ಮತಗಳ್ಳತನ ವಿರುದ್ಧ ಜಿಲ್ಲಾ ಕಾಂಗ್ರೆಸ್ ಸಹಿ ಸಂಗ್ರಹ ಹಾಗೂ ಪ್ರತಿಭಟನೆ. ಜಯ ಧ್ವಜ ನ್ಯೂಸ್ , ರಾಯಚೂರು, ಅ.13- ಇಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದ ವತಿಯಿಂದ ನಡೆದ ವೋಟ್ ಚೋರ್ ಗದ್ದಿ ಚೋಡ್ ಸಹಿ ಸಂಗ್ರಹ ಕಾರ್ಯಕ್ರಮದಲ್ಲಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಎ.ವಸಂತಕುಮಾರ ಅವರು ಮತಗಳ್ಳತನ ಎನ್ನುವದು ಬಿಜೆಪಿಯ ನಿಜಬಣ್ಣವಾಗಿದೆ ಎಂದು ಆರೋಪಿಸಿದರು. ನ್ಯಾಯಯುತ ಚುನಾವಣೆ ನಡೆದರೆ ಬಿಜೆಪಿ ಪಕ್ಷ ಒಂದೂ ಚುನಾವಣೆ ಗೆಲ್ಲಲು ಸಾಧ್ಯವಾಗುವುದಿಲ್ಲ, ಲೋಕಸಭಾ, ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮತದಾರರನ್ನು ಹುಡುಕಿ ಹುಡುಕಿ ತೆಗೆದುಹಾಕುವದು ಮತ್ತು ತಮಗೆ ಬೇಕಾದ ಮತದಾರರನ್ನು ಅಕ್ರಮ ವಾಗಿ ಸೇರಿಸುವ ಮೂಲಕ ಚುನಾವಣೆ ಗೆಲ್ಲುವ ತಂತ್ರಗಾರಿಕೆ ಮಾಡುತ್ತಿರುವದು ದೇಶದ ಸಂವಿಧಾನಕ್ಕೆ ಮಾಡುವ ಅವಮ...