ಷತೆ ರಾಯಚೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆರ್.ಗುರುನಾಥ ವಹಿಸಲಿದ್ದಾರೆ. ಕಾರ್ಯಕ್ರಮಕ್ಕೆ ವಿವಿಧ ಪಕ್ಷಗಳ ಮುಖಂಡರು,ವಿವಿಧ ಸಂಘಟನೆಗಳ ಹೋರಾಟಗಾರರು ಮತ್ತಿತರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ರಾಯಚೂರು ರಿಪೋರ್ಟ್ ರ್ಸ್ ಗಿಲ್ಡ್ ಅಧ್ಯಕ್ಷ ಚೆನ್ನಬಸವಣ್ಣ ಕೋರಿದ್ದಾರೆ.